ಕೋಲಾರ : ನಾವು ತಂದ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಜೆಪಿಯವರು ಹೇಳಿದರು ಆದರೆ ಆ ರೀತಿ ಆಗಲಿಲ್ಲ ಹಾಗಾಗಿ ಮುಂದಿನ ವರ್ಷಗಳವರೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೇನಾ ಬಸ್ ಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು : 20ಕ್ಕೂ ಹೆಚ್ಚು ಯೋಧರಿಗೆ ಗಾಯ!
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಸಿಎಂ ಸಿದ್ದರಾಮಯ್ಯ ಚುನಾವಣಾ ಪ್ರಚಾರದ ವೇಳೆ ಮಾತನಾಡಿ, ನಾವು ಘೋಷಣೆ ಮಾಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ಖಾಲಿ ಎಂದು ಬಿಜೆಪಿ ಹೇಳಿತ್ತು. ಮುಂದಿನ ವರ್ಷಕ್ಕೂ ಗ್ಯಾರಂಟಿ ಯೋಜನೆಗೆ ಹಣ ಮೀಸಲಿಟ್ಟಿದ್ದೇವೆ ಎಂದರು.
ಬಿಸಿಲಿನ ತಾಪ ಹೆಚ್ಚಳ : ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆ ಸಮಯದಲ್ಲಿ ಹೊರಗಡೆ ತಿರುಗಾಡದಂತೆ ಸೂಚನೆ
ಬಿಜೆಪಿಯವರು ಹೇಳಿದ್ದು ಎಲ್ಲವೂ ಸುಳ್ಳು. ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರೆಯುತ್ತದೆ.ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವನ್ನು ಕಿತ್ತೊಗೆಯಬೇಕು ಮೋದಿಯನ್ನು ಇಳಿಸಿ ರಾಹುಲ್ ಗಾಂಧಿಯನ್ನು ಪ್ರಧಾನಿ ಮಾಡಬೇಕು ಎಂದು ಕೋಲಾರ ಜಿಲ್ಲೆ ಮುಳಬಾಗಿಲಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.