Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹವಾಮಾನ ಬದಲಾದಾಗಲೆಲ್ಲಾ ಅನಾರೋಗ್ಯ ಕಾಡುತ್ತಿದೆಯೇ? ನಿಮ್ಮ ರೋಗನಿರೋಧಕ ಶಕ್ತಿಯ ಗುಟ್ಟನ್ನು ತಿಳಿಯಿರಿ

27/10/2025 10:16 AM

SHOCKING : ಹಾಸನದಲ್ಲಿ ಭೀಕರ ಮರ್ಡರ್ : ಮಿಕ್ಸ್ಚರ್ ಕೊಡದಿದ್ದಕ್ಕೆ ಹೆಂಡತಿ, ಮಕ್ಕಳೆದುರೆ ಚಾಕು ಇರಿದು ಬರ್ಬರ ಹತ್ಯೆ!

27/10/2025 10:12 AM

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಮುರಿದ ಲಿಫ್ಟರ್ ಪ್ರೀತೀಸ್ಮಿತಾ ಭೋಯ್ | Asian Games

27/10/2025 9:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಬಸ್’ಗಳಲ್ಲಿ ಸುರಕ್ಷತೆಗೆ ಸರ್ಕಾರದ ಮಹತ್ವದ ಕ್ರಮ : ಇನ್ಮುಂದೆ ಬಸ್ ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯಲು ನಿಷೇಧ.!
KARNATAKA

ರಾಜ್ಯದ `ಬಸ್’ಗಳಲ್ಲಿ ಸುರಕ್ಷತೆಗೆ ಸರ್ಕಾರದ ಮಹತ್ವದ ಕ್ರಮ : ಇನ್ಮುಂದೆ ಬಸ್ ಗಳಲ್ಲಿ ಈ ವಸ್ತುಗಳನ್ನ ಕೊಂಡೊಯ್ಯಲು ನಿಷೇಧ.!

By kannadanewsnow5727/10/2025 6:05 AM

ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಖಾಸಗಿ ಬಸ್ ಅಪಘಾತದ ನಂತ್ರ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿದ್ದರು. ಈ ದುರಂತದ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಿ, ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.

ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು‌ ತಮ್ಮ ಪ್ರಾಣ ಕಳೆದುಕೊಂಡಿದ್ದರು ಎಂದು ಹೇಳಿದ್ದಾರೆ.

ನಾನು ಆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸುಮಾರು 50000 ವಾಹನಗಳಲ್ಲಿ ( ಸಾರಿಗೆ ಸಂಸ್ಥೆಗಳ ಬಸ್ಸುಗಳು, ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಸುಗಳು, ಖಾಸಗಿ ಟೂರಿಸ್ಟ್ ಬಸ್‌ಗಳು, ಟೆಂಪೋ ಟ್ರಾವೆಲರ್ಸ್‌‌, ಶಾಲಾ ವಾಹನಗಳು ಸೇರಿ) ತುರ್ತು ನಿರ್ಗಮನ ದ್ವಾರಗಳನ್ನು ಕಡ್ಡಾಯ ಅಳವಡಿಸುವಂತೆ ಮತ್ತು ಸರ್ಮಪಕವಾಗಿ ದ್ವಾರ ಕೆಲಸ ಮಾಡುತ್ತಿರುವ ಬಗ್ಗೆ ಪರಿಶೀಲಿಸಲು ಒಂದು ಅಭಿಯಾನವನ್ನೇ ಕೈಗೆತ್ತಿಕೊಂಡಿದ್ದರಿಂದ, ಹಲವು ಬಸ್ಸುಗಳಲ್ಲಿನ ಲೋಪದೋಷಗಳು ಗಮನಕ್ಕೆ‌‌ ಬಂದು ತುರ್ತು ನಿರ್ಗಮನ ದ್ವಾರಗಳ ಅಳವಡಿಕೆ‌ ಕಡ್ಡಾಯವಾಯಿತು ಎಂದಿದ್ದಾರೆ.

ಮುಂದುವರೆದು, ಬಸ್ಸುಗಳಲ್ಲಿ ಯಾವುದೇ ವಾಣಿಜ್ಯ ಸರಕು/ ಲಗೇಜ್ ಸಾಗಿಸುವ ಸಂದರ್ಭದಲ್ಲಿ ಬೆಂಕಿ ಸ್ಪರ್ಷಕ್ಕೆ ಸರಳವಾಗಿ ಉರಿಯುವ ಅಥವಾ ಇತರೆ ಸ್ಫೋಟಕ ವಸ್ತುಗಳನ್ನು ಸಾಗಿಸದಂತೆ ನಿಗಾವಹಿಸಬೇಕು. ಎಲ್ಲಾ ಎಸಿ ಬಸ್‌ಗಳಲ್ಲಿ ತುರ್ತು ಸಂದರ್ಭಗಳಲ್ಲಿ ಕಿಟಕಿಗಳನ್ನು ಒಡೆಯಲು ಸುತ್ತಿಗೆಗಳು ಕಡ್ಡಾಯವಾಗಿರಬೇಕು. ಲಗೇಜ್ ಸಾಗಿಸುವ ಜಾಗದಲ್ಲಿ ಯಾವುದೇ ವ್ಯಕ್ತಿ ಮಲಗಲು ಅವಕಾಶ ನೀಡಬಾರದು. ಬಸ್ಸುಗಳ ನವೀಕರಣ‌ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ಈ‌ ಮೇಲಿನ ಯಾವುದೇ ನೂನ್ಯತೆ ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು. ಪ್ರಯಾಣಿಕರ ಸುರಕ್ಷತೆ ನಮ್ಮ ಪ್ರಥಮ ಆದ್ಯತೆ. ಪ್ರಾಣ ಹಾನಿಗೆ ಯಾವುದೇ ರೀತಿಯಿಂದಲೂ‌ ನಷ್ಟ ಭರಿಸಲು ಸಾಧ್ಯವಿಲ್ಲ. ಆದ್ದರಿಂದ ಈ‌ ಕೂಡಲೇ ಬಸ್ಸುಗಳಲ್ಲಿನ ಸುರಕ್ಷತಾ ಆಡಿಟ್ ಪರಿಶೀಲನೆಗೆ ತಂಡಗಳನ್ನು ರಚಿಸಿ, ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

carrying these items on buses is prohibited! Government's important step for safety on state buses: From now on
Share. Facebook Twitter LinkedIn WhatsApp Email

Related Posts

SHOCKING : ಹಾಸನದಲ್ಲಿ ಭೀಕರ ಮರ್ಡರ್ : ಮಿಕ್ಸ್ಚರ್ ಕೊಡದಿದ್ದಕ್ಕೆ ಹೆಂಡತಿ, ಮಕ್ಕಳೆದುರೆ ಚಾಕು ಇರಿದು ಬರ್ಬರ ಹತ್ಯೆ!

27/10/2025 10:12 AM1 Min Read

BREAKING : ಸ್ನೇಹಿತೆಗೆ ಬ್ಲಾಕ್‌ ಮೇಲ್‌ ಆರೋಪ : ಕನ್ನಡ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ `FIR’ ದಾಖಲು ದಾಖಲು.!

27/10/2025 8:34 AM1 Min Read

BIG NEWS : `SSLC-PUC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `NIOS’ ಮಾದರಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಚಿಂತನೆ.!

27/10/2025 7:44 AM1 Min Read
Recent News

ಹವಾಮಾನ ಬದಲಾದಾಗಲೆಲ್ಲಾ ಅನಾರೋಗ್ಯ ಕಾಡುತ್ತಿದೆಯೇ? ನಿಮ್ಮ ರೋಗನಿರೋಧಕ ಶಕ್ತಿಯ ಗುಟ್ಟನ್ನು ತಿಳಿಯಿರಿ

27/10/2025 10:16 AM

SHOCKING : ಹಾಸನದಲ್ಲಿ ಭೀಕರ ಮರ್ಡರ್ : ಮಿಕ್ಸ್ಚರ್ ಕೊಡದಿದ್ದಕ್ಕೆ ಹೆಂಡತಿ, ಮಕ್ಕಳೆದುರೆ ಚಾಕು ಇರಿದು ಬರ್ಬರ ಹತ್ಯೆ!

27/10/2025 10:12 AM

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಮುರಿದ ಲಿಫ್ಟರ್ ಪ್ರೀತೀಸ್ಮಿತಾ ಭೋಯ್ | Asian Games

27/10/2025 9:59 AM

ಗಮನಿಸಿ : 1,5,10 ರೂಪಾಯಿ `ನಾಣ್ಯ’ ತಯಾರಿಕೆಗೆ ಖರ್ಚಾಗುವ ಹಣ ಎಷ್ಟು ಗೊತ್ತಾ? RBI ವರದಿಯಲ್ಲಿ ಅಚ್ಚರಿ ಅಂಶ

27/10/2025 9:40 AM
State News
KARNATAKA

SHOCKING : ಹಾಸನದಲ್ಲಿ ಭೀಕರ ಮರ್ಡರ್ : ಮಿಕ್ಸ್ಚರ್ ಕೊಡದಿದ್ದಕ್ಕೆ ಹೆಂಡತಿ, ಮಕ್ಕಳೆದುರೆ ಚಾಕು ಇರಿದು ಬರ್ಬರ ಹತ್ಯೆ!

By kannadanewsnow0527/10/2025 10:12 AM KARNATAKA 1 Min Read

ಹಾಸನ : ಹಾಸನದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಎಣ್ಣೆ ಹೊಡೆಯಲು ಮಿಕ್ಸ್ಚರ್ ಕೊಡೋದಕ್ಕೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.…

BREAKING : ಸ್ನೇಹಿತೆಗೆ ಬ್ಲಾಕ್‌ ಮೇಲ್‌ ಆರೋಪ : ಕನ್ನಡ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ `FIR’ ದಾಖಲು ದಾಖಲು.!

27/10/2025 8:34 AM

BIG NEWS : `SSLC-PUC’ ಫೇಲಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ `NIOS’ ಮಾದರಿ ಪರೀಕ್ಷೆಗೆ ಶಿಕ್ಷಣ ಇಲಾಖೆ ಚಿಂತನೆ.!

27/10/2025 7:44 AM

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ‘ಹೆಚ್ಚುವರಿ ವೇತನ ಬಡ್ತಿ’: ಸರ್ಕಾರದಿಂದ ಮಹತ್ವದ ಆದೇಶ

27/10/2025 7:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.