Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ವಸತಿ ರಹಿತ’ರಿಗೆ ಭರ್ಜರಿ ಗುಡ್ ನ್ಯೂಸ್ : ಫೆಬ್ರವರಿಯಲ್ಲಿ 10 ಸಾವಿರ ಮನೆ ವಿತರಣೆ!
KARNATAKA

ರಾಜ್ಯ ಸರ್ಕಾರದಿಂದ `ವಸತಿ ರಹಿತ’ರಿಗೆ ಭರ್ಜರಿ ಗುಡ್ ನ್ಯೂಸ್ : ಫೆಬ್ರವರಿಯಲ್ಲಿ 10 ಸಾವಿರ ಮನೆ ವಿತರಣೆ!

By kannadanewsnow57
vidhana soudha
vidhana soudha

ಬಳ್ಳಾರಿ : ಬರುವ ಫೆಬ್ರವರಿ ತಿಂಗಳಲ್ಲಿ ವಸತಿ ಇಲಾಖೆಯಿಂದ ಕಂಪ್ಲಿ ವಿಧಾನಸಭಾ ಕ್ಷೇತ್ರ ಭಾಗಕ್ಕೆ ಹೆಚ್ಚುವರಿಯಾಗಿ 10 ಸಾವಿರ ಮನೆಗಳನ್ನು ನೀಡಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಹೇಳಿದರು.

ಕಂಪ್ಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಮಂಜೂರು ಮಾಡಿ, ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಸಲುವಾಗಿ ಕಂಪ್ಲಿ ಪಟ್ಟಣದ ಎಸ್.ಎನ್.ಪೇಟೆ ಶಾಲಾ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ, ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರವು ಸರ್ವರಿಗೂ ಸೂರು ಸಿಗಲಿ ಎಂಬ ಉದ್ದೇಶ ಹೊಂದಿದೆ. ಈ ಹಿಂದೆ ವಿವಿಧ ಕಾರಣಗಳಿಂದಾಗಿ ನೆನೆಗುದಿಗೆ ಬಿದ್ದಿದ್ದ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನವಿದ್ದು, ಫೆಬ್ರವರಿ ತಿಂಗಳಲ್ಲಿ ಹಂತ ಹಂತವಾಗಿ ಮನೆ ವಿತರಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಇಲಾಖೆಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅನುದಾನದ ಕೊರತೆ ಇಲ್ಲ. ಅದೇರೀತಿಯಾಗಿ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಯಶಸ್ವಿಯಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದಿದೆ. ಬಡಜನರ ಕಲ್ಯಾಣಕ್ಕಾಗಿ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.

ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಈ ಬಾರಿಯ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ 3200 ಕೋಟಿ ರೂ. ನೀಡಲಾಗಿದೆ. ಈ ಪೈಕಿ 1620 ಕೋಟಿ ರೂ. ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ ಎಂದರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಮಾತನಾಡಿ, ಹಲವು ವಷÀðಗಳಿಂದ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ದೊರೆಯುತ್ತಿರಲಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರ ಆಶಾಭಾವನೆಯಿಂದ ನನ್ನ ಕ್ಷೇತ್ರದ ಅಭಿವೃದ್ಧಿಗೆ 100 ರೂ. ಕೋಟಿ ನೀಡಿದ್ದಾರೆ. ಜನಪರ ಕಲ್ಯಾಣ ಯೋಜನೆಗಳನ್ನು ಕೈಗೊಂಡು, ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದರು.

ಇದೇ ಸಂದರ್ಭದಲ್ಲಿ ಕಂಪ್ಲಿ ಕ್ಷೇತ್ರದ ಅಭಿವೃದ್ಧಿಗೆ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಡಿ ಅನುದಾನ ಹಂಚಿಕೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತ ಸಮಗ್ರ ಚಿತ್ರಣ ವಿವರಿಸಿದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆಯಿದೆ ಎಂದು ಸುಳ್ಳು ಹೇಳುತ್ತಿದ್ದರು. ಆದರೆ ಈ ಭಾಗದ ಕಂಪ್ಲಿ ಶಾಸಕರ ಇಚ್ಛಾಶಕ್ತಿಯಿಂದ ಕ್ಷೇತ್ರದ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪಡೆದಿರುವ ಅನುದಾನವೇ ನಿದರ್ಶನವಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಗಣೇಶ್ ಅವರು, ಈ ಭಾಗದ ಜನರ, ರೈತರ ಪರ ಕಾಳಜಿ ಹೊಂದಿದವರು; ಹಾಗಾಗಿ ಅವರನ್ನು ಈ ಭಾಗದ ಭಗೀರಥ ಎಂದೇ ಕರೆಯುತ್ತಾರೆ ಎಂದು ಶಾಸಕ ಭರತ್ ರೆಡ್ಡಿ ಅವರು ವರ್ಣಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಯೋಜನೆಗಳಡಿ ಆಯ್ಕೆಯಾದ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆದೇಶ ಪತ್ರ, ಚೆಕ್ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಭಾಷಾ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಹುಮಾಯೂನ್ ಖಾನ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿದಾನಂದಪ್ಪ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಪ್ರಮೋದ್, ತಹಶೀಲ್ದಾರ ಶಿವರಾಜ, ಕಂಪ್ಲಿ ಮತ್ತು ಕುರುಗೋಡು ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

000 houses distributed in February! Great good news for the 'homeless' from the state government: 10 ರಾಜ್ಯ ಸರ್ಕಾರದಿಂದ ವಸತಿ ರಹಿತ ಬಡ ಕುಟುಂಬಗಳಿಗೆ ಗುಡ್‌ ನ್ಯೂಸ್‌ : ಶೀಘ್ರವೇ 38
Share. Facebook Twitter LinkedIn WhatsApp Email

Related Posts

Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

2 Mins Read

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

2 Mins Read

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

3 Mins Read
Recent News
Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

ALERT : ಐಸ್ ಕ್ರೀಮ್ ಪ್ರಿಯರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಲೇಬೇಕು | Ice cream

State News
Adilabad Medical Negligence Rs 1 Crore Compensation KARNATAKA

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ವೈದ್ಯಕೀಯ ಕ್ಷೇತ್ರವು ಭರವಸೆಯ ಮೇಲೆ ನಿಂತಿದೆ. ರೋಗಿಯು ವೈದ್ಯರನ್ನು ನಂಬಿ ಚಿಕಿತ್ಸೆಗೆ ಒಳಗಾಗುತ್ತಾರೆ. ಆದರೆ ಅದೇ ವಿಶ್ವಾಸಕ್ಕೆ ಧಕ್ಕೆ ಉಂಟಾದಾಗ…

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

ವಾಸ್ತು ಸರಿಯಾಗಿದ್ರೆ… ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿ ನೆಲೆಸುತ್ತದೆ! ಆ ಬಗ್ಗೆ ಈ ಸುದ್ದಿ ಓದಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.