ಬೆಂಗಳೂರು: ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ನಿವಾಸದ ಎದುರು ಎಬಿವಿಪಿ ಕಾರ್ಯಕರ್ತರು ಎಸ್ ಡಿ ಪಿಐ ಸಂಘಟನೆ ಸೇರಿದಂತೆ ಇತರೆ ಕೋಮು ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಗೃಹ ಸಚಿವರು ಏನ್ ಹೇಳಿದ್ರು ಅಂತ ಮುಂದೆ ಓದಿ..
BREAKING NEWS: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಇಬ್ಬರು ಆರೋಪಿಗಳಿಗೆ 5 ಪೊಲೀಸ್ ಕಸ್ಟಡಿ
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, ಡಿ ಜಿ ಹಳ್ಳಿ, ಕೆಜಿ ಹಳ್ಳಿ ಗಳಭೆಗಳಿಂದ ಹಿಡಿದು, ಇತ್ತೀಚಿಗಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಂತಹ ಘಟನೆಗಳ ಹಿನ್ನಲೆಯಲ್ಲಿ, ಎಸ್ ಡಿ ಪಿ ಐ ಯಂಥ ಸಂಸ್ಥೆಗಳ ಮೇಲೆ ನಿಷೇಧ ಹೇರಬೇಕು ಎಂಬ ಬೇಡಿಕೆಯೊಂದಿಗೆ, ಪ್ರತಿಭಟನೆಯನ್ನು ಎಬಿವಿಪಿ ಕಾರ್ಯಕರ್ತರು ನಡೆಸಿದ್ದಾರೆ. ನಾನು ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ, ಹಾಗೂ ಸರಕಾರವೂ ಆ ನಿಟ್ಟಿನಲ್ಲಿ ಯೋಚಿಸುತ್ತಿದೆ ಎಂದು ಹೇಳಿದ್ದಾರೆ.
ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ABVP ಯ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂಬುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.