Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಮಣ್ಣು ಕುಸಿತ ದುರಂತ ಪ್ರಕರಣ : ಮತ್ತೊರ್ವ ಕಾರ್ಮಿಕ ಸಾವು ಮೃತರ ಸಂಖ್ಯೆ 2ಕ್ಕೆ ಏರಿಕೆ

02/09/2025 11:08 AM

BREAKING: ಏರ್ ಇಂಡಿಯಾ ದೆಹಲಿ-ಇಂದೋರ್ ವಿಮಾನದಲ್ಲಿ ಎಂಜಿನ್ ನಲ್ಲಿ ಬೆಂಕಿ : ‘ಮೇಡೇ’ ಕರೆ

02/09/2025 11:05 AM

BIG NEWS : ಧರ್ಮಸ್ಥಳ ಕೇಸ್ : ಗೃಹ ಸಚಿವ ಜಿ.ಪರಮೇಶ್ವರ್ ಭೇಟಿಯಾದ SIT ಮುಖ್ಯಸ್ಥ ಪ್ರಣಬ್ ಮೋಹಂತಿ

02/09/2025 11:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ
KARNATAKA

ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ

By kannadanewsnow0707/01/2024 8:46 AM

ಬೆಂಗಳೂರು :ಅತಿಥಿ ಉಪನ್ಯಾಸಕರಿಗೆ ಸೇವಾನುಭವದ ಆಧಾರದಲ್ಲಿ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಮುಖ್ಯಮಂತ್ರಿ ಒಪ್ಪಿಗೆ ಸೂಚಿಸಿದ್ದು ಮಾತ್ರವಲ್ಲದೆ ಇನ್ನಿತರ ಕೆಲವು ಸೌಲಭ್ಯಗಳನ್ನು ವಿಸ್ತರಿಸಿದ್ದಾರೆ.

ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು‌ ಮಾಜಿ MLC ಪುಟ್ಟಣ್ಣ ನೇತೃತ್ವದ ಅತಿಥಿ ಉಪನ್ಯಾಸಕರ ನಿಯೋಗದ ಜತೆ ಅವರ ಬೇಡಿಕೆಗಳ ಕುರಿತು ಚರ್ಚಿಸಿದರು.

ಅತಿಥಿ ಉಪನ್ಯಾಸಕರ ಬಗ್ಗೆ ನಮ್ಮ ಸರ್ಕಾರ ಮಾನವೀಯ ಕಾಳಜಿ ಹೊಂದಿದೆ. ಆದರೆ ಸೇವಾ ಭದ್ರತೆ ನೀಡಲು ಕಾನೂನು ತೊಡಕು ಇರುವುದರಿಂದ ಸಾಧ್ಯವಾಗುವುದಿಲ್ಲ. ವಿರೋಧ ಪಕ್ಷದ ನಾಯಕನಾಗಿದ್ದಾಗಲೂ ಅತಿಥಿ ಉಪನ್ಯಾಸಕರ ಪರವಾಗಿ ತಾವು ದನಿ ಎತ್ತಿ ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದನ್ನು ಸ್ಮರಿಸಿಕೊಂಡ ಮುಖ್ಯಮಂತ್ರಿಗಳು, ಇದೀಗ ಎರಡೇ ವರ್ಷದೊಳಗೆ ನಮ್ಮ ಸರ್ಕಾರ ಮತ್ತೆ ನಿಮ್ಮ ವೇತನ ಹೆಚ್ಚಳಕ್ಕೆ ಮುಂದಾಗಿದೆ.

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ ಎಂದು ತಿಳಿಸಿದರು.

ಐದು ವರ್ಷಕ್ಕಿಂತ ಕಡಿಮೆ ಸೇವಾನುಭವ ಹೊಂದಿದವರಿಗೆ 5 ಸಾವಿರ ರೂ., 5 ರಿಂದ 10 ವರ್ಷದ ಸೇವಾನುಭವ ಹೊಂದಿದವರಿಗೆ 6 ಸಾವಿರ ರೂ., 10 ರಿಂದ 15 ವರ್ಷದ ಸೇವಾನುಭವ ಹೊಂದಿದವರಿಗೆ 7 ಸಾವಿರ ರೂ. ಹಾಗೂ 15 ವರ್ಷಕ್ಕಿಂತ ಹೆಚ್ಚಿನ ಸೇವಾನುಭವ ಹೊಂದಿದವರಿಗೆ 8 ಸಾವಿರ ರೂ. ಗಳಷ್ಟು ಗೌರವಧನ ಹೆಚ್ಚಳ ಮಾಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.

ಇದರೊಂದಿಗೆ ಅತಿಥಿ ಉಪನ್ಯಾಸಕರ ಆರೋಗ್ಯದ ದೃಷ್ಟಿಯಿಂದ ವಾರ್ಷಿಕ 5 ಲಕ್ಷ ರೂ. ಗಳ ಆರೋಗ್ಯ ವಿಮಾ ಸೌಲಭ್ಯ ಅನುಷ್ಠಾನ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ, 60 ವರ್ಷ ಮೀರಿದ ನಂತರದಲ್ಲಿ ಭದ್ರತಾ ರೂಪದಲ್ಲಿ ಗರಿಷ್ಠ 5 ಲಕ್ಷ ರೂ. ಇಡಿಗಂಡು ನೀಡುವುದು, ವಾರಕ್ಕೆ 15 ಗಂಟೆಗೂ ಹೆಚ್ಚಿನ ಕಾರ್ಯಭಾರ ಹೊಂದಿರುವ ಅತಿಥಿ ಉಪನ್ಯಾಸಕರಿಗೆ ಮಾಸಿಕ 1 ದಿನ ವೇತನ ಸಹಿತ ರಜೆ ನೀಡುವುದು ಹಾಗೂ 3 ತಿಂಗಳ ವೇತನ ಸಹಿತ ಮಾತೃತ್ವ ರಜೆ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದರು.

ಇದರೊಂದಿಗೆ ನೇಮಕಾತಿಯಲ್ಲಿ ಅವರ ಸೇವಾನುಭವ ಆಧರಿಸಿ, ವೈಟೇಜ್‌ ನೀಡುವುದು, ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳದಲ್ಲಿಯೇ ಕಾರ್ಯಭಾರವಿದ್ದಲ್ಲಿ, ನಂತರದ ವರ್ಷವೂ ಅಲ್ಲಿಯೇ ಅವರ ಸೇವೆಯನ್ನು ಮುಂದುವರೆಸುವುದು ಸೇರಿದಂತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಸರಳೀಕರಣಗೊಳಿಸಲು ಸಹ ಸಮ್ಮತಿಸಿ, ಕೂಡಲೇ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದು ಕರ್ತವ್ಯಕ್ಕೆ ಹಾಜರಾಗಯವಂತೆ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರಿಗೆ ಮನವಿ ಮಾಡಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮಾಜಿ ವಿಧಾನ‌ ಪರಿಷತ್ ಸದಸ್ಯ ಪುಟ್ಟಣ್ಣ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್. ಶ್ರೀಕರ್‌, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಅತಿಥಿ ಉಪನ್ಯಾಸಕರ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

000 to Rs 8 000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳಕ್ಕೆ ಸಿಎಂ ಸಮ್ಮತಿ 000. CM approves hike in honorarium 000. From Rs 8 Guest lecturers will get Rs 5 ಅತಿಥಿ ಉಪನ್ಯಾಸಕರಿಗೆ 5
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಮಣ್ಣು ಕುಸಿತ ದುರಂತ ಪ್ರಕರಣ : ಮತ್ತೊರ್ವ ಕಾರ್ಮಿಕ ಸಾವು ಮೃತರ ಸಂಖ್ಯೆ 2ಕ್ಕೆ ಏರಿಕೆ

02/09/2025 11:08 AM1 Min Read

BIG NEWS : ಧರ್ಮಸ್ಥಳ ಕೇಸ್ : ಗೃಹ ಸಚಿವ ಜಿ.ಪರಮೇಶ್ವರ್ ಭೇಟಿಯಾದ SIT ಮುಖ್ಯಸ್ಥ ಪ್ರಣಬ್ ಮೋಹಂತಿ

02/09/2025 11:02 AM1 Min Read

BREAKING : ಧರ್ಮಸ್ಥಳ ಯಾತ್ರೆಗೆ ಬಿಜೆಪಿಯವರಿಗೆ ವಿದೇಶದಿಂದ ಹಣ ಬಂದಿದೆ : ಸಿಎಂ ಸಿದ್ದರಾಮಯ್ಯ ಆರೋಪ

02/09/2025 10:35 AM2 Mins Read
Recent News

BREAKING : ಬೆಂಗಳೂರಲ್ಲಿ ಮಣ್ಣು ಕುಸಿತ ದುರಂತ ಪ್ರಕರಣ : ಮತ್ತೊರ್ವ ಕಾರ್ಮಿಕ ಸಾವು ಮೃತರ ಸಂಖ್ಯೆ 2ಕ್ಕೆ ಏರಿಕೆ

02/09/2025 11:08 AM

BREAKING: ಏರ್ ಇಂಡಿಯಾ ದೆಹಲಿ-ಇಂದೋರ್ ವಿಮಾನದಲ್ಲಿ ಎಂಜಿನ್ ನಲ್ಲಿ ಬೆಂಕಿ : ‘ಮೇಡೇ’ ಕರೆ

02/09/2025 11:05 AM

BIG NEWS : ಧರ್ಮಸ್ಥಳ ಕೇಸ್ : ಗೃಹ ಸಚಿವ ಜಿ.ಪರಮೇಶ್ವರ್ ಭೇಟಿಯಾದ SIT ಮುಖ್ಯಸ್ಥ ಪ್ರಣಬ್ ಮೋಹಂತಿ

02/09/2025 11:02 AM

ಮನೆಯಿಂದ ನಾಪತ್ತೆಯಾದ ಗಂಡ ಇನ್‌ಸ್ಟಾಗ್ರಾಮ್ ರೀಲ್‌ನಲ್ಲಿ ಪತ್ತೆ: ಮತ್ತೊಂದು ಮದುವೆಯಾಗಿರುವ ವಿಷಯ ತಿಳಿದು ಆಘಾತಗೊಂಡ ಹೆಂಡತಿ!

02/09/2025 11:00 AM
State News
KARNATAKA

BREAKING : ಬೆಂಗಳೂರಲ್ಲಿ ಮಣ್ಣು ಕುಸಿತ ದುರಂತ ಪ್ರಕರಣ : ಮತ್ತೊರ್ವ ಕಾರ್ಮಿಕ ಸಾವು ಮೃತರ ಸಂಖ್ಯೆ 2ಕ್ಕೆ ಏರಿಕೆ

By kannadanewsnow0502/09/2025 11:08 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿದ್ದು ರಾತ್ರಿ ಘೋರ ದುರಂತ ಒಂದು ಸಂಭವಿಸಿದೆ. ಈ ವೇಳೆ ಜೋರಾದ…

BIG NEWS : ಧರ್ಮಸ್ಥಳ ಕೇಸ್ : ಗೃಹ ಸಚಿವ ಜಿ.ಪರಮೇಶ್ವರ್ ಭೇಟಿಯಾದ SIT ಮುಖ್ಯಸ್ಥ ಪ್ರಣಬ್ ಮೋಹಂತಿ

02/09/2025 11:02 AM

BREAKING : ಧರ್ಮಸ್ಥಳ ಯಾತ್ರೆಗೆ ಬಿಜೆಪಿಯವರಿಗೆ ವಿದೇಶದಿಂದ ಹಣ ಬಂದಿದೆ : ಸಿಎಂ ಸಿದ್ದರಾಮಯ್ಯ ಆರೋಪ

02/09/2025 10:35 AM

ಅಸ್ತು ದೇವತೆ ಸಂಚಾರ ಮಾಡುವ ಸಮಯದಲ್ಲಿ ಈ ಮಂತ್ರ ಹೇಳಿದ್ರೆ ನಿಮ್ಮ ಎಲ್ಲ ಕೋರಿಕೆ ಸಿದ್ದಿ ಆಗಲಿದೆ

02/09/2025 10:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.