Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಕೆಲವು ಮಂದಿಗೆ ಈಗಲೂ ಒಂದೇ ಒಂದು ಯೋಜನೆಗಳು ತಲುಪಿಲ್ಲ : ಸಿಎಸ್ ಶಾಲಿನಿ ರಜನೀಶ್ ಬೇಸರ 

20/01/2026 5:40 AM

ರಾಜ್ಯದ ವಸತಿ ರಹಿತ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 42,345 ಮನೆಗಳ ವಿತರಣೆ

20/01/2026 5:37 AM

BIG NEWS : WPL-2026 : ಗುಜರಾತ್ ತಂಡ ಮಣಿಸುವ ಮೂಲಕ ಪ್ಲೇಆಫ್ ಗೆ ಎಂಟ್ರಿ ಕೊಟ್ಟ ‘RCB’

20/01/2026 5:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಸತಿ ರಹಿತ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 42,345 ಮನೆಗಳ ವಿತರಣೆ
KARNATAKA

ರಾಜ್ಯದ ವಸತಿ ರಹಿತ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 42,345 ಮನೆಗಳ ವಿತರಣೆ

By kannadanewsnow5720/01/2026 5:37 AM

ಧಾರವಾಡ : ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಸ್ವಂತ ಮನೆ ಎಂಬ ಕನಸನ್ನು ನನಸಾಗಿಸುವ ಮಹತ್ವದ ಯೋಜನೆಯನ್ನು ಜನವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಸರ್ಕಾರದ ಜನಪರ ಕಾರ್ಯಗಳಿಗೆ ಪ್ರತೀಕವಾಗಿದ್ದು, ಇದನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಜಾವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ನಿಯಮಾನುಸಾರ ಕಾರ್ಯನಿರ್ವಹಿಸಬೇಕೆಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.

ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಜನವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿಸಿ, ಮಾತನಾಡಿದರು. ಕಾರ್ಯಕ್ರಮದ ಪೂರ್ವಸಿದ್ಧತೆಗಳಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸರಬರಾಜು, ಶೌಚಾಲಯ, ಸಾರಿಗೆ, ಭದ್ರತೆ ಹಾಗೂ ಆರೋಗ್ಯ ಸೇವೆಗಳ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.

ಧಾರವಾಡ ಜಿಲ್ಲೆಯಲ್ಲಿ ಒಟ್ಟು 2,169 ಮನೆಗಳು ಮಂಜೂರು ಮಾಡಲಾಗಿದೆ. ಘೋಷಿತ ಸ್ಲಂಗಳಲ್ಲಿರುವ 1,137 ಖಚ್ಚಾ ಮನೆಗಳನ್ನು ಪಕ್ಕಾ ಮನೆಗಳನ್ನಾಗಿ ಪುನರ್ ನಿರ್ಮಿಸಲಾಗಿದೆ. ಒಟ್ಟು 1,032 ಮನೆಗಳಿರುವ ವಸತಿ ಸಮುಚ್ಛಯ ನಿರ್ಮಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹುಬ್ಬಳ್ಳಿಯಲ್ಲಿ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ 3000 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ಅವರು ಹೇಳಿದರು.

ಮುಖ್ಯ ಮಂತ್ರಿಗಳು, ರಾಜ್ಯದ ವಸತಿ ರಹಿತರಿಗೆ ಸೂರು ಕಲ್ಪಿಸಲು ವಸತಿ ಇಲಾಖೆ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು, ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕುಗಳಲ್ಲಿ ಆದ್ಯತೆ ಮೇರೆಗೆ ವಸತಿ ರಹಿತರಿಗೆ ವಸತಿ ಕಲ್ಪಿಸಲು ರಾಜ್ಯ ಸರ್ಕಾರವು ಕ್ರಮವಹಿಸಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾಗಿರುವ ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಧಾರವಾಡ-ಹುಬ್ಬಳ್ಳಿ ಜಿಲ್ಲೆಯ ಅಭಿವೃದ್ಧಿಗೆ ಮತ್ತೊಂದು ಮೈಲಿಗಲ್ಲಾಗಲಿದೆ. ಸರ್ಕಾರವು ಬಡ ಮತ್ತು ಮಧ್ಯಮ ವರ್ಗದ ಜನರ ವಾಸಸ್ಥಾನದ ಭದ್ರತೆಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯ ಮೂಲಕ ಸಾವಿರಾರು ಕುಟುಂಬಗಳಿಗೆ ಗೌರವಯುತ ಜೀವನದ ಅವಕಾಶ ದೊರಕಿದೆ ಎಂದು ಅವರು ಹೇಳಿದರು.

ಜನವರಿ 24, 2026 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ಶಹರದ ಮಂಟೂರ ರಸ್ತೆ ಪ್ರದೇಶದಲ್ಲಿ ಆಯೋಜಿಸಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ವಸತಿ ರಹಿತ ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗುತ್ತಿದೆ. ನಾಲ್ಕು ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸುಮಾರು 42,345 ಮನೆಗಳನ್ನು ಏಕಕಾಲದಲ್ಲಿ ರಾಜ್ಯದ 28 ಜಿಲ್ಲೆಗಳಲ್ಲಿನ ವಸತಿ ರಹಿತರಿಗೆ ಸುಸಜ್ಜಿತ ಮನೆಗಳನ್ನು ವಿತರಿಸುವ ಕಾರ್ಯಕ್ರಮವು ಆಯಾ ಜಿಲ್ಲೆಯ ಸಚಿವರ ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್‍ನ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯ ಸಚಿವ ಸಂಪುಟದ ಅನೇಕ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸಿಲಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.

ಕಾರ್ಯಕ್ರಮವು ಯಾವುದೇ ಅಡಚಣೆಗಳಿಲ್ಲದೆ, ಸುವ್ಯವಸ್ಥಿವಾಗಿ ಕ್ರಮವಹಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಮನ್ವಯದಿಂದ ಕೆಲಸ ಮಾಡಬೇಕು. ಈಗಾಗಲೇ ಜವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ಮುತುರ್ವಜಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.

ವಸತಿ, ವಕ್ರ್ಪ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಸಭೆ ಉದ್ದೇಶಿಸಿ ಮಾತನಾಡಿ, ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಟ್ಟು 1,80,253 ಮನೆಗಳು ಮಂಜೂರು ಮಾಡಲಾಗಿದೆ. ಅದರಲ್ಲಿ 1,29,986 ಮನೆಗಳ ನಿರ್ಮಾಣ ಪ್ರಾರಂಭವಾಗಿದೆ. ಇದರಲ್ಲಿ 86,651 ಮನೆಗಳ ನಿರ್ಮಾಣ ಕಾರ್ಯವು ಈಗಾಗಲೇ ಪೂರ್ಣಗೊಂಡಿರುತ್ತವೆ. ಮೊದಲ ಹಂತದಲ್ಲಿ 36,789 ಮನೆಗಳು ಉದ್ಘಾಟನೆಯಾಗಿ, ಫಲಾನುಭವಿಗಳಿಗೆ ವಿತರಣೆ ಆಗಿವೆ. ಹಾಗೂ 43,335 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದೊಂದಿಗೆ ಮಂಡಳಿಯು ನಿರ್ಮಿಸುತ್ತಿರುವ 1,80,253 ಮನೆಗಳಲ್ಲಿ 2 ನೇ ಹಂತದಲ್ಲಿ ರಾಜ್ಯದ ಒಟ್ಟು 28 ಜಿಲ್ಲೆಯಗಳಲ್ಲಿ 42,345 ಮನೆಗಳ ಈಗ ಉದ್ಘಾಟನೆಯಾಗಲಿವೆ. ಅವುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ 20,312 ಮನೆಗಳು, ಇತರೆ ವರ್ಗದವರಿಗೆ 22,033 ಮನೆಗಳಿವೆ. ಫಲಾನುಭವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ವಿಶೇಷ ಗಮನ ಹರಿಸಬೇಕು. ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಲ್ಲ. ಬದಲಾಗಿ ಜನರ ಜೀವನದಲ್ಲಿ ಭದ್ರತೆ ಮತ್ತು ಗೌರವವನ್ನು ನೀಡುವ ಮಹತ್ವದ ಕ್ಷಣವಾಗಿದೆ ಎಂದು ಅವರು ಹೇಳಿದರು.

ವಿಧಾನ ಪರಿಷತ್ತ ಸರ್ಕಾರದ ಮುಖ್ಯ ಸಚೇತಕರಾದ ಸಲಿಂ ಅಹ್ಮದ್ ಅವರು ಮಾತನಾಡಿ, ಬೃಹತ್ ಕಾರ್ಯಕ್ರಮ ಆಗಿರುವದರಿಂದ ಸಾರಿಗೆ ಹಾಗೂ ಸಂಚಾರಿ ವ್ಯವಸ್ಥೆ ಸರಿಯಾಗಿ ಆಗಬೇಕು. ಬೇರೆ ಜಿಲ್ಲೆಗಳಿಂದ ಆಗಮಿಸುವ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ, ಊಟ, ಶೌಚಾಲಯ ಮತ್ತು ಆಸನ ಸೇರಿದಂತೆ ಎಲ್ಲ ಮಾಹಿತಿ ನೀಡಬೇಕು. ಈ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿಗಳು ಆಯಾ ಜಿಲ್ಲಾ ಹಾಗೂ ತಾಲೂಕುಗಳ ನೋಡಲ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಮಯಕ್ಕೆ ಸರಿಯಾಗಿ ವ್ಯವಸ್ಥೆ ಕಲ್ಪಿಸಬೇಕೆಂದು ಸೂಚಿಸಿದರು.

ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ ಅವರು ಮಾತನಾಡಿ, ಜನವರಿ 24, 2026 ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಹಾಗೂ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿರುವುದರಿಂದ, ಎಲ್ಲ ವ್ಯವಸ್ಥೆಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕೆಂದು ಅವರು ತಿಳಿಸಿದರು.

ಕಾರ್ಯಕ್ರಮವು ಶಿಸ್ತಿನಿಂದ, ಯಾವುದೇ ಅಡಚಣೆ ಇಲ್ಲದೆ ನಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಹಾಗೂ ಸಂಚಾರ ವ್ಯವಸ್ಥೆ, ಭದ್ರತೆ, ಸ್ವಚ್ಛತೆ ಹಾಗೂ ಆರೋಗ್ಯ ಸೇವೆಗಳ ಬಗ್ಗೆ ವಿಶೇಷ ಗಮನ ವಹಿಸಬೇಕು ಮತ್ತು ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಎಂದು ಅವರು ಹೇಳಿದರು.

ಶಾಸಕರಾದ ಎನ್.ಎಚ್.ಕೋನರಡ್ಡಿ ಅವರು ಮಾತನಾಡಿ, ಸರ್ಕಾರದ ಸಾಧನೆಯ ಪ್ರತೀಕವಾಗಿರುವ ಈ ಕಾರ್ಯಕ್ರಮವು ಜನರಲ್ಲಿ ಅಭಿವೃದ್ಧಿ ಹಾಗೂ ವಸತಿಯ ಭರವಸೆಯನ್ನು ಹೆಚ್ಚಿಸಿದೆ ಎಂದು ಹೇಳಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ತ ಸದಸ್ಯ ಎಫ್.ಹೆಚ್.ಜಕ್ಕಪ್ಪನವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಗುಂಜನ್ ಆರ್ಯ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಸಿದ್ಧತೆಗಾಗಿ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದರು.

ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮಾತನಾಡಿ, ಕಾರ್ಯಕ್ರಮದ ಯಶಸ್ವಿಗಾಗಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗಾಗಿ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ, 10 ಕ್ಕೂ ಹೆಚ್ಚು ಸಮಿತಿಗಳನ್ನು ರಚಿಸಿ, ಕರ್ತವ್ಯ ಹಂಚಿಕೆ ಮಾಡಲಾಗಿದೆ. ಈಗಾಗಲೇ ಅಧಿಕಾರಿಗಳು ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ, ಅಗತ್ಯ ಸಿದ್ಧತೆ ಹಾಗೂ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಹಾವೇರಿ, ಗದಗ ಜಿಲ್ಲೆಗಳಿಂದಲೂ ಫಲಾನುಭವಿಗಳು ಆಗಮಿಸುವದರಿಂದ ಮತ್ತು ಅವಳಿ ನಗರದ ವಿವಿಧ ವಾರ್ಡ್‍ಗಳಿಂದ ಸಾರ್ವಜನಿಕರು, ಫಲಾನುಭವಿಗಳು ಕಾರ್ಯಕ್ರಮಕ್ಕೆ ಆಗಮಿಸುತ್ತೀರುವದರಿಂದ ಸಾರಿಗೆ ಹಾಗೂ ಸಂಚಾರ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಅಧಿಕಾರಿಗಳ ಸಭೆ ಜರುಗಿಸಿ, ಅಗತ್ಯ ಸೂಚನೆ ನೀಡಿ, ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದರು.

ವಸತಿ ರಹಿತರಿಗೆ ವಿತರಿಸಲಿರುವ ನೂತನ ಮನೆಗಳ ವಿತರಣೆಯ ವಿವರ

ಹುಬ್ಬಳ್ಳಿಯಲ್ಲಿ ಜನವರಿ 24 ರಂದು ಜರುಗುವ ಮುಖ್ಯ ಕಾರ್ಯಕ್ರಮದೊಂದಿಗೆ ರಾಜ್ಯದ 28 ಜಿಲ್ಲೆಗಳಲ್ಲಿ ವಸತಿ ರಹಿತರಿಗೆ ವಿತರಿಸುವ ನೂತನ ಮನೆಗಳ ಕಾರ್ಯಕ್ರಮವು ಸಹ ಜರುಗಲಿದೆ. ಧಾರವಾಡ ಜಿಲ್ಲೆಯ 2,169, ತುಮಕೂರು 947, ಬಾಗಲಕೋಟ 1115, ಬೀದರ 1925, ಬೆಂಗಳೂರ ಗ್ರಾಮಾಂತರ 117, ವಿಜಯಪೂರ 957, ಬೆಂಗಳೂರು ನಗರ 5731, ಗದಗ 1228, ಚಿತ್ರದುರ್ಗ 2464, ಕೊಪ್ಪಳ 996, ಬೆಳಗಾವಿ 2957, ಬಳ್ಳಾರಿ 3329, ಚಾಮರಾಜನಗರ 140, ಚಿಕ್ಕಬಳ್ಳಾಪೂರ 550, ಚಿಕ್ಕಮಂಗಳೂರು 269, ದಾವಣಗೆರೆ 1910, ಹಾಸನ 163, ಹಾವೇರಿ 3565, ಕಲ್ಬುರ್ಗಿ 2265, ಕೋಲಾರ 446, ಮಂಡ್ಯ 509, ಮೈಸೂರು 806, ರಾಯಚೂರು 1263, ರಾಮನಗರ 2257, ಶಿವಮೊಗ್ಗ 837, ಉತ್ತರಕನ್ನಡ 1113, ವಿಜಯನಗರ 2039 ಮತ್ತು ಯಾದಗಿರಿ 275 ಸೇರಿದಂತೆ ಒಟ್ಟು 42,345 ಮನೆಗಳ ವಿತರಣೆ ಕಾರ್ಯಕ್ರಮ ಜರುಗಲಿದೆ.

good news for the state's homeless beneficiaries: Government distributes 42345 houses
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಕೆಲವು ಮಂದಿಗೆ ಈಗಲೂ ಒಂದೇ ಒಂದು ಯೋಜನೆಗಳು ತಲುಪಿಲ್ಲ : ಸಿಎಸ್ ಶಾಲಿನಿ ರಜನೀಶ್ ಬೇಸರ 

20/01/2026 5:40 AM1 Min Read

ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ : ವಿಶೇಷ ನೋಂದಣಿ ಅಭಿಯಾನ ಶಿಬಿರ 

20/01/2026 5:31 AM3 Mins Read

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!

20/01/2026 5:20 AM2 Mins Read
Recent News

ರಾಜ್ಯದಲ್ಲಿ ಕೆಲವು ಮಂದಿಗೆ ಈಗಲೂ ಒಂದೇ ಒಂದು ಯೋಜನೆಗಳು ತಲುಪಿಲ್ಲ : ಸಿಎಸ್ ಶಾಲಿನಿ ರಜನೀಶ್ ಬೇಸರ 

20/01/2026 5:40 AM

ರಾಜ್ಯದ ವಸತಿ ರಹಿತ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 42,345 ಮನೆಗಳ ವಿತರಣೆ

20/01/2026 5:37 AM

BIG NEWS : WPL-2026 : ಗುಜರಾತ್ ತಂಡ ಮಣಿಸುವ ಮೂಲಕ ಪ್ಲೇಆಫ್ ಗೆ ಎಂಟ್ರಿ ಕೊಟ್ಟ ‘RCB’

20/01/2026 5:35 AM

ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ : ವಿಶೇಷ ನೋಂದಣಿ ಅಭಿಯಾನ ಶಿಬಿರ 

20/01/2026 5:31 AM
State News
KARNATAKA

ರಾಜ್ಯದಲ್ಲಿ ಕೆಲವು ಮಂದಿಗೆ ಈಗಲೂ ಒಂದೇ ಒಂದು ಯೋಜನೆಗಳು ತಲುಪಿಲ್ಲ : ಸಿಎಸ್ ಶಾಲಿನಿ ರಜನೀಶ್ ಬೇಸರ 

By kannadanewsnow0520/01/2026 5:40 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಯೋಜನೆಗಳು ರಾಜ್ಯದ ಇನ್ನೂ ಕೆಲವಷ್ಟು ಜನರಿಗೆ ತಲುಪಿಲ್ಲ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ…

ರಾಜ್ಯದ ವಸತಿ ರಹಿತ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದಿಂದ 42,345 ಮನೆಗಳ ವಿತರಣೆ

20/01/2026 5:37 AM

ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಯೋಜನೆ : ವಿಶೇಷ ನೋಂದಣಿ ಅಭಿಯಾನ ಶಿಬಿರ 

20/01/2026 5:31 AM

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!

20/01/2026 5:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.