Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ರಾಹಕರೇ ಗಮನಿಸಿ : `LPG ಸಿಲಿಂಡರ್’ ಡೆಲಿವರಿಗೆ ಯಾವುದೇ ಶುಲ್ಕ ಇಲ್ಲ.!

24/08/2025 7:03 AM

ಭಾರತವು 100 ದೇಶಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ರಫ್ತು ಮಾಡಲಿದೆ: ಪ್ರಧಾನಿ ಮೋದಿ

24/08/2025 7:01 AM

ಗಾಝಾದಲ್ಲಿ ಇಸ್ರೇಲ್ ದಾಳಿ: ಕನಿಷ್ಠ 51 ಮಂದಿ ಸಾವು | Israel-Hamas war

24/08/2025 6:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿದಿರು ಕೃಷಿ, ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆಗೆ ಪ್ರೋತ್ಸಾಹಕ್ಕೆ ಸರ್ಕಾರ ಬದ್ದ : ಸಚಿವ ಎನ್.ಚೆಲುವರಾಯಸ್ವಾಮಿ
INDIA

ಬಿದಿರು ಕೃಷಿ, ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆಗೆ ಪ್ರೋತ್ಸಾಹಕ್ಕೆ ಸರ್ಕಾರ ಬದ್ದ : ಸಚಿವ ಎನ್.ಚೆಲುವರಾಯಸ್ವಾಮಿ

By kannadanewsnow0729/06/2024 5:47 AM

ಬೆಂಗಳೂರು : ಬಿದಿರು ಕೃಷಿ, ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆಗೆ ಪ್ರೋತ್ಸಾಹ ಮತ್ತು ಬೆಂಬಲ ನೀಡಲು ಸರ್ಕಾರ ಬದ್ದವಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.

ಇಂದು ಕೃಷಿ ಇಲಾಖೆ ಆವರಣದ ಸಂಗಮ ಸಭಾಂಗಣದಲ್ಲಿ ಕೃಷಿ, ಜಲಾನಯನ ಅಭಿವೃದ್ಧಿ ಹಾಗೂ ಅರಣ್ಯ ಇಲಾಖೆಗಳು, ಕೃಷಿ ಅರಣ್ಯ ರೈತರ ಮತ್ತು ತಂತ್ರಜ್ಞರ ಸಂಸ್ಥೆ, ಬಿದಿರು ಸೊಸೈಟಿ ಆಫ್ ಇಂಡಿಯಾ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ರಾಜ್ಯಮಟ್ಟದ ಕಾರ್ಯಗಾರ ಹಾಗೂ ಬಿದಿರು ಕೃಷಿ, ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆ ಮತ್ತು ಬಿದಿರು ಮೌಲ್ಯವರ್ಧಿತ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ಬಿದಿರು ಕೃಷಿ, ಸಂಸ್ಕರಣೆ, ಮೌಲ್ಯವರ್ಧನೆ, ಮಾರುಕಟ್ಟೆ ಮತ್ತು ಬಿದಿರು ಮೌಲ್ಯವರ್ಧಿತ ವಸ್ತುಗಳ ಪ್ರದರ್ಶನವು ಉತ್ತಮವಾಗಿದೆ. ಇದು ರಾಜ್ಯ ಮಟ್ಟದಲ್ಲಿ ಬೆಳಕು ಚೆಲ್ಲುವ ಕಾರ್ಯಕ್ರಮವಾಗಿದೆ. ಬಿಡಿರಿನ ಉಪಯೋಗಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.

ಬಿದಿರನ್ನು ಸಂಸ್ಕರಣೆ ಮಾಡಿ ಉಪಯೋಗಿಸಬಹುದು. ಕಡಿಮೆ ನೀರು, ಕಡಿಮೆ ವೆಚ್ಚದಲ್ಲಿ ಬಿದಿರನ್ನು ಬೆಳೆಯಬಹುದು. ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆಯಂತೆ ದಿನ ನಿತ್ಯವು ಬಿದಿರಿನಿಂದ ತಯಾರಿಸಿದ ವಸ್ತುಗಳ ಪ್ರಯೋಜನ ಪಡೆಯುತ್ತೇವೆ. ಬಿದಿರಿನಿಂದ ಮಾಡಿದ ಪೀಠೋಪಕರಣಗಳು ಗಟ್ಟಿ ಇರುವುದರಿಂದ ದೀರ್ಘಕಾಲ ನಾವು ಬಳಸಬಹುದು. ಬಿದಿರು ಕೇವಲ ಸಣ್ಣ ಪುಟ್ಟ ಪೀಠೋಪಕರಣ, ಆಟಿಕೆ ತಯಾರಿಸಲು ಸೀಮಿತವಾಗಿಲ್ಲ. ಬದಲಿಗೆ ದೊಡ್ಡ ಪಿಠೋಪಕರಣ, ನಿರ್ಮಾಣ ಕ್ಷೇತ್ರದಲ್ಲೂ ವ್ಯಾಪಕವಾಗಿ ಬಳಕೆಯಲ್ಲಿದೆ ಎಂದರು.

ಕೆಂಪೇಗೌಡ ಬೆಂಗಳೂರು ಇಂಟರ್ ನ್ಯಾಷನಲ್ ಏರ್ ಪೋರ್ಟ್ ಟರ್ಮಿನಲ್ 2 ನಲ್ಲಿ ಒಳಾಂಗಣ ಮತ್ತು ಹೊರಾಂಗಣದಲ್ಲಿ ಬಿದಿರನ್ನು ಉಪಯೋಗಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಚಿವರು ಕೃಷಿ ಅರಣ್ಯ-ರೈತರಿಗೊಂದು ಆಶಾಕಿರಣ ವಿಶೇಚ ಸಂಚಿಕೆ ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸಿ.ಎನ್. ನಂದಿನಿಕುಮಾರಿ, ಕೃಷಿ ಇಲಾಖೆಯ ಆಯುಕ್ತರಾದ ವೈ.ಎಸ್.ಪಾಟೀಲ್, ಕೃಷಿಅರಣ್ಯ ರೈತರ ಮತ್ತು ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷರಾದ ಅಜಯ್ ಮಿಶ್ರಾ, ಕೃಷಿ ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿ ವಿ.ಕೆ.ಕಮತರ, ಬಿದಿರು ಸೊಸೈಟಿ ಆಪ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಕೆ.ಎನ್. ಮೂರ್ತಿ, ಕೃಷಿ ಅರಣ್ಯ ರೈತರ ಮತ್ತು ತಂತ್ರಜ್ಞರ ಸಂಸ್ಥೆಯ ಕಾರ್ಯದರ್ಶಿಗಳಾದ ಹೆಚ್.ಜಿ.ಶಿವಾನಂದ ಮೂರ್ತಿ ಸೇರಿದಂತೆ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Govt committed to promote bamboo cultivation processing value addition and marketing: Minister N Cheluvarayaswamy
Share. Facebook Twitter LinkedIn WhatsApp Email

Related Posts

ಭಾರತವು 100 ದೇಶಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ರಫ್ತು ಮಾಡಲಿದೆ: ಪ್ರಧಾನಿ ಮೋದಿ

24/08/2025 7:01 AM1 Min Read

ಗಾಝಾದಲ್ಲಿ ಇಸ್ರೇಲ್ ದಾಳಿ: ಕನಿಷ್ಠ 51 ಮಂದಿ ಸಾವು | Israel-Hamas war

24/08/2025 6:56 AM1 Min Read

ಗ್ರಾಹಕರ ಹಕ್ಕುಗಳನ್ನು ಬಲಪಡಿಸಲು 18 ವರ್ಷಗಳ ಕಾನೂನು ಅಂತರವನ್ನು ನಿಗದಿಪಡಿಸಿದ ಸುಪ್ರೀಂ ಕೋರ್ಟ್

24/08/2025 6:51 AM2 Mins Read
Recent News

ಗ್ರಾಹಕರೇ ಗಮನಿಸಿ : `LPG ಸಿಲಿಂಡರ್’ ಡೆಲಿವರಿಗೆ ಯಾವುದೇ ಶುಲ್ಕ ಇಲ್ಲ.!

24/08/2025 7:03 AM

ಭಾರತವು 100 ದೇಶಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ರಫ್ತು ಮಾಡಲಿದೆ: ಪ್ರಧಾನಿ ಮೋದಿ

24/08/2025 7:01 AM

ಗಾಝಾದಲ್ಲಿ ಇಸ್ರೇಲ್ ದಾಳಿ: ಕನಿಷ್ಠ 51 ಮಂದಿ ಸಾವು | Israel-Hamas war

24/08/2025 6:56 AM

ರಾಜ್ಯದಲ್ಲಿ ಗಣೇಶ ಹಬ್ಬ, ಈದ್ ಮಿಲಾದ್‌ಗೆ `ಡಿಜೆ’ ನಿಷೇಧ : ಪೊಲೀಸರ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು.!

24/08/2025 6:54 AM
State News
KARNATAKA

ಗ್ರಾಹಕರೇ ಗಮನಿಸಿ : `LPG ಸಿಲಿಂಡರ್’ ಡೆಲಿವರಿಗೆ ಯಾವುದೇ ಶುಲ್ಕ ಇಲ್ಲ.!

By kannadanewsnow5724/08/2025 7:03 AM KARNATAKA 1 Min Read

ಬೆಂಗಳೂರು : ಆಗಸ್ಟ್-2025 ರ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರನ್ನು ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ…

ರಾಜ್ಯದಲ್ಲಿ ಗಣೇಶ ಹಬ್ಬ, ಈದ್ ಮಿಲಾದ್‌ಗೆ `ಡಿಜೆ’ ನಿಷೇಧ : ಪೊಲೀಸರ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು.!

24/08/2025 6:54 AM

ತುಮಕೂರು ವಿವಿಗೆ `ಡಾ.ಶಿವಕುಮಾರ ಸ್ವಾಮೀಜಿ’ ಹೆಸರು ಮರುನಾಮಕರಣ : ರಾಜ್ಯ ಸರ್ಕಾರಕ್ಕೆ ವಿ.ಸೋಮಣ್ಣ ಪತ್ರ

24/08/2025 6:45 AM

ಸಾರಿಗೆ ನೌಕರರಿಗೆ `ಅನುಕಂಪ’ ಆಧಾರದಲ್ಲಿ ಉದ್ಯೋಗ : ಹೈಕೋರ್ಟ್ ಮಹತ್ವದ ಆದೇಶ

24/08/2025 6:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.