Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM

2030ರ ವೇಳೆಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ, ಶಿಕ್ಷಣ ಕ್ಷೇತ್ರಗಳಲ್ಲಿ 1.8 ಕೋಟಿ ಉದ್ಯೋಗಗಳ ಮೇಲೆ AI ಪರಿಣಾಮ

31/07/2025 1:03 PM

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹಾಸನದಲ್ಲಿ ಹಠಾತ್ ಸಾವಿನ ತನಿಖಾ ವರದಿ ಬಿಡುಗಡೆ ಮಾಡಿದ ಸರ್ಕಾರ: ಏನು ಕಾರಣ ಗೊತ್ತಾ?
KARNATAKA

BIG NEWS: ಹಾಸನದಲ್ಲಿ ಹಠಾತ್ ಸಾವಿನ ತನಿಖಾ ವರದಿ ಬಿಡುಗಡೆ ಮಾಡಿದ ಸರ್ಕಾರ: ಏನು ಕಾರಣ ಗೊತ್ತಾ?

By kannadanewsnow0910/07/2025 7:07 PM

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಯುವ ವಯಸ್ಕರಲ್ಲಿ ಹೆಚ್ಚುತ್ತಿರುವ ಹಠಾತ್ ಸಾವುಗಳನ್ನು ಕುರಿತು ಸಾರ್ವಜನಿಕ ಮತ್ತು ಮಾಧ್ಯಮ ವಲಯದಲ್ಲಿ ವ್ಯಾಪಕ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಔಪಚಾರಿಕ ತನಿಖೆಗೆ ಆದೇಶಿಸಿತ್ತು ಇದೀಗ ಅದರ ಸಂಪೂರ್ಣ ವರದಿ ಬಂದಿದ್ದು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

ನಗರದ ಜಯದೇವ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರ ನೇತೃತ್ವದಲ್ಲಿ ರಚಿಸಲಾದ ಸಮಿತಿಯು, ಮೇ-ಜೂನ್ 2025ರ ಅವಧಿಯಲ್ಲಿ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ 24 ಸಾವುಗಳನ್ನು ವಿಶ್ಲೇಷಿಸುವ ಮತ್ತು ಜಿಲ್ಲೆಯಲ್ಲಿ ಹೃದಯ ಸಂಬಂಧಿ ಪ್ರಕರಣಗಳು ಹಾಗೂ ಸಾವುಗಳ ಕುರಿತು ಅಧ್ಯಯನ ಕುರಿತ ವರದಿಯನ್ನು ಇಂದು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಸಚಿವರು ತನಿಖೆಗೆ ಒಳಪಡಿಸಿದ 24 ಸಾವುಗಳಲ್ಲಿ, 14 ಮಂದಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, 10 ಮಂದಿ 45 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ, ಒಟ್ಟು 24 ಸಾವುಗಳಲ್ಲಿ, 4 ಸಾವುಗಳು ಹೃದಯ ಸಂಬಂಧಿ ಸಮಸ್ಯೆಯಿಂದ ಸಂಭವಿಸಿಲ್ಲ. ಅವುಗಳಲ್ಲಿ ದೀರ್ಘಕಾಲದ ಮೂತ್ರಪಿಂಡ ಕಾಯಿಲೆ, ರಸ್ತೆ ಅಪಘಾತ, ತೀವ್ರ ಜಠರಗರುಳಿನ ಸೋಂಕು (ಸೋಂಕು) ಮತ್ತು ವಿದ್ಯುತ್ ಆಘಾತದಿಂದ ಒಂದು ಸಾವು ಸಂಭವಿಸಿದೆ ಎಂದರು.

ಉಳಿದ 20 ಸಾವುಗಳಲ್ಲಿ, 10 ಸಾವುಗಳು ದೃಢಪಟ್ಟ ಹೃದಯ ಸಂಬಂಧಿ ಸಾವುಗಳಾಗಿವೆ. 3 ಮಂದಿಗೆ ಈಗಾಗಲೇ ಹೃದಯ ಕಾಯಿಲೆ ಇತ್ತು, ಒಬ್ಬರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಒಬ್ಬರು ಆಂಜಿಯೋಪ್ಲ್ಯಾಸ್ಟಿ ನಂತರ ಒಬ್ಬರು ಡೈಲೇಟೆಡ್ ಕಾರ್ಡಿಯೊಮಯೋಪತಿ (ಹೃದಯ ವೈಫಲ್ಯ) ಹೊಂದಿದ್ದರು. 7 ಹೃದಯ ಸಂಬಂಧಿ ಸಾವುಗಳಲ್ಲಿ 4 ಮರಣೋತ್ತರ ಪರೀಕ್ಷೆಗಳಿಂದ ದೃಢಪಟ್ಟಿವೆ ಮತ್ತು 3 ಇಸಿಜಿ ಆಧಾರಿತವಾಗಿವೆ. ಇನ್ನುಳಿದ 10 ಸಾವುಗಳು ‘ಸಂಭವನೀಯ ಹೃದಯ ಸಂಬಂಧಿ ಸಾವುಗಳು’ ಎಂದು ಪರಿಗಣಿಸಲಾಗಿದೇ ಎಂದು ತಿಳಿಸಿದರು.

ಮೃತರಾದವರಲ್ಲಿ 75% ಕ್ಕಿಂತ ಹೆಚ್ಚು ಮಂದಿ ಒಂದಕ್ಕಿಂತ ಹೆಚ್ಚು ಹೃದಯ ಸಂಬಂಧಿ ಅಪಾಯಕಾರಿ ಅಂಶಗಳನ್ನು ಹೊಂದಿದ್ದರು. ಇವುಗಳಲ್ಲಿ ಮಧುಮೇಹ , ಸ್ಥೂಲಕಾಯತೆ, ಮದ್ಯಪಾನ,ಧೂಮಪಾನ, ಅಧಿಕ ರಕ್ತದೊತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ಸಚಿವರು ತಿಳಿಸಿದರು.

19, 21, 23, 32, 37, 38, ಮತ್ತು 43 ವರ್ಷ ವಯಸ್ಸಿನ ಯುವ ವ್ಯಕ್ತಿಗಳಲ್ಲಿ ಹಠಾತ್ ಸಾವುಗಳು ಸಂಭವಿಸಿರುವುದು ಕಳವಳಕಾರಿಯಾಗಿದೆ ಮತ್ತು ಇದನ್ನು ನಿರ್ಲಕ್ಷಿಸಲಾಗುವುದಿಲ್ಲ ಅದರಲ್ಲಿ 6 ಜನ ಆಟೋ ಮತ್ತು ಕ್ಯಾಬ್ ಚಾಲಕರಿದ್ದು ಸರಿಯಾದ ಸಮಯದಲ್ಲಿ ಊಟ ಮಾಡದೆ ಇರುವುದು, ಸರಿಯಾಗಿ ನಿದ್ರೆ ಮಾಡದೇ ಇರುವದು, ಒತ್ತಡದಲ್ಲಿ ಕೆಲಸ ಮಾಡುವುದು ಹಠಾತ್ ಸಾವಿಗೆ ಕಾರಣವಾಗಿದೆ ಎಂಬ ಮಾಹಿತಿಯನ್ನು ಸಚಿವರು ನೀಡಿದರು.

ಅನೇಕ ಸಂದರ್ಭಗಳಲ್ಲಿ ಮೃತಪಟ್ಟವರನ್ನು ಸಾವಿಗೂ ಮುನ್ನ ಯಾವುದೇ ಆರೋಗ್ಯ ಸೌಲಭ್ಯಕ್ಕೆ ಕರೆತರಲಾಗಿಲ್ಲ. ಆಸ್ಪತ್ರೆಗಳಲ್ಲಿ ‘ಮೃತಪಟ್ಟವರು’ ಎಂದು ಘೋಷಿಸಿದವರಲ್ಲಿಯೂ ಸಹ, ಔಪಚಾರಿಕ ಮರಣೋತ್ತರ ಪರೀಕ್ಷೆಗಳನ್ನು ಹೆಚ್ಚಾಗಿ ನಡೆಸಲಾಗಿಲ್ಲ. ಮರಣೋತ್ತರ ದತ್ತಾಂಶದ ಕೊರತೆ, ಅಗತ್ಯ ಕ್ಲಿನಿಕಲ್ ತನಿಖೆಗಳ ಅಲಭ್ಯತೆ (ಇಸಿಜಿಗಳು, ಕಾರ್ಡಿಯಾಕ್ ಎಂಜೈಮ್‌ಗಳು), ಮತ್ತು ಕುಟುಂಬ ಸದಸ್ಯರಿಂದ ಸೀಮಿತ ಸಹಕಾರವು ಸಾವಿನ ನಿರ್ದಿಷ್ಟ ಕಾರಣವನ್ನು ತಿಳಿಯಲು ಕಷ್ಟಕರವಾಗಿದೆ ಎಂದರು.

ಶಾಲೆ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜಿಮ್‌ಗಳಲ್ಲಿನ ದೈಹಿಕ ತರಬೇತುದಾರರಂತಹ ನಿರ್ದಿಷ್ಟ ಗುಂಪುಗಳಿಗೆ ಸಿಪಿಆರ್ ತರಬೇತಿ ನೀಡಲಾಗುವುದು. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC) ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ (CHC) ಹೃದಯ ಜ್ಯೋತಿ ಯೋಜನೆಯನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು.

ಆಟೋ ಮತ್ತು ಕ್ಯಾಬ್ ಚಾಲಕರಿಗೆ ತಪಾಸಣೆ ಮಾಡಿಸಲು ನಿರ್ಧರಿಸಲಾಗುವುದು.ಇದು ಹಾಸನ ಜಿಲ್ಲೆಯ ಒಂದು ಪ್ರತ್ಯೇಕ ಸಮಸ್ಯೆ ಏನಲ್ಲ ಇಂದಿನ ಜೀವನ ಶೈಲಿ, ಸರಿಯಾದ ಸಮಯದಲ್ಲಿ ಊಟ ಮಾಡದೆ ಇರುವುದು, ಸರಿಯಾಗಿ ನಿದ್ರೆ ಮಾಡದೇ ಇರುವದು, ಒತ್ತಡದಲ್ಲಿ ಕೆಲಸ ಮಾಡುವುದು ಹಠಾತ್ ಸಾವಿಗೆ ಕಾರಣವಾಗಿದೆ ಎಂದರು.

15 ವರ್ಷದ ಮಕ್ಕಳಿಗೆ ತಪಾಸಣೆ ಮಾಡಲಾಗುವುದು ಇದರಿಂದ ವಂಶವಾಹಿಯಾಗಿ ಏನಾದರೂ ಸಮಸ್ಯೆ ಇದ್ದರೆ ಗುರುತಿಸಿ ಸೂಕ್ತ ಕ್ರಮ ಕೈಗೊಂಡು ಮಾರ್ಗದರ್ಶನ ನೀಡಿ, ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದರು.

ಜೀವನಶೈಲಿ ಬದಲಾವಣೆಗೆ ಒತ್ತು

ಆಧುನಿಕ ಜೀವನಶೈಲಿಯ ಪರಿಣಾಮಗಳನ್ನು ಎತ್ತಿ ತೋರಿಸಿದೆ. ಒತ್ತಡದ ಕೆಲಸ, ನಿದ್ರಾಹೀನತೆ, ಅನಿಯಮಿತ ಊಟ, ಮತ್ತು ತಪ್ಪು ಆಹಾರ ಪದ್ಧತಿಗಳು ಹೃದಯ ಸಂಬಂಧಿ ಸಮಸ್ಯೆಗಳಿಗೆ ಪ್ರಮುಖ ಕಾರಣಗಳಾಗಿವೆ. ಧೂಮಪಾನ, ಮದ್ಯಪಾನ, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಸ್ಥೂಲಕಾಯತೆಗಳು ಅಪಾಯವನ್ನು ಮತ್ತಷ್ಟು ಹೆಚ್ಚಿಸುತ್ತವೆ.

ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಳ್ಳುವುದು ಅನಿವಾರ್ಯ. ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ ಸೇವನೆ, ಸಾಕಷ್ಟು ನಿದ್ರೆ ಮತ್ತು ಒತ್ತಡ ನಿರ್ವಹಣೆಗೆ ಒತ್ತು ನೀಡಬೇಕು. ಇದು ಹಾಸನಕ್ಕೆ ಮಾತ್ರ ಸೀಮಿತವಲ್ಲ, ಬದಲಿಗೆ ಇಡೀ ಸಮಾಜಕ್ಕೆ ಅನ್ವಯವಾಗುವ ಸಂದೇಶ. ಆರೋಗ್ಯಕರ ಜೀವನಶೈಲಿಯ ಮೂಲಕ ಹಠಾತ್ ಸಾವುಗಳನ್ನು ತಡೆಗಟ್ಟಲು ನಾವೆಲ್ಲರೂ ಜಾಗೃತರಾಗಬೇಕು ಎಂದು ಸಚಿವರು ತಿಳಿಸಿದರು.

ಹಿಂದೂಸ್ತಾನ್ ಯೂನಿಲಿವರ್ ಹೊಸ ಸಿಇಒ, ಎಂಡಿಯಾಗಿ ಪ್ರಿಯಾ ನಾಯರ್ ನೇಮಕ | Priya Nair

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಲ್ಲಿ 50 ಸಾವಿರ ಹುದ್ದೆಗಳ ನೇಮಕಾತಿ | Railway Recruitment-2025

Share. Facebook Twitter LinkedIn WhatsApp Email

Related Posts

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM1 Min Read

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM1 Min Read

BREAKING : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ : ಆಟೋ ಮೀಟರ್ ಹೆಚ್ಚಳ, ನಾಳೆಯಿಂದ ಪರಿಷ್ಕೃತ ದರ ಜಾರಿ

31/07/2025 12:50 PM1 Min Read
Recent News

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

31/07/2025 1:08 PM

2030ರ ವೇಳೆಗೆ ಉತ್ಪಾದನೆ, ಚಿಲ್ಲರೆ ವ್ಯಾಪಾರ, ಶಿಕ್ಷಣ ಕ್ಷೇತ್ರಗಳಲ್ಲಿ 1.8 ಕೋಟಿ ಉದ್ಯೋಗಗಳ ಮೇಲೆ AI ಪರಿಣಾಮ

31/07/2025 1:03 PM

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಮಾಡವುದಿಲ್ಲ ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ..!

31/07/2025 1:02 PM
State News
KARNATAKA

BREAKING: ಧರ್ಮಸ್ಥಳದ 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ..!?

By kannadanewsnow0731/07/2025 1:08 PM KARNATAKA 1 Min Read

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸಾಮೂಹಿಕ ಅಂತ್ಯಕ್ರಿಯೆ ತನಿಖೆಯಲ್ಲಿ ಮಹತ್ವದ ಪ್ರಗತಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ…

ಮತಗಳ್ಳತನ: ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

31/07/2025 1:03 PM

BREAKING : ಬೆಂಗಳೂರಿಗರಿಗೆ ಮತ್ತೊಂದು ದರ ಏರಿಕೆ ಶಾಕ್ : ಆಟೋ ಮೀಟರ್ ಹೆಚ್ಚಳ, ನಾಳೆಯಿಂದ ಪರಿಷ್ಕೃತ ದರ ಜಾರಿ

31/07/2025 12:50 PM

BREAKING : ಹಲ್ಲೆಗೆ ಯತ್ನ, ಕೊಲೆ ಬೆದರಿಕೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ ನಟ ಪ್ರಥಮ್, ರಕ್ಷಕ್ ಬುಲೆಟ್ ಗೆ ನೋಟಿಸ್

31/07/2025 12:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.