ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಸಂಪುಟ ಕೈಗೊಂಡಿದೆ. ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಸಡಿಲ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಈವರೆಗೆ ಇದ್ದಂತ ವಯೋಮಿತಿಯನ್ನು ಮತ್ತಷ್ಟು ಸಡಿಲಿಕೆ ಮಾಡಲು ನಿರ್ಧರಿಸಿದೆ. ಎಲ್ಲಾ ವರ್ಗದಗಳಿಗೂ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ.
ಈವರೆಗೆ ಸಾಮಾನ್ಯ ವರ್ಗಕ್ಕೆ 35 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ಸಡಿಲಿಕೆ ಇತ್ತು. ಇದೀಗ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್.31, 2027ರವರೆಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಡಿಸೆಂಬರ್.31, 2027ರವರೆಗೆ ರಾಜ್ಯ ಸರ್ಕಾರದಿಂದ ಕರೆಯಲಾಗುವಂತ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಾಮಾನ್ಯ ವರ್ಗದವರಿಗೆ 35 ವರ್ಷದ ಬದಲಾಗಿ 40 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 43 ವರ್ಷಗಳಾಗಿದ್ದರೂ ಅರ್ಜಿಯನ್ನು ಸಲ್ಲಿಸಲು ಅವಕಾಶ ಸಿಕ್ಕಂತೆ ಆಗಲಿದೆ. ಈ ಮೂಲಕ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ.
ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಜ.24ರಿಂದ ಬೆಂಗಳೂರು-ಅಲಿಪುರ್ ದ್ವಾರ್ ಅಮೃತ್ ಭಾರತ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ








