Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM

ಮೌಂಟ್ ಎವರೆಸ್ಟ್ ಏರಿ, ಇಳಿಯುವಾಗ ಭಾರತೀಯ ಪರ್ವತಾರೋಹಿ ಸಾವು | Mount Everest

16/05/2025 5:29 PM

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ: ಸೆ.9ಕ್ಕೆ ಸಿದ್ಧರಾಮಯ್ಯ ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿಕೆ | CM Siddaramaiah
KARNATAKA

BREAKING: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ: ಸೆ.9ಕ್ಕೆ ಸಿದ್ಧರಾಮಯ್ಯ ಅರ್ಜಿ ವಿಚಾರಣೆ ಹೈಕೋರ್ಟ್ ಮುಂದೂಡಿಕೆ | CM Siddaramaiah

By kannadanewsnow0902/09/2024 4:33 PM

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನಡೆಸಿತು. ಇಂದಿನ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಸೆಪ್ಟೆಂಬರ್.9ಕ್ಕೆ ವಿಚಾರಣೆಯನ್ನು ಮುಂದೂಡಿತು.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಂತ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಇಂದು ದೂರುದಾರರ ಪರವಾಗಿ ಹಿರಿಯ ವಕೀಲ ಕೆ.ಜಿ ರಾಘವನ್ ತಮ್ಮ ವಾದವನ್ನು ನ್ಯಾಯಪೀಠದ ಮುಂದಿಟ್ಟರು.

ನಾನು ಕಾನೂನು, ವಾಸ್ತವಾಂಶದ ಪ್ರಶ್ನೆಗಳ ಬಗ್ಗೆ ವಾದಿಸುತ್ತೇನೆ. ವಾಕ್ಚಾತುರ್ಯ ಮತ್ತು ವ್ಯಂಗ್ಯದಿಂದ ವಾದಿಸಲು ಬಯಸುವುದಿಲ್ಲ. ಭ್ರಟಾಚಾರ ತಡೆ ಕಾಯ್ದೆ ಸೆಕ್ಷನ್.17ಎ ಆಧರಿಸಿ ವಾದಿಸುತ್ತೇನೆ ಎಂಬುದಾಗಿ ನ್ಯಾಯಪೀಠಕ್ಕೆ ತಿಳಿಸಿದರು.

ಸೆಕ್ಷನ್.7ಸಿ ಓದಲು ಬಯಸುತ್ತೇನೆ. ಅನಗತ್ಯ ಲಾಭ, ಅನುಕೂಲ ಪಡೆಯುವುದು ಕೂಡ ಕಾಯ್ದೆಯ ವ್ಯಾಪ್ತಿಯಲ್ಲಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಉಲ್ಲೇಖಿಸಿ ಹಿರಿಯ ವಕೀಲ ಕೆ.ಜಿ ರಾಘವನ್ ವಾದವನ್ನು ಹೈಕೋರ್ಟ್ ನ್ಯಾಯಪೀಠದ ಮುಂದೆ ಮಂಡಿಸಿದರು.

ಈ ಕೇಸಿಗೆ ಸಂಬಂಧಿಸಿದಂತೆ ಈ ಮಾತು ಹೇಳುತ್ತಿಲ್ಲ. ಅನುಚಿತ ಅನುಕೂಲ ಪಡೆಯಲು ಅಧಿಕಾರಿಗಳ ಮೇಲೆ ಪ್ರಭಾವ ಬಳಸಿದರೇ ಅಪರಾಧವಾಗಲಿದೆ. ಪಡೆಯುವ ಅನುಕೂಲ ಕಾನೂನುಬಾರಿರವಾಗಿಲ್ಲದಿದ್ದರೂ ಅಪರಾಧ ಎಂಬುದಾಗಿ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಮುಂದೆ ಸೆಕ್ಷನ್.7ಸಿಯನ್ನು ಓದಿ ವಿವರಿಸಿದರು.

ವಾದ ಮುಂದುವರೆಸಿದಂತ ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ ರಾಘವನ್ ಅವರು ಯಾವುದೇ ಕಾರಣಕ್ಕೂ ರಾಜ್ಯಪಾಲರು ನೀಡಿರುವಂತ ಪ್ರಾಸಿಕ್ಯೂಷನ್ ಗೆ ತಡೆ ನೀಡಬಾರದು. ಈಗಾಗಲೇ ರಾಜ್ಯ ಸರ್ಕಾರವೇ ಹಗರಣ ನಡೆದಿರುವ ಬಗ್ಗೆ ತನಿಖಾ ಸಮಿತಿಯನ್ನು ರಚನೆ ಮಾಡಿದೆ ಎಂಬುದಾಗಿ ಕೋರಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮುಡಾ ಸೈಟು ಹಂಚಿಕೆಯಲ್ಲಿ ಪ್ರಭಾವ ಬೀರಿದ್ದಾರೆ. 2017ರಲ್ಲಿ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದರು. ಒಂದು ಸೈಟ್ ಗೂ ಅರ್ಹತೆ ಇಲ್ಲದವರಿಗೆ 14 ಸೈಟು ನೀಡಲಾಗಿದೆ. ಮುಡಾ ಹಗರಣದಲ್ಲಿ ಸಿದ್ಧರಾಮಯ್ಯ ಭಾಗಿಯಾಗಿದ್ದಾರೆ ಎಂಬುದಾಗಿ ಸುದೀರ್ಘವಾದವನ್ನು ದೂರುದಾರ ಸ್ನೇಹಮಯಿ ಕೃಷ್ಣ ಪರವಾಗಿ ಹಿರಿಯ ವಕೀಲ ಕೆ.ಜಿ ರಾಘವನ್ ಹೈಕೋರ್ಟ್ ನ್ಯಾಯಪೀಠದ ಮುಂದಿಟ್ಟರು.

ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರ ವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠಕ್ಕೆ ವಿಚಾರಣೆಯನ್ನು ಮುಂದಿನ ಸೋಮವಾರಕ್ಕೆ ಮುಂದೂಡುವಂತೆ ಎಜಿ ಮನವಿ ಮಾಡಿದರು. ಅಲ್ಲದೇ ಸಚಿವ ಸಂಪುಟದ ನಿರ್ಣಯದ ಬಗ್ಗೆ ವಾದ ಮಂಡಿಸಬೇಕಿದೆ. ಹೀಗಾಗಿ ಒಂದು ವಾರಗಳ ಕಾಲಾವಕಾಶ ನೀಡುವಂತೆ ಕೋರಿದರು. ಈ ವೇಳೆಯಲ್ಲಿ ಹಬ್ಬಕ್ಕೂ ಮೊದಲೇ ವಾದ ಮಂಡಿಸಿ ಮುಗಿಸಿ ಬಿಡಿ ಎಂಬುದಾಗಿ ನ್ಯಾಯಮೂರ್ತಿಗಳು ಸೂಚಿಸಿದರು.

ಎಜಿ ವಾದಿಸಿದ ಮೇಲೆ ನಾನು ವಾದ ಮಂಡಿಸುವುದಾಗಿ ಮುಖ್ಯಮಂತ್ರಿ ಪರ ಅಭಿಷೇಕ್ ಮನು ಸಿಂಘ್ವಿ ತಿಳಿಸಿದರು. ಸೆಪ್ಟೆಂಬರ್ 9 ಅಥವಾ 12ರಂದು ತಾನು ವಾದಿಸುವುದಾಗಿ ಹೇಳಿದರು. ಈ ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ನ್ಯಾಯಪೀಟವು ಸೆ.9ಕ್ಕೆ ವಿಚಾರಣೆಯನ್ನು ಮುಂದೂಡಿತು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಮಂಡ್ಯದ ನಿಮಿಷಾಂಬ, ಉಕ್ಕಡ ಮಾರಮ್ಮ ದೇಗುಲಗಳಿಗೆ ‘ಸಚಿವ ರಾಮಲಿಂಗಾರೆಡ್ಡಿ’ ಭೇಟಿ

BIG UPDATE: ಜಮ್ಮು-ಕಾಶ್ಮೀರದ ವೈಷ್ಣೋ ದೇವಿ ದೇವಸ್ಥಾನದ ರಸ್ತೆಯಲ್ಲಿ ಭೂಕುಸಿತ: ಇಬ್ಬರು ಮಹಿಳೆಯರು ದುರ್ಮರಣ

BREAKING : ‘ಮನಿ ಲಾಂಡರಿಂಗ್’ ಕೇಸ್ : ‘ED’ ಯಿಂದ AAP ಶಾಸಕ ‘ಅಮಾನತುಲ್ಲಾ ಖಾನ್’ ಅರೆಸ್ಟ್!

Share. Facebook Twitter LinkedIn WhatsApp Email

Related Posts

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM1 Min Read

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM1 Min Read

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

16/05/2025 4:55 PM1 Min Read
Recent News

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

16/05/2025 5:36 PM

ಮೌಂಟ್ ಎವರೆಸ್ಟ್ ಏರಿ, ಇಳಿಯುವಾಗ ಭಾರತೀಯ ಪರ್ವತಾರೋಹಿ ಸಾವು | Mount Everest

16/05/2025 5:29 PM

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM

ಟರ್ಕಿ, ಅಜೆರ್ಬೈಜಾನ್ ಜೊತೆಗೆ ವ್ಯಾಪಾರ ಸ್ಥಗಿತಗೊಳಿಸುವುದಾಗಿ ಭಾರತೀಯ ವ್ಯಾಪಾರಿಗಳು ಘೋಷಣೆ

16/05/2025 5:01 PM
State News
KARNATAKA

BIG NEWS: ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ನಡುವೆ ಮಾರಾಮಾರಿ: ಓರ್ವನಿಗೆ ಗಂಭೀರ ಗಾಯ

By kannadanewsnow0916/05/2025 5:36 PM KARNATAKA 1 Min Read

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿಯಾಗಿದೆ. ಈ ಘಟನೆಯಲ್ಲಿ ಓರ್ವ ಖೈದಿ ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು…

BIG NEWS : ಚಿಕ್ಕಬಳ್ಳಾಪುರ : ಪೋಷಕರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ವರಿಸಿದ ಮುಸ್ಲಿಂ ಯುವತಿ!

16/05/2025 5:06 PM

BREAKING: ಕರ್ನಾಟಕ ದ್ವಿತೀಯ PUC ಪರೀಕ್ಷೆ-2ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka 2nd PUC Exam Results

16/05/2025 4:55 PM

ಉಗ್ರರ ಹತ್ಯೆಗೈದ ಬಗ್ಗೆ ಸರಿಯಾದ ಮಾಹಿತಿ ಕೊಟ್ಟಿಲ್ಲ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಶಾಸಕ ಕೊತ್ತೂರು ಮಂಜುನಾಥ್

16/05/2025 4:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.