ಬೆಂಗಳೂರು: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-2ಎ ರಲ್ಲಿ ಬರುವ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಜನರ (ವಿಶ್ವಕರ್ಮ, ಬಡಿಗೇರ, ಪತ್ತಾರ, ಕಮ್ಮಾರ) ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಟಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದು.
ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಹುಬ್ಬಳ್ಳಿ ಧಾರವಾಡ ಪೂರ್ವ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ಗಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ವಿಶ್ವಕರ್ಮ ಸಮುದಾಯಕ್ಕೆ ಸೇರಿದವರಾಗಿರಬೇಕು.
ವಿಶ್ವಕರ್ಮ ಸಮುದಾಯದ ಅರ್ಜಿದಾರರು ಮಾರ್ಚ 7, 2026 ರೊಳಗಾಗಿ ನಿಗಮದ ಜಾಲತಾಣ https://Kmcdc.karnataka.gov.in ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 0836-2957829 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಹೆಚ್ಚಾದ ಬಿಸಿಲ ತಾಪ: ಈ ಸಲಹೆ ಪಾಲಿಸುವಂತೆ ‘ಆರೋಗ್ಯ ಇಲಾಖೆ’ ಸೂಚನೆ | Heat Wave
ಬೆಂಗಳೂರಲ್ಲಿ ಓರ್ವ ಡ್ರಗ್ ಪೆಡ್ಲರ್ ಅರೆಸ್ಟ್, 3.8 ಲಕ್ಷ ಮೌಲ್ಯದ 35 ಗ್ರಾಂ ಮಾದಕ ವಸ್ತು ವಶಕ್ಕೆ








