Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮತ್ತೊಂದು ದಾಖಲೆ ಬರೆದ ‘ಶಕ್ತಿ ಯೋಜನೆ’ : `ಲಂಡನ್ ಬುಕ್ ಆಫ್ ರೆಕಾರ್ಡ್ಸ್‌’ ಗೆ ಸೇರ್ಪಡೆ

15/10/2025 5:32 AM

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,500 ವಿಶೇಷ ಬಸ್ ಗಳ ವ್ಯವಸ್ಥೆ

15/10/2025 5:32 AM

BIG NEWS : ಸಿಎಂ ಜತೆ ಸಭೆ ಹಿನ್ನೆಲೆ : ನಾಳೆ ಆರಂಭವಾಗಬೇಕಿದ್ದ ಸಾರಿಗೆ ನೌಕರರ ಉಪವಾಸ ಮುಂದೂಡಿಕೆ

15/10/2025 5:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,500 ವಿಶೇಷ ಬಸ್ ಗಳ ವ್ಯವಸ್ಥೆ
KARNATAKA

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,500 ವಿಶೇಷ ಬಸ್ ಗಳ ವ್ಯವಸ್ಥೆ

By kannadanewsnow5715/10/2025 5:32 AM

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ. ಬರೋಬ್ಬರಿ ಕೆ ಎಸ್ ಆರ್ ಟಿ ಸಿಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಮಾಡಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:22.10.2025 ಹಾಗೂ 26.10.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.

• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.

• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

• ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.

• ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

• ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.

• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.

• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

ದೀಪಾವಳಿ ಪ್ರಯುಕ್ತ 2,500 ವಿಶೇಷ ಬಸ್‌ಗಳು ರಸ್ತೆಗಿಳಿಯಲಿವೆ.

ಅಕ್ಟೋಬರ್‌ 17 ರಿಂದ ಅಕ್ಟೋಬರ್‌ 20ರ ವರೆಗೆ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್‌ 22 ಮತ್ತು ಅಕ್ಟೋಬರ್‌ 26 ರಂದು ವಿವಿಧೆಡೆಗಳಿಂದ ಬೆಂಗಳೂರಿಗೆ ಸಾರಿಗೆ ವ್ಯವಸ್ಥೆ ಇರಲಿದೆ.https://t.co/HQpcxrDIvKನಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು.… pic.twitter.com/qTSdJkmaNC

— DIPR Karnataka (@KarnatakaVarthe) October 14, 2025

500 special buses Good news for those heading home for Diwali: KSRTC to arrange 2
Share. Facebook Twitter LinkedIn WhatsApp Email

Related Posts

ಮತ್ತೊಂದು ದಾಖಲೆ ಬರೆದ ‘ಶಕ್ತಿ ಯೋಜನೆ’ : `ಲಂಡನ್ ಬುಕ್ ಆಫ್ ರೆಕಾರ್ಡ್ಸ್‌’ ಗೆ ಸೇರ್ಪಡೆ

15/10/2025 5:32 AM1 Min Read

BIG NEWS : ಸಿಎಂ ಜತೆ ಸಭೆ ಹಿನ್ನೆಲೆ : ನಾಳೆ ಆರಂಭವಾಗಬೇಕಿದ್ದ ಸಾರಿಗೆ ನೌಕರರ ಉಪವಾಸ ಮುಂದೂಡಿಕೆ

15/10/2025 5:30 AM1 Min Read

BIG NEWS : ತಾಂತ್ರಿಕ ದೋಷದಿಂದ 10 ದಿನಗಳಿಂದ ಕ್ಲಿಯರ್ ಆಗುತ್ತಿಲ್ಲ `ಬ್ಯಾಂಕ್ ಚೆಕ್’ ಗಳು : ರಾಜ್ಯಾದ್ಯಂತ ಗ್ರಾಹಕರ ಪರದಾಟ.!

15/10/2025 5:26 AM1 Min Read
Recent News

ಮತ್ತೊಂದು ದಾಖಲೆ ಬರೆದ ‘ಶಕ್ತಿ ಯೋಜನೆ’ : `ಲಂಡನ್ ಬುಕ್ ಆಫ್ ರೆಕಾರ್ಡ್ಸ್‌’ ಗೆ ಸೇರ್ಪಡೆ

15/10/2025 5:32 AM

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,500 ವಿಶೇಷ ಬಸ್ ಗಳ ವ್ಯವಸ್ಥೆ

15/10/2025 5:32 AM

BIG NEWS : ಸಿಎಂ ಜತೆ ಸಭೆ ಹಿನ್ನೆಲೆ : ನಾಳೆ ಆರಂಭವಾಗಬೇಕಿದ್ದ ಸಾರಿಗೆ ನೌಕರರ ಉಪವಾಸ ಮುಂದೂಡಿಕೆ

15/10/2025 5:30 AM

BIG NEWS : ತಾಂತ್ರಿಕ ದೋಷದಿಂದ 10 ದಿನಗಳಿಂದ ಕ್ಲಿಯರ್ ಆಗುತ್ತಿಲ್ಲ `ಬ್ಯಾಂಕ್ ಚೆಕ್’ ಗಳು : ರಾಜ್ಯಾದ್ಯಂತ ಗ್ರಾಹಕರ ಪರದಾಟ.!

15/10/2025 5:26 AM
State News
KARNATAKA

ಮತ್ತೊಂದು ದಾಖಲೆ ಬರೆದ ‘ಶಕ್ತಿ ಯೋಜನೆ’ : `ಲಂಡನ್ ಬುಕ್ ಆಫ್ ರೆಕಾರ್ಡ್ಸ್‌’ ಗೆ ಸೇರ್ಪಡೆ

By kannadanewsnow5715/10/2025 5:32 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ರಾಜ್ಯದ ಮಹಿಳೆಯರಿಗೆ 564.10 ಕೋಟಿ ಉಚಿತ ಪ್ರಯಾಣದ ಸೇವೆ ನೀಡಿದ ಶಕ್ತಿ…

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,500 ವಿಶೇಷ ಬಸ್ ಗಳ ವ್ಯವಸ್ಥೆ

15/10/2025 5:32 AM

BIG NEWS : ಸಿಎಂ ಜತೆ ಸಭೆ ಹಿನ್ನೆಲೆ : ನಾಳೆ ಆರಂಭವಾಗಬೇಕಿದ್ದ ಸಾರಿಗೆ ನೌಕರರ ಉಪವಾಸ ಮುಂದೂಡಿಕೆ

15/10/2025 5:30 AM

BIG NEWS : ತಾಂತ್ರಿಕ ದೋಷದಿಂದ 10 ದಿನಗಳಿಂದ ಕ್ಲಿಯರ್ ಆಗುತ್ತಿಲ್ಲ `ಬ್ಯಾಂಕ್ ಚೆಕ್’ ಗಳು : ರಾಜ್ಯಾದ್ಯಂತ ಗ್ರಾಹಕರ ಪರದಾಟ.!

15/10/2025 5:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.