Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಬೈಲ್ ನಲ್ಲಿರುವ `USB ಪೋರ್ಟ್’ ಕೇವಲ್ ಚಾರ್ಜಿಂಗ್ ಗೆ ಮಾತ್ರವಲ್ಲ, ಇವುಗಳಿಗೂ ಬಳಸಬಹುದು : ಶೇ90% ಜನರಿಗೆ ತಿಳಿದಿಲ್ಲ!

09/02/2026 11:41 AM
BIG BREAKING NEWS: Mild tremors felt again in Kodagu's Sampaje

BREAKING: ಬಾಂಗ್ಲಾದಲ್ಲಿ 3.3 ತೀವ್ರತೆಯ ಭೂಕಂಪ | Earthquake

09/02/2026 11:41 AM

BREAKING : ವಿಜಯಪುರದಲ್ಲಿ ಹಾಡಹಗಲೇ ಸರಗಳ್ಳರ ಅಟ್ಟಹಾಸ : ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕದ್ದು ಪರಾರಿ!

09/02/2026 11:32 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕೂ ಇದೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ
KARNATAKA

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ದಂಧೆಗೆ ಸರ್ಕಾರದ ಕುಮ್ಮಕ್ಕೂ ಇದೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

By kannadanewsnow0925/01/2025 6:07 PM

ಬೆಂಗಳೂರು: ಮೈಕ್ರೋ ಫೈನಾನ್ಸ್ ದಂಧೆಗೆ ಸರಕಾರದ ಕುಮ್ಮಕ್ಕೂ ಇದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರಕಾರದ ಕುಮ್ಮಕ್ಕು ಇಲ್ಲದಿದ್ದರೆ ಇದು ಇಲ್ಲಿನವರೆಗೆ ಮುಂದುವರೆಯುತ್ತಿರಲಿಲ್ಲ; ಎರಡೂ ಕಡೆಯಿಂದ ವಸೂಲಿ ಮಾಡಲು ಪೊಲೀಸರಿಗೆ ಇದು ದಂಧೆಯಾಗಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅನೇಕರ ಮಾರಣಹೋಮ ಆದ ಬಳಿಕ ಸರಕಾರವು ಎಚ್ಚತ್ತು ಇವತ್ತು ಒಂದು ಸಭೆ ಕರೆದು ಮೈಕ್ರೋ ಫೈನಾನ್ಸ್ ವಿಚಾರದಲ್ಲಿ ಚರ್ಚೆ ನಡೆಸಿದೆ. ಹೊಸ ಕಾನೂನು ತರುವ ಮತ್ತು ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸ ಮಾಡುವುದಾಗಿ ತಿಳಿಸಿದೆ ಎಂದರು.

ಮೈಕ್ರೋ ಫೈನಾನ್ಸ್‍ಗಳ ಸಮಸ್ಯೆ ಕುರಿತು ಅನೇಕ ಮುಖಂಡರು ಗಮನ ಸೆಳೆದರೂ ಸರಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿತ್ತು. ಕೊನೆಗೂ ಇವತ್ತು ಒಂದು ತೀರ್ಮಾನಕ್ಕೆ ಬಂದಿದೆ. ಫೈನಾನ್ಸ್ ವಸೂಲಿಗೆ ತೊಂದರೆ ಕೊಟ್ಟರೆ, ಗೂಂಡಾಗಳನ್ನು ಕಳುಹಿಸಿದರೆ ಅವರನ್ನು ಬಂಧಿಸುವುದಾಗಿ ಹೇಳಿದ್ದಾರೆ. ಜನರ ಹಿತದೃಷ್ಟಿಯಿಂದ ಇದು ಸ್ವಾಗತಾರ್ಹ; ಕಾಂಗ್ರೆಸ್ ಸರಕಾರದ ಹಿತದೃಷ್ಟಿಯಿಂದ ಅಲ್ಲ ಎಂದು ತಿಳಿಸಿದರು.

ಮಂತ್ರಿಗಳು, ಶಾಸಕರಿಂದ ಆನ್‍ಲೈನ್ ಗೇಮ್ಸ್ ಕಂಪೆನಿ

ಮೈಕ್ರೋ ಫೈನಾನ್ಸ್‍ನಲ್ಲಿ ಆಗುವ ಅನಾಹುತಕ್ಕಿಂತ 10ರಷ್ಟು ಅನಾಹುತಗಳು ಆನ್‍ಲೈನ್ ಗೇಮ್ಸ್ ಮೂಲಕ ಆಗುತ್ತಿದೆ ಎಂದು ಅವರು ತಿಳಿಸಿದರು. ಸರಕಾರದ ಕೆಲವು ಮಂತ್ರಿಗಳು, ಶಾಸಕರು ಆನ್‍ಲೈನ್ ಗೇಮ್ಸ್ ಕಂಪೆನಿಗಳನ್ನು ಮಾಡಿಕೊಂಡು ಜನರಿಂದ ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅನೇಕ ಯುವಕರು ಬೀದಿಪಾಲಾಗುತ್ತಿದ್ದಾರೆ. ರಮ್ಮಿ ಆಟದ ಮೂಲಕ ಸುಲಭದಲ್ಲಿ ಹಣ ಬರುವ ಸಾಮಾಜಿಕ ಜಾಲತಾಣದ ಜಾಹೀರಾತುಗಳನ್ನು ನಂಬಿ ಜನರ ಪ್ರಾಣ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಎಷ್ಟೋ ಜನರು ಗೇಮ್‍ನಲ್ಲಿ ಸೋತ ಬಳಿಕ ಕಳ್ಳತನ ಮಾಡಿ ಆ ದುಡ್ಡು ಕಟ್ಟುತ್ತಾರೆ. ಇವತ್ತು ದರೋಡೆಗಳು, ಕಳ್ಳತನಗಳು ಇದೇ ಕಾರಣಕ್ಕಾಗಿ ಆಗುತ್ತಿವೆ ಎಂದು ತಿಳಿಸಿದರು.

ಇದರ ಬೇರು ಹುಡುಕಬೇಕಿದೆ. ಆನ್‍ಲೈನ್ ಗೇಮ್ ಕಾರಣದಿಂದ ಕಳ್ಳತನ, ದರೋಡೆ ಆಗುತ್ತಿದೆÉಂದು ವಿಶ್ಲೇಷಿಸಿದರು. ಅನೇಕರು ಕೆಲಸ ಬಿಟ್ಟು ಈ ಗೇಮ್ ಆಡುತ್ತಿದ್ದಾರೆ. ಇನ್ನೂ ಅನೇಕರು ಹೆಚ್ಚು ಸಾಲ ಮಾಡಿಕೊಂಡು ಕಟ್ಟಲಾಗದೆ ಪ್ರಾಣತ್ಯಾಗ ಮಾಡುತ್ತಿದ್ದಾರೆ ಎಂದು ವಿವರಿಸಿದರು. ಇದರ ಬಗ್ಗೆಯೂ ತೀಕ್ಷ್ಣ ಕ್ರಮ ಕೈಗೊಳ್ಳುವಂತೆ ಕೋರಿದರು. ಆನ್‍ಲೈನ್ ಗೇಮ್‍ನಲ್ಲಿ ಇರುವವರ ರಕ್ಷಣೆ ಮಾಡುತ್ತಿದ್ದಾರೆ ಎಂದು ದೂರಿದರು.

ಇದು ಹಗೆತನದ ರಾಜಕೀಯವಲ್ಲವೇ?

ಯದುವೀರ್ ಅವರು ಬಿಜೆಪಿ ಸಂಸದರಾಗಿದ್ದು, ಅವರ ಆಸ್ತಿಗಳ ಮೇಲೆ ಕಾಂಗ್ರೆಸ್ ಸರಕಾರ ಕಣ್ಣು ಹಾಕಿದೆ. ಒಂದು ಕಡೆ ಚಾಮುಂಡೇಶ್ವರಿ ಬೆಟ್ಟಕ್ಕೆ, ಅಲ್ಲಿನ ಆಸ್ತಿಗಳ ಮೇಲೆ ಕಣ್ಣು ಹಾಕಿದ್ದಾರೆ. ಇನ್ನೊಂದು ಕಡೆ ಬೆಂಗಳೂರಿನ ಅರಮನೆ ಮೇಲೆ ಕೂಡ ಕಣ್ಣು ಹಾಕಿದ್ದಾರೆ ಎಂದು ಆರೋಪಿಸಿದರು. ಅವರು ಕಾಂಗ್ರೆಸ್ಸಿನ ಸಂಸದರಾಗಿದ್ದರೆ ಅವರ ಆಸ್ತಿಗಳ ಮೇಲೆ ಕಣ್ಣು ಹಾಕುತ್ತಿರಲಿಲ್ಲ ಎಂದು ನುಡಿದರು. ಇದು ಹಗೆತನದ ರಾಜಕಾರಣವಲ್ಲವೇ ಎಂದು ಕೇಳಿದರು.

ಇದಕ್ಕೆ ಸುಗ್ರೀವಾಜ್ಞೆ ಬೇಕಿತ್ತೇ? ಸದಾಶಿವನಗರದಲ್ಲಿ ಒಂದಡಿ ಜಾಗಕ್ಕೆ ಒಂದು ಲಕ್ಷ ಇರಬಹುದು. ಇಂಥ ಪರಿಸ್ಥಿತಿಯಲ್ಲಿ ನೀವು ಯಾರ ಆಸ್ತಿಗೆ ಕಣ್ಣು ಹಾಕುತ್ತಿದ್ದೀರಿ? ಇದು ಹಗೆತನದ ಪರಮಾವಧಿಯ ರಾಜಕಾರಣ ಎಂದು ಟೀಕಿಸಿದರು.

BIG NEWS: ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ಗೆ ಸರ್ಕಾರ ಬ್ರೇಕ್: ಬಲವಂತವಾಗಿ ಸಾಲ ವಸೂಲಿ ಮಾಡೋರ ವಿರುದ್ಧ ‘ಕ್ರಿಮಿನಲ್ ಕೇಸ್’ ಫಿಕ್ಸ್

BREAKING : ರಾಜ್ಯದಲ್ಲಿ ಸಾಲಗಾರರ ಕಾಟಕ್ಕೆ ಸರಣಿ ಆತ್ಮಹತ್ಯೆ : ಚಾಮರಾಜನಗರದಲ್ಲಿ ಪತಿ ಮಾಡಿದ ಸಾಲಕ್ಕೆ ಪತ್ನಿ ಸೂಸೈಡ್!

Share. Facebook Twitter LinkedIn WhatsApp Email

Related Posts

ಮೊಬೈಲ್ ನಲ್ಲಿರುವ `USB ಪೋರ್ಟ್’ ಕೇವಲ್ ಚಾರ್ಜಿಂಗ್ ಗೆ ಮಾತ್ರವಲ್ಲ, ಇವುಗಳಿಗೂ ಬಳಸಬಹುದು : ಶೇ90% ಜನರಿಗೆ ತಿಳಿದಿಲ್ಲ!

09/02/2026 11:41 AM1 Min Read

BREAKING : ವಿಜಯಪುರದಲ್ಲಿ ಹಾಡಹಗಲೇ ಸರಗಳ್ಳರ ಅಟ್ಟಹಾಸ : ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕದ್ದು ಪರಾರಿ!

09/02/2026 11:32 AM1 Min Read

ಗಮನಿಸಿ : ಪೋಷಕರು `ವಿಲ್’ ಬರೆಯದೆ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

09/02/2026 11:28 AM5 Mins Read
Recent News

ಮೊಬೈಲ್ ನಲ್ಲಿರುವ `USB ಪೋರ್ಟ್’ ಕೇವಲ್ ಚಾರ್ಜಿಂಗ್ ಗೆ ಮಾತ್ರವಲ್ಲ, ಇವುಗಳಿಗೂ ಬಳಸಬಹುದು : ಶೇ90% ಜನರಿಗೆ ತಿಳಿದಿಲ್ಲ!

09/02/2026 11:41 AM
BIG BREAKING NEWS: Mild tremors felt again in Kodagu's Sampaje

BREAKING: ಬಾಂಗ್ಲಾದಲ್ಲಿ 3.3 ತೀವ್ರತೆಯ ಭೂಕಂಪ | Earthquake

09/02/2026 11:41 AM

BREAKING : ವಿಜಯಪುರದಲ್ಲಿ ಹಾಡಹಗಲೇ ಸರಗಳ್ಳರ ಅಟ್ಟಹಾಸ : ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕದ್ದು ಪರಾರಿ!

09/02/2026 11:32 AM

ಗೇಮಿಂಗ್ ವ್ಯಸನಕ್ಕೆ ಮತ್ತೊಂದು ಬಲಿ: ಮೊಬೈಲ್‌ನಲ್ಲಿ ಮುಳುಗಿದ್ದ ಯುವಕನ ಮೆದುಳು ನಿಷ್ಕ್ರಿಯ!

09/02/2026 11:28 AM
State News
KARNATAKA

ಮೊಬೈಲ್ ನಲ್ಲಿರುವ `USB ಪೋರ್ಟ್’ ಕೇವಲ್ ಚಾರ್ಜಿಂಗ್ ಗೆ ಮಾತ್ರವಲ್ಲ, ಇವುಗಳಿಗೂ ಬಳಸಬಹುದು : ಶೇ90% ಜನರಿಗೆ ತಿಳಿದಿಲ್ಲ!

By kannadanewsnow5709/02/2026 11:41 AM KARNATAKA 1 Min Read

ನಿಮ್ಮ ಸ್ಮಾರ್ಟ್ ಫೋನ್ ನಲ್ಲಿರುವ USB ಟೈಪ್-ಸಿ ಪೋರ್ಟ್ ಕೇವಲ ಚಾರ್ಜಿಂಗ್ಗೆ ಮಾತ್ರವಲ್ಲ. ನೀವು ಇದನ್ನು ಐದು ಇತರ ವಿಧಾನಗಳಲ್ಲಿ…

BREAKING : ವಿಜಯಪುರದಲ್ಲಿ ಹಾಡಹಗಲೇ ಸರಗಳ್ಳರ ಅಟ್ಟಹಾಸ : ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕದ್ದು ಪರಾರಿ!

09/02/2026 11:32 AM

ಗಮನಿಸಿ : ಪೋಷಕರು `ವಿಲ್’ ಬರೆಯದೆ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

09/02/2026 11:28 AM

`ತಾಳಿ ಕಟ್ಟುವ ಶುಭವೇಳೆ’ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟ ಮೊದಲ ಪತ್ನಿ : ಪತಿಯ 2ನೇ ಮದುವೆ ಕ್ಯಾನ್ಸಲ್.!

09/02/2026 11:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.