Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದಿನ ದಿನ ಭವಿಷ್ಯ ಹಾಗೂ ರಾಶಿ ಫಲ : ದಿನಾಂಕ:25-07-2025 ಶುಕ್ರವಾರ

25/07/2025 7:57 AM

ರೈತರೇ ಗಮನಿಸಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ `ಬೆಳೆ ವಿಮೆ’ ನೋಂದಣಿಗೆ ಆಹ್ವಾನ

25/07/2025 7:56 AM

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

25/07/2025 7:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜಿ ಸಂಧಾನದ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳುವವರಿಗೆ ಗುಡ್ ನ್ಯೂಸ್ : ಇಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ ಅದಾಲತ್’
KARNATAKA

ರಾಜಿ ಸಂಧಾನದ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳುವವರಿಗೆ ಗುಡ್ ನ್ಯೂಸ್ : ಇಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ ಅದಾಲತ್’

By kannadanewsnow5714/09/2024 5:07 AM

ಬೆಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 14 ರ ಇಂದು  ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಅದರಂತೆ ಪಿರ್ಯಾದಿದಾರರು ಮತ್ತು ಆರೋಪಿತರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ನಡುವಿನ ಸಿವಿಲ್ ಪ್ರಕರಣಗಳು, ರಾಜಿ ಆಗಬಹುದಾದ ಅಪರಾಧಿಕ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.

ವ್ಯಾಜ್ಯ ಪೂರ್ವ ಪ್ರಕರಣಗಳು

ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

Good news for those who resolve disputes through conciliation: 'Rashtriya Lok Adalat' to be held across the state today ರಾಜಿ ಸಂಧಾನದ ಮೂಲಕ ವ್ಯಾಜ್ಯ ಬಗೆಹರಿಸಿಕೊಳ್ಳುವವರಿಗೆ ಗುಡ್ ನ್ಯೂಸ್ : ಇಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ ಅದಾಲತ್'
Share. Facebook Twitter LinkedIn WhatsApp Email

Related Posts

ಇಂದಿನ ದಿನ ಭವಿಷ್ಯ ಹಾಗೂ ರಾಶಿ ಫಲ : ದಿನಾಂಕ:25-07-2025 ಶುಕ್ರವಾರ

25/07/2025 7:57 AM2 Mins Read

ರೈತರೇ ಗಮನಿಸಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ `ಬೆಳೆ ವಿಮೆ’ ನೋಂದಣಿಗೆ ಆಹ್ವಾನ

25/07/2025 7:56 AM1 Min Read

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

25/07/2025 7:51 AM2 Mins Read
Recent News

ಇಂದಿನ ದಿನ ಭವಿಷ್ಯ ಹಾಗೂ ರಾಶಿ ಫಲ : ದಿನಾಂಕ:25-07-2025 ಶುಕ್ರವಾರ

25/07/2025 7:57 AM

ರೈತರೇ ಗಮನಿಸಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ `ಬೆಳೆ ವಿಮೆ’ ನೋಂದಣಿಗೆ ಆಹ್ವಾನ

25/07/2025 7:56 AM

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

25/07/2025 7:51 AM

ರಾಯಲ್ ಎಸ್ಟೇಟ್ಗಾಗಿ ಕಿಂಗ್ ಚಾರ್ಲ್ಸ್ 3 ಗೆ ‘ಏಕ್ ಪೆಡ್ ಮಾ ಕೆ ನಾಮ್’ ಉಡುಗೊರೆ ನೀಡಿದ ಪ್ರಧಾನಿ ಮೋದಿ

25/07/2025 7:45 AM
State News
KARNATAKA

ಇಂದಿನ ದಿನ ಭವಿಷ್ಯ ಹಾಗೂ ರಾಶಿ ಫಲ : ದಿನಾಂಕ:25-07-2025 ಶುಕ್ರವಾರ

By kannadanewsnow5725/07/2025 7:57 AM KARNATAKA 2 Mins Read

01,🕉️ಮೇಷ ರಾಶಿ🕉️ 📖,ಸಮಾಜದಲ್ಲಿ ಪ್ರತಿಷ್ಠೆ ಹೆಚ್ಚಾಗುತ್ತದೆ. ಎಲ್ಲಾ ಕಡೆಯಿಂದ ಆದಾಯದ ಮಾರ್ಗಗಳಿವೆ. ಹೊಸ ವ್ಯವಹಾರಗಳನ್ನು ಪ್ರಾರಂಭಿಸಿ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ…

ರೈತರೇ ಗಮನಿಸಿ : ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ `ಬೆಳೆ ವಿಮೆ’ ನೋಂದಣಿಗೆ ಆಹ್ವಾನ

25/07/2025 7:56 AM

ರೈತರಿಗೆ ಗುಡ್ ನ್ಯೂಸ್ : 30 HP ಟ್ರ್ಯಾಕ್ಟರ್ ಖರೀದಿಗೆ ಸಿಗಲಿದೆ 2.50 ಲಕ್ಷ ರೂ. ಸಹಾಯಧನ.!

25/07/2025 7:51 AM

ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ `ಪಿಯು ಉಪನ್ಯಾಸಕರಿಗೆ’ ಗುಡ್ ನ್ಯೂಸ್ : ವೇತನ ಸಹಿತ `ಬಿ.ಇಡಿ’ ಪೂರೈಸಲು ಅವಕಾಶ.!

25/07/2025 7:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.