Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಿಗ್ ಬಾಸ್ ಟ್ರೋಫಿ ಗೆದ್ದ ಗಿಲ್ಲಿ ನಟ: ಇದು ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಎಂದ ಗಿಲ್ಲಿ

18/01/2026 11:56 PM

KSRTC ಮುಡಿಗೇರಿದ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ

18/01/2026 10:45 PM

ನೀವು ರಾತ್ರಿಯಿಡೀ ‘ಬಾದಾಮಿ’ ನೆನೆಸಿ ತಿನ್ನುತ್ತಿದ್ದೀರಾ.? ಹಾಗಿದ್ರೆ, ಜಾಗರೂಕರಾಗಿರಿ! ತಜ್ಞರ ಎಚ್ಚರಿಕೆ

18/01/2026 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : `ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ `8500’ ಕಾನ್‌ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ
KARNATAKA

GOOD NEWS : `ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ `8500’ ಕಾನ್‌ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ

By kannadanewsnow5729/10/2025 7:19 AM
vidhana soudha
vidhana soudha

ಬೆಂಗಳೂರು: ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲಾಖೆಗೆ ಸಂಬಂಧಿಸಿದ ಅನೇಕ ಪ್ರಸ್ತಾವನೆಗಳಿಗೆ ಅನುಮೋದನೆ ಮಾಡಿಕೊಟ್ಟಿದ್ದಾರೆ. ಇನ್‌ಸ್ಪೆಕ್ಟರ್‌ ಹುದ್ದೆಯಿಂದ ಎಸ್‌ಪಿ ಹುದ್ದೆಯವರೆಗಿನ ಅಧಿಕಾರಿಗಳನ್ನು ಎರಡು ವರ್ಷದವರೆಗೆ ವರ್ಗಾವಣೆ ಮಾಡದಂತೆ ಕಾನೂನು ತಂದಿದ್ದೇವೆ. ಕನಿಷ್ಟ ಎರಡು ವರ್ಷ ಒಂದೇ ಸ್ಥಳದಲ್ಲಿ ಕೆಲಸ ಮಾಡಲು ಅವಕಾಶ ಮಾಡಿ ಕೊಟ್ಟರೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಕಾನೂನಾತ್ಮಕವಾಗಿ ಬದಲಾವಣೆ ತಂದಿದ್ದೇವೆ. ಬಹಳ ಜನ ಇದನ್ನು ಪ್ರಶಂಸೆ ಮಾಡಿದ್ದಾರೆ. ಕೆಳ ಹಂತದ ಸಿಬ್ಬಂದಿಗಳಿಗೆ ಎಸ್‌ಪಿ ಹಂತದಲ್ಲಿ ವರ್ಗಾವಣೆ ಮಾಡಲು ಅವಕಾಶ ಮಾಡ ಕೊಟ್ಟಿದ್ದೇವೆ ಎಂದರು.

ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಒಂದು ವಾರದಲ್ಲಿ ನೋಟಿಫಿಕೇಷನ್ ಮಾಡುತ್ತೇವೆ ಎಂದು ಹೇಳಿದರು.

ಪೊಲೀಸ್ ಗೃಹ ಯೋಜನೆಗೆ ಸಾವಿರಾರು ಕೋಟಿ ರೂ. ಅನುದಾನ ನೀಡಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇಲಾಖೆಯ ಸಿಬ್ಬಂದಿಗಳಿಗೆ ಉತ್ತಮ ವ್ಯವಸ್ಥೆಯನ್ನು‌ ಕಲ್ಪಿಸಲಾಗಿದೆ. 16 ಸಾವಿರ ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದೇವೆ. ಈ ಯೋಜನೆಯನ್ನು ಐದು ವರ್ಷ ಮುಂದುವರೆಸುವುದಾಗಿ ಸಿಎಂ ಅವರು ಹೇಳಿದ್ದಾರೆ. ಅವರಿಗೆ ಅಭಿನಂದನೆಗಳು.

ಪೊಲೀಸರ ಆರೋಗ್ಯ ತಪಾಸಣೆ ವೆಚ್ಚವನ್ನು 1500 ರೂ. ಹೆಚ್ಚಿಸಲಾಗಿದೆ. ಕರ್ತವ್ಯದಲ್ಲಿದ್ದಾಗ ಮೃತಪಟ್ಟರೆ ಕುಟುಂಬಸ್ಥರಿಗೆ ಉದ್ಯೋಗ ಕೊಡಬೇಕು ಎಂಬ ನಿಯಮ ಇದೆ.‌ ಅನೇಕ ಕಾರಣಗಳಿಂದ ನೆನೆಗುದಿಗೆ ಬಿದ್ದಿತ್ತು. ಇದಕ್ಕೆ ಹೆಚ್ವಿನ ರೀತಿಯಲ್ಲಿ ಕ್ರಮ ತೆಗೆದುಕೊಂಡು, ನೂರಾರು ಮೃತ ಪೊಲೀಸರ ಕುಟುಂಬದವರಿಗೆ ಉದ್ಯೋಗ ನೀಡಲಾಗಿದೆ.

ಇಲಾಖೆಯಲ್ಲಿ ರಜೆ ತೆಗೆದುಕೊಳ್ಳುವುದೇ ದೊಡ್ಡ ಸಮಸ್ಯೆಯಾಗಿತ್ತು. ಇದನ್ನು ಸರಳಗೊಳಿಸಲಾಗಿದೆ.‌ ಪೊಲೀಸ್ ಸಿಬ್ಬಂದಿಗಳ ಪರವಾದ ವಾತಾವರಣವನ್ನು ಅಧಿಕಾರಿಗಳು ಸೃಷ್ಟಿ ಮಾಡಿದ್ದಾರೆ ಎಂದರು.

ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಒಳ್ಳೆಯ ವಾತಾವರಣ ಮಾಡಿಕೊಟ್ಟಿದೆ. ರಾಜ್ಯದ ಜನತೆಯ ಆಪೇಕ್ಷೆಯಂತೆ ಕೆಲಸ ಮಾಡಬೇಕಿದೆ. ಕರ್ನಾಟಕವನ್ನು ಶಾಂತಿಯ ತೋಟವನ್ನಾಗಿ ಮಾಡಬೇಕು ಎಂಬ ಬದ್ಧತೆ ನಮಗೆ ಇದೆ. ಆ ದೃಷ್ಟಿಯಲ್ಲಿ ತಾವೆಲ್ಲ ಕೆಲಸ ಮಾಡುತ್ತೀರಿ ಎಂದು ಭರವಸೆ ವ್ಯಕ್ತಪಡಿಸಿದರು.

ಮಾದಕ ವಸ್ತು ಸಮಾಜಕ್ಕೆ ದೊಡ್ಡ ಪಿಡುಕು. ಡ್ರಗ್ಸ್ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು‌ ಮುಖ್ಯಮಂತ್ರಿಯವರು ಸದನದಲ್ಲಿ ಘೋಷಣೆ ಮಾಡಿದ್ದಾರೆ. ಈ ದೃಷ್ಟಿಯಲ್ಲಿ ಪೊಲೀಸ್ ಇಲಾಖೆಯಲ್ಲಿ ಅನೇಕ‌ ಕೆಲಸಗಳು ನಡೆಯುತ್ತಿವೆ. ಕಳೆದ ಎರಡು ವರ್ಷದಿಂದ ಸುಮಾರು 250 ರಿಂದ 300 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ ಹಚ್ಚಿ, ನಾಶಪಡಿಸಲಾಗಿದೆ. ಇಷ್ಟೊಂದು ಎಚ್ಚರಿಕೆಯಿಂದ ಕೆಲಸ ಮಾಡಿದರು ಸಹ ಡ್ರಗ್ಸ್ ಬರುತ್ತಿದೆ. ಪಾರ್ಸಲ್ ಸೇರಿದಂತೆ ವಿವಿಧ ರೂಪದಲ್ಲಿ ಬರುತ್ತಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸಲು ಮಾದಕ ದ್ರವ್ಯ ವಿರೋಧಿ ಕಾರ್ಯಪಡೆಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಪೆಡ್ಲರ್‌ಗಳು ಮತ್ತು ಮಾದಕ ವ್ಯಸನಿಗಳ ಹಿಂದೆ ಒಬ್ಬ ಪೊಲೀಸರನ್ನು ಬಿಡುತ್ತೇವೆ. ಸನ್ಮಿತ್ರ ಕಾರ್ಯಕ್ರಮದಲ್ಲಿ ಅವರ ನಿಗಾವಹಿಸಲು ಕಾನ್‌ಸ್ಟೇಬಲ್‌ಗಳನ್ನು ನಿಯೋಜಿಸಲಾಗುತ್ತಿದೆ.

ರಾಜ್ಯದಲ್ಲಿ ಜಾರಿಗೆ ತಂದಿರುವ ಮನೆ‌ಮನೆಗೆ ಪೊಲೀಸ್ ವಿನೂತನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಪ್ರತಿ‌ಯೊಂದು ಮನೆಯ ಮಾಹಿತಿ ತೆಗೆದುಕೊಂಡರೆ, ದೂರುಗಳು ಬಂದಾಗ ಸಹಾಯ ಆಗುತ್ತದೆ.‌ ಅಪರಾಧ ಚಟುವಟಿಕೆಗಳನ್ನು ಮಟ್ಟ ಹಾಕಲು ಅನುಕೂಲವಾಗುತ್ತದೆ ಎಂದರು.

GOOD NEWS: Good news for `Police post' aspirants: Recruitment notification for filling `8500' constable posts in Karnataka
Share. Facebook Twitter LinkedIn WhatsApp Email

Related Posts

ಬಿಗ್ ಬಾಸ್ ಟ್ರೋಫಿ ಗೆದ್ದ ಗಿಲ್ಲಿ ನಟ: ಇದು ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಎಂದ ಗಿಲ್ಲಿ

18/01/2026 11:56 PM1 Min Read

KSRTC ಮುಡಿಗೇರಿದ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ

18/01/2026 10:45 PM1 Min Read

BBK Season 12: ಟೈಟಲ್‌ ಸನಿಹದಲ್ಲಿ ಕಾವ್ಯ ಶೈವಗೆ ತಪ್ಪಿದ ಲಕ್‌: ಬಿಗ್ ಬಾಸ್ ಮನೆಯಿಂದ 3ನೇ ರನ್ನರ್‌ಅಪ್‌ ಆಗಿ ಔಟ್‌!

18/01/2026 9:41 PM1 Min Read
Recent News

ಬಿಗ್ ಬಾಸ್ ಟ್ರೋಫಿ ಗೆದ್ದ ಗಿಲ್ಲಿ ನಟ: ಇದು ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಎಂದ ಗಿಲ್ಲಿ

18/01/2026 11:56 PM

KSRTC ಮುಡಿಗೇರಿದ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ

18/01/2026 10:45 PM

ನೀವು ರಾತ್ರಿಯಿಡೀ ‘ಬಾದಾಮಿ’ ನೆನೆಸಿ ತಿನ್ನುತ್ತಿದ್ದೀರಾ.? ಹಾಗಿದ್ರೆ, ಜಾಗರೂಕರಾಗಿರಿ! ತಜ್ಞರ ಎಚ್ಚರಿಕೆ

18/01/2026 9:56 PM

BBK Season 12: ಟೈಟಲ್‌ ಸನಿಹದಲ್ಲಿ ಕಾವ್ಯ ಶೈವಗೆ ತಪ್ಪಿದ ಲಕ್‌: ಬಿಗ್ ಬಾಸ್ ಮನೆಯಿಂದ 3ನೇ ರನ್ನರ್‌ಅಪ್‌ ಆಗಿ ಔಟ್‌!

18/01/2026 9:41 PM
State News
KARNATAKA

ಬಿಗ್ ಬಾಸ್ ಟ್ರೋಫಿ ಗೆದ್ದ ಗಿಲ್ಲಿ ನಟ: ಇದು ನನ್ನ ಮೇಲೆ ನಂಬಿಕೆ ಇಟ್ಟ ಎಲ್ಲರಿಗೂ ಎಂದ ಗಿಲ್ಲಿ

By kannadanewsnow0918/01/2026 11:56 PM KARNATAKA 1 Min Read

ಬೆಂಗಳೂರು: ಕನ್ನಡದ ಕಿರುತೆರೆಯ ಜನಪ್ರಿಯ ರಿಯಾಲಿಟ ಶೋ ಬಿಗ್ ಬಾಸ್ ಸೀಸನ್ 12 ಗ್ರ್ಯಾಂಡ್ ಫಿನಾಲೆಯಲ್ಲಿ ಗಿಲ್ಲಿ ನಟ ವಿನ್ನರ್…

KSRTC ಮುಡಿಗೇರಿದ ಮತ್ತೊಂದು ರಾಷ್ಟ್ರೀಯ ಪ್ರಶಸ್ತಿ

18/01/2026 10:45 PM

BBK Season 12: ಟೈಟಲ್‌ ಸನಿಹದಲ್ಲಿ ಕಾವ್ಯ ಶೈವಗೆ ತಪ್ಪಿದ ಲಕ್‌: ಬಿಗ್ ಬಾಸ್ ಮನೆಯಿಂದ 3ನೇ ರನ್ನರ್‌ಅಪ್‌ ಆಗಿ ಔಟ್‌!

18/01/2026 9:41 PM

ಗಿಲ್ಲಿ ನಟ ಬಿಗ್ ಬಾಸ್ ಸೀಸನ್-12 ಗೆದ್ದರೇ 20 ಲಕ್ಷ ನೀಡುತ್ತೇನೆ: ಜೆಡಿಎಸ್ ಎಂಎಲ್ಸಿ ಟಿ.ಎ ಶರವಣ ಘೋಷಣೆ

18/01/2026 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.