ಬೆಂಗಳೂರು: ಅಯೋಧ್ಯೆಗೆ ಹೋಗುವವರಿಗೆ ರಾಜ್ಯ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಪ್ಯಾಕೇಜ್ ಟೂರ್ ನೀಡುವುದಕ್ಕೆ ಅವಕಾಶ ನೀಡಲಿದೆ ಎನ್ನಲಾಗುತ್ತಿದೆ.
ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು, ಮತ್ತು ಹಿಂದೂ ವಿರೋಧಿ ಎನ್ನುವ ಹಣೆಪಟ್ಟಿಯಿಂದ ಹೊರ ಬರಲು ರಾಜ್ಯ ಸರ್ಕಾರವು ಅಯ್ಯೋಧೆಗೆ ಭಕ್ತರನ್ನು ಕಳುಹಿಸಕೊಡಲು ಸಬ್ಸಿಡಿ ನೀಡಲು ಮುಂದಾಗಲಿದೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡತೇ ಆದರೆ ಸದ್ಯ ಈ ಬಾರಿಯ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ನಡುವೆ ಈಗಾಗಲೇ ರಾಜ್ಯ ಮುಜರಾಯಿ ಇಲಾಖೆಯು ಕಾಶಿ ಮತ್ತು ದ.ಭಾರತದ ತಮಿಳುನಾಡು ದೇವಸ್ಥಾನಕ್ಕೆ ಹೋಗುವ ಭಕ್ತರಿಗೆ ಸಬ್ಸಿಡಿಯನ್ನು ನೀಡುತ್ತಿದೆ. ಹೀಗಾಗಿ ಉತ್ತರ ಭಾರತದ ಪ್ರವಾಸಕ್ಕೆ ಹೋಗುವ ವೇಳೆಯಲ್ಲಿ ಅಯ್ಯೋಧೆಗೆ ತೆರಳುವವರಿಗೆ ಕೂಡ ಸಬ್ಸಿಡಿಯನ್ನು ನೀಡುವುದಕ್ಕೆ ನಿರ್ಧಾರ ಮಾಡಲಿದೆ ಎನ್ನಲಾಗಿದೆ.