ಶಿವಮೊಗ್ಗ : ನಿನ್ನೆ ಹಾಸನದಲ್ಲಿ ಹಾಸನದಲ್ಲಿ ನಡೆದಂತಹ ಭೀಕರ ಅಪಘಾತದಲ್ಲಿ ಟಿಟಿ ವಾಹನದಲ್ಲಿದ್ದ 13 ಜನರು ಸಾವನಪ್ಪಿದ್ದರು. ಮಧುರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂಪಾಯಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ ಇದರ ಬೆನ್ನಲೇ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಅವರು ವೈಯಕ್ತಿಕವಾಗಿ ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂಪಾಯಿ ನೀಡಲಿದ್ದಾರೆ ಎಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದಲ್ಲಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮೃತ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ನಟ ಶಿವಣ್ಣ ಹಾಗೂ ಗೀತಾ ಅವರು ವೈಯಕ್ತಿಕವಾಗಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಮೃತರ ಕುಟುಂಬಕ್ಕೆ 1 ಲಕ್ಷ ಪರಿಹಾರ ನೀಡಲಿದ್ದಾರೆ. ಶೀಘ್ರದಲ್ಲಿ ಮೃತರ ಕುಟುಂಬಕ್ಕೆ ಶಿವಣ್ಣ ಹಾಗೂ ಗೀತಾ ಶಿವರಾಜಕುಮಾರ್ ಪರಿಹಾರ ನೀಡಲಿದ್ದಾರೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು.
ನಿನ್ನೆ ನಸುಕಿನ ಜವ 4 ಗಂಟೆಗೆ ನಿಂತಿದ್ದ ಲಾರಿಗೆ ಟಿಟಿ ವಾಹನ ಬಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 13 ಜನರು ಸ್ಥಳದಲ್ಲಿ ಪ್ರಾಣ ಬಿಟ್ಟಿದ್ದು ಇನ್ನೂ ನಾಲ್ಕು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವರ ದರ್ಶನ ಪಡೆದುಕೊಂಡು ವಾಪಸ್ ಆಗುವ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಮೃತ ಪಟ್ಟವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದವರು ಎಂದು ತಿಳಿದುಬಂದಿದೆ.