Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭವಿಷ್ಯದಲ್ಲಿ ಭಯೋತ್ಪಾದನಾ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲಾಗುವುದು : ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಭಾರತ

11/05/2025 11:01 AM

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM

ಜೀವನದಲ್ಲಿ ಅದೆಷ್ಟೇ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ.!

11/05/2025 10:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ
KARNATAKA

ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ: ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

By kannadanewsnow0918/08/2024 3:35 PM

ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ನೀಡಿರುವಂತ ಪ್ರಾಸಿಕ್ಯೂಷನ್ ಅನುಮತಿ ಆರ್ಟಿಕಲ್ 17ಎ ನಿಯಮ ಗಾಳಿಗೆ ತೂರಿದಂತೆ ಆಗಿದೆ. ಅವರು ಕಾನೂನಿನ ಕಗ್ಗೊಲೆ ಮಾಡಿದ್ದಾರೆ. ಬಿಜೆಪಿಯ ಕೈಗೊಂಬೆಯಂತೆ ವರ್ತಿಸಿದ್ದಾರೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಇಂದು ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮುಖ್ಯಮಂತ್ರಿಗಳ ವಿರುದ್ಧದ ಪ್ರಸಿಕ್ಯೂಷನ್ ಪ್ರಕರಣದಿಂದಾಗಿ ರಾಜ್ಯಪಾಲರ ನಡೆ ಹಾಗೂ ಅವರ ಕಾರ್ಯಗಳ ಮೇಲೆ ಬೆಳಕು ಚೆಲ್ಲಿದಂತಾಗಿದೆ. ರಾಜ್ಯಪಾಲರ ಕಾರ್ಯಭಾರಗಳ ಮೇಲೆ ಅನೇಕ ಬಾರಿ ಚರ್ಚೆಯಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಆರ್ಟಿಕಲ್ 163 ರ ಪ್ರಕಾರ ಹೀಗೆ ಹೇಳಿದ್ದಾರೆ. ರಾಜ್ಯಪಾಲರು ಮಂತ್ರಿಗಳ ಕೌನ್ಸಿಲ್ ಮೂಲಕ ಸಲಹೆಗಳನ್ನು ಪಡೆಯಬೇಕು ಎಂದರು.

ವಿ.ಜಿ.ಖೇರ್ ಅವರು ಬಾಂಬೆಯ ಮೊದಲ ರಾಜ್ಯಪಾಲರು. ರಾಜ್ಯಪಾಲರು ತಮಗೆ ಇರುವ ಅಲ್ಪಶಕ್ತಿಯಲ್ಲಿ ಹೆಚ್ಚು ಕೆಲಸ ಮಾಡಬಹುದು. ಜೊತೆಗೆ ದುರಾಡಳಿತ ಮಾಡಬೇಕು ಎಂದು ಸಂವಿಧಾನವನ್ನು ತಿರುಚಿ ಕೆಲಸ ಮಾಡಲು ತೊಡಗಿದರೆ ಅದನ್ನು ಕೂಡ ಮಾಡಬಹುದು ಎಂದು ಹೀಗೆ ಹೇಳಿದ್ದರು. ಇದೇ ರೀತಿಯ ಘಟನೆ ಕರ್ನಾಟಕದಲ್ಲಿ ನಡೆಯುತ್ತಿದೆ ರಾಜ್ಯಪಾಲರು ತಮ್ಮ ಅಧಿಕಾರವನ್ನು ದುರಾಡಳಿತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾವು ಸುಮ್ಮನೆ ರಾಜ್ಯಪಾಲರ ಮೇಲೆ ಆರೋಪವನ್ನು ಮಾಡುತ್ತಿಲ್ಲ ಎಂದರು.

ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಐಟಿ, ಇಡಿ, ಸಿಬಿಐ ಹಾಗೂ ರಾಜ್ಯಪಾಲರನ್ನು ಬಳಸಿ ತಮ್ಮ ಮಾತು ಕೇಳದ ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ. 2019ರ ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ದೊರೆಯುವುದಿಲ್ಲ. ಆದರೆ ಅಲ್ಲಿನ ರಾಜ್ಯಪಾಲರು ದೇವೇಂದ್ರ ಫಡ್ನವಿಸ್ ಅವರಿಗೆ ಬೆಳಗಿನ ಜಾವ ಐದು ಗಂಟೆಗೆ ಪ್ರಮಾಣವಚನ ಬೋಧಿಸುತ್ತಾರೆ. ಈ ಸರ್ಕಾರ ಕೇವಲ 80 ಗಂಟೆಗಳಲ್ಲಿ ಬಿದ್ದು ಹೋಗುತ್ತದೆ ಎಂದು ತಿಳಿಸಿದರು.

ಉದ್ದವ್ ಠಾಕ್ರೆ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಅವರನ್ನು ಮೇಲ್ಮನೆಗೆ ಕಳಿಸಬೇಕು ಎಂದು ತೀರ್ಮಾನ ಮಾಡಲಾಗುತ್ತದೆ. ಇದಕ್ಕೆ ರಾಜ್ಯಪಾಲರು ಆರು ತಿಂಗಳ ಕಾಲ ಅನುಮೋದನೆಯನ್ನೇ ನೀಡುವುದಿಲ್ಲ. ಆನಂತರ ಉದ್ದವ್ ಠಾಕ್ರೆ ಅವರು ದೆಹಲಿಗೆ ತೆರಳಿ ರಾಷ್ಟ್ರಪತಿಗಳು ಹಾಗೂ ಪ್ರಧಾನಿಗಳ ಗಮನಕ್ಕೆ ತಂದು ಇದು ಅಸಾಂವಿಧಾನಿಕ ನಡೆ ಎಂದಾಗ ಠಾಕ್ರೆ ಅವರಿಗೆ ಅವಕಾಶ ಸಿಗುತ್ತದೆ ಎಂದರು.

ಪಶ್ಚಿಮ ಬಂಗಾಳ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್ ಅವರ ರಾಜಕೀಯ ಹಸ್ತಕ್ಷೇಪದಿಂದ ಕಾನೂನು ಸಂಘರ್ಷ ಉಂಟಾಗಿತ್ತು. ಕೇರಳದ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸರ್ಕಾರವು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು ಕರಾಳ ಕಾಯ್ದೆಗಳ ವಿರುದ್ಧ ವಿಶೇಷ ಅಧಿವೇಶ ನಡೆಸಲು ಅನುಮತಿ ನೀಡಬೇಕೆಂದು ಪತ್ರ ಬರೆಯುತ್ತದೆ. ಆದರೆ ರಾಜ್ಯಪಾಲರು ಅಧಿವೇಶ ನಡೆಸಲು ಅನುಮತಿಯನ್ನೇ ನೀಡುವುದಿಲ್ಲ ಎಂದರು.

2018ರಲ್ಲಿ ಕರ್ನಾಟಕದಲ್ಲಿ ರಾಜ್ಯಪಾಲರಾಗಿದ್ದ ವಾಜುಬಾಯಿ ವಾಲಾ ಅವರು ಯಡಿಯೂರಪ್ಪನವರಿಗೆ ಬಹುಮತ ಇಲ್ಲದಿದ್ದರೂ ಸಹ ಪ್ರಮಾಣ ವಚನ ಬೋಧಿಸಿ 15 ದಿನಗಳ ಒಳಗೆ ಬಹುಮತ ಸಾಬೀತು ಪಡಿಸಲು ಅವಕಾಶ ನೀಡಿದ್ದರು. ಆಗ ಕಾಂಗ್ರೆಸ್ ಪಕ್ಷವು ಸುಪ್ರೀಂಕೋರ್ಟ್ ಗೆ ಹೋದಾಗ ನ್ಯಾಯಾಲಯವು 15 ದಿನ ಅಲ್ಲ ಕೇವಲ ಮೂರು ದಿನದಲ್ಲಿ ಸಾಬೀತು ಪಡಿಸುವಂತೆ ಹೇಳಿತು. ಆನಂತರ ಸರ್ಕಾರ ಬಿದ್ದುಹೋಯಿತು ವಾಗ್ಧಾಳಿ ನಡೆಸಿದರು.

ನವೆಂಬರ್ 2023ರಲ್ಲಿ ಸುಪ್ರೀಂ ಕೋರ್ಟ್ ತಮಿಳುನಾಡಿನ ರಾಜಭವನ ಸೂಕ್ಷ್ಮವಾಗಿ ಪರಿಶೀಲಿಸಿತ್ತು. ಚುನಾಯಿತ ಸರ್ಕಾರ ಚರ್ಚೆ ನಡೆಸಿ ಅನುಮೋದನೆ ಮಾಡಿದ್ದ 10 ಬಿಲ್ ಗಳನ್ನು ರಾಜ್ಯಪಾಲರು ಸಹಿ ಮಾಡದೆ ವಾಪಸ್ ಕಳುಹಿಸಿದ್ದರು ಎಂದರು.

ಜನವರಿ 2023ರಲ್ಲಿ ಇದೆ ತಮಿಳುನಾಡಿನ ರಾಜ್ಯಪಾಲರು ರಾಜ್ಯಪಾಲರ ಭಾಷಣವನ್ನೇ ಧಿಕ್ಕರಿಸಿ ಹೊರ ನಡೆದಿದ್ದರು. ದೆಹಲಿಯಲ್ಲಿ ಕಳೆದ 9 ವರ್ಷಗಳಿಂದ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಕೇರಳದಲ್ಲಿ ಒಂದೊಂದು ಬಿಲ್ಲನ್ನು ಸುಮಾರು ಎರಡು ವರ್ಷಗಳ ಕಾಲ ಸಹಿ ಮಾಡದೆ ಬಾಕಿ ಇಟ್ಟಿದ್ದರು. ಆನಂತರ ಕೇರಳ ಸರ್ಕಾರ ನ್ಯಾಯಾಲಯದ ಮೊರೆ ಹೋಯಿತು. ಬಿಲ್ ಗಳನ್ನು ಹೀಗೆ ರಾಜ್ಯಪಾಲರು ಇಟ್ಟುಕೊಳ್ಳಬಾರದು ಎಂದು ನ್ಯಾಯಾಲಯದಿಂದ ಆದೇಶ ತಂದರು.

ಕೇರಳ ಪಶ್ಚಿಮ ಬಂಗಾಳ ತಮಿಳುನಾಡು ದೆಹಲಿ ಸೇರಿದಂತೆ ಇತರೆ ರಾಜ್ಯಗಳಲ್ಲಿ ನಡೆಯುತ್ತಿರುವ ಜಟಾಪಟಿಯೇ ಇಂದು ಕರ್ನಾಟಕದಲ್ಲಿ ನಡೆಯುತ್ತಿದೆ. ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶದ ವಿರುದ್ಧ ಒಂದಷ್ಟು ನಿಲುವುಗಳನ್ನು ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರ ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು ಮುಖ್ಯಮಂತ್ರಿಯ ಜೊತೆ ನಿಲ್ಲುತ್ತಾರೆ ಎಂದರು.

ಸಚಿವ ಸಂಪುಟ ಸಲಹೆಯನ್ನ ಆರ್ಟಿಕಲ್ 163 ಅಡಿಯಲ್ಲಿ ತಿರಸ್ಕಾರ ಮಾಡಿರುವುದನ್ನು ಸರ್ಕಾರ ಖಂಡಿಸಿದೆ. ರಾಜ್ಯಪಾಲರು ಒಂದಷ್ಟು ತೀರ್ಪುಗಳನ್ನು ತಮ್ಮ ಉತ್ತರದಲ್ಲಿ ಉಲ್ಲೇಖಿಸಿದ್ದಾರೆ ಆದರೆ ಅವರು ಇಡೀ ಆದೇಶವನ್ನೇ ತಿಳಿದುಕೊಳ್ಳದೆ ಅದರಲ್ಲಿ ಕೆಲವೊಂದಷ್ಟು ಮಾತ್ರ ಆಯ್ಕೆ ಮಾಡಿಕೊಂಡಿದ್ದಾರೆ. ಆರ್ಟಿಕಲ್ 17 ಎ ನಿಯಮಗಳನ್ನು ಗಾಳಿಗೆ ತೂರಿ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಖಂಡಿಸಲಾಗಿದೆ ಎಂದು ಹೇಳಿದರು.

ರಾಜ್ಯಪಾಲರು ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಆದರೆ ಅವರಿಂದಲೇ ಕಗ್ಗೊಲೆ ನಡೆಯುತ್ತಿದೆ. ಸಂವಿಧಾನವನ್ನು ಮೀರಿ ರಾಜಕೀಯದ ಕೈಗೊಂಬೆಯಾಗಿ ರಾಜ್ಯಪಾಲರು ವರ್ತಿಸುತ್ತಿದ್ದಾರೆ.

ಸಚಿವ ಸಂಪುಟದಿಂದ ಕಳುಹಿಸಿದ 70 ಪುಟಗಳ ಸಲಹೆಗೆ ಕೇವಲ ಎರಡು ಪುಟದಲ್ಲಿ ಉತ್ತರಿಸಿದ್ದಾರೆ. ಅದರಲ್ಲಿ ಎಲ್ಲಿಯೂ ಸಹ ಸರ್ಕಾರದ ಸಲಹೆ ಹೀಗೆ ತಪ್ಪಾಗಿದೆ ಎಂದು ಕಿಂಚಿತ್ತು ಉಲ್ಲೇಖಿಸಿಲ್ಲ. ತಮ್ಮ ಪ್ರಾಸಿಕ್ಯೂಷನ್ ವರದಿಯಲ್ಲಿ ಎಲ್ಲಿಯೂ ಸಹ ಕಾನೂನಾತ್ಮಕವಾಗಿ ಉತ್ತರಿಸಿಲ್ಲ. ಕೇವಲ ನೀವೇ ಕದ್ದಿದ್ದೀರಿ ಅಕ್ರಮ ನಡೆದಿದೆ ನೀವೇ ಅದನ್ನು ರಕ್ಷಣೆ ಮಾಡುತ್ತಿದ್ದೀರಿ ಎಂದು ರಾಜಕೀಯವಾಗಿ ಮಾತನಾಡಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳನ್ನು ಜಾರಿಗೆ ತರಲು ರಾಜ್ಯಪಾಲರು ಒಪ್ಪಿಗೆ ಸೂಚಿಸಬೇಕು. ಇದಕ್ಕೆ ರಾಜ್ಯಪಾಲರು ಅಡಚಣೆ ಉಂಟುಮಾಡಬಾರದು. ಯಡಿಯೂರಪ್ಪ ಅವರ ಪ್ರಕರಣದಲ್ಲಿ ಸಚಿವ ಸಂಪುಟದ ಸಲಹೆಗಳು ನಿಮಗೆ ಒಪ್ಪಿತವಾಗದಿದ್ದಲ್ಲಿ ಅದಕ್ಕೆ ಕಾರಣಗಳನ್ನು ನೀಡಿ ಎಂದು ರಾಜ್ಯಪಾಲರಿಗೆ ಹೇಳಲಾಗಿತ್ತು. ಪ್ರಾಸಿಕ್ಯೂಷನ್ ಗೆ ನೀಡುವಾಗ ಅಗತ್ಯ ಸಾಕ್ಷಿಗಳು ಹಾಗೂ ದಾಖಲೆಗಳು ಇರಬೇಕು. ಸಿದ್ದರಾಮಯ್ಯನವರ ವಿರುದ್ಧ ಯಾವ ಸಾಕ್ಷಿ ಇದೆ ಎಂದು ರಾಜ್ಯಪಾಲರನ್ನು ನಾವು ಪ್ರಶ್ನಿಸುತ್ತೇವೆ.

2016ರ ಅರುಣಾಚಲ ಪ್ರದೇಶ ಪ್ರಕರಣದಲ್ಲಿ ನ್ಯಾಯಾಲಯವು ಹೀಗೆ ಹೇಳಿತ್ತು. ಸರ್ಕಾರ ತನಿಖೆಗೆ ಸಹಕರಿಸುತ್ತಿಲ್ಲ, ತನಿಖೆಗೆ ಆದೇಶ ನೀಡಿಲ್ಲ, ಪುರಾವೆಗಳನ್ನು ನೀಡುತ್ತಿಲ್ಲ, ವರದಿಗಳನ್ನು ಪರಿಶೀಲಿಸಲು ಆಗುತ್ತಿಲ್ಲ, ರಾಜ್ಯಪಾಲರು ಸಮನ್ಸ್ ನೀಡಿದಾಗ ಬರುತ್ತಿಲ್ಲ ಹೀಗಿದ್ದಾಗ ಮಾತ್ರ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಹುದು ಎಂದು ಹೇಳಲಾಗಿದೆ.

ಪ್ರಸ್ತುತ ರಾಜ್ಯಪಾಲರು ಅನುಮತಿ ನೀಡಿರುವುದು ಸಂಪೂರ್ಣ ಕಾನೂನುಬಾಹಿರ. ಇತ್ತೀಚಿಗೆ ಜಸ್ಟಿಸ್ ನಾಗರತ್ನ ಅವರು ರಾಜ್ಯಪಾಲರು ಕೇವಲ ಒಂದು ಪಕ್ಷದ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರ ನನ್ನನ್ನು ಹೆದರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ: HDK ಗಂಭೀರ ಆರೋಪ

BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ : ಆರೋಪಿ ವಿರುದ್ಧ `FIR’ ದಾಖಲು, ಪೊಲೀಸರಿಂದ ತೀವ್ರ ಶೋಧ!

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 5 ಲಕ್ಷ ರೂ.ವರೆಗೆ ಸಾಲ!

Share. Facebook Twitter LinkedIn WhatsApp Email

Related Posts

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM2 Mins Read

ಜೀವನದಲ್ಲಿ ಅದೆಷ್ಟೇ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ.!

11/05/2025 10:53 AM5 Mins Read

BREAKING : ರಾಜ್ಯದಲ್ಲಿ ಬೀದಿನಾಯಿಗಳ ದಾಳಿಗೆ ಮತ್ತೊಂದು ಬಲಿ : ಗಂಜೇಂದ್ರಗಡದಲ್ಲಿ ಮಹಿಳೆ ಸಾವು.!

11/05/2025 10:06 AM1 Min Read
Recent News

ಭವಿಷ್ಯದಲ್ಲಿ ಭಯೋತ್ಪಾದನಾ ಕೃತ್ಯವನ್ನು ಯುದ್ಧವೆಂದು ಪರಿಗಣಿಸಲಾಗುವುದು : ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಭಾರತ

11/05/2025 11:01 AM

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

11/05/2025 10:58 AM

ಜೀವನದಲ್ಲಿ ಅದೆಷ್ಟೇ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ.!

11/05/2025 10:53 AM

ಭಾರತ-ಪಾಕಿಸ್ತಾನ ಸಂಘರ್ಷ: ಜಮ್ಮು-ಕಾಶ್ಮೀರ, ಗಡಿ ಪ್ರದೇಶಗಳಲ್ಲಿ ಪರಿಸ್ಥಿತಿ ಸಾಮಾನ್ಯ

11/05/2025 10:46 AM
State News
KARNATAKA

BIG NEWS : `CUET’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ : ಈ ರೀತಿ ಡೌನ್‌ಲೋಡ್ ಮಾಡಿಕೊಳ್ಳಿ

By kannadanewsnow5711/05/2025 10:58 AM KARNATAKA 2 Mins Read

ಬೆಂಗಳೂರು : ಮೇ 13 ರಿಂದ 16 ರವರೆಗೆ ನಡೆಯಲಿರುವ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET UG 2025)…

ಜೀವನದಲ್ಲಿ ಅದೆಷ್ಟೇ ಕಷ್ಟವಿದ್ರು ಈ ಶಕ್ತಿಶಾಲಿ ನರಸಿಂಹ ಸ್ವಾಮಿ ಶ್ಲೋಕವನ್ನು ನಿತ್ಯ ಪಠಿಸಿ.!

11/05/2025 10:53 AM

BREAKING : ರಾಜ್ಯದಲ್ಲಿ ಬೀದಿನಾಯಿಗಳ ದಾಳಿಗೆ ಮತ್ತೊಂದು ಬಲಿ : ಗಂಜೇಂದ್ರಗಡದಲ್ಲಿ ಮಹಿಳೆ ಸಾವು.!

11/05/2025 10:06 AM

Rain Alert : ರಾಜ್ಯದಲ್ಲಿ ಇಂದು, ನಾಳೆ ಭಾರೀ `ಮಳೆ’ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ.!

11/05/2025 9:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.