Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂಧನ ದರ ಏರಿಕೆ ಹಿನ್ನೆಲೆ : ಅಂತರಾಷ್ಟ್ರೀಯ ಸಂಚಾರ ಕಡಿತಗೊಳಿಸಿದ ಏರ್ ಇಂಡಿಯಾ ಸಂಸ್ಥೆ!

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!

BREAKING: NEET ಪತ್ರಿಕೆ ಸೋರಿಕೆ ಪ್ರಕರಣ: ಪುಣೆಯಲ್ಲಿ ಮಹಿಳೆ ವಶಕ್ಕೆ – ತನಿಖೆಗಾಗಿ ಸಿಬಿಐಗೆ ಹಸ್ತಾಂತರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!
KARNATAKA

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!

By ಸುರೇಶ್‌

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ ಆಸ್ತಿ ದಾಖಲೆಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವ ಬೃಹತ್ ಯೋಜನೆಗೆ ಸರ್ಕಾರ ಚಾಲನೆ ನೀಡಿದೆ.

ಹಿಂದೆ ಇದ್ದ 5% ಗೈಡೆನ್ಸ್ ವ್ಯಾಲ್ಯೂ ಶುಲ್ಕವನ್ನು ಈಗ ಕೇವಲ 2% ಕ್ಕೆ ಇಳಿಸಲಾಗಿದೆ. (ಉದಾಹರಣೆಗೆ: 5 ಲಕ್ಷ ರೂ. ಕಟ್ಟಬೇಕಿದ್ದ ಜಾಗದಲ್ಲಿ ಈಗ 2 ಲಕ್ಷ ರೂ. ಪಾವತಿಸಿದರೆ ಸಾಕು).ಈ ರಿಯಾಯಿತಿಯು ಕೇವಲ 100 ದಿನಗಳವರೆಗೆ ಮಾತ್ರ ಲಭ್ಯವಿರುತ್ತದೆ. ಈ ಅವಧಿಯ ನಂತರ ಶುಲ್ಕವು ಪುನಃ 5% ಕ್ಕೆ ಏರಿಕೆಯಾಗಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 15 ರಿಂದ ಆರಂಭವಾಗಲಿದೆ.

ಇನ್ನೂ ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು, ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ನಮ್ಮ ಸರ್ಕಾರದ 6ನೇ ಗ್ಯಾರಂಟಿ – ಭೂ ಗ್ಯಾರಂಟಿ ಹಾಗೂ ಬೆಂಗಳೂರಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ. ಬೆಂಗಳೂರು ನಗರದ ಇತಿಹಾಸದಲ್ಲಿ ಈವರೆಗೆ ಯಾರೂ ಇಂತಹ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿಲ್ಲ. ನಮ್ಮ ಬೆಂಗಳೂರಿನ 23 ಲಕ್ಷ ಮನೆಗಳ ಆಸ್ತಿಗಳನ್ನು ಅಧಿಕೃತಗೊಳಿಸಿ, ಹಕ್ಕು ಪತ್ರಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ನಾವು ತೀರ್ಮಾನಿಸಿದ್ದೇವೆ.

ನಾವು ಆರನೇ ಗ್ಯಾರಂಟಿ ಅಂದರೆ ಭೂ ಗ್ಯಾರಂಟಿಯ ಯೋಜನೆಯ ಮೂಲಕ ಆಸ್ತಿ ದಾಖಲೆಗಳ ದುರುಪಯೋಗವನ್ನು ತಡೆಯಲು ಪ್ರತಿಯೊಂದು ಆಸ್ತಿಯ ಮ್ಯಾಪಿಂಗ್ ಮತ್ತು ವಿವಿಧ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಜನರಿಗೆ ಅವರ ಆಸ್ತಿ ದಾಖಲೆಗಳನ್ನು ಒದಗಿಸುತ್ತೇವೆ.’ನನ್ನ ಖಾತೆ – ನನ್ನ ಹಕ್ಕು’ ಅಭಿಯಾನವನ್ನು ನಾವು ಹಮ್ಮಿಕೊಂಡಿದ್ದೇವೆ. ಪ್ರಸ್ತುತ ನಗರದಲ್ಲಿ 7 ಲಕ್ಷ ಬಿ-ಖಾತೆಗಳಿದ್ದು, ಈ ಪೈಕಿ ಆರಂಭದಲ್ಲಿ ಬಂದ 11 ಸಾವಿರ ಅರ್ಜಿಗಳಲ್ಲಿ 7 ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಿದ್ದೇವೆ. ಈಗ ಈ ಅಭಿಯಾನದ ಮೂಲಕ ಎಲ್ಲಾ 7 ಲಕ್ಷ ಜನರಿಗೂ ಅನುಕೂಲ ಮಾಡಿಕೊಡುವುದು ನಮ್ಮ ಗುರಿಯಾಗಿದೆ.

‘ನನ್ನ ಖಾತೆ – ನನ್ನ ಹಕ್ಕು’ ಅಭಿಯಾನವನ್ನು ಮೇ 16ರಿಂದ ಆರಂಭಿಸಿ ಸುಮಾರು ಮೂರು ತಿಂಗಳ ಕಾಲ ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ನಡೆಸಲಾಗುವುದು. ಒಂದು ಪಾಲಿಕೆಗೆ ಹತ್ತು ಸ್ಥಳಗಳಂತೆ ಒಟ್ಟು 50 ಜಾಗಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇದ್ದರೂ ಸಹ ಅಧಿಕಾರಿಗಳು ಲಭ್ಯವಿದ್ದು ಕೆಲಸ ಮಾಡಲಿದ್ದಾರೆ. ಯಾರೊಬ್ಬರಿಂದಲೂ ರೂಪಾಯಿ ಲಂಚವಿಲ್ಲದೆ ಪಾರದರ್ಶಕವಾಗಿ ಮನೆ ಬಾಗಿಲಿಗೆ ಖಾತೆ ಒದಗಿಸಿಕೊಡುವುದೇ ನಮ್ಮ ಸಂಕಲ್ಪವಾಗಿದೆ.

ಬಿ-ಖಾತೆಯಿಂದ ಎ-ಖಾತೆಗೆ ಪರಿವರ್ತಿಸಿಕೊಳ್ಳುವವರಿಗೆ ನಾವು ದೊಡ್ಡ ರಿಯಾಯಿತಿಯನ್ನು ಘೋಷಿಸಿದ್ದೇವೆ. ಸಾಮಾನ್ಯವಾಗಿ ಇದಕ್ಕೆ ಶೇ. 5ರಷ್ಟು ಗೈಡೆನ್ಸ್ ವ್ಯಾಲ್ಯೂ ಶುಲ್ಕವಿರುತ್ತದೆ. ಆದರೆ ನೂರು ದಿನದೊಳಗೆ ಅರ್ಜಿ ಸಲ್ಲಿಸುವವರಿಗೆ ಕೇವಲ ಶೇ. 2ರಷ್ಟು ಶುಲ್ಕವನ್ನು ಮಾತ್ರ ನಿಗದಿಪಡಿಸಿದ್ದೇವೆ.ಆಡಳಿತಾತ್ಮಕ ಸುಧಾರಣೆಗಳ ಜೊತೆಗೆ ‘ಗ್ರೀನ್ ಬೆಂಗಳೂರು’ ನಿರ್ಮಾಣಕ್ಕೂ ನಾವು ಒತ್ತು ನೀಡಿದ್ದೇವೆ. ಈ ನಿಟ್ಟಿನಲ್ಲಿ ಕೆಂಪೇಗೌಡ ಜಯಂತಿಯ ಅಂಗವಾಗಿ ಜೂನ್ 27ರಂದು ಶಾಲೆಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಗರದಾದ್ಯಂತ 15 ಲಕ್ಷ ಸಸಿಗಳನ್ನು ನೆಡಲು ತೀರ್ಮಾನಿಸಿದ್ದೇವೆ. ಆ ಮೂಲಕ ಬೆಂಗಳೂರನ್ನು ಮತ್ತೆ ಹಸಿರು ನಗರವನ್ನಾಗಿ ಮಾಡುವತ್ತ ಹೆಜ್ಜೆ ಇಟ್ಟಿದ್ದೇವೆ.

ಈ ವೇಳೆ ಸಚಿವರಾದ ಕೆ.ಜೆ. ಜಾರ್ಜ್, ಬಿಡಿಎ ಅಧ್ಯಕ್ಷರು ಹಾಗೂ ಶಾಸಕರಾದ ಎನ್‌.ಎ. ಹ್ಯಾರಿಸ್, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಶಾಸಕರಾದ ಎ.ಸಿ.ಶ್ರೀನಿವಾಸ್ ಹಾಗೂ ಪರಿಷತ್ ಸದಸ್ಯರಾದ ಕೆ.ಗೋವಿಂದರಾಜ್ ಅವರು ಉಪಸ್ಥಿತರಿದ್ದರು.

ನಮ್ಮ ಬೆಂಗಳೂರು – ನಮ್ಮ ಗ್ಯಾರಂಟಿ!

ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ನಮ್ಮ ಸರ್ಕಾರದ 6ನೇ ಗ್ಯಾರಂಟಿ – ಭೂ ಗ್ಯಾರಂಟಿ ಹಾಗೂ ಬೆಂಗಳೂರಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ.

ಬೆಂಗಳೂರು ನಗರದ ಇತಿಹಾಸದಲ್ಲಿ ಈವರೆಗೆ ಯಾರೂ ಇಂತಹ… pic.twitter.com/6rxkhViubr

— DK Shivakumar (@DKShivakumar) May 13, 2026

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

1 Min Read

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

1 Min Read

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

2 Mins Read
Recent News

BREAKING : ಇಂಧನ ದರ ಏರಿಕೆ ಹಿನ್ನೆಲೆ : ಅಂತರಾಷ್ಟ್ರೀಯ ಸಂಚಾರ ಕಡಿತಗೊಳಿಸಿದ ಏರ್ ಇಂಡಿಯಾ ಸಂಸ್ಥೆ!

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!

BREAKING: NEET ಪತ್ರಿಕೆ ಸೋರಿಕೆ ಪ್ರಕರಣ: ಪುಣೆಯಲ್ಲಿ ಮಹಿಳೆ ವಶಕ್ಕೆ – ತನಿಖೆಗಾಗಿ ಸಿಬಿಐಗೆ ಹಸ್ತಾಂತರ

ಅಹಮದಾಬಾದ್ – ಧೋಲೇರಾ ನಡುವೆ ದೇಶದ ಮೊದಲ ಸ್ವದೇಶಿ ಸೆಮಿ ಹೈಸ್ಪೀಡ್ ರೈಲು ಯೋಜನೆಗೆ ಕೇಂದ್ರ ಸಂಪುಟ ಅಸ್ತು!

State News
KARNATAKA

ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸರ್ಕಾರ ಬಂಪರ್ ಆಫರ್ : B ಖಾತಾದಿಂದ A ಖಾತಾ ಮಾಡಿಕೊಳ್ಳಲು ಗೈಡೆನ್ಸ್ ವ್ಯಾಲ್ಯೂ ಇಳಿಕೆ!

By ಸುರೇಶ್‌ KARNATAKA 2 Mins Read

ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ…

ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಚಿಕ್ಕಮಗಳೂರಲ್ಲಿ ಕರ್ತವ್ಯನಿರತ ಪೊಲೀಸ್ ಕಾನ್ಸ್​​ಟೇಬಲ್ ಸಾವು!

SHOCKING : ಮಂಗಳೂರಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವಿದ್ಯಾರ್ಥಿನಿ ಅರೆಸ್ಟ್ : 35ಲಕ್ಷ ರೂ‌. ಮೌಲ್ಯದ ಗಾಂಜಾ ವಶಕ್ಕೆ!

BREAKING: ರಾಜ್ಯ ಸರ್ಕಾರದಿಂದ ಹೊಸ ಒಳಮೀಸಲಾತಿಯಡಿ 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ | Govt Jobs

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.