ಬೆಂಗಳೂರು : ರಾಜ್ಯದ ಕಬ್ಬು ( Sugar Cane) ಬೆಳೆಗಾರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಪ್ರತಿ ಮೆಟ್ರಿಕ್ ಟನ್ ಗೆ 50 ರೂ.ಹೆಚ್ಚುವರಿ ಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ.

ಕಬ್ಬಿನ ಉಪ ಉತ್ಪನ್ನಗಳ ಲಾಭಾಂಶ ಸೇರಿ ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ಬಾಗಲಕೋಟೆ ಸೇರಿ ಹಲವು ಕಡೆ ಕಬ್ಬು ಬೆಳೆಗಾರರು ಭಾರೀ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ನಿರ್ಧಾರ ಕೈಗೊಂಡಿದೆ. ಡಿ.5 ರಂದು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ಪ್ರತಿ ಮೆಟ್ರಿಕ್ ಟನ್ ಗೆ 50 ರೂ ಹೆಚ್ಚುವರಿಯಾಗಿ ಪಾವತಿಸಬೇಕು ಎಂದು ಸಕ್ಕರೆ ಸಚಿವ ಶಂಕರ್ ಪಾಟೀಲ್   ಘೋಷಣೆ ಮಾಡಿದ್ದರು.

ಇತ್ತೀಚೆಗೆ ವಿಕಾಸಸೌಧದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ಕಬ್ಬು ನಿಯಂತ್ರಣ ಮಂಡಳಿ ಸಭೆ ನಡೆದಿದ್ದು, ಎಫ್ಆರ್ ಪಿ ದರ ಪಾವತಿ ಬಳಿಕ ಪ್ರತಿ ಟನ್ ಗೆ ಹೆಚ್ಚುವರಿಯಾಗಿ 50 ರೂ ನಂತೆ ಒಟ್ಟು 204.47 ಕೋಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಆದೇಶ ಹೊರಡಿಸುವಂತೆ ಕಬ್ಬು ಅಭಿವೃದ್ದಿ ಆಯುಕ್ತರಿಗೆ ಸಚಿವರು ಸೂಚನೆ ನೀಡಿದ್ದರು.

BIGG NEWS : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ‘ಕಣ್ಣಿನ ಆಸ್ಪತ್ರೆ’ : ಸಿಎಂ ಬೊಮ್ಮಾಯಿ ಘೋಷಣೆ

Share.
Exit mobile version