Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನ ಸಾಮಾನ್ಯರಿಗೆ ಅತ್ಯದ್ಭುತ ಯೋಜನೆ ; ದಿನಕ್ಕೆ ಕೇವಲ 2 ರೂಪಾಯಿ ಠೇವಣಿ ಮಾಡಿದ್ರೆ, 10 ವಿಮೆ ಲಭ್ಯ!

28/07/2025 5:35 PM

ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿಎಂ ಸಿದ್ಧರಾಮಯ್ಯ ಘೋಷಣೆ

28/07/2025 5:23 PM

ಯಾವುದೇ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ: ನಟಿ ರಮ್ಯಾ ಪರ ನಿಂತ ನಟ ವಿನಯ್ ರಾಜ್ ಕುಮಾರ್

28/07/2025 5:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿಎಂ ಸಿದ್ಧರಾಮಯ್ಯ ಘೋಷಣೆ
KARNATAKA

ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0928/07/2025 5:23 PM

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146.76 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಹಾಗೂ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ನಾಲ್ಕು ವರ್ಷ ಬಿಜೆಪಿ ಸರ್ಕಾರ ಮದ್ದೂರಿನಲ್ಲಿ ಏನು ಮಾಡಿದೆ ಎನ್ನುವುದನ್ನು ಜನತೆಗೆ ತೋರಿಸಿ ಎಂದು ಸವಾಲೆಸೆದರು.

ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಮಂಡ್ಯ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ ಚುಕ್ತಾ ಮಾಡಿದ್ದು ನಾವು, ಕಾರ್ಖಾನೆಯ ಪುನಶ್ಚೇತನಕ್ಕೆ 52 ಕೋಟಿ ರೂಪಾಯಿ ಕೊಟ್ಟಿದ್ದು ನಾವು.‌ ಹಾಲು ಉತ್ಪಾದಕರ ಸಂಘದ ಮನವಿಗೆ ಸ್ಪಂದಿಸಿ ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಸಹಾಯಧನ‌ ಒದಗಿಸಿದ್ದು ನಾವು. ಈಗ ಮತ್ತೆ ಮಂಡ್ಯ ಸಕ್ಕರೆ ಕಾರ್ಖಾನೆಗೆ 10 ಕೋಟಿ ರೂ ಕೊಟ್ಟಿರುವುದು ನಮ್ಮ ಸರ್ಕಾರ. ಮಂಡ್ಯ ಕೃಷಿ ವಿವಿ ಆರಂಭಿಸಿ, ಅಗತ್ಯ ಅನುದಾನ‌ ಕೊಟ್ಟಿರುವುದು ನಾವು. ಇದು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸರ್ಕಾರದ ಬದ್ಧತೆ ಎಂದು ವಿವರಿಸಿದರು.

ನಾವು ಜಾರಿ ಮಾಡಿದ ಐದು ಗ್ಯಾರಂಟಿಗಳಿಂದಾಗಿ ರಾಜ್ಯದ ಜನರ ಕೊಳ್ಳುವ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಶಕ್ತಿ ಬಂದಿದೆ. ಪರಿಣಾಮ ಇಡೀ ದೇಶದಲ್ಲಿ ರಾಜ್ಯದ ತಲಾ ಆದಾಯ ನಂಬರ್ ಒನ್ ಆಗಿದೆ ಎಂದು ಮೆಚ್ವುಗೆ ಸೂಚಿಸಿದರು.

ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆ ಮಾಡಲು ಶಾಸಕ ಉದಯ್ ಅವರ ಬೇಡಿಕೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ಘೋಷಿಸಿದ ಸಿಎಂ, ಶಾಸಕ‌ ಉದಯ್ ಅವರದ್ದು ಕಡಿಮೆ ಮಾತು, ಹೆಚ್ಚು ಕೆಲಸ ಮಾಡುತ್ತಾರೆ ಎಂದು ಪ್ರಶಂಶಿಸಿದರು.

ರಾಜ್ಯದ ಪಾಲಿನ ಗೊಬ್ಬರವನ್ನೂ ಕೇಂದ್ರ ಕೊಡುತ್ತಿಲ್ಲ

ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಅಗತ್ಯ ಗೊಬ್ಬರ ಸರಬರಾಜು ಮಾಡುವಂತೆ ಒತ್ತಾಯಿಸಿ ಒಂದು ವಾರ ಕಳೆದರೂ ಇದುವರೆಗೂ ಕೊಟ್ಟಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸವಾಲು ಹಾಕಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್, ಚೆಸ್ಕಾಂ ಅಧ್ಯಕ್ಷ ರಮೇಶ್ ಬಂಡಿ ಸಿದ್ದೇಗೌಡ, ಶಾಸಕರುಗಳಾದ ರವಿ ಗಣಿಗ, ದಿನೇಶ್ ಗೂಳೀಗೌಡ ಸೇರಿ ಹಲವು ಪ್ರಮುಖರು ಮುಖ್ಯ ಅತಿಥಿಗಳಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ‌ ಉದಯ್ ಅವರು ಅಧ್ಯಕ್ಷತೆ ವಹಿಸಿದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

BREAKING: ಪಹಲ್ಗಾಮ್ ದಾಳಿಯ ಮೂವರು ಶಂಕಿತ ಉಗ್ರರು ಫಿನೀಶ್ | Operation Mahadev

ಯಾವುದೇ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ: ನಟಿ ರಮ್ಯಾ ಪರ ನಿಂತ ನಟ ವಿನಯ್ ರಾಜ್ ಕುಮಾರ್

Share. Facebook Twitter LinkedIn WhatsApp Email

Related Posts

ಯಾವುದೇ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ: ನಟಿ ರಮ್ಯಾ ಪರ ನಿಂತ ನಟ ವಿನಯ್ ರಾಜ್ ಕುಮಾರ್

28/07/2025 5:20 PM1 Min Read

BREAKING : ರೌಡಿಶೀಟರ್ ಬೇಕರಿ ರಘು & ಗ್ಯಾಂಗ್ನಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ!

28/07/2025 4:11 PM1 Min Read

ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

28/07/2025 3:55 PM2 Mins Read
Recent News

ಜನ ಸಾಮಾನ್ಯರಿಗೆ ಅತ್ಯದ್ಭುತ ಯೋಜನೆ ; ದಿನಕ್ಕೆ ಕೇವಲ 2 ರೂಪಾಯಿ ಠೇವಣಿ ಮಾಡಿದ್ರೆ, 10 ವಿಮೆ ಲಭ್ಯ!

28/07/2025 5:35 PM

ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿಎಂ ಸಿದ್ಧರಾಮಯ್ಯ ಘೋಷಣೆ

28/07/2025 5:23 PM

ಯಾವುದೇ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ: ನಟಿ ರಮ್ಯಾ ಪರ ನಿಂತ ನಟ ವಿನಯ್ ರಾಜ್ ಕುಮಾರ್

28/07/2025 5:20 PM

BREAKING : ಭಾರತದ ಕೈಗಾರಿಕಾ ಉತ್ಪಾದನೆ ಬೆಳವಣಿಗೆ ; ಜೂನ್’ನಲ್ಲಿ ಶೇ.1.5ಕ್ಕೆ ಏರಿಕೆ

28/07/2025 5:12 PM
State News
KARNATAKA

ಮದ್ದೂರು ಪಟ್ಟಣದಲ್ಲಿ 100 ಅಡಿ ರಸ್ತೆಗೆ ಸರ್ಕಾರ ಒಪ್ಪಿಗೆ: ಸಿಎಂ ಸಿದ್ಧರಾಮಯ್ಯ ಘೋಷಣೆ

By kannadanewsnow0928/07/2025 5:23 PM KARNATAKA 2 Mins Read

ಮಂಡ್ಯ : ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ.…

ಯಾವುದೇ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ: ನಟಿ ರಮ್ಯಾ ಪರ ನಿಂತ ನಟ ವಿನಯ್ ರಾಜ್ ಕುಮಾರ್

28/07/2025 5:20 PM

BREAKING : ರೌಡಿಶೀಟರ್ ಬೇಕರಿ ರಘು & ಗ್ಯಾಂಗ್ನಿಂದ ನಟ ಪ್ರಥಮ್ ಗೆ ಕೊಲೆ ಬೆದರಿಕೆ!

28/07/2025 4:11 PM

ಹುಬ್ಬಳ್ಳಿ- ಎಸ್‌.ಎಂ.ವಿ.ಟಿ. ಬೆಂಗಳೂರು ಹಾಗೂ ಎಸ್‌.ಎಂ.ವಿ.ಟಿ. ಬೆಂಗಳೂರು- ವಿಜಯಪುರ ನಡುವೆ ವಿಶೇಷ ರೈಲು ಸಂಚಾರ

28/07/2025 3:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.