Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘RBI’ ನಲ್ಲಿ 572 ಹುದ್ದೆಗಳಿಗೆ ಅರ್ಜಿ ಆಹ್ವಾನ |RBI recruitment 2026

17/01/2026 9:52 AM

‘ನಾನಿಲ್ಲದಿದ್ದರೆ 10 ಮಿಲಿಯನ್ ಜನ ಸಾಯುತ್ತಿದ್ದರು’: ಭಾರತ-ಪಾಕ್ ಕದನ ವಿರಾಮ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್

17/01/2026 9:43 AM

ALERT : ಬೆಳಗಿನ ಉಪಾಹಾರಕ್ಕೆ `ಬ್ರೆಡ್’ ತಿನ್ನುತ್ತೀರಾ? `ಕ್ಯಾನ್ಸರ್’ ಬರಬಹುದು ಎಚ್ಚರ.!

17/01/2026 9:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ
KARNATAKA

GOOD NEWS: ‘ಗೃಹಲಕ್ಷ್ಮೀ ಸಂಘ’ ನೋಂದಣಿ: ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಪ್ರಮಾಣಪತ್ರ ಹಸ್ತಾಂತರ

By kannadanewsnow0912/11/2025 6:16 AM

ಬೆಂಗಳೂರು : ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.

ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.

ಸಚಿವರ ಕನಸಿನ ಯೋಜನೆ

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.

ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.

ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.

ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ 52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌

ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಖಾಸಗಿ ಫೈನಾನ್ಸ್‌, ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್‌ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲದ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ALERT : ಬೆಳಗಿನ ಉಪಾಹಾರಕ್ಕೆ `ಬ್ರೆಡ್’ ತಿನ್ನುತ್ತೀರಾ? `ಕ್ಯಾನ್ಸರ್’ ಬರಬಹುದು ಎಚ್ಚರ.!

17/01/2026 9:37 AM2 Mins Read

ALERT : `ಮೂತ್ರ’ ವಿಸರ್ಜಿಸುವಾಗ ತಪ್ಪದೇ ಈ ಕೆಲಸ ಮಾಡಿ : ಎಂದಿಗೂ `ಕಿಡ್ನಿ ಕಾಯಿಲೆ’ ಬರಲ್ಲ.!

17/01/2026 9:19 AM2 Mins Read

ALERT : ಪೋಷಕರೇ ಎಚ್ಚರ : `ಮೊಬೈಲ್ ರೀಲ್ಸ್’ ನೋಡುವ ಮಕ್ಕಳಲ್ಲಿ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

17/01/2026 9:07 AM2 Mins Read
Recent News

ಉದ್ಯೋಗವಾರ್ತೆ : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ‘RBI’ ನಲ್ಲಿ 572 ಹುದ್ದೆಗಳಿಗೆ ಅರ್ಜಿ ಆಹ್ವಾನ |RBI recruitment 2026

17/01/2026 9:52 AM

‘ನಾನಿಲ್ಲದಿದ್ದರೆ 10 ಮಿಲಿಯನ್ ಜನ ಸಾಯುತ್ತಿದ್ದರು’: ಭಾರತ-ಪಾಕ್ ಕದನ ವಿರಾಮ ಹೇಳಿಕೆಯನ್ನು ಪುನರಾವರ್ತಿಸಿದ ಟ್ರಂಪ್

17/01/2026 9:43 AM

ALERT : ಬೆಳಗಿನ ಉಪಾಹಾರಕ್ಕೆ `ಬ್ರೆಡ್’ ತಿನ್ನುತ್ತೀರಾ? `ಕ್ಯಾನ್ಸರ್’ ಬರಬಹುದು ಎಚ್ಚರ.!

17/01/2026 9:37 AM

ALERT : `ಮೂತ್ರ’ ವಿಸರ್ಜಿಸುವಾಗ ತಪ್ಪದೇ ಈ ಕೆಲಸ ಮಾಡಿ : ಎಂದಿಗೂ `ಕಿಡ್ನಿ ಕಾಯಿಲೆ’ ಬರಲ್ಲ.!

17/01/2026 9:19 AM
State News
KARNATAKA

ALERT : ಬೆಳಗಿನ ಉಪಾಹಾರಕ್ಕೆ `ಬ್ರೆಡ್’ ತಿನ್ನುತ್ತೀರಾ? `ಕ್ಯಾನ್ಸರ್’ ಬರಬಹುದು ಎಚ್ಚರ.!

By kannadanewsnow5717/01/2026 9:37 AM KARNATAKA 2 Mins Read

ಇಂದಿನ ವೇಗದ ಜೀವನದಲ್ಲಿ, ಬೆಳಿಗ್ಗೆ ಚಹಾ ಮತ್ತು ಬ್ರೆಡ್ ಅಥವಾ ಬ್ರೆಡ್ ಮತ್ತು ಬೆಣ್ಣೆಯನ್ನು ತಿನ್ನುವುದು ಸುಲಭವಾದ ಉಪಹಾರವೆಂದು ಪರಿಗಣಿಸಲಾಗಿದೆ.…

ALERT : `ಮೂತ್ರ’ ವಿಸರ್ಜಿಸುವಾಗ ತಪ್ಪದೇ ಈ ಕೆಲಸ ಮಾಡಿ : ಎಂದಿಗೂ `ಕಿಡ್ನಿ ಕಾಯಿಲೆ’ ಬರಲ್ಲ.!

17/01/2026 9:19 AM

ALERT : ಪೋಷಕರೇ ಎಚ್ಚರ : `ಮೊಬೈಲ್ ರೀಲ್ಸ್’ ನೋಡುವ ಮಕ್ಕಳಲ್ಲಿ ಹೆಚ್ಚುತ್ತಿದೆ ಈ ಗಂಭೀರ ಸಮಸ್ಯೆ.!

17/01/2026 9:07 AM

ALERT : `Whats App’ ಬಳಕೆದಾರರೇ ಗಮನಿಸಿ : ಫೆ.1ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು.!

17/01/2026 8:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.