Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅಮೆರಿಕದ `ಇಸ್ಕಾನ್’ ದೇವಾಲಯದ ಮೇಲೆ ಗುಂಡಿನ ದಾಳಿ | ISKCON Temple

02/07/2025 8:33 AM

BIG NEWS : ರಾಜ್ಯದ ಎಲ್ಲಾ ಶಾಲಾಗಳಲ್ಲಿ `ಪ್ರತಿಭಾಕಾರಂಜಿ/ಕಲೋತ್ಸವ’ ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

02/07/2025 8:24 AM

BREAKING: ಭಾರತ-ಚೀನಾ ಮೇಲೆ ಶೇ.500ರಷ್ಟು ಸುಂಕ ವಿಧಿಸಲು ಅಮೇರಿಕಾ ಮಸೂದೆ ಪ್ರಸ್ತಾವನೆ

02/07/2025 8:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ನಗರಕ್ಕೆ ಹೊಸ ರೂಪ ನೀಡಲು ಹಲವು ಯೋಜನೆಗಳಿಗೆ ಸರ್ಕಾರ ನಿರ್ಧಾರ : ಡಿಸಿಎಂ ಡಿಕೆ ಶಿವಕುಮಾರ್
KARNATAKA

ಬೆಂಗಳೂರು ನಗರಕ್ಕೆ ಹೊಸ ರೂಪ ನೀಡಲು ಹಲವು ಯೋಜನೆಗಳಿಗೆ ಸರ್ಕಾರ ನಿರ್ಧಾರ : ಡಿಸಿಎಂ ಡಿಕೆ ಶಿವಕುಮಾರ್

By kannadanewsnow0530/01/2024 5:52 AM

ಬೆಂಗಳೂರು : ಬೆಂಗಳೂರು ನಗರಕ್ಕೆ ಹೊಸ ರೂಪ ತರಲು ಕಾಂಗ್ರೆಸ್‌ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಹಲವು ತೀರ್ಮಾನಗಳನ್ನು ಬಿಬಿಎಂಪಿ ಸಭೆಯಲ್ಲಿ ಡಿಕೆ ಶಿವಕುಮಾರ್‌ ಕೈಗೊಂಡಿದ್ದಾರೆ. ಬಿಬಿಎಂಪಿಯ 2024-25ನೇ ಸಾಲಿನ ಆಯವ್ಯಯಕ್ಕೆ ಸಂಬಂಧಿಸಿದಂತೆ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್‌ ಹಾಗೂ ರಾಜ್ಯಸಭಾ ಸದಸ್ಯರೊಂದಿಗೆ ಸೋಮವಾರ ವಿಕಾಸಸೌಧದಲ್ಲಿಸಭೆ ನಡೆಸಿ ಸಲಹೆ, ಸೂಚನೆಗಳನ್ನು ಪಡೆದರು.

ನಗರದ ಕೆಲ ಬಡಾವಣೆಗಳು ಯೋಜಿತವಾಗಿ ನಿರ್ಮಾಣಗೊಂಡಿದ್ದು, ಉಳಿದ ಪ್ರದೇಶಗಳು ಯೋಜಿತವಾಗಿ ಬೆಳೆದಿಲ್ಲ. ಹೀಗಾಗಿ, ಬೆಂಗಳೂರಿಗೆ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ. ನಗರದಲ್ಲಿ ಸಂಚಾರ ದಟ್ಟಣೆ, ಕುಡಿಯುವ ನೀರು, ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿವೆ. 2013 ರಿಂದ ಕುಡಿಯುವ ನೀರಿನ ದರ ಹೆಚ್ಚಳ ಮಾಡಿಲ್ಲ.

ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ಸಮರ್ಪಕವಾಗಿ ತೆರಿಗೆ ಪಾವತಿಯಾಗುತ್ತಿಲ್ಲ. ಶೇ 50ರಷ್ಟು ಮಂದಿ ತಮ್ಮ ಆಸ್ತಿ ವಿಸ್ತೀರ್ಣಕ್ಕೆ ಅನುಗುಣವಾಗಿ ತೆರಿಗೆ ಪಾವತಿಸದಿರುವುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿಆಸ್ತಿ ದಾಖಲೆಗಳ ಡಿಜಿಟಲೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

2020ರಲ್ಲಿ ಬಿಬಿಎಂಪಿ ಕಾಯಿದೆಗೆ ತಿದ್ದುಪಡಿ ತಂದು ದಂಡದ ಪ್ರಮಾಣ ಹೆಚ್ಚಿಸಲಾಗಿದೆ. ಇದನ್ನು ಯಾರೊಬ್ಬರೂ ಗಮನಿಸಿಲ್ಲ. ಹೀಗಾಗಿ, ಕಾನೂನಿಗೆ ಮತ್ತೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಎಲ್ಲ ಸಮಸ್ಯೆಗಳನ್ನು ಒಂದೊಂದಾಗಿ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ಇದಕ್ಕಾಗಿ ಬಿಡಿಎ, ಬಿಬಿಎಂಪಿ, ಜಲಮಂಡಳಿ ಹಾಗೂ ಬೆಸ್ಕಾಂ ಒಟ್ಟಾಗಿ ಕೆಲಸ ಮಾಡಬೇಕಿದೆ,” ಎಂದರು.

ಸುಪ್ರೀಂಕೋರ್ಟ್‌ ಆದೇಶದಂತೆ 6 ಟಿಎಂಸಿ ನೀರನ್ನು ನಗರಕ್ಕೆ ಬಳಸಲು ಸರಕಾರಿ ಆದೇಶ ಹೊರಡಿಸಲಾಗಿದೆ. ಆ ಮೂಲಕ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ. ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌, ಹೋರ್ಡಿಂಗ್ಸ್‌ಗಳನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಘಿಸಿದವರಿಗೆ ದಂಡ ಹಾಕಲಾಗುತ್ತಿದೆ. ಪಾಲಿಕೆ ಅಧಿಕಾರಿಗಳು ನನಗೂ ದಂಡ ಹಾಕಿದ್ದಾರೆ. ಯಾವುದೇ ಪಕ್ಷ, ನಾಯಕರು ಅನಧಿಕೃತವಾಗಿ ಫ್ಲೆಕ್ಸ್‌ ಅಳವಡಿಸಿದರೂ ಕಾನೂನುರೀತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಲ್ಲದಿದ್ದರೆ, ಫ್ಲೆಕ್ಸ್‌ ಹಾವಳಿ ನಿಯಂತ್ರಣ ಕಷ್ಟ,ಎಂದು ಹೇಳಿದರು.

ಸಭೆಯಲ್ಲಿ ಸಚಿವರಾದ ಕೆ.ಜೆ.ಜಾರ್ಜ್‌, ದಿನೇಶ್‌ ಗುಂಡೂರಾವ್‌, ಕೃಷ್ಣ ಬೈರೇಗೌಡ, ಜಮೀರ್‌ ಅಹ್ಮದ್‌, ಸಂಸದ ಡಿ.ಕೆ.ಸುರೇಶ್‌, ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಎಂ.ಕೃಷ್ಣಪ್ಪ, ಎಸ್‌.ಸುರೇಶ್‌ ಕುಮಾರ್‌, ರವಿ ಸುಬ್ರಮಣ್ಯ, ಮುನಿರಾಜು, ಉದಯ್‌ ಗರುಡಾಚಾರ್‌, ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಟಿ.ಎ.ಶರವಣ, ಯು.ಬಿ.ವೆಂಕಟೇಶ್‌ ಮತ್ತಿತರರು ಭಾಗವಹಿಸಿದ್ದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲಾ ಶಾಲಾಗಳಲ್ಲಿ `ಪ್ರತಿಭಾಕಾರಂಜಿ/ಕಲೋತ್ಸವ’ ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

02/07/2025 8:24 AM2 Mins Read

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ಅಪ್ಲೋಡ್ ಮಾಡಲು ಸೂಚನೆ.!

02/07/2025 8:13 AM1 Min Read

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

02/07/2025 8:01 AM1 Min Read
Recent News

BREAKING : ಅಮೆರಿಕದ `ಇಸ್ಕಾನ್’ ದೇವಾಲಯದ ಮೇಲೆ ಗುಂಡಿನ ದಾಳಿ | ISKCON Temple

02/07/2025 8:33 AM

BIG NEWS : ರಾಜ್ಯದ ಎಲ್ಲಾ ಶಾಲಾಗಳಲ್ಲಿ `ಪ್ರತಿಭಾಕಾರಂಜಿ/ಕಲೋತ್ಸವ’ ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

02/07/2025 8:24 AM

BREAKING: ಭಾರತ-ಚೀನಾ ಮೇಲೆ ಶೇ.500ರಷ್ಟು ಸುಂಕ ವಿಧಿಸಲು ಅಮೇರಿಕಾ ಮಸೂದೆ ಪ್ರಸ್ತಾವನೆ

02/07/2025 8:18 AM

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ಅಪ್ಲೋಡ್ ಮಾಡಲು ಸೂಚನೆ.!

02/07/2025 8:13 AM
State News
KARNATAKA

BIG NEWS : ರಾಜ್ಯದ ಎಲ್ಲಾ ಶಾಲಾಗಳಲ್ಲಿ `ಪ್ರತಿಭಾಕಾರಂಜಿ/ಕಲೋತ್ಸವ’ ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆ ಮಹತ್ವದ ಆದೇಶ.!

By kannadanewsnow5702/07/2025 8:24 AM KARNATAKA 2 Mins Read

ಬೆಂಗಳೂರು : 2025-26 ನೇ ಸಾಲಿನ ಪ್ರತಿಭಾಕಾರಂಜಿ/ಕಲೋತ್ಸವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.…

ರೈತರೇ ಗಮನಿಸಿ : ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ಅಪ್ಲೋಡ್ ಮಾಡಲು ಸೂಚನೆ.!

02/07/2025 8:13 AM

BIG NEWS : ಜುಲೈ 5ರಿಂದ ರಾಜ್ಯಾದ್ಯಂತ ʻSSLC ಪರೀಕ್ಷೆ-3ʼ : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | Karnataka SSLC Exam-3

02/07/2025 8:01 AM

SHOCKING : ರಾಜ್ಯದಲ್ಲಿ ನಿನ್ನೆ ಒಂದೇ ದಿನ `ಹೃದಯಾಘಾತ’ಕ್ಕೆ 6 ಮಂದಿ ಬಲಿ : ಜನರಲ್ಲಿ ಹೆಚ್ಚಿದ ಆತಂಕ | Heart attack

02/07/2025 7:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.