ಬೆಂಗಳೂರು: ಇ-ಖಾತಾ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದ್ದು, ಸದನದಲ್ಲಿ ವಿಧೇಯಕಕ್ಕೆ ಅಂಗೀಕಾರ ದೊರೆತಿದ್ದೇ ಆದರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆಯೇ ತೀರಲಿದೆ.
ಶುಕ್ರವಾರದಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಇ-ಖಾತಾ ಸಮಸ್ಯೆ ಸರಿ ಪಡಿಸೋ ಸಂಬಂಧ ತಿದ್ದುಪಡಿ ವಿಧೇಯಕ ಕುರಿತಂತೆ ಚರ್ಚೆ ನಡೆಸಲಾಯಿತು. ಅಂತಿಮವಾಗಿ ರಾಜ್ಯ ಸಚಿವ ಸಂಪುಟ ಸಭೆಯು ವಿಧೇಯಕಕ್ಕೆ ಅಂಗೀಕಾರ ನೀಡಿದೆ.
ಶುಕ್ರವಾರದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವಂತ ಇ-ಖಾತಾ ಸಮಸ್ಯೆ ಸರಿ ಪಡಿಸುವಂತ ತಿದ್ದುಪಡಿ ವಿಧೇಯಕವನ್ನು ರಾಜ್ಯದ ಉಭಯ ಸದನಗಳಲ್ಲಿ ಈ ಬಾರಿಯೇ ಮಂಡನೆ ಮಾಡೋ ಸಾಧ್ಯತೆ ಇದೆ. ಇದಕ್ಕೆ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತರೇ ಗ್ರಾಮೀಣ ಭಾಗದ ಇ-ಖಾತಾ ಸಮಸ್ಯೆ ಕ್ಲಿಯರ್ ಆಗಲಿದೆ.
ಗ್ರಾಮೀಣ ಭಾಗದ ಕಂದಾಯ ಭೂಮಿಯಲ್ಲಿನ ನಿವೇಶ, ಮನೆ ಸಕ್ರಮಕ್ಕೆ ಅವಕಾಶ ಸಿಗಲಿದೆ. ಆ ನಂತ್ರ ಇ-ಖಾತಾವೂ ಅಕ್ರಮ ಸಕ್ರಮದ ಮೂಲಕ ಲಭ್ಯವಾಗುವಂತೆ ಆಗಲಿದೆ. ಅದು ಯಾವಾಗ ಸಾಧ್ಯ ಎಂಬುದನ್ನು ಕಾದು ನೋಡಬೇಕಿದೆ.