Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM

BIG NEWS : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ |Govt Employee

04/07/2025 6:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

By kannadanewsnow5704/07/2025 6:08 AM

ಬೆಂಗಳೂರು : ರೈತರಿಗೆ ಕಾಂಗ್ರೆಸ್ ಸರ್ಕಾರ ನೀಡಿದ ನನ್ನ ಭೂಮಿ ಗ್ಯಾರಂಟಿ ಅಭಿಯಾನ ವೇಗ ಪಡೆದುಕೊಂಡಿದ್ದು, ಕೇವಲ 7 ತಿಂಗಳಲ್ಲಿ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರು ವರ್ಷಕ್ಕೆ ಕೇವಲ 5,801 ಪ್ರಕರಣಗಳಲ್ಲಿ ಮಾತ್ರ ರೈತರಿಗೆ ಪೋಡಿ ದುರಸ್ಥಿ ಮಾಡಿಕೊಡಲಾಗಿತ್ತು. ಆದರೆ, ಪ್ರಸ್ತುತ ಕಳೆದ ಡಿಸೆಂಬರ್ನಲ್ಲಿ “ನನ್ನ ಭೂಮಿ” ಹೆಸರಿನಲ್ಲಿ ಪೋಡಿ ಅಭಿಯಾನ ಕೈಗೊಂಡಿದ್ದು, ಕೇವಲ 7 ತಿಂಗಳಲ್ಲಿ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.

“ಈವರೆಗೆ 1,04,222 ಜಮೀನುಗಳನ್ನು ಅಳತೆಗೆ ತೆಗೆದುಕೊಂಡಿದ್ದು, ಈ ಪೈಕಿ ಶೇ.20 ರಷ್ಟು ಭೂಮಿಯ ಅಳತೆ ಕೆಲಸವೂ ಮುಗಿದಿದೆ. ಉಳಿದ ಪ್ರಕರಣಗಳನ್ನು ಮುಂದಿನ 6 ತಿಂಗಳಲ್ಲಿ ಪೋಡಿ ಮಾಡಿಕೊಡಲು ಸೂಚಿಸಲಾಗಿದೆ. ಇದಲ್ಲದೆ, ಇನ್ನೂ 50 ರಿಂದ 70 ಸಾವಿರ ಪೋಡಿ ಪ್ರಕರಣಗಳು ದಾಖಲಾಗುವ ನಿರೀಕ್ಷೆ ಇದೆ ” ಎಂದು ಮಾಹಿತಿ ನೀಡಿದರು.

ಮೂರು-ನಾಲ್ಕು ದಶಕಗಳ ಹಿಂದೆ ರೈತರಿಗೆ ದರ್ಖಾಸ್ತಿನಲ್ಲಿ ಮಂಜೂರಾಗಿದ್ದ ಜಮೀನಿಗೆ ಈವರೆಗೆ ಪೋಡಿ ಆಗಿಲ್ಲ. ಇದರಿಂದ ರೈತರು ಸಾಕಷ್ಟು ಸಮಸ್ಯೆ ಎದುರಿಸಿದ್ದರು. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಸಲುವಾಗಿಯೇ “ನನ್ನ ಭೂಮಿ” ಹೆಸರಿನಲ್ಲಿ ಪೋಡಿ ಅಭಿಯಾನ ಆರಂಭಿಸಲಾಯಿತು. ಈ ಅಭಿಯಾನದ ಅಡಿ ಜನರ ಅರ್ಜಿಗೆ ಕಾಯದೆ ಸರ್ಕಾರವೇ ರೈತರ ಮನೆ ಬಾಗಿಲಿಗೆ ತೆರಳಿ ಪೋಡಿ ಮಾಡಿಕೊಡುತ್ತಿದೆ. ಹಿಂದೆ ಮಂಜೂರಾಗಿದ್ದ ಜಮೀನಿಗೆ ಪಕ್ಕಾ ದಾಖಲೆಗಳನ್ನು ಅವರ ಕೈಗೆ ಕೊಟ್ಟು ಅವರ ಭೂ ಮಾಲೀಕತ್ವಕ್ಕೆ ಗ್ಯಾರಂಟಿ ನೀಡುವುದು ಈ ಕಾರ್ಯಕ್ರಮದ ವಿಶೇಷ” ಎಂದು ವಿವರಿಸಿದರು.

29.8 ಕೋಟಿ ಪುಟಗಳ ಡಿಜಿಟಲೀಕರಣ:

ಭೂ ಸುರಕ್ಷಾ” ಯೋಜನೆಯ ಅಡಿಯಲ್ಲಿ ಈವರೆಗೆ 29.8 ಕೋಟಿ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗಿದ್ದು, ವರ್ಷಾಂತ್ಯದೊಳಗೆ ತಹಶೀಲ್ದಾರ್ ಕಚೇರಿಗಳಲ್ಲಿರುವ ಎಲ್ಲಾ ಮೂಲ ಕಡತಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗುವುದು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆಯೂ ಗಮನ ಸೆಳೆದ ಅವರು, “ರೈತರು ತಹಶೀಲ್ದಾರ್ ಕಚೇರಿಗಳಲ್ಲಿ ತಮ್ಮ ಭೂ ದಾಖಲೆಗಳನ್ನು ತೆಗೆದುಕೊಳ್ಳಲು ಸಾಕಷ್ಟು ಪಡಿಪಾಟಲು ಪಡುತ್ತಿದ್ದಾರೆ. ಎಷ್ಟೋ ದಾಖಲೆಗಳು ಕಳೆದೇ ಹೋಗಿದ್ದರೆ, ಮತ್ತಷ್ಟು ದಾಖಲೆಗಳನ್ನು ಕಾನೂನು ಬಾಹೀರವಾಗಿ ತಿದ್ದುವ ಮೂಲಕ ರೈತರನ್ನು ಕೋರ್ಟು ಕಚೇರಿಗಳಿಗೆ ಅಲೆದಾಡಿಸಲಾಗುತ್ತಿದೆ. ರೈತರಿಗೆ ಈ ಎಲ್ಲಾ ಶೋಷಣೆಗಳಿಂದ ಮುಕ್ತಿ ನೀಡುವ ಸಲುವಾಗಿಯೇ ʼಭೂ ಸುರಕ್ಷಾʼ ಯೋಜನೆಯನ್ನು ಜಾರಿಗೆ ತರಲಾಯಿತು. ಈ ಯೋಜನೆ ಯಶಸ್ವಿಯಾದರೆ ಹಲವು ಅಕ್ರಮಗಳನ್ನು ತಡೆಯಬಹುದು. ಅಲ್ಲದೆ, ರೈತರು ಅನಗತ್ಯವಾಗಿ ಸರ್ಕಾರಿ ಕಚೇರಿ ಅಲೆಯುವುದನ್ನು ತಪ್ಪಿಸುವುದರ ಜೊತೆಗೆ ಮನೆಯಿಂದ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ದಾಖಲೆ ಪಡೆದುಕೊಳ್ಳಬಹುದು ” ಎಂದು ಮಾಹಿತಿ ನೀಡಿದರು.

ಈ ಯೋಜನೆಯನ್ನು ಪ್ರಾಯೋಗಿಕವಾಗಿ 31 ತಾಲೂಕುಗಳಲ್ಲಿ ಆರಂಭಿಸಿ ಇದೀಗ ಎಲ್ಲಾ ತಾಲೂಕುಗಳಲ್ಲೂ ಕೆಲಸ ಆರಂಭಿಸಲಾಗಿದೆ. ರಾಜ್ಯಾದ್ಯಂತ ತಹಶೀಲ್ದಾರ್, ಎಸಿ-ಡಿಸಿ ಕಚೇರಿಗಳಲ್ಲಿ ಸುಮಾರು 100 ಕೋಟಿ ಮೂಲ ದಾಖಲೆ ಪುಟಗಳಿವೆ ಎಂದು ಅಂದಾಜಿಸಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಎಲ್ಲಾ ಪುಟಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸುವ ಗುರಿ ಹೊಂದಲಾಗಿದೆ” ಎಂದರು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಕಚೇರಿ:

ಗ್ರಾಮ ಆಡಳಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಕಚೇರಿ ಆವರಣದಲ್ಲಿ ಕಚೇರಿ ವ್ಯವಸ್ಥೆ ಮಾಡಿಕೊಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಸುಮಾರು 2,600 ಕಡೆಗಳಲ್ಲಿ ವಿಎ ಗಳಿಗೆ ಕಚೇರಿ ನೀಡಲಾಗಿದೆ” ಎಂದು ತಿಳಿಸಿದರು.

“ಸ್ವಾತಂತ್ರ್ಯ ಪೂರ್ವ ಕಾಲದಿಂದಲೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸ್ವಂತ ಕಚೇರಿ ಇಲ್ಲ. ಹೀಗಾಗಿ ಅವರು ಬೀದಿಯಲ್ಲೇ ನಿಂತು ಕೆಲಸ ಮಾಡಬೇಕಾದ ಅನಿವಾರ್ಯತೆ ಇತ್ತು. ತಮಗೆ ಕಚೇರಿ ನೀಡುವಂತೆ ಅವರೂ ಸಹ ಅನೇಕ ಬಾರಿ ಹೋರಾಟ ನಡೆಸಿದ್ದಾರೆ. ಅವರ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರವೂ ಸ್ಪಂದಿಸಿದೆ. ಗ್ರಾಮ ಪಂಚಾಯತ್ ಕಚೇರಿಗಳಲ್ಲೇ ಗ್ರಾಮ ಆಡಳಿತ ಅಧಿಕಾರಿಗಳಿಗೂ ಕಚೇರಿ ವ್ಯವಸ್ಥೆ ಮಾಡುವ ಸಂಬಂಧ ಗ್ರಾಮೀಣಾಭಿವೃದ್ಧಿ ಸಚಿವರ ಜೊತೆ ಚರ್ಚೆ ನಡೆಸಲಾಗಿದ್ದು, ಅದರಂತೆ ಈ ಹಿಂದೆ 1,200 ಅಧಿಕಾರಿಗಳಿಗೆ ಕಚೇರಿ ವ್ಯವಸ್ಥೆ ನೀಡಲಾಗಿದೆ.

ಕಳೆದ ಒಂದು ತಿಂಗಳ ಅವಧಿಯಲ್ಲಿ ಅಭಿಯಾನದ ಮಾದರಿಯಲ್ಲಿ 2,600 ಕಡೆಗಳಲ್ಲಿ ಕಚೇರಿ ವ್ಯವಸ್ಥೆ ಮಾಡಲಾಗಿದ್ದು, ಉಳಿದ 3500 ಅಧಿಕಾರಿಗಳಿಗೂ ಶೀಘ್ರದಲ್ಲೇ ಕಚೇರಿ ನೀಡಲಾಗುವುದು. ಗ್ರಾಮ ಪಂಚಾಯಿತಿ ಆವರಣಗಳಲ್ಲಿ ಕೊಠಡಿ ನಿರ್ಮಿಸಲು ಸ್ಥಳಾವಕಾಶ ಇದ್ದರೆ, ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ” ಎಂದರು.

“ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರದಿಂದ ಈಗಾಗಲೇ 4,000 ಲ್ಯಾಪ್ಟ್ಯಾಪ್ ನೀಡಲಾಗಿದೆ. ಲ್ಯಾಪ್ಟಾಪ್ ನೀಡುವುದು ದೊಡ್ಡ ವಿಚಾರವಲ್ಲ, ಅವರಿಗೆ ಅಗತ್ಯವಾದ ಅಪ್ಲಿಕೇಶನ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನೂ ಮಾಡಿಕೊಟ್ಟು ಅವರೂ ಸಹ ಕಡತಗಳನ್ನು ಇ-ಆಫೀಸ್ ಮೂಲಕ ವಿಲೇವಾರಿ ಮಾಡುವಂತಾಗಬೇಕು. ಆಗಮಾತ್ರ ಆಡಳಿತ ವೇಗ ಪಡೆಯಲಿದ್ದು, ಜಿಲ್ಲಾಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಲೂ ಸಹ ಇಂದಿನ ಸಭೆಯಲ್ಲಿ ಸೂಚಿಸಲಾಗಿದೆ” ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

Good news for the state's farmers: 'My Land Guarantee' application campaign launched to provide new land titles and maps
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM2 Mins Read

BIG NEWS : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ |Govt Employee

04/07/2025 6:04 AM2 Mins Read

Rain Alert : ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್, ಯೆಲ್ಲೋ ಅಲರ್ಟ್’ ಘೋಷಣೆ

04/07/2025 5:52 AM1 Min Read
Recent News

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

04/07/2025 6:14 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM

BIG NEWS : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ |Govt Employee

04/07/2025 6:04 AM

Rain Alert : ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್, ಯೆಲ್ಲೋ ಅಲರ್ಟ್’ ಘೋಷಣೆ

04/07/2025 5:52 AM
State News
KARNATAKA

BIG NEWS : ರಾಜ್ಯ ಸರ್ಕಾರದಿಂದ `ದೃಷ್ಟಿ ಗ್ಯಾರಂಟಿ’ ಯೋಜನೆ : `ಆಶಾ ಕಿರಣ ಯೋಜನೆಯಡಿ ಜನರಿಗೆ ಕನ್ನಡಕ ವಿತರಣೆ.!

By kannadanewsnow5704/07/2025 6:14 AM KARNATAKA 2 Mins Read

ಬೆಂಗಳೂರು : ಅಂಧ್ಯತ್ವ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಜಾರಿಗೆ ತಂದ ಆಶಾಕಿರಣ ಯೋಜನೆಯಡಿ ರಾಜ್ಯಾದ್ಯಂತ 393 ಶಾಶ್ವತ…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹೊಸ ಪಹಣಿ, ನಕ್ಷೆ ನೀಡಲು ‘ನನ್ನ ಭೂಮಿ ಗ್ಯಾರಂಟಿ’ ದರ್ಖಾಸ್ತು ಪೋಡಿ ಅಭಿಯಾನ

04/07/2025 6:08 AM

BIG NEWS : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ |Govt Employee

04/07/2025 6:04 AM

Rain Alert : ರಾಜ್ಯಾದ್ಯಂತ ಇಂದು, ನಾಳೆ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಆರೆಂಜ್, ಯೆಲ್ಲೋ ಅಲರ್ಟ್’ ಘೋಷಣೆ

04/07/2025 5:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.