Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದಲ್ಲಿ ಆ.27ರಿಂದ ಮತ್ತೆ ಭಾರೀ `ಮಳೆ’ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

24/08/2025 6:09 AM

BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

24/08/2025 6:07 AM

BIG NEWS : ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ನಾಳೆ, ನಾಡಿದ್ದು 1500 ವಿಶೇಷ ‘KSRTC’ ಬಸ್ ವ್ಯವಸ್ಥೆ..!

24/08/2025 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗೃಹಲಕ್ಷ್ಮಿ, ಯುವನಿಧಿ ಸೇರಿ ಗ್ಯಾರಂಟಿ ಫಲಾನುಭವಿಗಳೇ ಗಮನಿಸಿ : ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ
KARNATAKA

ಗೃಹಲಕ್ಷ್ಮಿ, ಯುವನಿಧಿ ಸೇರಿ ಗ್ಯಾರಂಟಿ ಫಲಾನುಭವಿಗಳೇ ಗಮನಿಸಿ : ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ

By kannadanewsnow5701/07/2024 10:04 AM

ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾಗಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್ ಅವರು ಸೂಚಿಸಿದರು.

ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿದ್ದು, ಲೋಪದೋಷ ಹಾಗೂ ವಿಳಂಬ ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತರಬೇಕು ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಸರ್ಕಾರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯ ಸಹಸ್ರಾರು ಕುಟುಂಬಗಳು ಏಳಿಗೆ ಕಾಣುತ್ತಿವೆ. ಅನುಷ್ಠಾನ ಸಮಿತಿಯ ಕಾರ್ಯಕರ್ತರು ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಯೋಜನೆ ತಲುಪಿದ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಸದುಪಯೋಗ ಪಡೆಯದ ಜನರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ಯೋಜನೆ ಫಲಾನುಭವಿಗಳಿಗೆ ಮುಟ್ಟುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅಹವಾಲು ಅಥವಾ ಮಾಹಿತಿ ಬೇಕಾದಲ್ಲಿ ಅಲೆದಾಡಿಸದೇ ಸೂಕ್ತ ಪರಿಹಾರವನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಒದಗಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಅವರು, ಗೃಹಲಕ್ಷ್ಮೀ ಯೋಜನೆ ಬಗ್ಗೆ ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ ಒಟ್ಟು 3,11,180 ಪಡಿತರ ಚೀಟಿಗಳು ಇದ್ದು, ಅದರಲ್ಲಿ ಅಂತ್ಯೋದಯ, ಎಪಿಎಲ್, ಬಿಪಿಎಲ್ ಕಾರ್ಡ್ ಫಲಾನುಭವಿಗಳು ಸೇರಿ 2,81,987 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ಮಾಹೆ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ರೂ.55 ಕೋಟಿ ಜಮೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಇಲ್ಲಿಯವರೆಗೂ ಗೃಹಲಕ್ಷ್ಮೀ ಹಣ ಜಮಾ ಆಗದೇ ಇದ್ದವರು ಎನ್‍ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಸಾರ್ವಜನಿಕರು ಪರಿಶೀಲಿಸಿಕೊಳ್ಳಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ ಇ-ಕೆವೈಸಿ ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲ ಎಂದರು. ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಈಗಾಗಲೆ ಸರ್ಕಾರವು ಖಚಿತ ಪಡಿಸಿದೆ ಎಂದು ಸಭೆಗೆ ತಿಳಿಸಿದರು.ಸಭೆಯಲ್ಲಿ ಇನ್ನುಳಿದ ಗ್ಯಾಂರಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನ ಮತ್ತು ಪ್ರಗತಿಯ ವಿವರಗಳ ಬಗ್ಗೆ ಚರ್ಚಿಸಲಾಯಿತು.

do this without fail. Grihalakshmi Yuvanidhi beneficiaries note: If you find a technical snag ಗೃಹಲಕ್ಷ್ಮಿ ಯುವನಿಧಿ ಫಲಾನುಭವಿಗಳೇ ಗಮನಿಸಿ : ʻಸ್ವಯಂ ಘೋಷಣೆʼ ಸಲ್ಲಿಸುವುದು ಕಡ್ಡಾಯ | Yuvanidhi Scheme
Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ ಆ.27ರಿಂದ ಮತ್ತೆ ಭಾರೀ `ಮಳೆ’ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

24/08/2025 6:09 AM1 Min Read

BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

24/08/2025 6:07 AM1 Min Read

BIG NEWS : ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ನಾಳೆ, ನಾಡಿದ್ದು 1500 ವಿಶೇಷ ‘KSRTC’ ಬಸ್ ವ್ಯವಸ್ಥೆ..!

24/08/2025 6:05 AM2 Mins Read
Recent News

Rain Alert : ರಾಜ್ಯದಲ್ಲಿ ಆ.27ರಿಂದ ಮತ್ತೆ ಭಾರೀ `ಮಳೆ’ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

24/08/2025 6:09 AM

BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

24/08/2025 6:07 AM

BIG NEWS : ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ನಾಳೆ, ನಾಡಿದ್ದು 1500 ವಿಶೇಷ ‘KSRTC’ ಬಸ್ ವ್ಯವಸ್ಥೆ..!

24/08/2025 6:05 AM

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : 7.5 ಲಕ್ಷ `ಬಿ-ಖಾತಾ’ಗಳಿಗೆ `ಎ’ ಖಾತಾ ವಿತರಣೆ.!

24/08/2025 6:03 AM
State News
KARNATAKA

Rain Alert : ರಾಜ್ಯದಲ್ಲಿ ಆ.27ರಿಂದ ಮತ್ತೆ ಭಾರೀ `ಮಳೆ’ : ಕರಾವಳಿ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5724/08/2025 6:09 AM KARNATAKA 1 Min Read

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

BIG NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ `ವಿಶೇಷ ಸಾಂದರ್ಭಿಕ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

24/08/2025 6:07 AM

BIG NEWS : ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : ನಾಳೆ, ನಾಡಿದ್ದು 1500 ವಿಶೇಷ ‘KSRTC’ ಬಸ್ ವ್ಯವಸ್ಥೆ..!

24/08/2025 6:05 AM

ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : 7.5 ಲಕ್ಷ `ಬಿ-ಖಾತಾ’ಗಳಿಗೆ `ಎ’ ಖಾತಾ ವಿತರಣೆ.!

24/08/2025 6:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.