ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಮಾಡಿದ್ದು ಇಡೀ ಭಾರತದ ಇತಿಹಾಸದಲ್ಲೇ ಅತ್ಯಂತ ಕ್ರೌರ್ಯವಾದ ಘಟನೆಯಾಗಿದೆ. ಪ್ರಜ್ವಲ್ ರೇವಣ್ಣ ಮಾಡಿದ ದೌರ್ಜನ್ಯ ಯಾವ ಜನಪ್ರತಿನಿಧಿಯೂ ಮಾಡಿಲ್ಲ. ಅತ್ಯಾಚಾರಕ್ಕೆ ಒಳಗಾದ ಸಾವಿರಾರು ಹೆಣ್ಣುಮಕ್ಕಳು ಧ್ವನಿ ಇಲ್ಲದವರು. ಸಂಸದ ಪ್ರಜ್ವಲ್ ರೇವಣ್ಣ ಅಡುಗೆ ಕೆಲಸ ಮಾಡೋ ಅಜ್ಜಿಯನ್ನೂ ಬಿಟ್ಟಿಲ್ಲ. ಇಂತಹ ರಾಕ್ಷಸನಿಗೆ ಶಿಕ್ಷೆಯಾಗಲಿ. ಅದು ಬೇರೆಯವರಿಗೂ ಒಂದು ಪಾಠವಾಗಬೇಕು ಎಂಬುದಾಗಿ ಕಾಂಗ್ರೆಸ್ ವಕ್ತಾರೆ ಭವ್ಯ ನರಸಿಂಹಮೂರ್ತಿ ಒತ್ತಾಯಿಸಿದ್ದಾರೆ.

ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಹೆಣ್ಣಿಗೆ ಯಾವುದೇ ಜಾತಿ, ಧರ್ಮ ಎಂಬುದಿಲ್ಲ. ನಾವು ಹೆಣ್ಣುಮಕ್ಕಳ ಪರವಾಗಿ ಮಾತನಾಡುತ್ತೇವೆ. ಬಿಜೆಪಿಯಂತೆ ಕೇವಲ ಪಕ್ಷಪಾತಿಗಳಾಗಿ ಮಾತನಾಡುವುದಿಲ್ಲ. ನಮಗೆ ನೇಹಾ, ರುಕ್ಷನಾ ಹಾಗೂ ಈ ನೀಚ ಸಂಸದನಿಂದ ಶೋಷಣೆಗೆ ಒಳಗಾಗಿರುವ ಎಲ್ಲಾ ಹೆಣ್ಣುಮಕ್ಕಳ ಪರವಾಗಿ ನಮ್ಮದು ಒಂದೇ ಹೋರಾಟದ ದನಿ ಎಂದರು.

ಪ್ರಜ್ವಲ್ ರೇವಣ್ಣ ನಡೆಸಿರುವ ಕೃತ್ಯ ಇಡೀ ದೇಶದಲ್ಲೆ ಯಾವ ಜನಪ್ರತಿನಿದಿಯೂ ನಡೆಸದ ಕೃತ್ಯ. ಶೋಷಣೆಗೆ ಒಳಗಾಗಿರುವ ಮಹಿಳೆಯರು ದನಿ ಇಲ್ಲದ ಮಹಿಳೆಯರು. ಅವರ ದನಿಯಾಗಿ ನಾವು ಇಂದು ಇಲ್ಲಿ ಸೇರಿದ್ದೇವೆ. ಈ ಆರೋಪಿಗೆ ತಕ್ಕ ಶಿಕ್ಷೆ ಆಗಬೇಕು ಎಂದರೆ ಮಾಧ್ಯಮಗಳ ಸಹಕಾರ ಬೇಕು. ದೇಶದ ಯಾವುದೇ ರಾಜಕಾರಣಿ ಹೆಣ್ಣುಮಕ್ಕಳ ಬಗ್ಗೆ ಕೆಟ್ಟದಾಗಿ ಯೋಚನೆ ಮಾಡುವ ಕೃತ್ಯ ಈ ಘಟನೆಯಿಂದ ಹೋಗಬೇಕು. ಇಂದೇ ನಾವೆಲ್ಲ ದೊಡ್ಡ ಹೋರಾಟಕ್ಕೆ ನಾಂದಿ ಹಾಡಬೇಕು. ಇತಿಹಾಸ ಸೃಷ್ಟಿ ಮಾಡಬೇಕು ಎಂದರು.

ಬಿಜೆಪಿಯ ರೇಪಿಸ್ಟ್ ರಾಜಕಾರಣಿಗಳಿಗೆ ಇದು ಪಾಠವಾಗಬೇಕು. ಹತ್ರಾಸ್ ಘಟನೆ, ಕತುವ ಘಟನೆ ನಡೆದಾಗ ಅತ್ಯಾಚಾರಿಗಳ ಪರವಾಗಿ ಬಿಜೆಪಿ ಎಂಎಲ್ ಎ ಗಳು ಮೆರವಣಿಗೆ ನಡೆಸಿದರು. ಕುಸ್ತಿ ಪಟುಗಳ ಮೇಲೆ ನಡೆದ ಕೃತ್ಯಕ್ಕೆ ಬಿಜೆಪಿಯವರೇ ಕುಮ್ಮಕ್ಕು ನೀಡಿದರು. ಒಲಂಪಿಕ್ ಪದಕ ತಂದಾಗ ಐಸ್ ಕ್ರೀಮ್ ತಿಂದು ಸೆಲ್ಫಿ ತೆಗೆದುಕೊಂಡ ಪಿಎಂ ದೌರ್ಜನ್ಯ ನಡೆದಾಗ ಮಾತೆ ಆಡಲಿಲ್ಲ ಎಂದು ವಾಗ್ಧಾಳಿ ನಡೆಸಿದರು.

ರೇಪಿಸ್ಟ್ ಗಳ ವಿರುದ್ಧ ಮೋದಿ ಒಂದು ಸಲವು ಮಾತನಾಡಿಲ್ಲ. ಬಿಜೆಪಿ ಮುಖಂಡ ದೇವರಾಜೆ ಗೌಡ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳಬೇಡಿ ಲೈಂಗಿಕ ಹಗರಣದ ವಿಡಿಯೋಗಳು ಇವೆ ಎಂದು ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೂ ಮೈತ್ರಿ ಮಾಡಿ ಕೊಂಡಿದ್ದು ಏಕೆ? ಕರ್ನಾಟಕದ ಹೆಣ್ಣುಮಕ್ಕಳ ಗೌರವವನ್ನು ಲೆಕ್ಕ ಹಾಕದೆ ನೀಚ ಮನುಷ್ಯನಿಗೆ ಟಿಕೆಟ್ ಕೊಟ್ಟಿದೆ ಬಿಜೆಪಿ. ಇದರಲ್ಲಿ ಜೆಡಿಎಸ್ ಕಾರ್ಯಕರ್ತರು ಇದ್ದಾರೆ. ಮನೆಕೆಲಸದ ಮಹಿಳೆ ಇದ್ದಾರೆ. ನಿಮ್ಮ ತಂದೆ, ತಾತಾನಿಗೆ ಊಟ ಬಡಿಸಿದ್ದೇನೆ ಎಂದರು ಆ ವ್ಯಕ್ತಿ ಬಿಟ್ಟಿಲ್ಲ. ರಕ್ಷಕನೆ ಭಕ್ಷಕನಾಗಿದ್ದಾನೆ ಎಂಬುದಾಗಿ ಕಿಡಿಕಾರಿದರು.

ಪ್ರಜ್ವಲ್ ರೇವಣ್ಣ ಮುಸ್ಲಿಂ ಆಗಿದ್ದರೆ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದರು ಎನಿಸುತ್ತದೆ. ಈ ಕೃತ್ಯದ ಬಗ್ಗೆ ಬಿಜೆಪಿಯವರು ಸಹ ಉತ್ತರ ನೀಡಬೇಕು. ಒಬ್ಬನೇ ಒಬ್ಬ ಬಿಜೆಪಿ ನಾಯಕಿಯರು ಮಾತ್ನನೇ ಆಡಿಲ್ಲ. ನಾಯಕರು ಬಾಯಿ ಬಿಟ್ಟಿಲ್ಲ. ತನ್ನ ಅಧಿಕಾರದ ದರ್ಪ ಬಳಸಿಕೊಂಡು ಕೃತ್ಯ ಎಸಗಿರುವ ಈ ವ್ಯಕ್ತಿ ವಿರುದ್ಧ ಮೊದಲು ಮಾತನಾಡಬೇಕಿರುವುದು ಈ ದೇಶದ ಗೃಹಸಚಿವ ಅಮಿತ್ ಶಾ ಎಂದರು.

ಕಾಂಗ್ರೆಸ್ ಪಕ್ಷ ಈ ಕೃತ್ಯವನ್ನು ಖಂಡಿಸುತ್ತದೆ. ಯಾವುದೇ ಕಾರಣಕ್ಕೂ ಅಪರಾಧಿ ಇದರಿಂದ ತಪ್ಪಿಸಿಕೊಳ್ಳದಂತೆ ಹೋರಾಟ ಮಾಡುತ್ತದೆ. ಮಹಿಳೆಯರಿಗೆ ನ್ಯಾಯ ದೊರೆಯುವಂತೆ ನೋಡಿಕೊಳ್ಳುತ್ತದೆ ಎಂದು ಹೇಳಿದರು.

BREAKING: ಹಾಸನ ‘ಪೆನ್ ಡ್ರೈವ್’ ಕೇಸ್: ತನಿಖೆಗೆ ‘SIT ತಂಡ’ ರಚಿಸಿ ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ

ಚುನಾವಣಾ ಪ್ರಚಾರ ಗೀತೆಯನ್ನು ಮಾರ್ಪಡಿಸುವಂತೆ AAPಗೆ ಚುನಾವಣಾ ಆಯೋಗ ಆದೇಶ

Share.
Exit mobile version