Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ vs ಪಾಕ್ ಏಷ್ಯಾಕಪ್ ಪಂದ್ಯಕ್ಕೆ ಸುಪ್ರೀಂಕೋರ್ಟ್ ಅನುಮತಿ!

12/09/2025 6:39 AM

ಮೋಹನ್ ಭಾಗವತ್ ಗೆ ಮೋದಿ ಬರ್ತ್‌ಡೇ ಶುಭಾಶಯಗಳು, RSSಗೆ ಒಲೈಕೆ ಮಾಡುವ ಹತಾಶ ಪ್ರಯತ್ನ ಎಂದ ಕಾಂಗ್ರೆಸ್

12/09/2025 6:34 AM
vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ಇಂದಿನಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ : ರಾಜ್ಯಾದ್ಯಂತ `ಗೃಹ ಆರೋಗ್ಯ ಯೋಜನೆ’ ವಿಸ್ತರಣೆ.!
KARNATAKA

GOOD NEWS : ಇಂದಿನಿಂದ ಮನೆ ಬಾಗಿಲಿಗೆ ಆರೋಗ್ಯ ಸೇವೆ : ರಾಜ್ಯಾದ್ಯಂತ `ಗೃಹ ಆರೋಗ್ಯ ಯೋಜನೆ’ ವಿಸ್ತರಣೆ.!

By kannadanewsnow5702/06/2025 6:02 AM

ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯಾದ್ಯಂತರ ಮನೆ ಮನೆಗೂ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರ ಸಾಂಕ್ರಾಮಿಕ ಅಲ್ಲದ ರೋಗಗಳ ತಪಾಸಣೆ ನಡೆಸುವುದು, ಔಷಧ ವಿತರಣೆ, ಅಗತ್ಯ ಚಿಕಿತ್ಸೆಗೆ ಸಹಕರಿಸುವ ‘ಗೃಹ ಆರೋಗ್ಯ’ ಯೋಜನೆ ವಿಸ್ತರಣೆಯಾಗಲಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಕುರಿತು ಮಾಹಿತಿ ನೀಡಿದ್ದು, ಗೃಹ ಆರೋಗ್ಯ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕೋಲಾರ ಜಿಲ್ಲೆಯಲ್ಲಿ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಸ್ತರಿಸಲು ತೀರ್ಮಾನಿಸಲಾಗಿದೆ.

ಮೇಲ್ಪಟ್ಟವರ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆ ನಡೆಸಿ ರೋಗ ತಪಾಸಣೆ ಜತೆಗೆ ರೋಗ ಪೀಡಿತರಿಗೆ ಉಚಿತ ಔಷಧ ವಿತರಿಸಲಾಗುವುದು. ಈ ಮೂಲಕ ಅಕಾಲಿಕ ಮರಣ ತಡೆಯುವುದು ಯೋಜನೆಯ ಮುಖ್ಯ ಉದ್ದೇಶ. ಇದಕ್ಕಾಗಿ ಉಚಿತ ಆರೋಗ್ಯ ತಪಾಸಣೆ ನಡೆಸಿ, ಅಗತ್ಯ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ. ಅಂತಹ ರೋಗಿಗಳನ್ನು ಆಸ್ಪತ್ರೆಗಳಿಗೆ ಶಿಫಾರಸು ಮಾಡಲಾಗುತ್ತದೆ.

ಈ ಕಾರ್ಯಕ್ರಮವನ್ನು ಗ್ರಾಮೀಣ ಪ್ರದೇಶಗಳಲ್ಲಿ ಜಾರಿಗೆ ತಂದು ಸಮುದಾಯ ಆರೋಗ್ಯ ಅಧಿಕಾರಿಗಳು ಆರೋಗ್ಯ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಸಹಾಯದಿಂದ ಮನೆ ಬಾಗಿಲಿಗೆ ತೆರಳಿ ತಪಾಸಣೆ ನಡೆಸುತ್ತಾರೆ. ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್‌ನಂತಹ ಸಾಂಕ್ರಾಮಿಕವಲ್ಲದ 14 ರೋಗಗಳ ತಪಾಸಣೆ ನಡೆಸಲಾಗುತ್ತದೆ ಮಂಗಳವಾರ, ಬುಧವಾರ, ಶುಕ್ರವಾರ ಹಾಗೂ ಶನಿವಾರದಂದು ಮನೆಮನೆಗೆ ಆರೋಗ್ಯ ಕಾರ್ಯಕರ್ತರು ಆರೋಗ್ಯ ಪರೀಕ್ಷೆ ಮಾಡಲು ಬರುತ್ತಾರೆ.

ಗೃಹ ಆರೋಗ್ಯ ಯೋಜನೆಯ ಪ್ರಮುಖ ಅಂಶಗಳು

ಆರೋಗ್ಯ ಕಾರ್ಯಕರ್ತರ ತಂಡ ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರ ಮನೆಗಳಿಗೆ ಭೇಟಿ ನೀಡಿ ಪ್ರಮುಖ 6 ಅಸಾಂಕ್ರಾಮಿಕ ರೋಗಗಳಾದ ಮಧುಮೇಹ (ಸಕ್ಕರೆ ಕಾಯಿಲೆ), ಅಧಿಕ ರಕ್ತದೊತ್ತಡ (BP) ಸಂಬಂಧ ಪರೀಕ್ಷೆ ಮತ್ತು ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಂತದ ತಪಾಸಣೆ

ಆಯುಷ್ ಪದ್ಧತಿಯ ಸಂವರ್ಧನೆ ಮೂಲಕ ಜೀವನಶೈಲಿ ಮಾರ್ಪಾಡು ಹಾಗೂ ಚಿಕಿತ್ಸಾ ಕ್ರಮಗಳಿಂದ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಹಾಗೂ ನಿರ್ವಹಣೆಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಕಾಯಿಲೆಗಳಿಗೆ ವೈದ್ಯರ ಸಲಹೆಯಂತೆ ನಿರಂತರ ಉಚಿತ ಔಷಧಿಗಳ ವಿತರಣೆ

ಅಸಾಂಕ್ರಾಮಿಕ ರೋಗಗಳಿಗೆ ಪ್ರಮುಖ ಕಾರಣಗಳಾದ – ಸ್ಟೀಪ್ ಅಗ್ನಿಯಾ (ನಿದ್ರೆಯಲ್ಲಿ ಉಸಿರುಕಟ್ಟುವಿಕೆ), BMI ಅಸಮತೋಲನ, ಧೂಮಪಾನ ಮತ್ತು ಮದ್ಯಪಾನ, ವ್ಯಸನ ಮುಕ್ತದ ಬಗ್ಗೆ ಆರೋಗ್ಯ ಶಿಕ್ಷಣ ಮತ್ತು ಆಪ್ತ ಸಮಾಲೋಚನೆಯ ಮುಖಾಂತರ ನಿಯಂತ್ರಣಕ್ಕೆ ಕ್ರಮ

ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ನಿರಂತರ ಉಚಿತ ತಪಾಸಣೆ ಹಾಗೂ ಚಿಕಿತ್ಸೆಯ ಮೂಲಕ ಅಡ್ಡ ಪರಿಣಾಮ ಮತ್ತು ಅಕಾಲಿಕ ಮರಣ ತಡೆಗಟ್ಟುವುದು ಯೋಜನೆಯ ಪ್ರಮುಖ ಉದ್ದೇಶ.

door-to-door healthcare service across the state: `Home Health Scheme' expanded! GOOD NEWS: From today
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM2 Mins Read

ರಾಜ್ಯದಲ್ಲಿ `JCB’ ಚಿಹ್ನೆ ಅಡಿ ಕರ್ನಾಟಕ ಹಿಂದೂ ಪಕ್ಷ ಕಟ್ಟುತ್ತೇನೆ : ಬಸವನಗೌಡ ಪಾಟೀಲ ಯತ್ನಾಳ್ ಘೋಷಣೆ

12/09/2025 6:27 AM1 Min Read

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಇಂದು ಕೊನೆಯ ದಿನ

12/09/2025 6:20 AM1 Min Read
Recent News

ಭಾರತ vs ಪಾಕ್ ಏಷ್ಯಾಕಪ್ ಪಂದ್ಯಕ್ಕೆ ಸುಪ್ರೀಂಕೋರ್ಟ್ ಅನುಮತಿ!

12/09/2025 6:39 AM

ಮೋಹನ್ ಭಾಗವತ್ ಗೆ ಮೋದಿ ಬರ್ತ್‌ಡೇ ಶುಭಾಶಯಗಳು, RSSಗೆ ಒಲೈಕೆ ಮಾಡುವ ಹತಾಶ ಪ್ರಯತ್ನ ಎಂದ ಕಾಂಗ್ರೆಸ್

12/09/2025 6:34 AM
vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM

ರಾಜ್ಯದಲ್ಲಿ `JCB’ ಚಿಹ್ನೆ ಅಡಿ ಕರ್ನಾಟಕ ಹಿಂದೂ ಪಕ್ಷ ಕಟ್ಟುತ್ತೇನೆ : ಬಸವನಗೌಡ ಪಾಟೀಲ ಯತ್ನಾಳ್ ಘೋಷಣೆ

12/09/2025 6:27 AM
State News
vidhana soudha KARNATAKA

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

By kannadanewsnow5712/09/2025 6:32 AM KARNATAKA 2 Mins Read

ಬೆಂಗಳೂರು :ರಾಜ್ಯ ಹಾಗೂ ಜಿಲ್ಲಾಮಟ್ಟದ ಸರ್ಕಾರಿ ಕಾರ್ಯ ಕ್ರಮಗಳಲ್ಲಿ ಶಿಸ್ತು ತರುವ ಸಲುವಾಗಿ ವೇದಿಕೆ ಮೇಲೆ ಆಸೀನರಾಗುವ ಅತಿಥಿಗಳಿಗೆ ರಾಜ್ಯ…

ರಾಜ್ಯದಲ್ಲಿ `JCB’ ಚಿಹ್ನೆ ಅಡಿ ಕರ್ನಾಟಕ ಹಿಂದೂ ಪಕ್ಷ ಕಟ್ಟುತ್ತೇನೆ : ಬಸವನಗೌಡ ಪಾಟೀಲ ಯತ್ನಾಳ್ ಘೋಷಣೆ

12/09/2025 6:27 AM

ವಾಹನ ಸವಾರರೇ ಗಮನಿಸಿ : ಶೇ.50% ರಿಯಾಯಿತಿಯೊಂದಿಗೆ ‘ಟ್ರಾಫಿಕ್ ದಂಡ’ ಪಾವತಿಗೆ ಇಂದು ಕೊನೆಯ ದಿನ

12/09/2025 6:20 AM

ರಾಜ್ಯದಲ್ಲಿ 9 ತಿಂಗಳ ಬಳಿಕ `ನೇರ ನೇಮಕಾತಿ’ ಪುನಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್

12/09/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.