Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂ.1ರಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha Guided Walking Tours

25/05/2025 8:24 PM

PU ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ಪ್ರೌಢಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

25/05/2025 8:18 PM

ಪಂಜಾಬ್ ನಲ್ಲಿ ಗುಂಡಿಕ್ಕಿ ಅಕಾಲಿಕದಳದ ಮುಖಂಡನನ್ನು ಕೊಲೆ | Harjinder Singh Bahman

25/05/2025 8:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು, ಪ್ರತಿಪಕ್ಷಗಳ ಸುಳ್ಳಿಗೆ ಜನರು ಕಿವಿಗೊಡಬೇಡಿ: DKS
KARNATAKA

ಗ್ಯಾರಂಟಿ ಜೊತೆಗೆ ಅಭಿವೃದ್ದಿಗೂ ಸರ್ಕಾರದ ಒತ್ತು, ಪ್ರತಿಪಕ್ಷಗಳ ಸುಳ್ಳಿಗೆ ಜನರು ಕಿವಿಗೊಡಬೇಡಿ: DKS

By kannadanewsnow0902/12/2024 6:05 PM

ತುಮಕೂರು : “ರಾಜ್ಯದ ಜನರು ಪ್ರತಿಪಕ್ಷಗಳ ಸುಳ್ಳುಗಳಿಗೆ ಕಿವಿಗೊಡಬೇಡಿ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಿದೆ. ಜೊತೆಗೆ ಅಭಿವೃದ್ದಿ ಕೆಲಸಗಳಿಗೂ ಒತ್ತು ಕೊಟ್ಟಿದೆ. ಇದಕ್ಕೆ ರಾಜ್ಯದ ಜನರೇ ಸಾಕ್ಷಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ತುಮಕೂರಿನಲ್ಲಿ ಸೋಮವಾರ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕೆಲವರು ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಅನವಶ್ಯಕ ಚರ್ಚೆ ಮಾಡುತ್ತಿದ್ದಾರೆ. ಸುಮಾರು 250 ಕೋಟಿಯಷ್ಟು ಹಣ ಗ್ಯಾರಂಟಿ ಯೋಜನೆಗಳ ಮೂಲಕ ಒಂದೊಂದು ವಿಧಾನಸಭಾ ಕ್ಷೇತ್ರಗಳಿಗೆ ತಲುಪುತ್ತಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣವಾಗುತ್ತಿದೆ. ಇದು ಅಭಿವೃದ್ದಿಯಲ್ಲವೇ?” ಎಂದು ಪ್ರಶ್ನಿಸಿದರು.

ಎತ್ತಿನಹೊಳೆ ಅಡೆತಡೆ ನಿವಾರಣೆ:

“ತುಮಕೂರು ಜಿಲ್ಲೆಯ ಲಂಬಾಣಿ ಜನಾಂಗಗಳಿಗೆ 94ಡಿ ಅಡಿಯಲ್ಲಿ ಅವರು ವಾಸವಿರುವ ಜಮೀನುಗಳನ್ನು ಸಕ್ರಮ ಮಾಡಿ, ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸವನ್ನು ಕೈಗೂಡಿಸಿದೆ. ಈಗಾಗಲೇ ಎತ್ತಿನಹೊಳೆ ಯೋಜನೆಗೆ ನಮ್ಮ ಸರ್ಕಾರ ಉದ್ಘಾಟಿಸಿದೆ. ಮಧ್ಯದಲ್ಲಿ ಒಂದಷ್ಟು ಅಡೆತಡೆಗಳಿದ್ದು ಅದನ್ನು ಆದಷ್ಟು ಬೇಗ ನಿವಾರಿಸಿ ತುಮಕೂರು ಜಿಲ್ಲೆಗೆ ನೀರು ಕೊಡುತ್ತೇವೆ” ಎಂದರು.

ಗ್ಯಾರಂಟಿ ಯೋಜನೆಗಳು ಬಿಜೆಪಿಯಿಂದ ನಕಲು

“ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳ ಮೂಲಕ 56 ಸಾವಿರ ಕೋಟಿ ಹಣವನ್ನು ವಿನಿಯೋಗ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳ ಶಕ್ತಿ ಇಡೀ ದೇಶಕ್ಕೆ ಪರಿಚಿತವಾಗಿದೆ. ದೇಶದ ಒಂದಷ್ಟು ರಾಜ್ಯಗಳಲ್ಲಿ ಇರುವ ಬಿಜೆಪಿ ರಾಜ್ಯ ಸರ್ಕಾರಗಳು ನಮ್ಮ ಯೋಜನೆಗಳನ್ನು ನಕಲು ಮಾಡಿ ಜಾರಿಗೆ ತರುತ್ತಿರುವುದು ಸಂತೋಷದ ಸಮಾಚಾರ” ಎಂದರು.

ನರೇಗಾ ಕಾಂಗ್ರೆಸ್ ಕೊಡುಗೆ

“ನಾನು ಮತ್ತು ಮುಖ್ಯಮಂತ್ರಿಗಳು ಫಲಾನುಭವಿಗಳ ಜೊತೆ ಮಾತನಾಡುವಾಗ ಒಬ್ಬ ಪಂಚಾಯಿತಿ ಸದಸ್ಯನು ʼನನ್ನ ಕ್ಷೇತ್ರದಲ್ಲಿ ಸುಮಾರು 5 ಕೋಟಿ ಮೊತ್ತದ ನರೇಗಾ ಕೆಲಸಗಳನ್ನು ಮಾಡಿಸಿದ್ದೇನೆʼ ಎಂದು ಹೇಳಿದ. ಈ ನರೇಗಾ ಯೋಜನೆ ನಮ್ಮ ಕಾಂಗ್ರೆಸ್ ಕೊಡುಗೆ. ಗ್ಯಾರಂಟಿ ಯೋಜನೆಗಳಿಂದ ಮನೆಗಳನ್ನು ಕಾಂಗ್ರೆಸ್ ಇಬ್ಬಾಗ ಮಾಡುತ್ತಿದೆ ಎಂದು ಪ್ರತಿಪಕ್ಷಗಳು ಟೀಕೆ ಮಾಡುತ್ತಿದ್ದವು. ಅದಕ್ಕೆಲ್ಲ ಉತ್ತರ ಸಿಕ್ಕಿದೆ, ಸಿಗಲಿದೆ” ಎಂದು ಹೇಳಿದರು.

ಅಭಿವೃದ್ದಿಗೆ ಜನರ ಕಣ್ಣುಗಳೇ ಸಾಕ್ಷಿ

“ಅಕ್ಬರ್ ಒಮ್ಮೆ ಬಿರ್ ಬಲ್ ಗೆ ಒಂದು ಪ್ರಶ್ನೆ ಕೇಳುತ್ತಾನೆ, ʼಸತ್ಯಕ್ಕೂ ಸುಳ್ಳಿಗೂ ಎಷ್ಟು ಅಂತರʼ ಎಂದು ಅದಕ್ಕೆ ಬೀರ್ ಬಲ್ ʼಕೇವಲ ನಾಲ್ಕು ಬೆರಳಿನ ಅಂತರ. ಕಣ್ಣು ನೋಡಿದ್ದು ಸತ್ಯ, ಕಿವಿ ಕೇಳಿದ್ದು ಸುಳ್ಳು. ಇವೆರಡರ ನಡುವಿನ ಅಂತರ ಕೇವಲ ನಾಲ್ಕು ಬೆರಳುʼ ಎಂದು. ಯಾರು ಎಷ್ಟೇ ಸುಳ್ಳು ಹೇಳಬಹುದು ಆದರೆ ನಮ್ಮ ಅಭಿವೃದ್ದಿ ಕೆಲಸಗಳಿಗೆ ರಾಜ್ಯದ ಜನರ ಕಣ್ಣುಗಳೇ ಸಾಕ್ಷಿ” ಎಂದು ಹೇಳಿದರು.

ಜನರ ನೆರವಿಗೆ ಕಾಂಗ್ರೆಸ್ ನಿಂತಿದೆ

“ಯಾರೂ ಕೂಡ ಹಸಿವಿನಿಂದ ಬಳಲಬಾರದು ಎಂದು ಪ್ರತಿಯೊಂದು ಕುಟುಂಬಕ್ಕೂ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಇಂದಿರಾ ಗಾಂಧಿ ಅವರ ಕಾಲದಿಂದಲೂ ಅನೇಕ ಜನಪರ ಯೋಜನೆಗಳನ್ನು ನಾವು ನೀಡುತ್ತಾ ಬಂದಿದ್ದೇವೆ. ಉಳುವವನೇ ಭೂಮಿಯ ಒಡೆಯ, ಪಿಂಚಣಿ, ಪಡಿತರ ವ್ಯವಸ್ಥೆ, ಬಿಸಿಯೂಟ, ಸ್ತ್ರೀ ಶಕ್ತಿ ಸಂಘಗಳನ್ನು ಸ್ಥಾಪಿಸಿ ಜನರ ನೆರವಿಗೆ ನಿಂತಿದ್ದೇವೆ” ಎಂದರು.

ಬೆಂಗಳೂರಿಗೆ ಪರ್ಯಾಯ ತುಮಕೂರು

“ಬೆಂಗಳೂರು ನಂತರ ಹಾಗೂ ಅದಕ್ಕೆ ಪರ್ಯಾಯವಾಗಿ ಬೆಳೆಯುವಂತಹ ಲಕ್ಷಣಗಳು ತುಮಕೂರು ಜಿಲ್ಲೆಗಿದೆ ಎನ್ನುವ ಅಭಿಪ್ರಾಯವನ್ನು ಜಿ.ಪರಮೇಶ್ವರ್ ಅವರು ವ್ಯಕ್ತಪಡಿಸಿದ್ದಾರೆ. ನನಗೂ ಈ ಜಿಲ್ಲೆಗೂ ಆಧ್ಯಾತ್ಮಿಕವಾದ ಸಂಬಂಧವಿದೆ. ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಈ ಜಿಲ್ಲೆ ಶ್ರೀಮಂತವಾಗಿದೆ. ತುಮಕೂರು ಜಿಲ್ಲೆಯ ಎಲ್ಲಾ ಶಾಸಕರನ್ನು ಗೃಹಸಚಿವರಾದ ಪರಮೇಶ್ವರ್ ಅವರು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿ ಕಾರ್ಯಗಳಿಗೆ ಮುನ್ನುಡಿ ಬರೆದಿದ್ದಾರೆ. ಬೆಂಗಳೂರಿನಿಂದ 70 ಕಿ.ಮೀ ದೂರವಿರುವ ಜಿಲ್ಲೆಯನ್ನು ಪರಮೇಶ್ವರ್ ಅವರು ಅಭಿವೃದ್ದಿ ಪಥದಲ್ಲಿ ತೆಗೆದುಕೊಂಡು ಹೋಗಲು ಶ್ರಮಿಸುತ್ತಿದ್ದಾರೆ” ಎಂದು ತಿಳಿಸಿದರು.

ಶಿವಕುಮಾರ ಸ್ವಾಮಿಗಳ ಆಶಯಗಳಂತೆ ಸರ್ಕಾರದ ಕೆಲಸ

“ಕೈಲಾಸ ದೊಡ್ಡದಲ್ಲ, ಕಾಯಕ ದೊಡ್ಡದು ಎಂದು ಶಿವಕುಮಾರಸ್ವಾಮಿಗಳು ಹೇಳಿದ್ದಾರೆ. ಶ್ರೀಗಳ ಕನಸಾದ ಅಕ್ಷರ, ಆರೋಗ್ಯ, ಅನ್ನ ಈ ಆಶಯಗಳನ್ನು ಇಟ್ಟುಕೊಂಡು ನಮ್ಮ ಕಾಂಗ್ರೆಸ್ ಸರ್ಕಾರ ಕೆಲಸ ಮಾಡುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿಗಳು ಆದೇಶ ನೀಡಿದ್ದಾರೆ. ಕೊಟ್ಟು ಹೋಗುವ ಅಥವಾ ಬಿಟ್ಟು ಹೋಗುವ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಸಾವಿರಾರು ಯೋಜನೆಗಳನ್ನು ಈ ದೇಶದ ಪ್ರಗತಿಗೆ ಕಾಂಗ್ರೆಸ್ ಸರ್ಕಾರಗಳು ರೂಪಿಸಿವೆ” ಎಂದು ಹೇಳಿದರು.

ಅಧಿಕಾರಿಗಳು ಸರ್ಕಾರದ ಆಶೋತ್ತರಗಳನ್ನು ಅರಿತು ಕೆಲಸ ಮಾಡಬೇಕು

“ಮನುಷ್ಯನಿಗೆ ಇರುವ ಎರಡು ಕೈಗಳಲ್ಲಿ ಒಂದನ್ನು ನಮ್ಮ ರಕ್ಷಣೆಗೆ ಬಳಸಿಕೊಂಡರೆ, ಇನ್ನೊಂದನ್ನು ನಿಮ್ಮ ರಕ್ಷಣೆಗೆ ನಾವು ಬಳಸುತ್ತೇವೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಇವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕು ಪ್ರಮುಖ ಕಂಬಗಳು. ಸರ್ಕಾರದ ಆಶೋತ್ತರಗಳನ್ನು ಅರಿತು ಕಾರ್ಯಾಂಗವು ಕೆಲಸ ಮಾಡಬೇಕು. ಜಿಲ್ಲೆಯ ಅಧಿಕಾರಿ ವರ್ಗ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ” ಎಂದರು.

ಡಿ.5 ರಂದು ಸ್ವಾಭಿಮಾನಿ ಸಮಾವೇಶ:

“ರಾಜ್ಯದಲ್ಲಿ 136, ತುಮಕೂರು ಜಿಲ್ಲೆಯಿಂದ 7 ಶಾಸಕರನ್ನು ಕೊಟ್ಟು ನಮ್ಮ ಕೈ ಬಲ ಪಡಿಸಿದ್ದೀರಿ. ಈಗ ಮತ್ತೆ ಎರಡು ಹೆಚ್ಚುವರಿ ಸ್ಥಾನಗಳನ್ನು ಗೆಲ್ಲಿಸಿ 138 ಕ್ಕೆ ನಮ್ಮ ಬಲ ಏರಿಸಿ ನಮ್ಮ ಆತ್ಮಬಲವನ್ನು ಹೆಚ್ಚಿಸಿದ್ದೀರಿ. ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಜನ ಅವಕಾಶ ಕೊಟ್ಟಿದ್ದಾರೆ. ನಾವು ಜನರನ್ನು, ಸಂವಿಧಾನವನ್ನು ನಂಬಿ ಕೆಲಸ ಮಾಡುತ್ತಿದ್ದೇವೆ. ಇದೇ 5ನೇ ತಾರೀಕಿನಂದು ಹಾಸನದಲ್ಲಿ ವಿವಿಧ ಸಂಘಟನೆಗಳ ಜೊತೆ ಸೇರಿ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ” ಎಂದು ತಿಳಿಸಿದರು.

“ಅಂಬೇಡ್ಕರ್ ಅವರು ಹೇಳುತ್ತಾರೆ ʼಒಬ್ಬ ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎನ್ನುವುದು ಮುಖ್ಯವಲ್ಲ. ಎಷ್ಟು ಜನರ ಬದುಕನ್ನು ಬದಲಾವಣೆ ಮಾಡಿದ್ದಾನೆ ಎನ್ನುವುದು ಮುಖ್ಯʼ ಈ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಕೋಟ್ಯಂತರ ಜನರ ಬದುಕನ್ನು ಬದಲಾವಣೆ ಮಾಡಿದೆ, ಮಾಡುತ್ತಿದೆ. ನಮಗೆ ಜಾತಿ, ಧರ್ಮ ಮುಖ್ಯವಲ್ಲ. ಜನರ ಕಲ್ಯಾಣ ಮುಖ್ಯ. ಎಲ್ಲರನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಕೆಲಸವನ್ನು ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ” ಎಂದು ತಿಳಿಸಿದರು.

BREAKING: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ‘ಶಾಲಾ-ಕಾಲೇಜು’ಗಳಿಗೆ ರಜೆ ಘೋಷಿಸಿ DC ಆದೇಶ | School Holiday

BIG NEWS: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಹೀಗಿದೆ ವಿಷಯವಾರು ಪರೀಕ್ಷೆ

BREAKING ; ಡಿಸೆಂಬರ್ 13, 14 ರಂದು ಲೋಕಸಭೆಯಲ್ಲಿ ‘ಸಂವಿಧಾನ’ ಮೇಲಿನ ಚರ್ಚೆ, ಸರ್ವಪಕ್ಷಗಳು ಭಾಗಿ

Share. Facebook Twitter LinkedIn WhatsApp Email

Related Posts

ಜೂ.1ರಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha Guided Walking Tours

25/05/2025 8:24 PM2 Mins Read

PU ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ಪ್ರೌಢಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

25/05/2025 8:18 PM3 Mins Read

BIG NEWS: ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ

25/05/2025 7:51 PM2 Mins Read
Recent News

ಜೂ.1ರಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha Guided Walking Tours

25/05/2025 8:24 PM

PU ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ಪ್ರೌಢಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

25/05/2025 8:18 PM

ಪಂಜಾಬ್ ನಲ್ಲಿ ಗುಂಡಿಕ್ಕಿ ಅಕಾಲಿಕದಳದ ಮುಖಂಡನನ್ನು ಕೊಲೆ | Harjinder Singh Bahman

25/05/2025 8:04 PM

BIG NEWS: ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ

25/05/2025 7:51 PM
State News
KARNATAKA

ಜೂ.1ರಿಂದ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha Guided Walking Tours

By kannadanewsnow0925/05/2025 8:24 PM KARNATAKA 2 Mins Read

ಬೆಂಗಳೂರು: ಕರ್ನಾಟಕದ ಶಾಸಕಾಂಗ ಅಧಿಕಾರದ ಸ್ಥಾನಕ್ಕೆ ಸಾರ್ವಜನಿಕರನ್ನು ಆಹ್ವಾನಿಸುವ ಮೊದಲ ಅನುಭವವಾದ ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಗಳಿಗೆ ಭಾನುವಾರ ಚಾಲನೆ…

PU ಕಾಲೇಜು ಉಪನ್ಯಾಸಕರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ಪ್ರೌಢಶಾಲಾ ಶಿಕ್ಷಕರಿಗೆ ಮಹತ್ವದ ಮಾಹಿತಿ

25/05/2025 8:18 PM

BIG NEWS: ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ

25/05/2025 7:51 PM

BREAKING: ರಾಜ್ಯದಲ್ಲಿ ಮುಂದುವರೆದ ಕೊರೋನಾ ಆರ್ಭಟ: ಇಂದು 9 ಮಂದಿಗೆ ಕೋವಿಡ್ ಪಾಸಿಟಿವ್ | Karnataka Covid19 Update

25/05/2025 7:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.