Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದೊಂದಿಗೆ ಯಾವುದೇ ವೀಸಾ ಒಪ್ಪಂದವಿಲ್ಲ,ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಗಮನ:UK PM ಕೀರ್ ಸ್ಟಾರ್ಮರ್

08/10/2025 11:00 AM

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : 60% ದಂಧೆಗೆ ಯಾವಾಗ ಬೀಗ ಹಾಕ್ತಿರಾ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

08/10/2025 10:51 AM

ALERT : ಸಾರ್ವಜನಿಕರೇ ಎಚ್ಚರ : ಕೆಮ್ಮಿನ ಸಿರಪ್ ಬೆನ್ನಲ್ಲೇ ಈ ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್.!

08/10/2025 10:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಗೃಹಜ್ಯೋತಿ ಸಹಾಯಧನ’ ಸರ್ಕಾರದಿಂದ ಮುಂಗಡವಾಗಿ ‘ಎಸ್ಕಾಂ’ಗಳಿಗೆ ಪಾವತಿ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ
KARNATAKA

‘ಗೃಹಜ್ಯೋತಿ ಸಹಾಯಧನ’ ಸರ್ಕಾರದಿಂದ ಮುಂಗಡವಾಗಿ ‘ಎಸ್ಕಾಂ’ಗಳಿಗೆ ಪಾವತಿ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

By kannadanewsnow0924/02/2025 5:41 PM

ಬೆಂಗಳೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಈ ಬಗ್ಗೆ ವಿವರಣೆ ನೀಡಿದರು. “ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ)ಎಸ್ಕಾಂಗಳು ಮನವಿ ಮಾಡಿವೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು.

“ಕೆಇಆರ್‌ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್‌ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ,” ಎಂದು ಸ್ಪಷ್ಟಪಡಿಸಿದರು.

“ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ,” ಎಂದು ಸಚಿವರು ಹೇಳಿದರು.

SHOCKING: ಲವರ್ ಬೇರೊಬ್ಬ ಹುಡುಗಿ ಜೊತೆಗೆ ಮಾತನಾಡಿದ್ದಕ್ಕೆ ಮನನೊಂದು ಪ್ರಿಯತಮೆ ಆತ್ಮಹತ್ಯೆ

BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ

BREAKING : ಬೆಂಗಳೂರಲ್ಲಿ ‘RTO’ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ : 100ಕ್ಕೂ ಹೆಚ್ಚು ಶಾಲಾ ವಾಹನಗಳು ಸೀಜ್!

Share. Facebook Twitter LinkedIn WhatsApp Email

Related Posts

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : 60% ದಂಧೆಗೆ ಯಾವಾಗ ಬೀಗ ಹಾಕ್ತಿರಾ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

08/10/2025 10:51 AM2 Mins Read

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ ಕಾಲೇಜು HOD!

08/10/2025 10:17 AM1 Min Read

BREAKING : ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : ಆಯೋಜಕರಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಸಾಧ್ಯತೆ

08/10/2025 10:10 AM1 Min Read
Recent News

ಭಾರತದೊಂದಿಗೆ ಯಾವುದೇ ವೀಸಾ ಒಪ್ಪಂದವಿಲ್ಲ,ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಗಮನ:UK PM ಕೀರ್ ಸ್ಟಾರ್ಮರ್

08/10/2025 11:00 AM

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : 60% ದಂಧೆಗೆ ಯಾವಾಗ ಬೀಗ ಹಾಕ್ತಿರಾ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

08/10/2025 10:51 AM

ALERT : ಸಾರ್ವಜನಿಕರೇ ಎಚ್ಚರ : ಕೆಮ್ಮಿನ ಸಿರಪ್ ಬೆನ್ನಲ್ಲೇ ಈ ಔಷಧಿಗಳು ಗುಣಮಟ್ಟ ಪರೀಕ್ಷೆಯಲ್ಲಿ ಫೇಲ್.!

08/10/2025 10:43 AM

ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ನು `ದೃಢೀಕೃತ ಟಿಕೆಟ್’ಗಳ ದಿನಾಂಕಗಳನ್ನು ಬದಲಾಯಿಸಬಹುದು.!

08/10/2025 10:33 AM
State News
KARNATAKA

ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : 60% ದಂಧೆಗೆ ಯಾವಾಗ ಬೀಗ ಹಾಕ್ತಿರಾ : ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ

By kannadanewsnow0508/10/2025 10:51 AM KARNATAKA 2 Mins Read

ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮೂಲಕ…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ : ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ ಲೈಂಗಿಕ ಕಿರುಕುಳ ನೀಡಿದ ಕಾಲೇಜು HOD!

08/10/2025 10:17 AM

BREAKING : ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರ : ಆಯೋಜಕರಿಂದ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಸಾಧ್ಯತೆ

08/10/2025 10:10 AM

BREAKING : ಗಂಗಾವತಿ `ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್’ ಕೊಲೆ ಕೇಸ್ : ನಾಲ್ವರು ಆರೋಪಿಗಳು ಅರೆಸ್ಟ್.!

08/10/2025 9:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.