ಬೆಂಗಳೂರು : ಜುಲೈ 2 ರಂದು ನಂದಿ ಬೆಟ್ಟದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಕ್ಯಾಬಿನೆಟ್ ನಲ್ಲಿ ಮತ್ತೊಂದು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ಜುಲೈ 2 ರಂದು ನಂದಿ ಬೆಟ್ಟದಲ್ಲಿ ನಡೆಯುವ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಪಡಿತರ ಅಕ್ಕಿ ಜೊತೆಗೆ ಆಹಾರ ಕಿಟ್ ವಿತರಣೆಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ. ಸಕ್ಕರೆ, ಉಪ್ಪು, ತೊಗರಿಬೇಳೆ, ಟೀ, ಕಾಫಿ ಪೌಡರ್, ಅಡುಗೆ ಎಣ್ಣೆ ಗೋಧಿ ಒಳಗೊಂಡ ಆಹಾರ ಕಿಟ್ ವಿತರಣೆಗೆ ಆಹಾರ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕರೆ ಮಾತ್ರ ವಿತರಣೆ ಮಾಡುವ ಸಾಧ್ಯತೆ ಇದೆ.