Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Retirement simplified pension application

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

09/05/2025 6:19 PM

ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮ

09/05/2025 6:19 PM

ಮಡಿಕೇರಿ: ವಿದ್ಯುತ್ ಅಡಚಣೆ: ಸಹಾಯವಾಣಿ ಕೇಂದ್ರ ಆರಂಭ

09/05/2025 6:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: DKS
KARNATAKA

ತುಂಗಭದ್ರ ಆಣೆಕಟ್ಟಿನಲ್ಲಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರಿನ ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ: DKS

By kannadanewsnow0913/03/2025 4:21 PM

ಬೆಂಗಳೂರು : “ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು.

ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು “ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ ಹಾಗೂ ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ. ನಾವು ನಮ್ಮ ಪಾಲಿನ ನೀರು ಉಳಿಸಿಕೊಳ್ಳಲು ಬದ್ಧವಾಗಿದ್ದೇವೆ” ಎಂದರು.

ಮಾ.18 ಕ್ಕೆ ಪೆನ್ನಾರ್ ಕುರಿತು ಚರ್ಚೆ

“ಇದೇ 18 ರಂದು ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಕರೆದಿದ್ದಾರೆ. ಅಂದು ನವಲಿ ಅಣೆಕಟ್ಟು ನಿರ್ಮಾಣ ಹಾಗೂ ಪರ್ಯಾಯ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ಮಾಡಲಾಗುವುದು” ಎಂದರು.

“ಈ ವಿಚಾರವಾಗಿ ಆಂದ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿ, ಪತ್ರ ಕೂಡ ಬರೆದಿದ್ದೇನೆ. ರಾಜಸ್ಥಾನದ ಉದಯಪುರಲ್ಲಿ ನಡೆದ ಸಮಾವೇಶದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜಲಸಂಪನ್ಮೂಲ ಸಚಿವರ ಜತೆ ಚರ್ಚೆ ಮಾಡಿದ್ದು, ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಈ ಯೋಜನೆ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿ ಚರ್ಚೆ ಮಾಡಲು ಸಮಯ ನೀಡಿ ಎಂದು ಕೇಳಿದ್ದೆ. ಎರಡು ರಾಜ್ಯಗಳ ಜತೆ ಚರ್ಚೆ ಮಾಡಿದ ನಂತರ ತುಂಗಭದ್ರಾ ಮಂಡಳಿ ಮುಂದೆ ಈ ಯೋಜನೆಗಳ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದೆ. ಆಂಧ್ರಪ್ರದೇಶ ಸಿಎಂ ಅವರು ಈ ವಿಚಾರವಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

“ತುಂಗಾಭದ್ರ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅನೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ” ಎಂದರು.

“ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಸಮಯಾವಕಾಶ ನೀಡಿದ ತಕ್ಷಣ ನಾನೇ ಖುದ್ದಾಗಿ ಹೋಗಿ ಮಾತನಾಡುವೆ. ಸಚಿವ ಬೋಸ್ ರಾಜು, ಆ ಭಾಗದ ಇತರೆ ಸಚಿವರು ಹಾಗೂ ಶಾಸಕರು ಈ ಕೆಲಸ ಆಗಲೇಬೇಕು ಎಂದು ಬೆನ್ನು ಹತ್ತಿದ್ದಾರೆ. ಈಗಾಗಲೇ ನಾನು, ಬೋಸರಾಜು ಹಾಗೂ ಸಚಿವ ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

“ಈ ಹಿಂದಿನ ಸರ್ಕಾರಗಳು ಸಹ ಹೂಳು ತೆಗೆಯಲು ಕ್ರಮ ತೆಗೆದುಕೊಂಡಿದ್ದವು. ಈ ಬಗ್ಗೆ ನಾವು ಪ್ರಯತ್ನ ಮಾಡಿದ್ದೇವೆ. ಆದರೆ 30 ಟಿಎಂಸಿಯಷ್ಟು ನೀರು ಹಿಡಿಯುವ ಹೂಳನ್ನು ತೆಗೆದು ಎಲ್ಲಿ ಹಾಕುವುದು ಎನ್ನುವುದು ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ” ಎಂದರು.

“ಕಳೆದ ವರ್ಷ ತುಂಗಾಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ, ನಾನು ಅಣೆಕಟ್ಟು ಉಳಿಯುವುದಿಲ್ಲ ಎಂದು ಆತಂಕಗೊಂಡಿದ್ದೆ. ನಾನು ಅಲ್ಲಿಗೆ ಭೇಟಿ ನೀಡಿದಾಗ ಇಡೀ ಡ್ಯಾಂ ಅಲ್ಲಾಡುತ್ತಿತ್ತು. ರಾತ್ರೋ ರಾತ್ರಿ ಅಲ್ಲಿಗೆ ತೆರಳಿ ಗೇಟ್ ದುರಸ್ಥಿಗೊಳಿಸಲು ಕ್ರಮ ತೆಗೆದುಕೊಳ್ಳಲಾಯಿತು. ತಾಂತ್ರಿಕ ತಜ್ಞರಾದ ಕನ್ನಯ್ಯ ನಾಯ್ಡು, ಜೆಎಸ್ ಡ್ಬ್ಯೂ ಹಾಗೂ ಇತರೇ ಸಂಸ್ಥೆಗಳ ಜತೆ ಮಾಡನಾಡಿ ಎಲ್ಲರ ಪರಿಶ್ರಮದಿಂದ ಒಂದು ವಾರಕ್ಕೆ ಗೇಟ್ ದುರಸ್ಥಿ ಮಾಡಿ ನೀರು ನಿಲ್ಲಿಸಲಾಯಿತು” ಎಂದು ಹೇಳಿದರು.

ಸೆನ್ಸೆಕ್ಸ್ 200.85 ಪಾಯಿಂಟ್ಸ್ ಕಳೆದುಕೊಂಡು ಕೊನೆ, ನಿಫ್ಟಿ 73.30 ಪಾಯಿಂಟ್ಸ್ ಕುಸಿತ | Sensex, Nifty Update

ಇಂದಿನ ದ್ವಿತೀಯ PUC ಪರೀಕ್ಷೆ-1ಕ್ಕೆ 3.5 ಲಕ್ಷ ವಿದ್ಯಾರ್ಥಿಗಳು ಹಾಜರ್, ಓರ್ವ ಡಿಬಾರ್ | Karnataka 2nd PUC Exam

Share. Facebook Twitter LinkedIn WhatsApp Email

Related Posts

Retirement simplified pension application

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

09/05/2025 6:19 PM2 Mins Read

ಮಡಿಕೇರಿ: ವಿದ್ಯುತ್ ಅಡಚಣೆ: ಸಹಾಯವಾಣಿ ಕೇಂದ್ರ ಆರಂಭ

09/05/2025 6:18 PM2 Mins Read

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

09/05/2025 5:15 PM3 Mins Read
Recent News
Retirement simplified pension application

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

09/05/2025 6:19 PM

ಭಾರತದ ಗಡಿ ನಿಯಂತ್ರಣ ರೇಖೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮ

09/05/2025 6:19 PM

ಮಡಿಕೇರಿ: ವಿದ್ಯುತ್ ಅಡಚಣೆ: ಸಹಾಯವಾಣಿ ಕೇಂದ್ರ ಆರಂಭ

09/05/2025 6:18 PM

BREAKING: ಪೂಂಚ್ ನಲ್ಲಿ ಪಾಕ್ ಸೇನೆ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಬಲಿ: ಕೇಂದ್ರ ಸರ್ಕಾರ

09/05/2025 6:13 PM
State News
Retirement simplified pension application KARNATAKA

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

By kannadanewsnow0709/05/2025 6:19 PM KARNATAKA 2 Mins Read

ಬೆಂಗಳೂರು: 2025-26ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ವಿವಿಧ ಸಂಸ್ಥೆಗಳಲ್ಲಿನ…

ಮಡಿಕೇರಿ: ವಿದ್ಯುತ್ ಅಡಚಣೆ: ಸಹಾಯವಾಣಿ ಕೇಂದ್ರ ಆರಂಭ

09/05/2025 6:18 PM

ದಶಕಗಳ ಬೇಡಿಕೆಗೆ ಅಡಿಗಲ್ಲು ಇಟ್ಟ ಶಾಸಕ ಕೆ.ಎಂ.ಉದಯ್ : 90 ಕೋಟಿ ರೂ ವೆಚ್ಚದಲ್ಲಿ ಕೆಮ್ಮಣ್ಣುನಾಲಾ ಅಭಿವೃದ್ಧಿಗೆ ಚಾಲನೆ

09/05/2025 5:15 PM

ಭಾರತ-ಪಾಕ್ ನಡುವೆ ಉದ್ವಿಗ್ನತೆ: ರಾಜ್ಯದ KPCL ವಿದ್ಯುತ್ ಸ್ಥಾವರ, ಜಲಾಶಯಗಳಿಗೆ ಹೆಚ್ಚಿನ ಭದ್ರತೆ

09/05/2025 4:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.