Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೌತಿ ಖಾತೆ’ ಬದಲಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಪೌತಿ ಖಾತೆ’ ಬದಲಾವಣೆಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

By kannadanewsnow57

ಬೆಂಗಳೂರು: ಕೃಷಿ ಭೂಮಿಯ ಮಾಲೀಕರು ಮರಣ ಹೊಂದಿದ ನಂತರ ಅವರ ವಾರಸುದಾರರ ಹೆಸರಿಗೆ ಖಾತೆ ಬದಲಾವಣೆ (ಮ್ಯುಟೇಶನ್) ಮಾಡಲು ಅಲೆಯುತ್ತಿದ್ದ ರೈತರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪೌತಿ ವಾರಸಾ ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಸರಳಗೊಳಿಸಿ ಕಂದಾಯ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಹೊಸ ನಿಯಮದ ಅನ್ವಯ, ಇನ್ನು ಮುಂದೆ ವಾರಸುದಾರರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ ‘ಇ-ಪೌತಿ’ ತಂತ್ರಾಂಶದ ಮೂಲಕವೇ ಸುಲಭವಾಗಿ ಕೆಲಸ ಮುಗಿಸಿಕೊಳ್ಳಬಹುದಾಗಿದೆ.

ಹೊಸ ಮಾರ್ಗಸೂಚಿಯ ಪ್ರಮುಖ ಅಂಶಗಳು:

ಮನೆ ಬಾಗಿಲಿಗೆ ಸೇವೆ: ಗ್ರಾಮ ಆಡಳಿತಾಧಿಕಾರಿಗಳು (VA) ಆಧಾರ ಸೀಡಿಂಗ್ ಸಮಯದಲ್ಲಿ ಮೃತಪಟ್ಟ ಮಾಲೀಕರ ವಿವರಗಳನ್ನು ಪತ್ತೆಹಚ್ಚಿ, ಅವರೇ ಸ್ವತಃ ಇ-ಪೌತಿ ತಂತ್ರಾಂಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡಲಿದ್ದಾರೆ.

ದಾಖಲೆಗಳ ಸಡಿಲಿಕೆ: ಒಂದು ವೇಳೆ ಮರಣ ಪ್ರಮಾಣಪತ್ರ ಇಲ್ಲದಿದ್ದರೂ ಗಾಬರಿಯಾಗಬೇಕಿಲ್ಲ. ಸ್ಥಳೀಯ ತನಿಖೆ, ಮಹಜರ್ ಮತ್ತು ವಾರಸುದಾರರ ಅಫಿಡವಿಟ್ ಪಡೆದು ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಬಹುದು.

ಶುಲ್ಕ ವಿನಾಯಿತಿ: ಇ-ಪೌತಿ ಮಾಡಲು ಮ್ಯುಟೇಶನ್ ಶುಲ್ಕವಾದ 35 ರೂಪಾಯಿಗಳನ್ನು ಸರ್ಕಾರ ಮನ್ನಾ ಮಾಡಿದೆ. ಅಂದರೆ, ಯಾವುದೇ ಅರ್ಜಿ ಶುಲ್ಕವಿಲ್ಲದೆ ವಾರಸುದಾರರು ತಮ್ಮ ಹೆಸರಿಗೆ ಖಾತೆ ಮಾಡಿಸಿಕೊಳ್ಳಬಹುದು.

ವಂಶವೃಕ್ಷ ಪಡೆಯುವುದು ಸುಲಭ: ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ ವಂಶವೃಕ್ಷ ಪಡೆಯಬಹುದು. ಒಂದು ವೇಳೆ ಲಭ್ಯವಿಲ್ಲದಿದ್ದರೆ ನೋಟರಿ ಸಮಕ್ಷಮ ಸಹಿ ಮಾಡಿ ಮನವಿ ಸಲ್ಲಿಸಿ ವಂಶವೃಕ್ಷ ಪಡೆಯಲು ಅವಕಾಶ ನೀಡಲಾಗಿದೆ.

ತ್ವರಿತ ವಿಲೇವಾರಿ: ಅರ್ಜಿ ಸಲ್ಲಿಸಿದ 15 ದಿನಗಳ ನೋಟಿಸ್ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಬಾರದಿದ್ದರೆ, ತಕ್ಷಣವೇ ಭೂಮಿ ತಂತ್ರಾಂಶದ ಮೂಲಕ ಹೊಸ ವಾರಸುದಾರರ ಹೆಸರು ಪಹಣಿಯಲ್ಲಿ ದಾಖಲಾಗುತ್ತದೆ.

ಜಂಟಿ ಖಾತೆಗೆ ಅವಕಾಶ: ಮೃತರ ಎಲ್ಲಾ ವಾರಸುದಾರರ ಹೆಸರನ್ನು ಜಂಟಿಯಾಗಿ ಪಹಣಿಯ ಕಾಲಂ 9ರಲ್ಲಿ ದಾಖಲಿಸಲಾಗುತ್ತದೆ. ಇದರಿಂದ ಯಾರಿಗೂ ಅನ್ಯಾಯವಾಗದಂತೆ ಹಕ್ಕುಗಳನ್ನು ರಕ್ಷಿಸಬಹುದು.

ರೈತರಿಗೆ ಆಗುವ ಲಾಭಗಳೇನು?

ಈ ಮೊದಲು ಖಾತೆ ಬದಲಾವಣೆ ವಿಳಂಬವಾಗುತ್ತಿದ್ದರಿಂದ ರೈತರಿಗೆ ಬೆಳೆ ಸಾಲ ಪಡೆಯಲು, ಬೆಳೆ ವಿಮೆ ಪರಿಹಾರ ಪಡೆಯಲು ಹಾಗೂ ಪಿ.ಎಂ ಕಿಸಾನ್ ಯೋಜನೆಯ ಲಾಭ ಪಡೆಯಲು ತೊಂದರೆಯಾಗುತ್ತಿತ್ತು. ಈಗ ಪ್ರಕ್ರಿಯೆ ಸರಳವಾಗಿರುವುದರಿಂದ ಈ ಎಲ್ಲಾ ಸೌಲಭ್ಯಗಳು ಶೀಘ್ರವಾಗಿ ರೈತರಿಗೆ ಸಿಗಲಿವೆ.

ಈ ಹೊಸ ನಿಯಮಗಳು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಈ ಹಿಂದೆ ಇದ್ದ ಹಳೆಯ ಸುತ್ತೋಲೆಗಳನ್ನು ರದ್ದುಪಡಿಸಲಾಗಿದೆ ಎಂದು ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ತಿಳಿಸಿದ್ದಾರೆ.

Good news for the state's farmers: Government issues new guidelines for changing 'Pauthi Account'
Share. Facebook Twitter LinkedIn WhatsApp Email

Related Posts

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

2 Mins Read

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

2 Mins Read

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

2 Mins Read
Recent News

ಮೇಖೆದಾಟು ಯೋಜನೆ: ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ವಿಧಾನಸಭೆಯ ನಿರ್ಣಯ ಶ್ಲಾಘಿಸಿದ ನಟ ಕಮಲ್ ಹಾಸನ್ 

​ನೀಟ್ ಮರುಪರೀಕ್ಷೆಗೆ ದೇಶಾದ್ಯಂತ ನಾಳೆ ‘ಮೆಗಾ ಮಾಕ್ ಡ್ರಿಲ್’: 2.5 ಲಕ್ಷ ಭದ್ರತಾ ಸಿಬ್ಬಂದಿ ನಿಯೋಜನೆ, 1.5 ಲಕ್ಷ ಸಿಸಿಟಿವಿ ಕಣ್ಗಾವಲು!

BREAKING: ​ನೀಟ್ ಮರುಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಜೂನ್ 21ರ ಪರೀಕ್ಷೆ ತಡೆಗೆ ಕೋರಿದ್ದ ಅರ್ಜಿ ವಜಾ!

​ಲಿಯೋನೆಲ್ ಮೆಸ್ಸಿ ತಂದೆ ನಿಧನರಾಗಿದ್ದಾರೆಂದು ತಪ್ಪು ವರದಿ: ಲೈವ್ ಶೋನಲ್ಲೇ ಸುಳ್ಳು ಸುದ್ದಿ ಹೇಳಿ ರಾಜೀನಾಮೆ ನೀಡಿದ ಅರ್ಜೆಂಟೀನಾದ ಪ್ರಸಿದ್ಧ ಟಿವಿ ನಿರೂಪಕಿ!

State News
KARNATAKA

ರಾಜ್ಯದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಬಸ್ ಪ್ರಯಾಣದ ದರ ಹೆಚ್ಚಳಕ್ಕೆ ಸಾರಿಗೆ ನಿಗಮಗಳ ಪ್ರಸ್ತಾವನೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಆರ್ಥಿಕ ಹೊರೆಯ…

ಬಿಡದಿ ಭೂಸ್ವಾಧೀನಕ್ಕೆ ಹೆಚ್.ಎಂ.ರಮೇಶಗೌಡ ನೇತೃತ್ವದಲ್ಲಿ CSಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ

ಮದ್ದೂರು ತಾಲೂಕಿಗೆ 5 ಕೆಪಿಎಸ್ ಶಾಲೆಗಳು ಮಂಜೂರು: ಮದ್ದೂರು ಶಾಸಕ ಕೆ.ಎಂ.ಉದಯ್

ಶೀಘ್ರದಲ್ಲೇ ‘ಕೈ’ ಹಿಡಿಯಲಿದ್ದಾರೆ ‘ಬಿಜೆಪಿ ಶಾಸಕ’ರು; ಮದ್ದೂರು ಶಾಸಕ ಕೆ.ಎಂ.ಉದಯ್ ಸ್ಪೋಟಕ ಭವಿಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.