ಬೆಂಗಳೂರು: ಮುಖ್ಯಮಂತ್ರಿಗಳೇ ತಾವು ಮಾನವೀಯತೆ, ಹೃದಯ ವೈಶಾಲ್ಯತೆ ತೋರಿ ಮೃತರ ಕುಟುಂಬದರವರಿಗೆ ತಲಾ 20 ಲಕ್ಷ ರೂ. ಪರಿಹಾರ ಕೊಡಬೇಕು ಎಂದು JDS ಪಕ್ಷವು ಆಗ್ರಹಿಸಿದೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮಾನವೀಯ ಮೌಲ್ಯ ಕಳೆದುಕೊಂಡಿರಾ ಸಿದ್ದರಾಮಯ್ಯ ಅವರೇ ? ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ ಎಂದಿದೆ.
ಆರ್ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು 25 ಲಕ್ಷ ರೂ. ಪರಿಹಾರ ಘೋಷಿಸಿತ್ತು. ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕೇರಳದ ವ್ಯಕ್ತಿ ಆನೆ ದಾಳಿಯಿಂದ ಮೃತಪಟ್ಟಾಗ 15 ಲಕ್ಷ ರೂ. ಪರಿಹಾರ ನೀಡಲಾಗಿತ್ತು.
ವಯನಾಡಿನಲ್ಲಿ ದುರಂತವಾದಾಗ ಕರ್ನಾಟಕ ಸರ್ಕಾರದಿಂದ 10 ಕೋಟಿ ಪರಿಹಾರ ಘೋಷಿಸಲಾಗಿತ್ತು. ಸಿಎಂ ಸಿದ್ಧರಾಮಯ್ಯನವರೇ ಹಾಸನದ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೂ ಮಾನವೀಯ ನೆಲೆಯಲ್ಲಿ ಇನ್ನೂ ಹೆಚ್ಚಿನ ಪರಿಹಾರ ಕೊಟ್ಟು, ಹೃದಯ ವೈಶಾಲ್ಯತೆ ತೋರಿ ಎಂದು ಹೇಳಿದೆ.
ಮಾನವೀಯ ಮೌಲ್ಯ ಕಳೆದುಕೊಂಡಿರಾ @siddaramaiah ಅವರೇ ?
ಹಾಸನ ತಾಲ್ಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರಕ್ ಹರಿದು 9 ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ದುರ್ಘಟನೆಯಲ್ಲಿ ಬಹುತೇಕರು ಕಾಲೇಜು ವಿದ್ಯಾರ್ಥಿಗಳಾಗಿದ್ದು, ಕುಟುಂಬಕ್ಕೆ ಆಸರೆಯಾಗಬೇಕಾಗಿದ್ದರು ಬಲಿಯಾಗಿದ್ದಾರೆ.
ಮುಖ್ಯಮಂತ್ರಿಗಳೇ… https://t.co/v472k7VVv9
— Janata Dal Secular (@JanataDal_S) September 13, 2025
ರಾಜ್ಯದಲ್ಲಿ ‘ಸೈಬರ್ ಕ್ರೈಂ’ ಕಡಿವಾಣಕ್ಕೆ ಸರ್ಕಾರ ದಿಟ್ಟಕ್ರಮ: ದೇಶದಲ್ಲೇ ಮೊದಲ ‘ಸೈಬರ್ ಕಮಾಂಡ್ ಸೆಂಟರ್’ ಸ್ಥಾಪನೆ
2 ವರ್ಷ 3 ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ 1 ಲಕ್ಷ ಕೋಟಿ ವೆಚ್ಚ: ಸಿಎಂ ಸಿದ್ಧರಾಮಯ್ಯ