Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ರಾತ್ರಿಯಿಡೀ ಭಾರೀ ಮಳೆ : ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ.!

11/10/2025 6:05 AM

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

11/10/2025 5:59 AM

ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್‌; ಏನಿದರ ವಿಶೇಷತೆ, ಪ್ರಯೋಜನ?

11/10/2025 5:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹಾವೇರಿಯಲ್ಲಿ ಅಪಘಾತ ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ನಟ ಶಿವಣ್ಣ ದಂಪತಿ
KARNATAKA

ಹಾವೇರಿಯಲ್ಲಿ ಅಪಘಾತ ಪ್ರಕರಣ : ಮೃತ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ.ಪರಿಹಾರ ನೀಡಿದ ನಟ ಶಿವಣ್ಣ ದಂಪತಿ

By kannadanewsnow0508/07/2024 4:31 PM

ಶಿವಮೊಗ್ಗ : ಇತ್ತೀಚಿಗೆ ಹಾವೇರಿಯಲ್ಲಿ ಭೀಕರ ಅಪಘಾತ ಸಂಭವಿಸಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಎಮ್ಮೆಹಟ್ಟಿಯ 13 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಇಂದು ನಟ ಶಿವರಾಜಕುಮಾರ್ ಪತ್ನಿ ಗೀತಾ ಮೃತ ಕುಟುಂಬಸ್ಥರಿಗೆ ಭೇಟಿ ನೀಡಿ ಸಾಂತ್ವನ ಹೇಳಿ 1 ಲಕ್ಷ ರೂಪಾಯಿ ಪರಿಹಾರ ನೀಡಿದರು.

ಹೌದು ಅಪಘಾತದಲ್ಲಿ ಮೃತಪಟ್ಟ ಶಿವಮೊಗ್ಗ ಜಿಲ್ಲೆಯ ಎಮ್ಮೆಹಟ್ಟಿ ಗ್ರಾಮದ 13 ಜನರ ಕುಟುಂಬಗಳಿಗೆ ಶಿವರಾಜ್​ಕುಮಾರ್​ ಮತ್ತು ಗೀತಾ ದಂಪತಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪ್ರತಿ ಕುಟುಂಬಕ್ಕೆ ತಲಾ ಒಂದು ಲಕ್ಷ ರೂಪಾಯಿ ನೀಡಿದ್ದಾರೆ. ಈ ಕುಟುಂಬದವರಿಗೆ ನೋವು ಸಹಿಸುವ ಶಕ್ತಿಯನ್ನು ದೇವರ ನೀಡಲಿ ಎಂದು ಶಿವರಾಜ್​ಕುಮಾರ್​-ಗೀತಾ ದಂಪತಿ ಪ್ರಾರ್ಥಿಸಿದ್ದಾರೆ.

ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಶಿವರಾಜಕುಮಾರ, ಸಹಾಯ ಮಾಡುವುದು ಸುಲಭ. ಆದರೆ ಈ ಕುಟುಂಬದವರಿಗೆ ಸಮಾಧಾನ ಮಾಡುವುದು ಹೇಗೆ ಎಂಬ ಪ್ರಶ್ನೆ ಹುಟ್ಟಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಗ್ರಾಮಸ್ಥರೆಲ್ಲ ಒಂದಾಗಿ ಇರುವುದೇ ದೊಡ್ಡ ವಿಷಯ. ಕುಟುಂಬದವರಿಗೆ ಆದ ನಷ್ಟ ಪ್ರತಿದಿನವೂ ಕಾಡುತ್ತಾ ಇರುತ್ತದೆ. ನೋವನ್ನು ಸಹಿಸುವ ಶಕ್ತಿ ಆ ದೇವರು ನೀಡಲಿ ಅಂತ ಕೇಳಿಕೊಳ್ಳುತ್ತೇನೆ. ಇಲ್ಲಿಗೆ ಬಂದು ನೋಡಿದಾಗ ಬಹಳ ಬೇಸರ ಆಯಿತು. ಇಂಥ ಘಟನೆ ಆಗಬಾರದಾಯಿತು. ನಮ್ಮ ಕೈಯಲ್ಲಿ ಆದ ಸಹಾಯ ಮಾಡಿದ್ದೇವೆ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.

ಬಳಿಕ ಗೀತಾ ಶಿವರಾಜ್​ಕುಮಾರ್​ ಅವರು ಮಾತನಾಡಿ. ಈ ದುರ್ಘಟನೆ ನಡೆದಾಗಿನಿಂದ ಇಲ್ಲಿಗೆ ಬರುವ ಧೈರ್ಯ ಮಾಡಲು ನನಗೆ ತುಂಬ ಕಷ್ಟ ಆಯಿತು. 13 ಜನರ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ದೇವರೇ ನೀಡಬೇಕು. ಅವರಿಗೆ ಆಗಿರುವ ನಷ್ಟವನ್ನು ನಾವು ಯಾರೂ ಕೂಡ ತುಂಬಲು ಸಾಧ್ಯವಿಲ್ಲ. ಅವರ ನೆರವಿಗೆ ಬರಲು ನಮಗೆ ಅವಕಾಶ ಇದೆ ಅಷ್ಟೇ. ನಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ ಎಂದು ಗೀತಾ ಶಿವರಾಜ್​ಕುಮಾರ್​ ಅವರು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ರಾತ್ರಿಯಿಡೀ ಭಾರೀ ಮಳೆ : ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ.!

11/10/2025 6:05 AM1 Min Read

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

11/10/2025 5:59 AM2 Mins Read

ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್‌; ಏನಿದರ ವಿಶೇಷತೆ, ಪ್ರಯೋಜನ?

11/10/2025 5:53 AM1 Min Read
Recent News

BREAKING : ಬೆಂಗಳೂರಿನಲ್ಲಿ ರಾತ್ರಿಯಿಡೀ ಭಾರೀ ಮಳೆ : ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ.!

11/10/2025 6:05 AM

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

11/10/2025 5:59 AM

ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್‌; ಏನಿದರ ವಿಶೇಷತೆ, ಪ್ರಯೋಜನ?

11/10/2025 5:53 AM
Do you know what happens if your index toe is longer than your thumb

ಮಹಿಳೆಯರೇ ಗಮನಿಸಿ: ನಿಮ್ಮ ಕಾಲಿನ ತೋರು ಬೆರಳು ಹೆಬ್ಬೆರಳಿಗಿಂತ ಉದ್ದವಾಗಿದ್ದರೆ ಏನಾಗುತ್ತದೆ ಗೊತ್ತಾ?

11/10/2025 5:14 AM
State News
KARNATAKA

BREAKING : ಬೆಂಗಳೂರಿನಲ್ಲಿ ರಾತ್ರಿಯಿಡೀ ಭಾರೀ ಮಳೆ : ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ.!

By kannadanewsnow5711/10/2025 6:05 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರಿಯಿಡಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಭಾರೀ…

ರಾಜ್ಯ ಸರ್ಕಾರದಿಂದಲೇ `ಆ್ಯಂಬುಲೆನ್ಸ್’ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಗ್ರೀನ್ ಸಿಗ್ನಲ್.!

11/10/2025 5:59 AM

ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್‌; ಏನಿದರ ವಿಶೇಷತೆ, ಪ್ರಯೋಜನ?

11/10/2025 5:53 AM

ಜಾತಿಗಣತಿ ಸಮೀಕ್ಷೆ: ಹೀಗಿದೆ ರಾಜ್ಯ, ಬೆಂಗಳೂರಿನ ಪ್ರಗತಿಯ ಅಂಕಿ-ಅಂಶ ವಿವರ

10/10/2025 9:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.