Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs
KARNATAKA

GOOD NEWS: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

By kannadanewsnow57

ಬೆಂಗಳೂರು: ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ತಾತ್ಕಾಲಿಕವಾಗಿ ಶೇ. 17 ರಿಂದ ಶೇ. 15ಕ್ಕೆ ಸೀಮಿತಗೊಳಿಸಿ, ಒಳಮೀಸಲಾತಿಯನ್ನು ಜಾರಿಗೊಳಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಮಾನ್ಯ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ನೇರ ನೇಮಕಾತಿಗಾಗಿ ಹೊಸದಾಗಿ 400 ಬಿಂದುಗಳ ರೋಸ್ಟರ್ ಅನ್ನು ಅಳವಡಿಸಲಾಗಿದೆ.

ಒಳಮೀಸಲಾತಿ ಹಂಚಿಕೆ ಪ್ರಮಾಣ

ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಒಟ್ಟು ಶೇ. 15 ಮೀಸಲಾತಿಯಲ್ಲಿ ಮೂರು ಪ್ರವರ್ಗಗಳಿಗೆ ಈ ಕೆಳಕಂಡಂತೆ ಒಳಮೀಸಲಾತಿಯನ್ನು ಹಂಚಿಕೆ ಮಾಡಲಾಗಿದೆ:

  • ಪ್ರವರ್ಗ-ಎ: ಶೇ. 5.25

  • ಪ್ರವರ್ಗ-ಬಿ: ಶೇ. 5.25

  • ಪ್ರವರ್ಗ-ಸಿ: ಶೇ. 4.5

59 ಅತ್ಯಂತ ಹಿಂದುಳಿದ ಜಾತಿಗಳಿಗೆ ವಿಶೇಷ ಅವಕಾಶ

ಪರಿಶಿಷ್ಟ ಜಾತಿಯ ಪ್ರವರ್ಗ-ಸಿ ಅಡಿಯಲ್ಲಿ ಲಭ್ಯವಾಗುವ ಹುದ್ದೆಗಳಲ್ಲಿ ಶೇ. 20 ರಷ್ಟು ಸ್ಥಾನಗಳನ್ನು ಆ ವರ್ಗದಲ್ಲಿನ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಮೀಸಲಿರಿಸಲಾಗಿದೆ. ಒಂದು ವೇಳೆ ಈ ಜಾತಿಗಳ ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ, ಆ ಹುದ್ದೆಗಳನ್ನು ಪ್ರವರ್ಗ-ಸಿ ನಲ್ಲಿನ ಇತರೆ ಜಾತಿಗಳಿಗೆ ನೀಡಲು ಅವಕಾಶ ಕಲ್ಪಿಸಲಾಗಿದೆ.

ನೇಮಕಾತಿ ಪ್ರಾಧಿಕಾರಗಳಿಗೆ ಪ್ರಮುಖ ಸೂಚನೆಗಳು

ನೇಮಕಾತಿ ಸಂದರ್ಭದಲ್ಲಿ ರೋಸ್ಟರ್ ಪಾಲನೆಯ ಬಗ್ಗೆ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ:

  • 3ಕ್ಕಿಂತ ಕಡಿಮೆ ಹುದ್ದೆಗಳಿದ್ದಾಗ: ಯಾವುದೇ ನೇಮಕಾತಿ ಅಧಿಸೂಚನೆಯಲ್ಲಿ ಪರಿಶಿಷ್ಟ ಜಾತಿಗೆ 3ಕ್ಕಿಂತ ಕಡಿಮೆ ಹುದ್ದೆಗಳಿದ್ದರೆ, ಒಳಮೀಸಲಾತಿ ಅನ್ವಯಿಸದೆ ಎಲ್ಲಾ 101 ಪರಿಶಿಷ್ಟ ಜಾತಿಗಳಿಗೆ ಸ್ಪರ್ಧಿಸಲು ಅವಕಾಶ ನೀಡಬೇಕು.

  • 3ಕ್ಕಿಂತ ಹೆಚ್ಚು ಹುದ್ದೆಗಳಿದ್ದಾಗ: ಪರಿಶಿಷ್ಟ ಜಾತಿಗೆ 3ಕ್ಕಿಂತ ಹೆಚ್ಚು ಹುದ್ದೆಗಳಿದ್ದಲ್ಲಿ ಕಡ್ಡಾಯವಾಗಿ ಒಳಮೀಸಲಾತಿ ಅನುಸರಿಸಿ ಪ್ರತ್ಯೇಕ ರೋಸ್ಟರ್ ನಿರ್ವಹಿಸಬೇಕು.

  • ಅಧಿಸೂಚನೆಗಳ ಹಿಂಪಡೆಯುವಿಕೆ: ಈಗಾಗಲೇ ಒಳಮೀಸಲಾತಿ ಅಳವಡಿಸದೆ ಹೊರಡಿಸಲಾಗಿರುವ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಹಿಂಪಡೆದು, ಹೊಸ ಒಳಮೀಸಲಾತಿ ನಿಯಮದಂತೆ ಪರಿಷ್ಕೃತ ಅಧಿಸೂಚನೆ ಹೊರಡಿಸಲು ಸೂಚಿಸಲಾಗಿದೆ.

56,432 ಹುದ್ದೆಗಳ ನೇಮಕಾತಿಗೆ ಚಾಲನೆ

ಆರ್ಥಿಕ ಇಲಾಖೆಯು ಈಗಾಗಲೇ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ತುರ್ತಾಗಿ ಕೈಗೊಳ್ಳಲು ಸಚಿವ ಸಂಪುಟವು ನಿರ್ಧರಿಸಿದೆ. ನ್ಯಾಯಾಲಯವು ಮುಂದೆ ಮೀಸಲಾತಿ ಪ್ರಮಾಣವನ್ನು ಶೇ. 24ಕ್ಕೆ ಹೆಚ್ಚಿಸಲು ಒಪ್ಪಿಗೆ ನೀಡಿದಲ್ಲಿ, ಹೆಚ್ಚುವರಿ ಶೇ. 6 ರಷ್ಟು ಹುದ್ದೆಗಳನ್ನು ಬ್ಯಾಕ್‌ಲಾಗ್‌ ಹುದ್ದೆಗಳೆಂದು ಪರಿಗಣಿಸಿ ಭರ್ತಿ ಮಾಡಲಾಗುವುದು.

ಸಮತಳ ಮೀಸಲಾತಿ ಮತ್ತು ರೋಸ್ಟರ್ ಬಿಂದುಗಳು

ಹೊಸದಾಗಿ ಬಿಡುಗಡೆ ಮಾಡಲಾದ 400 ಬಿಂದುಗಳ ರೋಸ್ಟರ್‌ನಲ್ಲಿ ಮೊದಲ ಬಿಂದುವಿನಿಂದ ನೇಮಕಾತಿ ಆರಂಭವಾಗಲಿದೆ. ಸಮತಳ ಮೀಸಲಾತಿಯನ್ನು (Horizontal Reservation) ದಿನಾಂಕ 08.03.2023ರ ಸರ್ಕಾರಿ ಆದೇಶದಂತೆ ಪ್ರತಿ ಪ್ರವರ್ಗಕ್ಕೂ ಪ್ರತ್ಯೇಕವಾಗಿ ಅನ್ವಯಿಸತಕ್ಕದ್ದು ಎಂಬುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

GOOD NEWS: State government gives green signal to fill 56432 posts under new internal reservation | Govt Jobs
Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

2 Mins Read

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Let’s Talk Sex: ಕಡಿಮೆ ನಿದ್ದೆಯಿಂದ ಲೈಂಗಿಕ ಹಾರ್ಮೋನ್ ಗಳ ಮಟ್ಟ ಕುಸಿತ್ತದೆಯೇ? ಇಲ್ಲಿದೆ ತಜ್ಞರ ಮಾಹಿತಿ

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ಲೈಂಗಿಕ ಆಸಕ್ತಿ ಹಠಾತ್ ಕಡಿಮೆಯಾಗುತ್ತಿದೆಯೇ? ಇದು ಮೆದುಳಿನ ಗಡ್ಡೆಯ ಮುನ್ಸೂಚನೆಯೂ ಇರಬಹುದು!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

‘ಐಐಟಿ ರೂರ್ಕಿ’ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದ ‘ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್’, ಏನಿದರ ಉದ್ದೇಶ? 

ದಾವಣಗೆರೆ ಉಪಚುನಾವಣೆ ವಿವಾದ: ಜಮೀರ್ ಅಹಮದ್ ಖಾನ್ ಮಾನಹಾನಿ ಸುದ್ದಿ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಉಡುಪಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧದ FIR ರದ್ದುಗೊಳಿಸಿದ ಹೈಕೋರ್ಟ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.