Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

13/04/2026 7:25 AM

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM

ನೈಜೀರಿಯಾದಲ್ಲಿ ವಾಯುಪಡೆಯಿಂದ ಭೀಕರ ಪ್ರಮಾದ: ಉಗ್ರರ ಬದಲು ಮಾರುಕಟ್ಟೆ ಮೇಲೆ ಬಾಂಬ್ ದಾಳಿ, 100ಕ್ಕೂ ಹೆಚ್ಚು ನಾಗರಿಕರ ಸಾವು!

13/04/2026 7:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಅಲ್ಪಸಂಖ್ಯಾತ ಸಮುದಾಯವರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು
KARNATAKA

ರಾಜ್ಯದ ‘ಅಲ್ಪಸಂಖ್ಯಾತ ಸಮುದಾಯವರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

By kannadanewsnow5726/09/2025 6:09 AM
vidhana soudha
vidhana soudha

ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಉದ್ದೇಶಿಸಲಾಗುತ್ತಿದ್ದು, ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿ ಜನಾಂಗದವರಿಂದ) ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಯೋಜನೆಗಳು:

ಶ್ರಮಶಕ್ತಿ ಸಾಲದ ಯೋಜನೆ: ಈ ಯೋಜನೆಯಡಿ ರೂ.50 ಸಾವಿರಗಳ ಒಳಗೆ ಶೇ.4ರಷ್ಟು ಬಡ್ಡಿ ದರದಲ್ಲಿ ಶೇ.50 ಸಾಲ ಹಾಗೂ ಶೇ.50 ಸಹಾಯಧನ ನೀಡಲಾಗುವುದು.

ಸ್ವಾವಲಂಬಿ ಸಾರಥಿ ಯೋಜನೆ: ಈ ಯೋಜನೆಯಲ್ಲಿ ಟ್ಯಾಕ್ಸಿ/ಗೂಡ್ಸ್ ವಾಹನ/ಪ್ಯಾಸೆಂಜರ್ ಆಟೋರಿಕ್ಷಾ ಖರೀದಿಸಲು ಫಲಾನುಭವಿಗಳಿಗೆ ಬ್ಯಾಂಕ್‌ ನಿಂದ ಸಾಲ ಮಂಜೂರಾತಿಯಾಗಿದ್ದಲ್ಲಿ, ನಿಗಮದಿಂದ ವಾಹನದ ಮೌಲ್ಯದ ಶೇ.50ರಷ್ಟು ಸಹಾಯಧನ ಗರಿಷ್ಠ ರೂ.3 ಲಕ್ಷ ನೀಡಲಾಗುವುದು.

ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ: ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ವಿಧ್ಯಾಭ್ಯಾಸ ಪಡೆಯಲು ರೂ.20 ಲಕ್ಷದವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು.

ವೃತ್ತಿ ಪ್ರೋತ್ಸಾಹ ಯೋಜನೆ: ಅಲ್ಪಸಂಖ್ಯಾತರ ಸಮುದಾಯದ ಜನರಿಗೆ, ಹಣ್ಣು, ಹಂಪಲು, ಕೋಳಿ ಮತ್ತು ಮೀನು ಮಾರಾಟ, ಏಳನೀರು, ಕಬ್ಬೀನ ಹಾಲು, ತಂಪು ಪಾನೀಯ ಮಾರಾಟ, ಬೇಕರಿ, ಲ್ಯಾಂಡರಿ, ಡ್ರೆöÊ ಕ್ಲೀನಿಂಗ್, ಆಟಿಕೆ ಗೊಂಬೆ ತಯಾರಿಕೆ ಇತ್ಯಾದಿ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿ ಪಡಿಸಲು ನಿಗಮದಿಂದ ಶೇ.50 ಸಹಾಯಧನದೊಂದಿಗೆ ರೂ.1 ಲಕ್ಷ ಸಾಲ ನೀಡಲಾಗುವುದು.

ಅಲ್ಪಸಂಖ್ಯಾತರ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆ: ಅಲ್ಪಸಂಖ್ಯಾತರ ಸಮುದಾಯದ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಯಲ್ಲಿ ತೊಡಗಿಸಿ ಅವರನ್ನು ಆರ್ಥಿಕ ಸ್ವಾವಲಂಭಿಯನ್ನಾಗಿ ಮಾಡುವ ಸಲುವಾಗಿ ರಾಷ್ಟಿçÃಕೃತ/ಶೆಡ್ಯೂಲ್ ಬ್ಯಾಂಕ್/ಆರ್‌ಬಿಐ ನಿಂದ ಮಾನ್ಯತೆ ಪಡೆದ ವಿವಿಧ ಆರ್ಥಿಕ ಸಂಸ್ಥೆಗಳಿಂದ ಪಡೆಯುವ ಸಾಲಕ್ಕೆ ಘಟಕ ವೆಚ್ಚದ ಶೇ.50 ಅಥವಾ ಗರಿಷ್ಠ ರೂ.02 ಲಕ್ಷ ಸಹಾಯಧನವನ್ನು ನಿಗಮದಿಂದ ಒದಗಿಸಲಾಗುವುದು. ಸಹಾಯಧನವು ಬ್ಯಾಕ್ ಎಂಡ್ ಸಬ್ಸಿಡಿಯಾಗಿದ್ದು, ಸ್ವ-ಸಹಾಯ ಸಂಘಗಳ ಆರ್ಥಿಕ ಬ್ಯಾಂಕ್ ಗಳಿಂದ ಪಡೆದ ಸಾಲದ ಮರುಪಾವತಿಗೆ ಹೊಂದಾಣಿಕೆ ಮಾಡಲಾಗುವುದು.

ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆ: ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳನ್ನು ಪ್ರೋತ್ಸಾಹಿಸಿ ಅವರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಅಗತ್ಯವಿರುವ ದುಡಿಮೆ ಬಂಡವಾಳ ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ ರೂ.02 ಲಕ್ಷದ ವರೆಗೆ ಸಾಲ ಸಹಾಯಧನ ಒದಗಿಸಲಾಗುವುದು. ಇದರಲ್ಲಿ ಶೇ. 50 ಸಹಾಯಧನ ಆಗಿರುತ್ತದೆ.

ವ್ಯಾಪಾರ/ಉದ್ದಿಮೆ ನೇರಸಾಲ ಯೋಜನೆ: ಅಲ್ಪಸಂಖ್ಯಾತ ವರ್ಗದ ಜನರಿಗೆ ವ್ಯಾಪಾರ, ಉದ್ದಿಮೆ ಪ್ರಾರಂಭಿಸಲು ಅಥವಾ ಅಭಿವೃದ್ಧಿ ಪಡಿಸಿಕೊಳ್ಳುವ ಸಲುವಾಗಿ ಸಾಲವನ್ನು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಲ್ಲಿ ವ್ಯಾಪಾರ/ಆರ್ಥಿಕ/ಸೇವಾಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆ ಕೈಗೊಳ್ಳಲು ರೂ.05 ಲಕ್ಷದಿಂದ ರೂ.20 ಲಕ್ಷಗಳವರೆಗೆ ಸಾಲ ಸೌಲಭ್ಯ ನೀಡಲಾಗುವುದು.

ಸಾಂತ್ವನ ಯೋಜನೆ: ರಾಜ್ಯದಲ್ಲಿ ಕೋಮು ಗಲಭೆ ಮತ್ತು ಹಿಂಸಾಚಾರದ ಸಂದರ್ಭಗಳಲ್ಲಿ ಹಾಗೂ ಪರಿಸರ ವಿಕೋಪಗಳಿಂದ ವ್ಯಾಪಾರ ಕೇಂದ್ರಗಳು ಹಾಗೂ ವಾಸದ ಮನೆಗಳು ನಾಶ ಅಥವಾ ಹಾನಿಗೊಳಗಾಗಿದ್ದರೆ ಅಂತಹ ಪ್ರಕರಣಗಳಲ್ಲಿ ಕನಿಷ್ಠ ರೂ.02 ಲಕ್ಷ ನಷ್ಟವಾಗಿದ್ದರೆ ಸಾಲ ಸೌಲಭ್ಯ ಒದಗಿಸಲಾಗುವುದು.

ಮೇಲ್ಕಂಡಂತೆ ಎರಡು ವರ್ಗಗಳ ರಾಜ್ಯದಲ್ಲಿನ ವಿಶೇಷ/ದುರ್ಬಲ ವರ್ಗದ ಫಲಾನುಭವಿಗಳಿಗೆ ಗರಿಷ್ಠ 05 ಲಕ್ಷ ರೂ.ಗಳ ಘಟಕ ವೆಚ್ಚಕ್ಕೆ ಶೇ.50 ರಷ್ಟು ಸಹಾಯಧನ ಮತ್ತು ಶೇ.3ರ ಬಡ್ಡಿ ದರದಲ್ಲಿ ಶೇ.50 ರಷ್ಟು ಸಾಲ ಒದಗಿಸಲಾಗುವುದು.

ಅರ್ಹತೆಗಳು:

ಅರ್ಜಿದಾರರು ಜಿಲ್ಲೆಯ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.4.50 ಲಕ್ಷ ಮೀರಿರಬಾರದು. ಅರ್ಜಿದಾರರು ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಹೊಂದಿರಬೇಕು. ಶೇ.33 ರಷ್ಟು ಮಹಿಳೆಯರಿಗೆ ಮೀಸಲಾತಿ ಇರುತ್ತದೆ. ಶೇ.3ರಷ್ಟು ಅಂಗವಿಕಲರಿಗೆ ಮೀಸಲಾತಿ ಇರುತ್ತದೆ.

ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ 2 ಭಾವಚಿತ್ರ ಸಲ್ಲಿಸಬೇಕು.

ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ. ಅರ್ಜಿದಾರರು ಕಡ್ಡಾಯವಾಗಿ ಐಫ್‌ಎಸ್‌ಸಿ ಕೋಡ್ ಇರುವ ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿಯನ್ನು ಸಲ್ಲಿಸಬೇಕು.

ಅರ್ಜಿಗಳನ್ನು ಆನ್‌ಲೈನ್ ವೆಬ್‌ಸೈಟ್ https://kmdconline.karnataka.gov.in/ ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 16.

ಅರ್ಜಿ ಸಲ್ಲಿಸಿದ ಪ್ರತಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ನಿಗಮದ ಕಚೇರಿಯಲ್ಲಿ ಸಲ್ಲಿಸಬೇಕಾಗಿರುತ್ತದೆ. ತದನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

Good news for the state's 'minority communities': You will get all these facilities from the government
Share. Facebook Twitter LinkedIn WhatsApp Email

Related Posts

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

13/04/2026 7:25 AM2 Mins Read

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM1 Min Read

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM2 Mins Read
Recent News

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

13/04/2026 7:25 AM

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM

ನೈಜೀರಿಯಾದಲ್ಲಿ ವಾಯುಪಡೆಯಿಂದ ಭೀಕರ ಪ್ರಮಾದ: ಉಗ್ರರ ಬದಲು ಮಾರುಕಟ್ಟೆ ಮೇಲೆ ಬಾಂಬ್ ದಾಳಿ, 100ಕ್ಕೂ ಹೆಚ್ಚು ನಾಗರಿಕರ ಸಾವು!

13/04/2026 7:19 AM

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM
State News
KARNATAKA

ರಾಜ್ಯದ `ಪೊಲೀಸ್ ಕಾನ್ಸ್ಟೇಬಲ್’ಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್.!

By kannadanewsnow5713/04/2026 7:25 AM KARNATAKA 2 Mins Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ದಶಕಗಳಿಂದ ಒಂದೇ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್‌ಗಳ ದೀರ್ಘಕಾಲದ ಬೇಡಿಕೆಗೆ ಕೊನೆಗೂ ಸ್ಪಂದನೆ…

ರಾಜ್ಯದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ‘ದ್ವಿಭಾಷಾ ನೀತಿ’ ಜಾರಿ

13/04/2026 7:20 AM

ರೈತರಿಗೆ ವರದಾನ ‘ಕಿಸಾನ್ ಕ್ರೆಡಿಟ್ ಕಾರ್ಡ್’: ಕಡಿಮೆ ಬಡ್ಡಿ ದರದಲ್ಲಿ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ.!

13/04/2026 7:16 AM

ಪೋಷಕರೇ ಗಮನಿಸಿ : `RTE’ ಉಚಿತ ಸೀಟಿಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ.21 ರಿಂದ ಅರ್ಜಿ ಸಲ್ಲಿಕೆ ಆರಂಭ

13/04/2026 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.