Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿ ಮತ್ತೆರಡು ಚಿರತೆಗಳ ಕಳೇಬರ ಪತ್ತೆ

13/07/2025 9:58 PM

BREAKING: ಲಂಡನ್‌ ವಿಮಾನ ನಿಲ್ದಾಣದಲ್ಲಿ ಬಿಸಿನೆಸ್ ಜೆಟ್ ಪತನ

13/07/2025 9:52 PM

ರಾಜ್ಯದ ಹಾಲು ಉತ್ಪಾದಕರಿಗೆ ಡಿ.ಕೆ ಸುರೇಶ್ ಗುಡ್ ನ್ಯೂಸ್: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ

13/07/2025 9:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಯೋಧ್ಯೆಗೆ ಹೋಗೋರನ್ನ ಬೆದರಿಸಲು ಸರ್ಕಾರ ಪ್ರಯತ್ನ, ಶ್ರೀಕಾಂತ ಪೂಜಾರಿ ಕ್ರಿಮಿನಲ್‌ ಅಲ್ಲ – ಆರ್.ಅಶೋಕ್
KARNATAKA

ಅಯೋಧ್ಯೆಗೆ ಹೋಗೋರನ್ನ ಬೆದರಿಸಲು ಸರ್ಕಾರ ಪ್ರಯತ್ನ, ಶ್ರೀಕಾಂತ ಪೂಜಾರಿ ಕ್ರಿಮಿನಲ್‌ ಅಲ್ಲ – ಆರ್.ಅಶೋಕ್

By kannadanewsnow0904/01/2024 4:26 PM

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಮಂದಿರ ಉದ್ಘಾಟನೆಗೆ ಎಲ್ಲರಿಗೂ ಆಹ್ವಾನ ಕೊಡಬೇಕು ಎಂದು ನಿರೀಕ್ಷೆ ಮಾಡಬೇಕಿಲ್ಲ. ಆದರೆ ಆಹ್ವಾನವಿಲ್ಲ ಎಂದು ಹೇಳುವ ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ಶ್ರೀರಾಮ ಕಾಲ್ಪನಿಕ ವ್ಯಕ್ತಿ ಎಂದಿದ್ದರು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ. ಈ ಮಂದಿರ ನಿರ್ಮಾಣಕ್ಕಾಗಿ ಐನೂರು ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಆಗ ಬಿಜೆಪಿ ಕೂಡ ಇರಲಿಲ್ಲ. ಇದು ಎಲ್ಲ ರಾಮಭಕ್ತರಿಗೆ ಸೇರಿದೆ. ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ದೇವಸ್ಥಾನದ ಉದ್ಘಾಟನೆಗೆ ಹೋಗಿದ್ದು, ಪೂಜೆ ಮಾಡಲು ಒಳಗೆ ಹೋಗಿಲ್ಲ. ಆದರೆ ಮಸೀದಿಗೆ ಕರೆದರೆ ಟೋಪಿ ಹಾಕಿಕೊಂಡು ಓಡುತ್ತಾರೆ. ಕೇಸರಿ ಪೇಟವನ್ನು ಕೂಡ ಅವರು ಹಾಕಿಕೊಳ್ಳುವುದಿಲ್ಲ. ದೇವಸ್ಥಾನದ ಒಳಗೆ ಹೋಗಲು ಹಿಂಜರಿಯುತ್ತಾರೆ. ಕಾಂಗ್ರೆಸ್‌ ನಾಯಕರು ಒಂದು ಕಾಲದಲ್ಲಿ ರಾಮನ ಜನ್ಮ ಪ್ರಮಾಣಪತ್ರ ಕೇಳಿದ್ದರು, ರಾಮ ಕಾಲ್ಪನಿಕ ವ್ಯಕ್ತಿ ಎಂದು ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದರು ಎಂದರು.

ಕರಸೇವಕ ಶ್ರೀಕಾಂತ ಪೂಜಾರಿ ಅವರ ವಿರುದ್ಧ ಬೇರೆ ಪ್ರಕರಣಗಳಿವೆ ಎಂದು ಹೇಳುತ್ತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾಯಕರ ಮೇಲೆ ಬ್ರಹ್ಮಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೇರೆ ಪ್ರಕರಣಗಳಲ್ಲಿ ಯಾರೂ ಸಿಗದಿದ್ದಾಗ ಶ್ರೀಕಾಂತ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶ್ರೀಕಾಂತ ಅವರು ಗಾಯಗೊಂಡಿದ್ದು, ಬದುಕು ಸಾವಿನ ನಡುವೆ ಹೋರಾಡುತ್ತಿದ್ದಾರೆ. ಅವರನ್ನು ಬಂಧಿಸುವ ಅವಶ್ಯಕತೆ ಏನಿತ್ತು? ರಾಜ್ಯದಲ್ಲಿ ದೀರ್ಘಾವಧಿಯಿಂದ ಬಾಕಿ ಇರುವ ಸುಮಾರು 50-60 ಸಾವಿರ ಹಾಗೂ ಬೆಂಗಳೂರಿನಲ್ಲಿ ಸುಮಾರು 10 ಸಾವಿರ ಪ್ರಕರಣಗಳಿವೆ. ಎಲ್ಲರನ್ನೂ ಬಂಧಿಸಿದರೆ ಜೈಲಿನಲ್ಲಿರಿಸಲು ಜಾಗ ಇರುವುದಿಲ್ಲ. ಕಾಂಗ್ರೆಸ್‌ನವರು ಬೇಕಾದವರಿಗೆ ಕಾಫಿ ಕೊಟ್ಟು ಕಳಿಸುತ್ತಾರೆ. ಅವರು ಕ್ರಿಮಿನಲ್‌ ಎಂದು ಹೇಳುವ ಕಾಂಗ್ರೆಸ್‌ ಸರ್ಕಾರಕ್ಕೆ ನಾಚಿಕೆ ಇಲ್ಲ. ಅವರು ಕ್ರಿಮಿನಲ್‌ ಎನ್ನುವುದಾದರೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಡಿ.ಕೆ.ಶಿವಕುಮಾರ್‌, ಶಶಿ ತರೂರ್‌ ಯಾವ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಪ್ರಶ್ನೆ ಮಾಡಿದರು.

ಅದ್ದೂರಿ ಸ್ವಾಗತ ಕೋರಿದ್ದ ಕಾಂಗ್ರೆಸ್‌

ಕಾಂಗ್ರೆಸ್‌ ನಾಯಕರ ವಿರುದ್ಧ ಪ್ರಕರಣ ದಾಖಲಾದಾಗ ಎಲ್ಲರೂ ಪ್ರತಿಭಟಿಸಿದರು. ಕ್ರಿಮಿನಲ್‌ ಪ್ರಕರಣದಲ್ಲಿ ಬೇಲ್‌ ಪಡೆದು ಹೊರಬಂದಾಗ ಅದ್ದೂರಿ ಸ್ವಾಗತ ಕೋರಿದರು. ಆಟೋರಿಕ್ಷಾ ಓಡಿಸುವ ಬಡವರಿಗೆ ಒಂದು ಕಾನೂನು, ಶ್ರೀಮಂತರಿಗೆ ಒಂದು ಕಾನೂನು. ಸಿದ್ದರಾಮಯ್ಯನವರು ಶ್ರೀಮಂತರ ಪರ ವಕಾಲತ್ತು ವಹಿಸುತ್ತಿದ್ದಾರೆ. ನಾನು ಕೂಡ ಸಚಿವನಾಗಿದ್ದು, ಕಾಂಗ್ರೆಸ್‌ ಕಾರ್ಯಕರ್ತರನ್ನು ಲಾಂಗ್‌ ಪೆಂಡಿಂಗ್‌ ಕೇಸ್‌ ನೆಪದಲ್ಲಿ ಜೈಲಿಗೆ ಹಾಕಿಲ್ಲ. ಅಯೋಧ್ಯಾ ಶ್ರೀರಾಮಮಂದಿರ ಉದ್ಘಾಟನೆಗೆ ಅಡ್ಡಿಪಡಿಸಲು ಈ ರೀತಿ ಮಾಡುತ್ತಿದ್ದಾರೆ. ಗೋಧ್ರಾ ಹತ್ಯಾಕಾಂಡದ ಕುರಿತು ಬಿ.ಕೆ.ಹರಿಪ್ರಸಾದ್‌ ಹೇಳಿಕೆ ನೀಡಿ ಬೆದರಿಕೆ ಹಾಕಿದ್ದಾರೆ. ಹಿಂದೂ ರಾಷ್ಟ್ರವಾದರೆ ಇದು ಪಾಕಿಸ್ತಾನ ಆಗಲಿದೆ ಎಂದು ಮಾಜಿ ಶಾಸಕ ಯತೀಂದ್ರ ಹೇಳಿದ್ದಾರೆ. ಇದು ಎಂದಿಗೂ ಪಾಕಿಸ್ತಾನವಾಗಲು ಸಾಧ್ಯವಿಲ್ಲ. ಇದನ್ನು ಮುಸಲ್ಮಾನ ರಾಷ್ಟ್ರ ಮಾಡಬೇಕೆ ಎಂದು ಪ್ರಶ್ನಿಸಿದರು.

ಸಾವಿರಾರು ಕೋಟಿ ರೂಪಾಯಿ ಲೂಟಿ ಮಾಡಿದವರನ್ನು ಕಾಂಗ್ರೆಸ್‌ ಬಿಟ್ಟುಬಿಟ್ಟಿದೆ. ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕರೇ ಆರೋಪಿಗಳಾಗಿದ್ದಾರೆ. ಶ್ರೀಕಾಂತ ಪೂಜಾರಿಗೆ ಸಂಬಂಧಪಟ್ಟ ಪ್ರಕರಣದಲ್ಲಿ ಇತರರು ಅಪರಾಧಿ ಅಲ್ಲ, ದಾಖಲೆ ಇಲ್ಲ ಎಂದು ಆದೇಶ ಬಂದಿದೆ. ಶ್ರೀಕಾಂತರಿಗೆ ಕಾನೂನು ನೆರವು ಪಡೆಯಲು ಕೂಡ ಅವಕಾಶ ನೀಡಿಲ್ಲ. ತಲೆಮರೆಸಿಕೊಂಡಿದ್ದಾನೆಂದು ಮನೆಯ ಬಾಗಿಲಿಗೆ ಅಂಟಿಸಿದ ನೋಟಿಸ್‌ ತೋರಿಸಿ ಅಥವಾ ಎಫ್‌ಐಆರ್‌ ಪ್ರತಿ ತೋರಿಸಿ ಎಂದು ಸವಾಲು ಹಾಕಿದರು.

Good News : ‘ಕನಿಷ್ಠ ಬ್ಯಾಲೆನ್ಸ್’ ವಿಷಯದಲ್ಲಿ ‘RBI’ ಮಹತ್ವದ ನಿರ್ಧಾರ : ಈ ಖಾತೆದಾರರಿಗೆ ಬಿಗ್ ರಿಲೀಫ್

ಗಮನಿಸಿ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಮತ್ತೆರಡು ಚಿರತೆಗಳ ಕಳೇಬರ ಪತ್ತೆ

13/07/2025 9:58 PM1 Min Read

ರಾಜ್ಯದ ಹಾಲು ಉತ್ಪಾದಕರಿಗೆ ಡಿ.ಕೆ ಸುರೇಶ್ ಗುಡ್ ನ್ಯೂಸ್: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ

13/07/2025 9:45 PM4 Mins Read

ನಿದ್ರೆಯಲ್ಲಿದ್ದಾಗ ಎದೆ ಮೇಲೆ ಕೂತು ಯಾರೋ ಕತ್ತು ಹಿಸುಕಿದಂತೆ ಅನುಭವ ಆಗಿದೆಯೇ? ಇಲ್ಲಿದೆ ರಹಸ್ಯ

13/07/2025 9:10 PM3 Mins Read
Recent News

BREAKING: ರಾಜ್ಯದಲ್ಲಿ ಮತ್ತೆರಡು ಚಿರತೆಗಳ ಕಳೇಬರ ಪತ್ತೆ

13/07/2025 9:58 PM

BREAKING: ಲಂಡನ್‌ ವಿಮಾನ ನಿಲ್ದಾಣದಲ್ಲಿ ಬಿಸಿನೆಸ್ ಜೆಟ್ ಪತನ

13/07/2025 9:52 PM

ರಾಜ್ಯದ ಹಾಲು ಉತ್ಪಾದಕರಿಗೆ ಡಿ.ಕೆ ಸುರೇಶ್ ಗುಡ್ ನ್ಯೂಸ್: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ

13/07/2025 9:45 PM

ನಿದ್ರೆಯಲ್ಲಿದ್ದಾಗ ಎದೆ ಮೇಲೆ ಕೂತು ಯಾರೋ ಕತ್ತು ಹಿಸುಕಿದಂತೆ ಅನುಭವ ಆಗಿದೆಯೇ? ಇಲ್ಲಿದೆ ರಹಸ್ಯ

13/07/2025 9:10 PM
State News
KARNATAKA

BREAKING: ರಾಜ್ಯದಲ್ಲಿ ಮತ್ತೆರಡು ಚಿರತೆಗಳ ಕಳೇಬರ ಪತ್ತೆ

By kannadanewsnow0913/07/2025 9:58 PM KARNATAKA 1 Min Read

ಹಾಸನ: ಜಿಲ್ಲೆಯ ಕತ್ತರಿಘಟ್ಟ ರೈಲ್ವೆ ಟ್ರ್ಯಾಕ್ ಬಳಿಯಲ್ಲಿ ಎರಡು ಚಿರತೆಗಳ ಕಳೇಬರ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಸನ ಜಿಲ್ಲೆಯ…

ರಾಜ್ಯದ ಹಾಲು ಉತ್ಪಾದಕರಿಗೆ ಡಿ.ಕೆ ಸುರೇಶ್ ಗುಡ್ ನ್ಯೂಸ್: 2 ಹಸು ಖರೀದಿಗೆ 2 ಲಕ್ಷ ವರೆಗೂ ಸಾಲ ಸೌಲಭ್ಯ

13/07/2025 9:45 PM

ನಿದ್ರೆಯಲ್ಲಿದ್ದಾಗ ಎದೆ ಮೇಲೆ ಕೂತು ಯಾರೋ ಕತ್ತು ಹಿಸುಕಿದಂತೆ ಅನುಭವ ಆಗಿದೆಯೇ? ಇಲ್ಲಿದೆ ರಹಸ್ಯ

13/07/2025 9:10 PM

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಹಿನ್ನೀರಿನ ಜನರ ತ್ಯಾಗ ಪ್ರತೀಕ: ಶಾಸಕ ಗೋಪಾಲಕೃಷ್ಣ ಬೇಳೂರು

13/07/2025 9:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.