Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

13/01/2026 3:24 PM

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM

BIG NEWS : ಶಾಸಕ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ED ಕೇಸ್ ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ!

13/01/2026 3:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷರಾಗಿ HDK ಅವಿರೋಧವಾಗಿ ಪುನರಾಯ್ಕೆ
KARNATAKA

BREAKING: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಹೆಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷರಾಗಿ HDK ಅವಿರೋಧವಾಗಿ ಪುನರಾಯ್ಕೆ

By kannadanewsnow0922/11/2025 5:45 AM

ಬೆಂಗಳೂರು: ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಅವಿರೋಧವಾಗಿ ಪುನರಾಯ್ಕೆ ಆಗಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಈ ಇಬ್ಬರು ನಾಯಕರ ಪುನರಾಯ್ಕೆ ಬಗ್ಗೆ ರಾಷ್ಟ್ರೀಯ ಪ್ರತಿನಿಧಿಗಳು ಒಮ್ಮತ ನಿರ್ಧಾರ ಕೈಗೊಂಡರು.

ರಾಷ್ಟ್ರ ಮಟ್ಟದಲ್ಲಿ ಪಕ್ಷ ಸಂಘಟನೆಗೆ ವಿಫುಲ ಅವಕಾಶಗಳಿವೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಪಕ್ಷ ಸಂಘಟನೆಯನ್ನು ಬಲಿಷ್ಠವಾಗಿ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿಯೇ ಪಕ್ಷವನ್ನು ಸಂಘಟಿಸುವ ನಿರ್ಧಾರಕ್ಕೆ ರಾಷ್ಟ್ರೀಯ ಮಂಡಳಿ ಬಂದಿತು.

ಸಭೆಯ ಬಳಿಕ ಮಾಧ್ಯಮಗಳಿಗೆ ಈ ಬಗ್ಗೆ ವಿವರಗಳನ್ನು ನೀಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಅವರು; ರಾಜ್ಯದ ಏಕೈಕ ಪ್ರಾದೇಶಿಕ ಪಕ್ಷ ಜೆಡಿಎಸ್ ಆಗಿದ್ದು, ಪಕ್ಷಕ್ಕೆ ಈಗ 25 ವರ್ಷ ತುಂಬಿದೆ. ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಅವಿರತ ಶ್ರಮದಿಂದ ಪಕ್ಷ ಇವತ್ತಿಗೂ ಗಟ್ಟಿಯಾಗಿ ಉಳಿದಿದೆ. ಅಸಂಖ್ಯಾತ ಕಾರ್ಯಕರ್ತ ಪಡೆಯನ್ನು ಹೊಂದಿದೆ. ದೇವೇಗೌಡರು ಪಕ್ಷವನ್ನು ಕಟ್ಟಿ ಬೆಳೆಸಿ, ತಮ್ಮ ಬದುಕನ್ನೇ ಪಕ್ಷಕ್ಕೆ ಮೀಸಲು ಇರಿಸಿದ್ದಾರೆ. ಬೆಳ್ಳಿಹಬ್ಬದ ಸಂದರ್ಭದಲ್ಲಿ ಈ ಇಬ್ಬರು ಬಲಿಷ್ಠ ನಾಯಕರೇ ಪಕ್ಷವನ್ನು ಮುನ್ನಡೆಸಬೇಕು ಎಂದು ರಾಷ್ಟ್ರೀಯ ಮಂಡಳಿ ತೀರ್ಮಾನಿಸಿತು ಎಂದು ಅವರು ಹೇಳಿದರು.

ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಕೈಗೊಂಡಿರುವ ಸಂಘಟನಾ ಪ್ರವಾಸ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿ ಮುಂದುವರಿದ್ದು, ಇದಕ್ಕೆ ಸಭೆಯಲ್ಲಿ ಮೆಚ್ಚಿಗೆ ದೊರೆತಿದೆ. ಎಲ್ಲಾ ನಾಯಕರು ಅವರ ಸಂಘಟನಾ ಶಕ್ತಿಯ ಬಗ್ಗೆ ಶ್ಲಾಘನೆ ಮಾಡಿದರು ಎಂದು ಸುರೇಶ್ ಬಾಬು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಎರಡು ಪ್ರಮುಖ ನಿರ್ಣಯ ಅಂಗೀಕಾರ:

ಜೆಡಿಎಸ್ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ರೈತರ ಪರವಾಗಿ ಹಾಗೂ ಪಕ್ಷ ಸಂಘಟನೆ ಮಾಡುವ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ನಿರ್ಣಯಗಳಿಗೆ ಶನಿವಾರ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಂಗೀಕಾರ ಪಡೆಯಲಾಗುವುದು ಎಂದು ಸುರೇಶ್ ಬಾಬು ಅವರು ಹೇಳಿದರು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪುರ್, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ್, ಹೆಚ್.ಎಂ. ರಮೇಶ್ ಗೌಡ, ಜೆಡಿಎಸ್ ಐಟಿ ವಿಭಾಗದ ಅಧ್ಯಕ್ಷ ಚಂದನ್ ಸೇರಿದಂತೆ ಅನೇಕ ಮುಖಂಡರು ಉಪಸ್ತಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

13/01/2026 3:24 PM1 Min Read

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM1 Min Read

BIG NEWS : ಶಾಸಕ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ED ಕೇಸ್ ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ!

13/01/2026 3:10 PM1 Min Read
Recent News

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

13/01/2026 3:24 PM

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM

BIG NEWS : ಶಾಸಕ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ED ಕೇಸ್ ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ!

13/01/2026 3:10 PM

ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

13/01/2026 2:50 PM
State News
KARNATAKA

BREAKING: ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ರಾಜ್ಯ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0913/01/2026 3:24 PM KARNATAKA 1 Min Read

ಮೈಸೂರು: ರಾಜ್ಯ ಬಜೆಟ್ ಅನ್ನು ಮಾರ್ಚ್ ಮೊದಲು ಅಥವಾ 2ನೇ ವಾರದಲ್ಲಿ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಮೈಸೂರಿನ…

BREAKING : ಮಾರ್ಚ್ ಮೊದಲನೇ ವಾರದಲ್ಲಿ ರಾಜ್ಯ ಸರ್ಕಾರದ ಬಜೆಟ್ ಮಂಡನೆ : CM ಸಿದ್ದರಾಮಯ್ಯ ಘೋಷಣೆ

13/01/2026 3:23 PM

BIG NEWS : ಶಾಸಕ ಸತೀಶ್ ಸೈಲ್ ಗೆ ಮತ್ತೆ ರಿಲೀಫ್ : ED ಕೇಸ್ ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಿ ಹೈಕೋರ್ಟ್ ಆದೇಶ!

13/01/2026 3:10 PM

ಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ GBA ಪಾಲಿಕೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್

13/01/2026 2:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.