Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM

ಉತ್ತರಾಖಂಡ್ ಮೇಘಸ್ಫೋಟ: 8 ರಿಂದ 10 ಭಾರತೀಯ ಸೈನಿಕರು ನಾಪತ್ತೆ | Uttarkashi cloudburst

05/08/2025 8:42 PM

ದೇಶದ ಶೇ.60ರಷ್ಟು ಸಂಪತ್ತು ಕೇವಲ ಶೇ.1ರಷ್ಟು ಜನರ ಕೈಯಲ್ಲಿದೆ.! ಶ್ರೀಮಂತರು ಎಲ್ಲಿ ಹೂಡಿಕೆ ಮಾಡ್ತಾರೆ ಗೊತ್ತಾ.?

05/08/2025 8:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘7ನೇ ವೇತನ ಆಯೋಗ’ ಜಾರಿಗೆ ಸರ್ಕಾರ ಬದ್ಧ – ಸಿಎಂ ಸಿದ್ಧರಾಮಯ್ಯ
KARNATAKA

‘7ನೇ ವೇತನ ಆಯೋಗ’ ಜಾರಿಗೆ ಸರ್ಕಾರ ಬದ್ಧ – ಸಿಎಂ ಸಿದ್ಧರಾಮಯ್ಯ

By kannadanewsnow0928/02/2024 7:26 PM

ಬೆಂಗಳೂರು: ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ 7ನೇ ವೇತನ ಆಯೋಗದ ಜಾರಿಗೆ ಸರ್ಕಾರ ಸಕಾರಾತ್ಮಕ ತೀರ್ಮಾನ ಕೈಗೊಳ್ಳಲಿದೆ. ಆಯೋಗದ ಅಂತಿಮ ವರದಿ ಬಂದ ನಂತ್ರ ಖಂಡಿತ ಜಾರಿ ಮಾಡುತ್ತೇವೆ. ಈ ಬಗ್ಗೆ ಸಂಶಯ ಬೇಡ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆಯನ್ನು ಯಾವುದೇ ವಿಳಂಬವಿಲ್ಲದೇ ರಾಜ್ಯದಲ್ಲಿ ನೀಡಲಾಗುತ್ತಿದೆ. ಎನ್ ಪಿ ಎಸ್ ತೆಗೆದು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವ ಬಗ್ಗೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿ ಮಾಡುವ ಬಗ್ಗೆಯೂ ಶೀಘ್ರದಲ್ಲಿ ತೀರ್ಮಾನಿಸಲಾಗುವುದು ಎಂದ ಮುಖ್ಯಮಂತ್ರಿಗಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯುತ ಕೆಲಸವನ್ನು ಪರಿಣಾಮಕಾರಿಯಾಗಿ ಮಾಡುತ್ತಿರುವ ಸರ್ಕಾರಿ ನೌಕರರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗಬೇಕು

ಕರ್ನಾಟಕದಲ್ಲಿ 7.50 ಲಕ್ಷ ಸರ್ಕಾರಿ ನೌಕರರಿದ್ದಾರೆ. ಅದರಲ್ಲಿ 5.90 ಲಕ್ಷ ಜನ ಹಾಲಿ ಕೆಲಸ ಮಾಡುತ್ತಿದ್ದಾರೆ. 2.50 ಲಕ್ಷ ಜನರನ್ನು ಭರ್ತಿ ಮಾಡಲು ಸಾಧ್ಯವಾಗಿಲ್ಲ. ಕರ್ನಾಟಕದ ಜನಸಂಖ್ಯೆ 7 ಕೋಟಿ ಇದೆ. 7.50 ಲಕ್ಷ ಮಂಜೂರಾಗಿರುವ ಹುದ್ದೆಗಳಿವೆ. 7 ಲಕ್ಷ ಜನ 7 ಕೋಟಿ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವ, ರಾಜ್ಯದ ಅಭಿವೃದ್ಧಿಯಲ್ಲಿ ಬಾಗಿಯಾಗುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನಮ್ಮನ್ನು 5 ವರ್ಷಕ್ಕೊಮ್ಮೆ ಆಯ್ಕೆ ಮಾಡಿದರೆ, ಸರ್ಕಾರಿ ಸೇವೆಗೆ ಸೇರಿದ ಮೇಲೆ ನಿವೃತ್ತಿಯಾಗುವವರೆಗೆ ನವೀಕರಣ ಮಾಡಿಸಿಕೊಳ್ಳುವ ಪ್ರಮೇಯವಿಲ್ಲ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಕರ್ನಾಟಕದ ಜನರ ಆಶೀರ್ವಾದವನ್ನು ನವೀಕರಿಸಿಕೊಳ್ಳಬೇಕು ಎಂದರು.

ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಬೇಕು

ರಾಜ್ಯದ ಜನ ನನಗೆ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅದರಲ್ಲಿ ನೀವೂ, ನಿಮ್ಮ ಕುಟುಂಬದವರೂ ಇದ್ದಾರೆ. 7 ಕೋಟಿ ಕನ್ನಡಿಗರ ಭಾಗವಾದ ಸರ್ಕಾರಿ ನೌಕಕರು, ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದೀರಿ ಎಂದು ಭಾವಿಸಿದ್ದೇನೆ. ನಮ್ಮ ಸಮಾಜದಲ್ಲಿ ಸಾಮಾಜಿಕ, ಆರ್ಥಿಕ ಸಮಾನತೆ ತರಬೇಕು. ನಾವೆಲ್ಲರೂ ಪ್ರಜಾಪ್ರಭುತ್ವದ ಮಾಲೀಕರ ಪರವಾಗಿ ಕೆಲಸ ಮಾಡಲು ಇರಬೇಕು ಎಂದರು.

ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ

ಸರ್ಕಾರ ನಿಮಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ. ಸರ್ಕಾರ ನಿಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಆದರೆ ಅದೇ ಮೊದಲ ಆದ್ಯತೆ ಅಲ್ಲ. ಅನ್ಯಾಯಗಳನ್ನು ಸರಿಪಡಿಸುವುದು ಸರ್ಕಾರದ ಕರ್ತವ್ಯ. ರಾಜ್ಯದ ಜನರ ಪರವಾಗಿ ಕೆಲಸ ಮಾಡಬೇಕಾಗಿರುವುದು ಮೊದಲನೇ ಆದ್ಯತೆ. ಬೇಡಿಕೆಗಳು ನಂತರದ ಆದ್ಯತೆ. ಇದನ್ನು ಸ್ಪಷ್ಟವಾಗಿ ನೀವು ಅರ್ಥಮಾಡಿಕೊಂಡಿದ್ದೀರಿ ಎನ್ನುವುದು ನನ್ನ ಅನಿಸಿಕೆ ಎಂದರು.

ನಾನು ಸರ್ಕಾರಿ ನೌಕರರ ಪರ

ಸರ್ಕಾರಿ ನೌಕರರ ಸಮಸ್ಯೆಗಳನ್ನು ಅರಿತು 7ನೇ ವೇತನ ಆಯೋಗ ರಚಿಸಲಾಗಿದ್ದು, 6ನೇ ವೇತನ ಆಯೋಗವನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. ಆ ಸಂದರ್ಭದಲ್ಲಿ ಸರ್ಕಾರಿ ನೌಕರರ ವಿರುದ್ಧವಿರುವುದಾಗಿ ನನ್ನ ಮೇಲೆ ಅರೋಪ ಮಾಡಿದ್ದರು. ಆದರೆ ನಾನೇ 6ನೇ ವೇತನ ಆಯೋಗವನ್ನು ರಚಿಸಿದ್ದೆವು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಕೆಲಸವಾಗಬೇಕು. 6ನೇ ವೇತನ ಆಯೋಗದಲ್ಲಿ ಶೇ. 30ರಷ್ಟು ಫಿಟ್ಮೆಂಟ್ ಸೌಲಭ್ಯ ನೀಡಲು 10,500 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿದೆ. ಈಗ 7 ನೇ ವೇತನ ಆಯೋಗದ ಮಧ್ಯಂತರ ವರದಿಯಂತೆ 17% ಹೆಚ್ಚಳ ಮಾಡಲಾಗಿತ್ತು. ಆಯೋಗದ ಅಂತಿಮ ವರದಿ ನೀಡಲು ಇನ್ನಷ್ಟು ಕಾಲಾವಕಾಶ ಬೇಕೆಂದು ಆಯೋಗದ ಆಧ್ಯಕ್ಷರು ಕೋರಿದ್ದು, ಮಾರ್ಚ್ 15 ರವರೆಗೆ ವರದಿ ನೀಡಲು ಸಮಯಾವಕಾಶ ನೀಡಲಾಗಿದೆ. ಲೋಕಸಭಾ ಚುನಾವಣೆಯ ಹಿನ್ನಲೆ , ಆಯೋಗದ ಅಂತಿಮ ವರದಿಯನ್ನು ಆದಷ್ಟು ಜಾಗ್ರತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ನಾನು ಸರ್ಕಾರಿ ನೌಕರರ ಪರವಾಗಿದ್ದೇನೆ ಎಂದು ತಿಳಿಸಿದರು.

ಭಾರತೀಯ ರಾಕೆಟ್ ಜಾಹೀರಾತಿನಲ್ಲಿ ಚೀನಾದ ಧ್ವಜ : ‘DMK ಸರ್ಕಾರ’ದ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ

BREAKING: ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ದ ರಾಯಭಾರಿಯಾಗಿ ‘ನಟ ಡಾಲಿ ಧನಂಜಯ್’ ನೇಮಕ

Share. Facebook Twitter LinkedIn WhatsApp Email

Related Posts

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM2 Mins Read

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM2 Mins Read

ಬೆಂಗಳೂರಿನ ಯಲಹಂಕದಲ್ಲಿ ನಿರ್ಮಿಸಿರುವ ‘ನೂತನ ಕ್ವಾಟ್ರಾಸ್’ ಉದ್ಘಾಟಿಸಿದ CRPF ಮಹಾನಿರ್ದೇಶಕರು

05/08/2025 8:11 PM1 Min Read
Recent News

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

05/08/2025 8:46 PM

ಉತ್ತರಾಖಂಡ್ ಮೇಘಸ್ಫೋಟ: 8 ರಿಂದ 10 ಭಾರತೀಯ ಸೈನಿಕರು ನಾಪತ್ತೆ | Uttarkashi cloudburst

05/08/2025 8:42 PM

ದೇಶದ ಶೇ.60ರಷ್ಟು ಸಂಪತ್ತು ಕೇವಲ ಶೇ.1ರಷ್ಟು ಜನರ ಕೈಯಲ್ಲಿದೆ.! ಶ್ರೀಮಂತರು ಎಲ್ಲಿ ಹೂಡಿಕೆ ಮಾಡ್ತಾರೆ ಗೊತ್ತಾ.?

05/08/2025 8:34 PM

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM
State News
KARNATAKA

ಸಿಎಂ ಸಿದ್ಧರಾಮಯ್ಯ ಪ್ರಶ್ನೆಗಳಿಗೆ ಈ ಉತ್ತರ ಕೊಟ್ಟ ಆರ್.ಅಶೋಕ್

By kannadanewsnow0905/08/2025 8:46 PM KARNATAKA 2 Mins Read

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಆರೋಪಗಳಿಗೆ ಕಿಡಿಕಿಡಿಯಾಗೇ ತಿರುಗೇಟು ನೀಡಿದ್ದರು. ಈ ಬಳಿಕ ಆರ್.ಅಶೋಕ್…

ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ: ಅಶೋಕ್ ವಿರುದ್ಧ ಸಿಎಂ ಕಿಡಿ

05/08/2025 8:15 PM

ಬೆಂಗಳೂರಿನ ಯಲಹಂಕದಲ್ಲಿ ನಿರ್ಮಿಸಿರುವ ‘ನೂತನ ಕ್ವಾಟ್ರಾಸ್’ ಉದ್ಘಾಟಿಸಿದ CRPF ಮಹಾನಿರ್ದೇಶಕರು

05/08/2025 8:11 PM

GOOD NEWS: ಸರಳ ಸಾಮೂಹಿಕ ಮದುವೆಯಾಗೋ ಪ್ರತಿ ಜೋಡಿಗೆ 50,000: ಸಚಿವ ಜಮೀರ್ ಅಹ್ಮದ್ ಘೋಷಣೆ

05/08/2025 8:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.