Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ‘ಆನ್ಲೈನ್ ಗೇಮಿಂಗ್ ಮಸೂದೆ’ಗೆ ಕೇಂದ್ರ ಸರ್ಕಾರ ಅನುಮೋದನೆ : ಬೆಟ್ಟಿಂಗ್ ಇನ್ನು ಶಿಕ್ಷಾರ್ಹ ಅಪರಾಧ

20/08/2025 6:39 AM

ಅಫ್ಘಾನಿಸ್ತಾನದಲ್ಲಿ ಭೀಕರ ಅಪಘಾತ: ವಲಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಬೈಕಿಗೆ ಡಿಕ್ಕಿ, 71 ಮಂದಿ ಸಾವು | Accident

20/08/2025 6:39 AM

ಗೋಮಾಳದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಷರತ್ತಿನಡಿ ‘ಬಗರ್ ಹುಕುಂ’ ಮಂಜೂರು.!

20/08/2025 6:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿಎಂ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್: ಸೆ.2ಕ್ಕೆ ಹೈಕೋರ್ಟ್ ನಿಂದ ಅರ್ಜಿ ವಿಚಾರಣೆ ಮುಂದೂಡಿಕೆ | Siddaramaiah
KARNATAKA

ಸಿಎಂ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್: ಸೆ.2ಕ್ಕೆ ಹೈಕೋರ್ಟ್ ನಿಂದ ಅರ್ಜಿ ವಿಚಾರಣೆ ಮುಂದೂಡಿಕೆ | Siddaramaiah

By kannadanewsnow0931/08/2024 4:53 PM

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್.2ಕ್ಕೆ ಮುಂದೂಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್ ನೀಡಿದೆ.

ಇಂದು ಸಿಎಂ ಸಿದ್ಧರಾಮಯ್ಯ ಅವರು ಮುಡಾ ಹಗರಣ ಸಂಬಂಧ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ವಿಚಾರಣೆ ನಡೆಯಿತು.

ದೂರುದಾರ ಪ್ರದೀಪ್ ಕುಮಾರ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾದವಗಿ ಅವರು ಆರೋಪಿಗಳಿಗೆ ನೋಟಿಸ್ ನೀಡಿ ತನಿಖೆಗೆ ಅವಕಾಶ ನೀಡಬಾರದು. ನೋಟಿಸ್ ನೀಡಿದರೇ ತನಿಖೆಯೇ ಪೂರ್ವಗ್ರಾಹಕ್ಕೊಳಗಾಗಲಿದೆ. 17ಎ ಹಂತದಲ್ಲಿ ರಾಜ್ಯಪಾಲರ ಕ್ರಮ ಪ್ರಶ್ನಿಸಲು ಅವಕಾಶವಿಲ್ಲ. ಎಫ್ಐಆರ್ ದಾಖಲಾದ ಬಳಿಕವಷಅಟೇ ಆರೋಪಿಗೆ ಅದನ್ನು ಪ್ರಶ್ನಿಸುವ ಹಕ್ಕು ಬರಲಿದೆ ಎಂದು ವಾದಿಸಿದರು.

ಸಂವಿಧಾನದ 163ರಡಿ ಸಿಎಂ ಕೂಡ ಕ್ಯಾಬಿನೆಟ್ ಭಾಗವಾಗಿದ್ದಾರೆ. ಹೀಗಾಗಿ ಸಿಎಂ ಹೊರತಾದ ಕ್ಯಾಬಿನೆಟ್ ಇರಲು ಸಾಧ್ಯವಿಲ್ಲ. ಹೀಗಾಗಿ ಕ್ಯಾಬಿನೆಟ್ ನಿರ್ಣಯವನ್ನು ರಾಜ್ಯಪಾಲರು ಪರಿಗಣಿಸಬೇಕಿಲ್ಲ.

ಹೈಕೋರ್ಟ್ ನ್ಯಾಯಪೀಠದ ಮುಂದೆ ಹಿರಿಯ ವಕೀಲ ಪ್ರಭುಲಿಂಗ ನಾದವಗಿ ಅವರು ಆರ್ ಎಸ್ ನಾಯಕ್ ಪ್ರಕರಣ, ಸುಪ್ರೀಂ ಕೋರ್ಟ್ ಎಕೆ ಕ್ರೈ ಪಾಕ್ ಕೇಸ್ ಉಲ್ಲೇಖಗಳನ್ನು ಕೂಡ ಮುಂದಿಟ್ಟು ವಾದಿಸಿದರು.

ಈ ಬಳಿಕ ಟಿಜೆ ಅಬ್ರಾಹಂ ಪರ ವಕೀಲ ರಂಗನಾಥ್, ಮುಡಾ ಸೈಟ್ ಹಂಚಿಕೆಗಾಗಿ ಡಿನೋಟಿಫಿಕೇಷನ್ ಆದಾಗ ಸಿದ್ಧರಾಮಯ್ಯ ಅವರು ಡಿಸಿಎಂ ಆಗಿದ್ದರು. ಭೂ ಪರಿವರ್ತನೆ ಆದಾಗಲೂ ಸಿದ್ಧರಾಮಯ್ಯ ಡಿಸಿಎಂ ಆಗಿದ್ದರು. 50:50 ಸೈಟ್ ಹಂಚಿಕೆ ಮಾಡುವಂತೆ ಕೇಳಿದಾಗ ಸಿದ್ಧರಾಮಯ್ಯ ಸಿಎಂ ಆಗಿದ್ದರು ಎಂಬುದಾಗಿ ನ್ಯಾಯಾಲಯದ ಗಮನಕ್ಕೆ ತಂದರು.

ದಿನಾಂಕ 25-10-2021ರಲ್ಲಿ 50:50 ನಿವೇಶನ ಹಂಚಿಕೆಗೆ ಮನವಿ ಮಾಡಲಾಗಿದೆ. ಸಿಎಂ ಪುತ್ರ ಇದ್ದಂತ ಮುಡಾ ಸಭೆಯಲ್ಲೇ ಒಪ್ಪಿಗೆ ನೀಡಲಾಗಿದೆ. ದಿನಾಂಕ 25-11-2021ರಂದು 50:50 ಹಕ್ಕು ಬಿಡುಗಡೆ ಮಾಡಲಾಗಿದೆ. ನಂತ್ರ ಸಿಎಂ ಪತ್ನಿಗೆ ಬದಲಿ ನಿವೇಶನ ಹಂಚಿಕೆ ಮಾಡಲಾಗಿದೆ. ಯಾವುದೇ ಜಮೀನು ಕಳೆದುಕೊಳ್ಳದೇ ಸಿಎಂ ಪತ್ನಿಗೆ ಸೈಟ್ ಹಂಚಿಕೆ ಮಾಡಲಾಗಿದೆ ಎಂದರು.

ಈ ಪ್ರಕರಣದ ಸಂಬಂಧ ಮತ್ತಷ್ಟು ವಾದವನ್ನು ಮಾಡುವುದಿದೆ ಎಂಬುದಾಗಿ ನ್ಯಾಯಪೀಠಕ್ಕೆ ಮನವಿ ಮಾಡಿದ್ದರಿಂದ, ಹೈಕೋರ್ಟ್ ಸಿಎಂ ಪ್ರಾಸಿಕ್ಯೂಷನ್ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್.2ಕ್ಕೆ ಮುಂದೂಡಿತು. ಸೆ.2ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸುವುದಾಗಿ ಹೇಳಿ, ಮುಂದೂಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯಗೆ ತಾತ್ಕಾಲಿಕ ರಿಲೀಫ್ ಅನ್ನು ಹೈಕೋರ್ಟ್ ಮತ್ತೆ ನೀಡಿದೆ.

ಗಮನಿಸಿ: ಸೆ.1ರ ಭಾನುವಾರವೂ ‘BESCOM’ ಕ್ಯಾಶ್ ಕೌಂಟರ್ ಓಪನ್, ‘ವಿದ್ಯುತ್ ಬಿಲ್’ ಪಾವತಿಗೆ ಅವಕಾಶ | BESCOM

ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Share. Facebook Twitter LinkedIn WhatsApp Email

Related Posts

ಗೋಮಾಳದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಷರತ್ತಿನಡಿ ‘ಬಗರ್ ಹುಕುಂ’ ಮಂಜೂರು.!

20/08/2025 6:36 AM3 Mins Read

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/08/2025 6:14 AM2 Mins Read

SHOCKING : ಚಾಮರಾಜನಗರದಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು.!

20/08/2025 6:10 AM1 Min Read
Recent News

BIG NEWS : ‘ಆನ್ಲೈನ್ ಗೇಮಿಂಗ್ ಮಸೂದೆ’ಗೆ ಕೇಂದ್ರ ಸರ್ಕಾರ ಅನುಮೋದನೆ : ಬೆಟ್ಟಿಂಗ್ ಇನ್ನು ಶಿಕ್ಷಾರ್ಹ ಅಪರಾಧ

20/08/2025 6:39 AM

ಅಫ್ಘಾನಿಸ್ತಾನದಲ್ಲಿ ಭೀಕರ ಅಪಘಾತ: ವಲಸಿಗರನ್ನು ಕರೆದೊಯ್ಯುತ್ತಿದ್ದ ಬಸ್ ಬೈಕಿಗೆ ಡಿಕ್ಕಿ, 71 ಮಂದಿ ಸಾವು | Accident

20/08/2025 6:39 AM

ಗೋಮಾಳದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಷರತ್ತಿನಡಿ ‘ಬಗರ್ ಹುಕುಂ’ ಮಂಜೂರು.!

20/08/2025 6:36 AM

ಬಾಲ್ಯ ವಿವಾಹ ಹೆಚ್ಚಳಕ್ಕೆ ಹವಾಮಾನ ವೈಪರೀತ್ಯದ ಕಾರಣ: ಅಧ್ಯಯನ

20/08/2025 6:33 AM
State News
KARNATAKA

ಗೋಮಾಳದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಷರತ್ತಿನಡಿ ‘ಬಗರ್ ಹುಕುಂ’ ಮಂಜೂರು.!

By kannadanewsnow5720/08/2025 6:36 AM KARNATAKA 3 Mins Read

ಬೆಂಗಳೂರು: ಬಗರ್ ಹುಕುಂ ಅರ್ಜಿಗಳ ವಿಲೇ ವಿಚಾರದಲ್ಲಿ ಸರ್ಕಾರ ಅಥವಾ ಅಧಿಕಾರಿಗಳು ಕಾನೂನು ಮೀರಿ ನಡೆದಿಲ್ಲ, ಒಂದು ವೇಳೆ ರೈತರಿಗೆ…

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/08/2025 6:14 AM

SHOCKING : ಚಾಮರಾಜನಗರದಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು.!

20/08/2025 6:10 AM

ರಾಜ್ಯದ ಸರ್ಕಾರಿ ಕಾಲೇಜುಗಳ `ಸಹಾಯಕ ಪ್ರಾಧ್ಯಾಪಕರಿಗೆ’ ಗುಡ್ ನ್ಯೂಸ್ : `UGC ವೇತಣಿ ಶ್ರೇಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

20/08/2025 6:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.