Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕದ ಶಿಕ್ಷಣ ರಂಗದಲ್ಲಿ ಕ್ರಾಂತಿ: 15,000 ಶಿಕ್ಷಕರ ಭರ್ತಿ, ‘800 KPS ಶಾಲೆ’ಗಳ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

ಎಚ್ಚರ! ನಿಮ್ಮ ಆಯಸ್ಸನ್ನು ಕಡಿಮೆ ಮಾಡುವ 4 ಆಹಾರಗಳಿವು

EPFO ಗ್ರಾಹಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್‌ನಲ್ಲೇ ಸಿಗಲಿದೆ ಪಿಎಫ್ ಬ್ಯಾಲೆನ್ಸ್, ಕ್ಲೈಮ್ ಸ್ಟೇಟಸ್ ಮಾಹಿತಿ! PF on WhatsApp soon

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನ್ ಮುಲ್ ಚುಕ್ಕಾಣಿ ಹಿಡಿಯಲು ಕೈ ನಾಯಕರ ಕಸರತ್ತು: ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಗೌಪ್ಯ ಸಭೆ
KARNATAKA

ಮನ್ ಮುಲ್ ಚುಕ್ಕಾಣಿ ಹಿಡಿಯಲು ಕೈ ನಾಯಕರ ಕಸರತ್ತು: ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಗೌಪ್ಯ ಸಭೆ

By ವಸಂತ ಬಿ ಈಶ್ವರಗೆರೆ

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ (ಮನ್ ಮುಲ್) ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಜಿಲ್ಲೆಯ ಕೈ ನಾಯಕರಿಂದ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದುಕೊಂಡಿವೆ.

ಜಿಲ್ಲಾಧಿಕಾರಿ ಡಾ.ಕುಮಾರ ಅವರು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಫೆ.02 ರಂದು ಚುನಾವಣೆ ನಿಗಧಿಯಾಗಿದೆ. ಈ ಬಾರಿ ಘಟಾನುಘಟಿಗಳು ಸ್ಪರ್ಧೆಗೆ ರಣಕಣ ಸಜ್ಜಾಗಿದ್ದು, ಚುನಾವಣೆ ಮತ್ತಷ್ಟು ರಂಗೇರುವಂತೆ ಮಾಡಿದೆ.

ಚುನಾವಣಾ ಸಂಬಂಧ ಸೋಮವಾರ ಶಾಸಕ ಕೆ.ಎಂ.ಉದಯ್ ಅವರ ಸ್ವಗ್ರಾಮದ ನಿವಾಸದಲ್ಲಿ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮುಖಂಡರು ಮತ್ತು ಆಕಾಂಕ್ಷಿಗಳ ಸಭೆ ನಡೆಸಿ ಮನ್ಮುಲ್ ಅಧಿಕಾರದ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸಿದ್ದಾರೆ.

ಈ ಚುನಾವಣೆಯಲ್ಲಿ ಯಾವುದೇ ಪಕ್ಷ, ಚಿಹ್ನೆ ಹೆಸರಿನಲ್ಲಿ ಚುನಾವಣೆ ನಡೆಯದಿದ್ದರೂ ರಾಜಕೀಯ ನಂಟು ಬೆಸೆದುಕೊಂಡಿದೆ. ಎಲ್ಲವೂ ರಾಜಕೀಯ ಲೆಕ್ಕಾಚಾರದ ಮೇಲೆ ನಡೆಯಲಿದೆ. ಈಗಾಗಲೇ 6 ಮಂದಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಈಗಿನಿಂದಲೇ ಚುನಾವಣಾ ತಯಾರಿ ಮಾಡಿಕೊಂಡು ಗ್ರಾಮೀಣ ಭಾಗದಲ್ಲಿ ಮತದಾನಕ್ಕೆ ನೇಮಕಗೊಂಡಿರುವ ಡೇರಿಗಳ ಪ್ರತಿನಿಧಿಯನ್ನು ಮನವೊಲಿಸಿ, ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಆಕಾಂಕ್ಷಿಗಳಿಗೆ ಕಿವಿಮಾತು ಹೇಳಿದ್ದಾರೆ.

ಮದ್ದೂರು ತಾಲೂಕಿನಿಂದ ಕದಲೂರು ರಾಮಕೃಷ್ಣ, ಮಾರಸಿಂಗನಹಳ್ಳಿ ಹರೀಶ್, ಮಳವಳ್ಳಿಯಿಂದ ಕೃಷ್ಣೆಗೌಡ, ನಾಗಮಂಗಲದಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಎನ್. ಅಪ್ಪಾಜಿಗೌಡ, ಲಕ್ಷೀನಾರಾಯಣ, ಶ್ರೀರಂಗಪಟ್ಟಣದಿಂದ ಬೋರೇಗೌಡ ಸ್ಪರ್ಧೆ ಮಾಡಲಿದ್ದು, ಇನ್ನು ಮಂಡ್ಯ, ಪಾಂಡವಪುರ ತಾಲೂಕಿನ ಅಭ್ಯರ್ಥಿಗಳನ್ನು ನಾಲ್ಕೈದು ದಿನದಳಲ್ಲಿ ಘೋಷಣೆ ಮಾಡಲಾಗುವುದು. ಕೆ.ಆರ್. ಪೇಟೆ ತಾಲೂಕಿನ ಅಭ್ಯರ್ಥಿ ಆಯ್ಕೆಯನ್ನು ಕಾಯ್ದಿರಿಸಲಾಗಿದೆ ಎಂದರು.

ಹಾಲು ಪೂರೈಕೆ ಮಾಡುವ ರೈತರಿಗೆ ಪ್ರೋತ್ಸಾಹ ಧನ ಕಾಲಕಾಲಕ್ಕೆ ಪಾವತಿ ಮಾಡಲಾಗುತ್ತಿದೆ. ಒಂದು ತಿಂಗಳು ತಡವಾದರೂ, ಎರಡು ತಿಂಗಳ ಹಣವನ್ನು ಒಮ್ಮೆಲೇ ಪಾವತಿ ಮಾಡಲಾಗಿದೆ. ಬಾಕಿ ಹಣವನ್ನು ಉಳಿಸಿಕೊಂಡಿಲ್ಲ. 5 ರೂ. ಪ್ರೋತ್ಸಾಹ ಧನವನ್ನು ಹೆಚ್ಚಿಸಿದ್ದು, 3 ರಿಂದ 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ರೈತರ ಪರವಾಗಿದೆ ಎಂದು ನುಡಿದರು.

ಬಿಜೆಪಿ, ಜೆಡಿಎಸ್ ಪಕ್ಷಗಳಿಂದ ಅಭಿವೃದ್ಧಿಯ ಕಡೆ ಗಮನವಿಲ್ಲ. ಪ್ರತಿದಿನ ನಮ್ಮ ವಿರುದ್ಧ ಹೇಳಿಕೆ ನೀಡೋದೇ ಅವರ ಕೆಲಸವಾಗಿದೆ ಎಂದು ಕಿಡಿಕಾರಿದರು. ಈಗಾಗಲೇ ರೈತರ ಜೀವನಾಡಿ ಮೈಶುಗರ್ ಕಾರ್ಖಾನೆ 1.80 ಲಕ್ಷ ಟನ್ ಕಬ್ಬನ್ನು ಹರೆದಿದ್ದು, 1.40 ಲಕ್ಷ ಯುನಿಟ್ ವಿದ್ಯುತ್ ತಯಾರಿಸಿದ್ದೇವೆ. ಡಿಸೆಂಬರ್ ಒಳಗೆ ಹೊಸ ಮೈಶುಗರ್ ಕಾರ್ಖಾನೆ ಮತ್ತು ಕೃಷಿ ವಿ.ವಿ ಸಂಬಂಧ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ ಎಂದರು.

ಇದೇ ವೇಳೆ ಶಾಸಕ ಕೆ.ಎಂ. ಉದಯ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ಭಾರತೀನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣೂರು ರಾಜೀವ್, ಮನ್ ಮುಲ್ ನಿರ್ದೇಶಕ ಕದಲೂರು ರಾಮಕೃಷ್ಣ, ಮುಖಂಡರಾದ ಚಿದಂಬರ್, ಹರೀಶ್, ತಾಪಂ ಮಾಜಿ ಅಧ್ಯಕ್ಷ ನಾಗಣ್ಣ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

ಜಲಮೂಲಗಳ ಅತಿಕ್ರಮಣಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಸೆನ್ಸೆಕ್ಸ್ 1,400 ಅಂಕಗಳ ಕುಸಿತ, ಹೂಡಿಕೆದಾರರಿಗೆ 8 ಲಕ್ಷ ಕೋಟಿ ರೂ. ನಷ್ಟ | Share Market Updates

BREAKING : ‘ತೀವ್ರ ಕಳವಳ’ : ಕೆನಡಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರಕ್ಕೆ ‘ಭಾರತ’ ಖಂಡನೆ

Share. Facebook Twitter LinkedIn WhatsApp Email

Related Posts

ಕರ್ನಾಟಕದ ಶಿಕ್ಷಣ ರಂಗದಲ್ಲಿ ಕ್ರಾಂತಿ: 15,000 ಶಿಕ್ಷಕರ ಭರ್ತಿ, ‘800 KPS ಶಾಲೆ’ಗಳ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

3 Mins Read

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

1 Min Read

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

2 Mins Read
Recent News

ಕರ್ನಾಟಕದ ಶಿಕ್ಷಣ ರಂಗದಲ್ಲಿ ಕ್ರಾಂತಿ: 15,000 ಶಿಕ್ಷಕರ ಭರ್ತಿ, ‘800 KPS ಶಾಲೆ’ಗಳ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

ಎಚ್ಚರ! ನಿಮ್ಮ ಆಯಸ್ಸನ್ನು ಕಡಿಮೆ ಮಾಡುವ 4 ಆಹಾರಗಳಿವು

EPFO ಗ್ರಾಹಕರಿಗೆ ಗುಡ್ ನ್ಯೂಸ್: ಇನ್ಮುಂದೆ ವಾಟ್ಸಾಪ್‌ನಲ್ಲೇ ಸಿಗಲಿದೆ ಪಿಎಫ್ ಬ್ಯಾಲೆನ್ಸ್, ಕ್ಲೈಮ್ ಸ್ಟೇಟಸ್ ಮಾಹಿತಿ! PF on WhatsApp soon

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

State News
KARNATAKA

ಕರ್ನಾಟಕದ ಶಿಕ್ಷಣ ರಂಗದಲ್ಲಿ ಕ್ರಾಂತಿ: 15,000 ಶಿಕ್ಷಕರ ಭರ್ತಿ, ‘800 KPS ಶಾಲೆ’ಗಳ ಆರಂಭಕ್ಕೆ ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್!

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಗೃಹ…

BREAKING: ಇನ್ಮುಂದೆ ರಾಜ್ಯದಲ್ಲಿ ತೆರೆದ ವಾಹನದಲ್ಲಿ ಸಫಾರಿಗೆ ಅವಕಾಶವಿಲ್ಲ: ಸಚಿವ ಈಶ್ವರ್ ಖಂಡ್ರೆ ಆದೇಶ

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.