Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `PUBG’ ಆಡುವವರೇ ಎಚ್ಚರ : `BP’ ಹೆಚ್ಚಳವಾಗಿ ಯುವಕ ಕುಳಿತಲ್ಲೇ ಸಾವು.! 

09/02/2026 11:19 AM

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

09/02/2026 11:15 AM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

09/02/2026 11:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ರಾಜ್ಯದ ‘ವಿಕಲಚೇತನ’ರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: 1 ಲಕ್ಷದವರೆಗೆ ‘ವೈದ್ಯಕೀಯ ಪರಿಹಾರ’
KARNATAKA

Good News: ರಾಜ್ಯದ ‘ವಿಕಲಚೇತನ’ರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್: 1 ಲಕ್ಷದವರೆಗೆ ‘ವೈದ್ಯಕೀಯ ಪರಿಹಾರ’

By kannadanewsnow0514/03/2025 11:52 AM

ಬೆಂಗಳೂರು: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಶುಕ್ರವಾರ ವಿಧಾನಪರಿಷತ್ ಕಲಾಪದಲ್ಲಿ ವೈ.ಎಂ.ಸತೀಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ವಿಕಲಚೇತನರಿಗಾಗಿ ಪ್ರಮುಖ ಮೂರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದರು.ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಮುಖಾಂತರ ವಿಕಲಚೇತನತೆಯನ್ನು ನಿವಾರಣೆ ಮಾಡಿಕೊಳ್ಳಲು ಅಥವಾ ಕಡಿಮೆ ಮಾಡಿಕೊಳ್ಳಲು ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಅಥವಾ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು 1 ಲಕ್ಷ ರೂಪಾಯಿ ವರೆಗೆ ಸಹಾಯ ಧನ ಮಂಜೂರು ಮಾಡಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ರಾಜ್ಯದಲ್ಲಿ ನ್ಯಾಷನಲ್ ಟ್ರಸ್ಟ್ ಆಕ್ಟ್ ಅಡಿಯಲ್ಲಿ ನಿರಾಮಯ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತಂದಿದ್ದು, ಬಡತನ ರೇಖೆಗಿಂತ ಕೆಳಗಿರುವ ಕುಟಂಬದ ವಿಕಲಚೇತನ ವ್ಯಕ್ತಿ ಒಂದು ಬಾರಿ ವಾರ್ಷಿಕ 250 ರೂಪಾಯಿಗಳನ್ನು ಸರ್ಕಾರದಿಂದ ವಿಮಾ ಕಂತಾಗಿ ಪಾವತಿಸಿ ಪ್ರತಿವರ್ಷ ಒಂದು ಲಕ್ಷಗಳವರೆಗೆ ಉಚಿತವಾಗಿ ವೈದ್ಯಕಕೀಯ ಸೌಲಭ್ಯ ಪಡೆಯಬಹುದು ಎಂದರು.

ಇನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆ ಅಡಿಯಲ್ಲಿ ಕಡ್ಡಾಯ ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಸಿ, ಗುರುತ ಹಚ್ಚಿದ ತೀವ್ರತರವಾದ/ಗಂಭೀರ ಸ್ವರೂಪದ ಶ್ರವಣದೋಷವುಳ್ಳ 6 ವರ್ಷದ ಕೆಳಗಿನ ಮಕ್ಕಳಿಗೆ ಶ್ರವಣ ಸಾಧನಗಳನ್ನು ನೀಡಲಾಗುವುದು. ಜೊತೆಗೆ ಟ್ರಯಲ್ ಆಡಿಟರಿವರ್ಬಲ್ ಥೆರಪಿಯನ್ನು ಒದಗಿಸಲಾಗುವುದು, ವಿವಿಧ ಥೆರಪಿ ಚಿಕತ್ಸೆಗಳನ್ನು ಉಚಿತವಾಗಿ ಒದಗಿಸಲಾಗುತ್ತಿದ್ದು, 2016-17 ರಿಂದ ಇಲ್ಲಿಯವರೆಗೆ 665 ಫಲಾನುಭವಿಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜೊತೆಗೆ ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ 4 ಬಗೆಯ ವಿಕಲಚೇತನರಿಗೆ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ಗರಿಷ್ಠ 1 ಲಕ್ಷದವರೆಗೆ ಶಸ್ತ್ರಚಿಕಿತ್ಸೆ ಹಾಗೂ ವೈದ್ಯಕೀಯ ವೆಚ್ಚಗಳನ್ನು ಕೇಂದ್ರ ಸರ್ಕಾರ ಗುರುತಿಸಿರುವ ಸಂಸ್ಥೆಯ ಮುಖಾಂತರ ಪಡೆಯುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸಚಿವರ‌‌ ನಿರ್ವಹಣೆಗೆ‌ ವೈ.ಎಂ.ಸತೀಶ್ ಶ್ಲಾಘನೆ ವಿಕಲಚೇತನರಿಗೆ ಕೈಗೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಸರ್ಕಾರ ಹಾಗೂ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಕಾರ್ಯಕ್ಷಮತೆಗೆ ವಿಧಾನ ಪರಿಷತ್ ಸದಸ್ಯರಾದ ಸತೀಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಶ್ನೆ ಮಧ್ಯೆಯೇ ಸಚಿವರನ್ನು‌ ಶ್ಲಾಘಿಸಿದರು. ಪ್ರತಿಯಾಗಿ ಸಚಿವರು ಸತೀಶ್ ಅವರಿಗೆ ಧನ್ಯವಾದ ಅರ್ಪಿಸಿದರು.

Share. Facebook Twitter LinkedIn WhatsApp Email

Related Posts

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

09/02/2026 11:15 AM1 Min Read

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

09/02/2026 11:14 AM1 Min Read

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM3 Mins Read
Recent News

SHOCKING : `PUBG’ ಆಡುವವರೇ ಎಚ್ಚರ : `BP’ ಹೆಚ್ಚಳವಾಗಿ ಯುವಕ ಕುಳಿತಲ್ಲೇ ಸಾವು.! 

09/02/2026 11:19 AM

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

09/02/2026 11:15 AM

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

09/02/2026 11:14 AM

ಚೀನಾದ ನೆಲದಲ್ಲಿ ತೇಜಸ್ವಿನ್ ಅಬ್ಬರ: ಹೆಪ್ಟಾಥ್ಲಾನ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಭಾರತದ ಧೀರ!

09/02/2026 11:01 AM
State News
KARNATAKA

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

By kannadanewsnow5709/02/2026 11:15 AM KARNATAKA 1 Min Read

ತುಮಕೂರು : ಪತಿ 2ನೇ ಮದುವೆ ಆಗುತ್ತಿದ್ದ ವೇಳೆಯೇ ಏಕಾಏಕಿ ಕಲ್ಯಾಣ ಮಂಡಪಕ್ಕೆ ಮೊದಲ ಪತ್ನಿ ಎಂಟ್ರಿ ಕೊಟ್ಟು ಎಲ್ಲರಿಗೂ…

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರ : ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು?

09/02/2026 11:14 AM

ರಾಘವೇಂದ್ರ ಸ್ವಾಮಿಗಳ ಈ ಮಂತ್ರ ಪಠಿಸಿ: ನಿಮ್ಮ ಸಂಪತ್ತು, ಸಮೃದ್ಧಿ, ಆರೋಗ್ಯ ವೃದ್ಧಿ

09/02/2026 10:48 AM

ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ : ಪೊಲೀಸರ ತನಿಖೆಯಲ್ಲಿ ಬಯಲಾಯ್ತು ದುಷ್ಕೃತ್ಯ!

09/02/2026 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.