Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾರ್ನರ್ ಬ್ರದರ್ಸ್ ಅನ್ನು $72 ಬಿಲಿಯನ್‌ಗೆ ಖರೀದಿಸಲು ನೆಟ್‌ಫ್ಲಿಕ್ಸ್ ಒಪ್ಪಿಗೆ | Netflix to buy Warner Bros

05/12/2025 6:43 PM

BREAKING: ಇಂಡಿಗೋ ವಿಮಾನ ರದ್ದು ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

05/12/2025 6:18 PM

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

05/12/2025 6:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ
KARNATAKA

GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

By kannadanewsnow0912/11/2025 6:16 AM

ಬೆಂಗಳೂರು : ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.

ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

ಸಚಿವರ ಕನಸಿನ ಯೋಜನೆ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.

ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.

ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಖಾಸಗಿ ಫೈನಾನ್ಸ್‌, ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್‌ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲದ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

05/12/2025 6:02 PM1 Min Read

ಬೆಂಗಳೂರಿನ ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್

05/12/2025 5:51 PM1 Min Read

ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿಸಿಎಂ ಡಿ.ಕೆ. ಶಿವಕುಮಾರ್

05/12/2025 4:41 PM2 Mins Read
Recent News

ವಾರ್ನರ್ ಬ್ರದರ್ಸ್ ಅನ್ನು $72 ಬಿಲಿಯನ್‌ಗೆ ಖರೀದಿಸಲು ನೆಟ್‌ಫ್ಲಿಕ್ಸ್ ಒಪ್ಪಿಗೆ | Netflix to buy Warner Bros

05/12/2025 6:43 PM

BREAKING: ಇಂಡಿಗೋ ವಿಮಾನ ರದ್ದು ವಿಚಾರ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

05/12/2025 6:18 PM

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

05/12/2025 6:02 PM

Viral Video : ಇಂಡಿಗೊ ವಿಮಾನ ರದ್ದು ಎಫೆಕ್ಟ್ ; ಆನ್ಲೈನ್ ಮೂಲಕ ತಮ್ಮ ಮದುವೆ ಆರತಕ್ಷತೆಯಲ್ಲಿ ಭಾಗವಹಿಸಿದ ನವ ದಂಪತಿಗಳು

05/12/2025 5:59 PM
State News
KARNATAKA

BREAKING: ರಾಜ್ಯದಲ್ಲೊಂದು ಧಾರುಣ ಘಟನೆ: ಮನೆಯಲ್ಲಿ ನೇಣುಬಿಗಿದುಕೊಂಡು ತಾಯಿ-ಮಗ ಆತ್ಮಹತ್ಯೆ

By kannadanewsnow0905/12/2025 6:02 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ತಾಯಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದು ಮಗನೂ ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆಯೊಂದು ನಡೆದಿದೆ. ಶಿವಮೊಗ್ಗದ ಅಶ್ವತ್ಥ್…

ಬೆಂಗಳೂರಿನ ವೈಟ್‌ಫೀಲ್ಡ್‌ನ ಬೆಸ್ಕಾಂ ಉಪವಿಭಾಗ ಕಚೇರಿ ಉದ್ಘಾಟಿಸಿದ ಇಂಧನ ಸಚಿವ ಕೆ.ಜೆ.ಜಾರ್ಜ್

05/12/2025 5:51 PM

ನಾನು, ಸತೀಶ್ ಜಾರಕಿಹೊಳಿ ಭೇಟಿಯಾಗಿದ್ದು ನಿಜ: ಡಿಸಿಎಂ ಡಿ.ಕೆ. ಶಿವಕುಮಾರ್

05/12/2025 4:41 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಯಶವಂತಪುರ ಮತ್ತು ಕಾರವಾರ ನಡುವೆ ವಿಶೇಷ ರೈಲು

05/12/2025 4:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.