ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ‘ಗಿಡವನ್ನು ನೆಡೋಣ ಮರವಾಗಿ ಬೆಳೆಸೋಣ’ ಎನ್ನುವ ಘೋಷವಾಕ್ಯದೊಂದಿಗೆ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಸಸಿ ನೆಡುವ ಹಾಗೂ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ಜಯನಗರ ಟಿ.ಬ್ಲಾಕ್ ನಲ್ಲಿರುವ ಚಾಮುಂಡಿ ಆಟದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಾಜಿ ಶಾಸಕ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೆ, ಈ ಸಂದರ್ಭದಲ್ಲಿ ಸಾವಿರಾರು ಗಿಡಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ 2500ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ಅವುಗಳನ್ನು ಆರು ತಿಂಗಳ ಕಾಲ ಪೋಷಿಸುವ ಜವಾಬ್ದಾರಿಯನ್ನು ಜನತಾದಳ ಜಾತ್ಯತೀತ ಪಕ್ಷದ ನಗರ ಘಟಕದ ಕಾರ್ಯಕರ್ತರುಗಳು ವಹಿಸಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ ಅವರು; ಸಂಚಾರ ವಾಹನ ದಟ್ಟಣೆ ಹಾಗೂ ವಾಯು ಮಾಲಿನ್ಯದಿಂದ ತೀವ್ರ ಒತ್ತಡಕ್ಕೆ ತುತ್ತಾಗಿರುವ ಬೆಂಗಳೂರು ಮಹಾನಗರದಲ್ಲಿ ಶುದ್ಧ ಗಾಳಿಯ ಕೊರತೆ ಕಾಣಿಸುತ್ತಿದೆ. ಮುಂದಿನ ದಿನಗಳಲ್ಲಿ ಶುದ್ಧ ಗಾಳಿಯ ಲಭ್ಯತೆಯೇ ಅತಿದೊಡ್ಡ ಸವಾಲು ಆಗಲಿದೆ. ನಾವೆಲ್ಲರೂ ಈ ಸವಾಲು ಎದುರಿಸುವ ಸಲುವಾಗಿ ನಗರದಲ್ಲಿ ಹೆಚ್ಚು ಹೆಚ್ಚು ಮರಗಿಡಗಳನ್ನು ಬೆಳೆಸಬೇಕು ಎಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಸಕರಾದ ಟಿ.ಎ.ಶರವಣ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಟಿ.ಆರ್. ತುಳಸಿರಾಮ್, ಜೆಡಿಎಸ್ ಹಿರಿಯ ಮುಖಂಡ ಶ್ರೀರಾಮಚಂದ್ರಪ್ಪ, ಚಲನಚಿತ್ರ ನಟ ಪ್ರವೀಣ್ ತೇಜ್, ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ನಾಗೇಶ್ವರ್ ರಾವ್, ಪಕ್ಷದ ಬೆಂಗಳೂರು ನಗರ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್, ಕಾರ್ಮಿಕ ವಿಭಾಗದ ಅಧ್ಯಕ್ಷ ಎಂ.ಗೋಪಾಲ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಸಿ.ಎಂ. ನಾಗರಾಜ್, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಜನಾರ್ಧನ್, ವಿವಿಧ ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರುಗಳಾದ ವಿಜಯಕುಮಾರ್ ಕೃಷ್ಣ (ಜಯನಗರ), ಕೆ.ಜೆ. ರಮೇಶ್ (ಬಿಟಿಎಂ ಲೇಔಟ್), ಬಿ.ಎಸ್. ಗಣೇಶ್ (ಬೊಮ್ಮನಹಳ್ಳಿ), ಬಿ. ಆರ್. ಪ್ರಕಾಶ್ ಗೌಡ (ವಿಜಯನಗರ), ಆರ್. ಕುಮಾರ್ (ಚಿಕ್ಕಪೇಟೆ) ಹಾಗೂ ಇನ್ನಿತರೆ ಮುಖಂಡರುಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಟಿ.ಆರ್. ತುಳಸಿ ರಾಮ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಶಿವಮೊಗ್ಗ: ನಾಳೆ ಸೊರಬದ ‘ಉಳವಿ ಪ್ರಾಥಮಿಕ ಆರೋಗ್ಯ ಕೇಂದ್ರ’ದಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ