ಹಾವೇರಿಯಲ್ಲಿ ಘೋರ ದುರಂತ : ಬೈಕ್ ಸವಾರರ ಮೇಲೆ ಬಿದ್ದ ಬೃಹತ್ ಬೇವಿನಮರ: ಸ್ಥಳದಲ್ಲೇ ಇಬ್ಬರು ದುರ್ಮರಣ

ಹಾವೇರಿ : ಹಾವೇರಿಯಲ್ಲಿ ಘೋರ ದುರಂತ ಸಂಭವಿಸಿದ್ದು ಬೃಹತ್​ ಬೇವಿನಮರ ಬಿದ್ದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಹಿರೇಕೆರೂರು-ಮಾಸೂರು ಮಾರ್ಗಮಧ್ಯೆ ನಡೆದಿದೆ. ಹಿರೇಕೇರೂರು ತಾಲೂಕು ಯತ್ತಿನಹಳ್ಳಿ ಗ್ರಾಮದ ನಿವಾಸಿ ಹನುಮಂತ (28) ಮತ್ತು ಚಿನ್ನಮುಳಗುಂದ ಗ್ರಾಮದ ನಿವಾಸಿ ಮಂಜುನಾಥ್ (29) ಮೃತರು. ಹಿರೇಕೇರೂರು ಪಟ್ಟಣದಿಂದ ಮಾಸೂರು ಕಡೆಗೆ ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಸ್ಥಳಕ್ಕೆ ಹಿರೇಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.