Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸೊರಬದ ‘ಉಳವಿ ಶಾಲೆ’ಯನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ

15/10/2025 10:30 PM

“ಹುಡುಗಿರಿಗೆ ತುಂಬಾ ಜನ ಬಾಯ್ ಫ್ರೆಂಡ್ಸ್ ಇರ್ತಾರೆ, ಬಟ್ಟೆ ಬದಲಿಸಿ” ; ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಕಾಲೇಜು ಸಿಬ್ಬಂದಿ ಸಲಹೆ

15/10/2025 10:01 PM

ರಾತ್ರಿ ಈ ಸಣ್ಣ ಕೆಲಸ ಮಾಡಿ, ಬೆಳಿಗ್ಗೆ ಹೊಟ್ಟೆ ಸ್ವಚ್ಛವಾಗುತ್ತೆ, ಇಡೀ ದಿನ ಸಂತೋಷವಾಗಿರಿ.!

15/10/2025 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯ-2025’ ಅಂಗೀಕಾರ
KARNATAKA

ವಿಧಾನಸಭೆಯಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯ-2025’ ಅಂಗೀಕಾರ

By kannadanewsnow0919/08/2025 5:21 PM

ಬೆಂಗಳೂರು: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಚರ್ಚೆ ನಡೆಸಿದ ನಂತರ ಅನುಮೋದನೆ ನೀಡಲಾಯಿತು.

ಸ್ಪಷ್ಟನೆಗಾಗಿ ತಿದ್ದುಪಡಿ ತರಲಾಗಿದೆ

2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, “ಇದರಲ್ಲಿ ಒಂದು ಸಣ್ಣ ಸ್ಪಷ್ಟನೆ ನೀಡುವುದಿದೆ. ಏಕೆಂದರೆ ಮಸೂದೆ ಅಂಗೀಕಾರಗೊಂಡಿದ್ದರೂ ಕೆಲವರು ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಹೀಗಾಗಿ ಈ ಮಸೂದೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ” ಎಂದು ತಿಳಿಸಿದರು.

ಈ ತಿದ್ದುಪಡಿಯ ಉದ್ದೇಶ ಹಾಗೂ ಇದರ ಪರಿಣಾಮವೇನು ಎಂಬ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, “ಈಗ ಜಾರಿಯಲ್ಲಿರುವ ಕಾಯ್ದೆ ಅನುಸಾರ ಜಿಬಿಎ ಅಡಿಯಲ್ಲಿ ರಚಿಸಲಾಗಿರುವ ಪಾಲಿಕೆಗಳ ವಿಚಾರದಲ್ಲಿ ಪ್ರಾಧಿಕಾರವು ಹಸ್ತಕ್ಷೇಪ ಮಾಡಲು ಅವಕಾಶವಿದೆ ಎಂದು ಯಾರೋ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಪಾಲಿಕೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಅಂಶವನ್ನು ಪ್ರಸ್ತುತ ತಿದ್ದುಪಡಿ ವಿಧೇಯಕದಲ್ಲಿ ತೆಗೆದು ಹಾಕಲಾಗಿದೆ. ಪಾಲಿಕೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳುವುದಿಲ್ಲ. ಪಾಲಿಕೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿವೆ. ಪಾಲಿಕೆಗಳ ಕಾರ್ಯಚಟುವಟಿಕೆಯಲ್ಲಿ ಜಿಬಿಎ ಹಸ್ತಕ್ಷೇಪ ಇಲ್ಲ ಎಂಬ ಸ್ಪಷ್ಟನೆ ನೀಡಲು ಈ ತಿದ್ದುಪಡಿ ತರಲಾಗಿದೆ” ಎಂದು ತಿಳಿಸಿದರು.

ಬಿಜೆಪಿ ಶಾಸಕ ಅಶ್ವತ್ ನಾರಾಯಣ ಅವರು, ನೀವು ಯಾವ ರೀತಿ ನಿಯಂತ್ರಣಕ್ಕೆ ತರಲು ಮುಂದಾಗಿದ್ದಿರಿ, ಈಗ ಯಾಕೆ ಅದನ್ನು ಹಿಂಪಡೆದಿದ್ದೀರಿ, ನ್ಯಾಯಾಲಯದಲ್ಲಿ ಅರ್ಜಿ ಹಾಕಿದವರ ಆಕ್ಷೇಪಗಳೇನು ವಿವರಿಸಿ ಎಂದು ಕೇಳಿದಾಗ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, “ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸದಿದ್ದರೂ ಮುಂದೆ ಯಾವುದೇ ರೀತಿಯ ಗೊಂದಲಗಳು ಇರಬಾರದು ಎಂಬ ಕಾರಣಕ್ಕೆ ಈ ತಿದ್ದುಪಡಿ ತರುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗುವ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ನಮ್ಮ ಉದ್ದೇಶ. ಮುಂದೆ ನಾನು, ನೀವು ಅಧಿಕಾರದಲ್ಲಿ ಇರುತ್ತೇವೋ ಇರುವುದಿಲ್ಲವೋ ಗೊತ್ತಿಲ್ಲ. ಆದರೆ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಅದನ್ನು ತೆಗೆದುಹಾಕಿದ್ದೇವೆ” ಎಂದು ತಿಳಿಸಿದರು.

ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗದಂತೆ ಕ್ರಮ

ಶಾಸಕರ ಚರ್ಚೆ ನಂತರ ಮಾತನಾಡಿದ ಶಿವಕುಮಾರ್ ಅವರು, “ನಾನು ಕೊಟ್ಟ ವಿವರಣೆ ಸುರೇಶ್ ಕುಮಾರ್ ಹಾಗೂ ಅಶೋಕ್ ಅವರಿಗೆ ಅರ್ಥವಾಗಿದೆ. ಆದರೆ ಬಹಳ ಓದಿಕೊಂಡಿರುವ ಅಶ್ವತ್ ನಾರಾಯಣ ಅವರಿಗೆ ಅರ್ಥವಾಗಿಲ್ಲ. ನಾನು ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಬಗ್ಗೆ ಅಧ್ಯಯನ ಮಾಡಿದ್ದೇನೆ. ನಾನು ನನ್ನ 47ನೇ ವಯಸ್ಸಿಗೆ ಪದವಿ ಪೂರ್ಣಗೊಳಿಸಿದೆ. ರಾಜಕೀಯ ಶಾಸ್ತ್ರ ವಿಷಯದಲ್ಲಿ ಸ್ಥಳೀಯ ಸಂಸ್ಥೆಗಳ ವಿಚಾರದಲ್ಲಿ ನನಗೆ ಅತಿಹೆಚ್ಚು ಅಂಕ ಸಿಕ್ಕಿತ್ತು. ರಾಜೀವ್ ಗಾಂಧಿ ಅವರು 73, 74ನೇ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಂದಿದ್ದರು. ಆಗ ನಾನು ಈ ತಿದ್ದುಪಡಿಯ ಉದ್ದೇಶದ ಬಗ್ಗೆ ಅವರ ಬಳಿ ಕೇಳಿದೆ. ಪಂಚಾಯ್ತಿಯಿಂದ ಸಂಸತ್ತಿನವರೆಗೆ ನಾಯಕರು ಇರಬೇಕು. ಹೀಗಾಗಿ ಇದು ನಾಯಕರನ್ನು ತಯಾರು ಮಾಡುವ ಅಡಿಪಾಯ ಎಂದರು. ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲು ಇವುಗಳಿಗೆ ಸ್ವಾಯತ್ತತೆ ನೀಡಬೇಕು ಎಂದು ಹೇಳಿದರು” ಎಂದು ತಿಳಿಸಿದರು.

“ಕಾಂಗ್ರೆಸ್ ಪಕ್ಷ ರಾಜೀವ್ ಗಾಂಧಿ ಅವರು ತಂದಿರುವ ಈ ತಿದ್ದುಪಡಿಯನ್ನು ಯಾವುದೇ ಕಾರಣಕ್ಕೂ ಮುಟ್ಟಲು ಬಿಡುವುದಿಲ್ಲ. ನಾನು ನಗರಾಭಿವೃದ್ಧಿ ಸಚಿವನಾಗಿದ್ದ ಸಂದರ್ಭದಲ್ಲಿ ಘೋರ್ಪಡೆಯವರು ಕಂದಾಯ ಸಚಿವರಾಗಿದ್ದಾಗ ಬೇಲೂರು ಘೋಷಣೆ ಮಾಡಿದೆವು. ಆಗ ಪ್ರತಿ ಪಂಚಾಯ್ತಿಗೆ 1 ಲಕ್ಷ ರೂ. ಮಾತ್ರ ಅನುದಾನ ನೀಡಲಾಗುತ್ತಿತ್ತು. ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಅದನ್ನು 5 ಲಕ್ಷಕ್ಕೆ ಏರಿಸಲಾಯಿತು. ನಂತರ 27 ಇಲಾಖೆಗಳನ್ನು ಪಂಚಾಯ್ತಿಗೆ ಸೇರಿಸಿ ಹೆಚ್ಚಿನ ಶಕ್ತಿ ತುಂಬಿದೆವು” ಎಂದರು.

“ನಾವು ತಂದಿರುವ ಒಂದು ಸಣ್ಣ ತಿದ್ದುಪಡಿ ಉದ್ದೇಶ ಪಾಲಿಕೆಗಳಿಗೆ ಶಕ್ತಿ ತುಂಬಬೇಕು, ಯಾವುದೇ ಗೊಂದಲಗಳು ಇರಬಾರದು ಎಂಬುದು. ಸತೀಶ್ ರೆಡ್ಡಿ ಸೇರಿದಂತೆ ಕೆಲವರು ನಮ್ಮ ವ್ಯಾಪ್ತಿಯ ಹಳ್ಳಿಗಳನ್ನು ಸೇರಿಸಿಲ್ಲ ಎಂದು ಹೇಳಿದರು. ನಾವು ಈಗ ಹಳ್ಳಿಗಳನ್ನು ಸೇರಿಸಿದರೆ ಪಂಚಾಯ್ತಿ ಸದಸ್ಯ ಪಾಲಿಕೆ ಸದಸ್ಯನಾಗಬೇಕಾಗುತ್ತದೆ. ಇದಕ್ಕೆ ಮತ್ತೆ ಆಕ್ಷೇಪಣೆಗಳು ಬರುತ್ತವೆ. ಮೊದಲು ನಾವು ಈಗಿರುವ ಪಾಲಿಕೆ ವ್ಯಾಪ್ತಿಯಲ್ಲಿ ಚುನಾವಣೆ ನಡೆಸಿ, ನಂತರ ನಿಮ್ಮೆಲ್ಲರ ಜೊತೆ ಚರ್ಚೆ ಮಾಡಿ ಯಾವ ಯಾವ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಸೇರಿಸಬೇಕು ಎಂದು ತೀರ್ಮಾನ ಮಾಡೋಣ” ಎಂದರು.

“ಮಹದೇವಪುರದಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹವಾಗುತ್ತದೆ. ಬೆಂಗಳೂರು ನಗರದ ಒಳಗೆ ಹೆಚ್ಚು ಸಂಗ್ರಹವಾಗುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಆರ್ಥಿಕ ನೆರವು ನೀಡಬೇಕು. ಆದರೆ ಒಂದು ಪಾಲಿಕೆಯಿಂದ ಮತ್ತೊಂದು ಪಾಲಿಕೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಈ ರೀತಿ ಮಾಡಿದರೆ ಮತ್ತೆ ಇಲ್ಲಿ ಸಂವಿಧಾನದ 74ನೇ ತಿದ್ದುಪಡಿಗೆ ಧಕ್ಕೆಯಾಗುತ್ತದೆ. ನಿಮಗೆ ಈ ತಿದ್ದುಪಡಿ ಬೇಡವಾದರೆ ಹೇಳಿ, ನಾನು ಇದನ್ನು ಹಿಂಪಡೆಯುತ್ತೇನೆ. ನಾವು ಈ ತಿದ್ದುಪಡಿ ತಂದಿರುವುದು ಪಾಲಿಕೆಗಳ ಹಿತಕಾಯಲು” ಎಂದರು.

ನಿಮಗೆ ಬೇಡವಾದರೆ ಹೇಳಿ, ವಿಧೇಯಕ ಹಿಂಪಡೆಯುತ್ತೇವೆ:

“ನಿಮಗೆ ಇದರಲ್ಲಿ ಆಸಕ್ತಿ ಇಲ್ಲ ಎಂದಾದರೆ ನಾನು ಈ ತಿದ್ದುಪಡಿ ವಾಪಸ್ ಪಡೆಯಲು ಸಿದ್ಧ. ನಾವು ಅಧಿಕಾರದಲ್ಲಿ ಇಲ್ಲದ ಸಂದರ್ಭದಲ್ಲಿ ಬೇರೊಬ್ಬರು ಇದನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂಬ ಉದ್ದೇಶದಿಂದ ಈ ತಿದ್ದುಪಡಿ ತಂದಿದ್ದೇವೆ. ಮುಂದೆ ಸರ್ಕಾರ ಹಾಗೂ ಪಾಲಿಕೆಗೆ ಬೇರೆ ಪಕ್ಷಗಳು ಅಧಿಕಾರಕ್ಕೆ ಬಂದಾಗ ಸರಕಾರ ಪಾಲಿಕೆಗಳನ್ನು ಹಿಡಿತದಲ್ಲಿ ಇಟ್ಟುಕೊಳ್ಳಬಾರದು ಎಂಬುದು ನಮ್ಮ ಉದ್ದೇಶ” ಎಂದರು.

“ಸುರೇಶ್ ಕುಮಾರ್, ರಾಮಲಿಂಗ ರೆಡ್ಡಿ ಸೇರಿದಂತೆ ಅನೇಕರು ಪಾಲಿಕೆ ಸದಸ್ಯರಾಗಿ ನಂತರ ವಿಧಾನಸಭೆಗೆ ಬಂದಿದ್ದೀರಿ. ಜವಾಹರಲಾಲ್ ನೆಹರೂ ಅಲಹಬಾದ್ ಮುನ್ಸಿಪಲ್ ನ ಮೊದಲ ಅಧ್ಯಕ್ಷರಾಗಿದ್ದರು. ರಾಜಗೋಪಾಲಚಾರಿ, ಸರ್ದಾರ್ ಪಟೇಲ್, ಕೆಂಗಲ್ ಹನುಮಂತಯ್ಯ ಅವರು ಪಾಲಿಕೆ ಅಧ್ಯಕ್ಷರಾಗಿದ್ದರು. ತಮಿಳುನಾಡು ಸಿಎಂ ಸ್ಟಾಲಿನ್ ಅವರು ಚೆನ್ನೈ ಪಾಲಿಕೆ ಮೇಯರ್‌ ಆಗಿದ್ದವರು, ಬಿ.ಡಿ ಜತ್ತಿ, ವಿಲಾಸ್ ರಾವ್ ದೇಶಮುಖ್ ಪಂಚಾಯ್ತಿ ಚೇರ್ಮನ್ ಗಳಾಗಿದ್ದವರು” ಎಂದು ವಿವರಿಸಿದರು.

ಬೆಂಗಳೂರಿನ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ

“ಈ ವಿಚಾರದಲ್ಲಿ ಸ್ಪಷ್ಟತೆ ಇರಬೇಕು. ಬೆಂಗಳೂರಿಗೆ ಸರಿಯಾದ ರೂಪ ನೀಡಬೇಕು. ಬೇಕಾದರೆ ಒಂದು ದಿನ ಚರ್ಚೆ ನಡೆಸಿ. ನಮಗಿಂತ ವಿರೋಧ ಪಕ್ಷದಲ್ಲಿರುವವರಿಗೆ ಹೆಚ್ಚಿನ ಅನುಭವವಿದೆ. ಅವರ ಸಲಹೆಗಳನ್ನು ಸ್ವೀಕರಿಸಲು ನಾನು ಸದಾ ಸಿದ್ಧ. ನಮ್ಮಲ್ಲಿ ಯಾವುದೇ ಅಂಶ ತಪ್ಪಿದ್ದರೂ ಅದನ್ನು ತಿದ್ದಿಕೊಳ್ಳುತ್ತೇವೆ. ಇಲ್ಲಿ ಯಾವುದೇ ಮುಚ್ಚುಮರೆ ಇಲ್ಲ. ಇದಕ್ಕಾಗಿಯೇ ನಾವು ಸದನ ಸಮಿತಿ ರಚಿಸಿ ಚರ್ಚೆ ಮಾಡಿದ್ದೇವೆ. ಚುನಾವಣೆ ವಿಚಾರವಾಗಿ ಸತೀಶ್ ರೆಡ್ಡಿ ಹಾಗೂ ಸೋಮಶೇಖರ್ ಅವರು ಹೇಳಿದಂತೆ ಮೊದಲು ಚುನಾವಣೆ ಮಾಡೋಣ. ಈ ತಿಂಗಳ 18ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. 25ರ ಒಳಗಾಗಿ ರಾಜ್ಯಪಾಲರ ಅನುಮತಿಗೆ ಕೊನೆಯ ದಿನಾಂಕ. ಸೆ.2ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗುವುದು. ವಿರೋಧ ಪಕ್ಷಗಳ ನಾಯಕರಿಗೆ ಗೌರವ ಕೊಟ್ಟು ಅವರ ಅಭಿಪ್ರಾಯವನ್ನು ಸಂಗ್ರಹಿಸಲಾಗುವುದು” ಎಂದರು.

“ಬೆಂಗಳೂರಿನ ಭವಿಷ್ಯದ ವಿಚಾರದಲ್ಲಿ ರಾಜಕಾರಣ ಮಾಡಲು ಇಷ್ಟವಿಲ್ಲ, ನಾನು ಅದನ್ನು ಮಾಡುವುದೂ ಇಲ್ಲ. ನಾವು ಪಾಲಿಕೆಗಳಿಗೆ ತೆರಿಗೆ ಸಂಗ್ರಹಕ್ಕೆ ಅಧಿಕಾರ, ಆರ್ಥಿಕ ಸ್ವಾಯತ್ತತೆ, ಚುನಾವಣೆ, ಮೀಸಲಾತಿ ಸೇರಿದಂತೆ ಯಾವುದೇ ವಿಚಾರದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ. ಸಂವಿಧಾನದ 74ನೇ ತಿದ್ದುಪಡಿಯನ್ನು ಸಂಪೂರ್ಣವಾಗಿ ರಕ್ಷಣೆ ಮಾಡಲಾಗಿದೆ. ಈ ತಿದ್ದುಪಡಿ ಸ್ಪಷ್ಟನೆಗಾಗಿ ತಂದಿದ್ದು, ಇದನ್ನು ಅಂಗೀಕರಿಸಬೇಕು” ಎಂದು ಮನವಿ ಮಾಡಿದರು.

ಈ ವೇಳೆ ಅಡ್ಡಿಪಡಿಸಲು ಮುಂದಾದ ಮುನಿರತ್ನ ಅವರಿಗೆ ತಿರುಗೇಟು ನೀಡಿದ ಶಿವಕುಮಾರ್ ಅವರು, “ಮುನಿರತ್ನ ಅವರೇ ನಿಮಗೂ ಚರ್ಚೆ ಮಾಡಲು ಅವಕಾಶ ನೀಡುತ್ತೇವೆ. ನಿಮ್ಮನ್ನು ತಯಾರು ಮಾಡಿದ್ದು ನಾವೇ. ನಿಮ್ಮ ಮಾತನ್ನೂ ಆಲಿಸುತ್ತೇವೆ. ನೀನು ತನಿಖೆ ಮಾಡಲು ಎಲ್ಲೇಲ್ಲೋ ಸುತ್ತುತ್ತಿದ್ದೀಯಾ, ಹೀಗಾಗಿ ನಿನ್ನ ಹೆಸರು ಮರೆತಿದ್ದೇವೆ. ನಿನ್ನ ಬಗ್ಗೆಯೂ ನಾವು ತನಿಖೆ ಮಾಡಬೇಕಿದೆ” ಎಂದು ಕುಟುಕಿದರು.

BREAKING: ಇಂದು ಸಂಜೆ 5ಕ್ಕೆ ನಡೆಯಬೇಕಿದ್ದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ 7.30ಕ್ಕೆ ಮುಂದೂಡಿಕೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸೊರಬದ ‘ಉಳವಿ ಶಾಲೆ’ಯನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ

15/10/2025 10:30 PM2 Mins Read

ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ದುರಸ್ತಿ ಕಾಮಗಾರಿಗೆ 65.80 ಲಕ್ಷ ಮಂಜೂರು ಮಾಡಿ ಸರ್ಕಾರ ಆದೇಶ

15/10/2025 8:41 PM1 Min Read

ನಿಮ್ಮ ಮನೆಯ ವಾಸ್ತು ದೋಷ ನಿವಾರಿಸಲು ಒಂದು ಲೋಟ ನೀರಲ್ಲಿ ಹೀಗೆ ಮಾಡಿ ಸಾಕು

15/10/2025 8:27 PM3 Mins Read
Recent News

ಶಿವಮೊಗ್ಗ: ಸೊರಬದ ‘ಉಳವಿ ಶಾಲೆ’ಯನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ

15/10/2025 10:30 PM

“ಹುಡುಗಿರಿಗೆ ತುಂಬಾ ಜನ ಬಾಯ್ ಫ್ರೆಂಡ್ಸ್ ಇರ್ತಾರೆ, ಬಟ್ಟೆ ಬದಲಿಸಿ” ; ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಕಾಲೇಜು ಸಿಬ್ಬಂದಿ ಸಲಹೆ

15/10/2025 10:01 PM

ರಾತ್ರಿ ಈ ಸಣ್ಣ ಕೆಲಸ ಮಾಡಿ, ಬೆಳಿಗ್ಗೆ ಹೊಟ್ಟೆ ಸ್ವಚ್ಛವಾಗುತ್ತೆ, ಇಡೀ ದಿನ ಸಂತೋಷವಾಗಿರಿ.!

15/10/2025 9:40 PM

“AI ಮಾಡೆಲ್’ಗಳು ಯಾರನ್ನಾದ್ರೂ ಕೊಲ್ಲಲು ಕಲಿಯ್ಬೋದು”.! ಮಾಜಿ ಗೂಗಲ್ ‘CEO’ ಎಚ್ಚರಿಕೆ

15/10/2025 9:22 PM
State News
KARNATAKA

ಶಿವಮೊಗ್ಗ: ಸೊರಬದ ‘ಉಳವಿ ಶಾಲೆ’ಯನ್ನು ‘ಕರ್ನಾಟಕ ಪಬ್ಲಿಕ್ ಶಾಲೆ’ಯಾಗಿ ಉನ್ನತೀಕರಿಸಿ ಸರ್ಕಾರ ಆದೇಶ

By kannadanewsnow0915/10/2025 10:30 PM KARNATAKA 2 Mins Read

ಶಿವಮೊಗ್ಗ: ರಾಜ್ಯ ಸರ್ಕಾರವು ಸೊರಬ ತಾಲ್ಲೂಕಿನ ಉಳವಿಯಲ್ಲಿರುವಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಯನ್ನು ಸೇರಿಸಿ…

ಸಾಗರದ ಶ್ರೀಗಂಧದ ಕಲಾ ಸಂಕೀರ್ಣದ ಶಿಲ್ಪಗುರುಕುಲದ ದುರಸ್ತಿ ಕಾಮಗಾರಿಗೆ 65.80 ಲಕ್ಷ ಮಂಜೂರು ಮಾಡಿ ಸರ್ಕಾರ ಆದೇಶ

15/10/2025 8:41 PM

ನಿಮ್ಮ ಮನೆಯ ವಾಸ್ತು ದೋಷ ನಿವಾರಿಸಲು ಒಂದು ಲೋಟ ನೀರಲ್ಲಿ ಹೀಗೆ ಮಾಡಿ ಸಾಕು

15/10/2025 8:27 PM

BREAKING: ಚಿತ್ರದುರ್ಗದಲ್ಲಿ ಶಿಕ್ಷಣ ಇಲಾಖೆಯ ಕಚೇರಿಯಲ್ಲೇ ಎಣ್ಣೆ ಪಾರ್ಟಿ ಮಾಡಿದ ನಾಲ್ವರು ಸಸ್ಪೆಂಡ್

15/10/2025 8:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.