ಶಿವಮೊಗ್ಗ: ಜಿಲ್ಲೆಯ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಸಮಿತಿಯ ಪದಾಧಿಕಾರಿಗಳನ್ನು ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಸನ್ಮಾನಿಸಿ, ಗೌರವಿಸಲಾಯಿತು.
ನ್ಯಾಸ ಪ್ರತಿಷ್ಠಾನದ ನೂತನ ಸಮಿತಿಗೆ ಸನ್ಮಾನಿಸಿ ಗೌರವ:
ಇಂದು ಸಾಗರದ ಮಾರಿ ಗುಡಿ ಕಚೇರಿಯಲ್ಲಿ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನದ ನೂತನ ಅಧ್ಯಕ್ಷರಾದ ಪವಿತ್ರ ನಾಗರಾಜ್, ಉಪಾಧ್ಯಕ್ಷರಾದ ಶ್ರೀನಿವಾಸ್ ಮೇಸ್ತ್ರಿ, ಪ್ರಧಾನ ಕಾರ್ಯದರ್ಶಿ ಎಂ.ಡಿ ಆನಂದ್, ಸಹ ಕಾರ್ಯದರ್ಶಿಗಳಾದಂತ ಡಿಶ್ ಗುರು, ಪುರುಷೋತ್ತಮ್ (ಪುಚ್ಚಿ) ಹಾಗೂ ಖಜಾಂಚಿ ವಿ.ಶಂಕರ್(ಮಾಸ್ಟರ್ ಶಂಕರ್) ಅವರನ್ನು ಸಾಗರ ಸರ್ಕಾರಿ ನೌಕರರ ಸಂಘದಿಂದ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಲಾಯಿತು.
ನೌಕರರ ಸಹಕಾರ ಸದಾ ಇರಲಿದೆ: ಸಂತೋಷ್ ಕುಮಾರ್
ಸನ್ಮಾನಿಸಿ ಮಾತನಾಡಿದ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಎನ್. ಅವರು, “ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಯಶಸ್ಸಿನಲ್ಲಿ ಅಧಿಕಾರಿಗಳು ಮತ್ತು ನೌಕರರು ಸದಾ ಕೈಜೋಡಿಸುತ್ತಾ ಬಂದಿದ್ದಾರೆ. ಸಮಿತಿಯ ಇತ್ತೀಚಿನ ಚುನಾವಣೆಯನ್ನು ನೌಕರರು ಅತ್ಯಂತ ಪಾರದರ್ಶಕವಾಗಿ ನಡೆಸಿಕೊಟ್ಟಿರುವುದು ಹೆಮ್ಮೆಯ ವಿಷಯ. ಮುಂದಿನ ದಿನಗಳಲ್ಲಿ ಸಮಿತಿಯು ಕೈಗೊಳ್ಳುವ ಎಲ್ಲಾ ಸಮಾಜಮುಖಿ ಕಾರ್ಯಗಳಿಗೆ ನೌಕರರ ಸಂಘವು ಸಂಪೂರ್ಣ ಸಹಕಾರ ನೀಡಲಿದೆ” ಎಂದು ಭರವಸೆ ನೀಡಿದರು.
ನೌಕರರ ಸೇವೆಯನ್ನು ಸ್ಮರಿಸಿದ ಅಧ್ಯಕ್ಷ ಪವಿತ್ರ ನಾಗರಾಜ್
ಸನ್ಮಾನ ಸ್ವೀಕರಿಸಿ ಮಾತನಾಡಿದಂತ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ ಅಧ್ಯಕ್ಷ ಪವಿತ್ರ ನಾಗರಾಜ್ ಅವರು, “ಮಾರಿಕಾಂಬಾ ಸಮಿತಿಗೆ ಸರ್ಕಾರಿ ನೌಕರರ ಸಹಕಾರ ಅತ್ಯಗತ್ಯ. ಕಳೆದ ಮಾರಿ ಜಾತ್ರೆಯ ಸಂದರ್ಭದಲ್ಲಿ ನೌಕರರು ನೀಡಿದ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ನೌಕರರ ಸಂಘ ಮತ್ತು ಸಮಿತಿಯ ನಡುವಿನ ಈ ಬಾಂಧವ್ಯ ಮುಂದೆಯೂ ಹೀಗೆ ಮುಂದುವರಿಯಲಿ,” ಎಂದು ಆಶಿಸಿದರು.

ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತಿ:
ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಕಾರ್ಯದರ್ಶಿ ಅಣ್ಣಪ್ಪ, ಖಜಾಂಚಿ ಸಹದೇವ್, ರಾಜ್ಯ ಪರಿಷತ್ ಸದಸ್ಯ ದೇವೇಂದ್ರಪ್ಪ, ಪದಾಧಿಕಾರಿಗಳಾದ ಮಂಜುನಾಥ್, ಗಿರೀಶ್, ಪರಶುರಾಮ್, ಸಮನ್ವಿತಾ, ಅನುಸೂಯ ತಳವಾರ್, ವಿದ್ಯಾ.ಎಂ.ಪಿ, ನಾಗರಾಜ್, ಮಂಜುನಾಥ್ (ಸಹಕಾರ ಇಲಾಖೆ) ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಒಟ್ಟಾರೆಯಾಗಿ ಭಕ್ತಿ ಮತ್ತು ಕರ್ತವ್ಯದ ಹಾದಿಯಲ್ಲಿ ಸಾಗರ ತಾಲ್ಲೂಕಿನ ಸರ್ಕಾರಿ ನೌಕರರು ಮತ್ತು ಮಾರಿಕಾಂಬಾ ನ್ಯಾಸ ಸಮಿತಿಯ ನಡುವಿನ ಒಗ್ಗಟ್ಟನ್ನು ಈ ಕಾರ್ಯಕ್ರಮ ಪ್ರತಿಬಿಂಬಿಸಿತು.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…
ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್
ರಾಜ್ಯದಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ: ಶೀಘ್ರ ಪರಿಹಾರ ನೀಡಲು ಸಚಿವ ಈಶ್ವರ್ ಖಂಡ್ರೆ ಸೂಚನೆ








