Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

19/10/2025 5:28 PM

BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!

19/10/2025 5:22 PM

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

19/10/2025 4:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನಾರೋಗ್ಯದ ನಡುವೆಯೂ ರಾಜ್ಯಸಭೆಯ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್.ಡಿ.ದೇವೇಗೌಡ
KARNATAKA

ಅನಾರೋಗ್ಯದ ನಡುವೆಯೂ ರಾಜ್ಯಸಭೆಯ ಬಜೆಟ್ ಚರ್ಚೆಯಲ್ಲಿ ಪಾಲ್ಗೊಂಡ ಹೆಚ್.ಡಿ.ದೇವೇಗೌಡ

By kannadanewsnow0913/02/2025 6:35 PM

ನವದೆಹಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು; ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು; ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ ಎಂದರು.

ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ ಕೈಲಾದ ಎಲ್ಲವನ್ನೂ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ನಗರಗಳಿಗೆ ವಲಸೆ ಬಗ್ಗೆ ಕಳವಳ:

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವವರ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಸಮತೋಲಿತ ಜೀವನೋಪಾಯ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳನ್ನು (MSME) ಬೆಂಬಲಿಸಲು ಹೆಚ್ಚು ಸೂಕ್ತವಾದ ಉಪಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವನ್ನು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

“ಹಣಕಾಸು ಬೆಂಬಲ ಪಡೆಯುವಲ್ಲಿ ಅತಿಸಣ್ಣ, ಸಣ್ಣ ಕೈಗಾರಿಕೆಗಳು ಮಧ್ಯಮ ಗಾತ್ರದ ಕೈಗಾರಿಕೆಗಳೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಉದ್ದೇಶಕ್ಕಾಗಿ ಪ್ರತ್ಯೇಕ ನೀತಿ, ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯ ತುಂಬಾ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಅತಿ ಸಣ್ಣ, ಸಣ್ಣ ಕೈಗಾರಿಕೆಗಳಿಗೆ ಸಾಲದ ಅನುಮೋದನೆ ನೀಡುವಾಗ ಸಿಬಿಲ್ (CIBIL) ಸ್ಕೋರ್‌ ಮಾನದಂಡವನ್ನು ಪರಿಗಣಿಸಬಾರದು. ಬಡ್ಡಿದರಗಳನ್ನು ಶೇ.7ರಿಂದ 8ಕ್ಕೆ ಇಳಿಸಬೇಕು ಮತ್ತು ಆರಂಭಿಕ ಸಾಲ ಮರುಪಾವತಿಗಾಗಿ ಸ್ವತ್ತುಗಳ ಮರುಸ್ವಾಧೀನ ದಂಡ ಪ್ರಯೋಗವನ್ನು ಕೈಬಿಡಬೇಕು ಎಂದು ದೇವೇಗೌಡರು ಸರಕಾರವನ್ನು ಒತ್ತಾಯಿಸಿದರು.

ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಿ:

ಕೃಷಿ ಉತ್ಪನ್ನಗಳಿಗೆ ನಾವು ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದ ದೇವೇಗೌಡರು, ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯ ಮಾಡಿದರು.

ಅತಿ ಕಡಿಮೆ ಬಂಡವಾಳದಿಂದ ಮಖಾನಾ ಬೆಳೆಯಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲ ಆಗುತ್ತಿದೆ. ಮಂಡಳಿ ರಚನೆಯಿಂದ ಮತ್ತಷ್ಟು ಅನುಕೂಲ ಆಗುತ್ತದೆ. ಹೀಗಿದ್ದ ಮೇಲೆ ಕನಿಷ್ಠ ಬಂಡವಾಳದಿಂದ ನೈಸರ್ಗಿಕವಾಗಿ ಬೆಳೆಯಲಾಗುವ ಹಲಸಿನ ಹಣ್ಣು, ನೇರಳೆ ಹಾಗೂ ಹುಣಸೆಹಣ್ಣು ಮಂಡಳಿಯನ್ನು ರಚಿಸಬಾರದೇಕೆ ಎಂದು ಮಾಜಿ ಪ್ರಧಾನಿಗಳು ಸಲಹೆ ನೀಡಿದರು.

ಬೆಂಗಳೂರು ನೀರಿನ ಸಮಸ್ಯೆ; ಪುನಾ ಪ್ರಸ್ತಾಪಿಸಿದ ದೇವೇಗೌಡರು:

ರಾಜ್ಯಸಭೆಯಲ್ಲಿ ಮತ್ತೊಮ್ಮೆ ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಗಮನ ಸೆಳೆದರು ಮಾಜಿ ಪ್ರಧಾನಿಗಳು.

ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು; ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ ₹1,400 ಕೋಟಿ ಮಂಜೂರು ಮಾಡಿದ್ದಾರೆ. ಆದರೆ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ನದಿ ಜಲ ಸಂಪನ್ಮೂಲ ಸದ್ವಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ತಮ್ಮ ಭಾಷಣದ ಕೊನೆಯಲ್ಲಿ ದೀರ್ಘಾವಧಿಯ ಆರ್ಥಿಕ ಸ್ಥಿರತೆಯತ್ತ ಗಮನ ಹರಿಸುವಂತೆ ಸರಕಾರಕ್ಕೆ ಸಲಹೆ ನೀಡಿದರಲ್ಲದೆ; ನಾವು ಅಲ್ಪಾವಧಿಯ ಜನಪರ ಕ್ರಮಗಳನ್ನು ಮೀರಿ ಮುನ್ನಡೆಯಬೇಕು ಮತ್ತು ಭವಿಷ್ಯದ ಪೀಳಿಗೆಗೆ ಆಸ್ತಿಗಳನ್ನು ನಿರ್ಮಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಸಣ್ಣ ಅತಿ ಸಣ್ಣ ಕೈಗಾರಿಕೆಗಳಿಗೆ ಬೆಂಬಲ ಹಾಗೂ ಅತ್ಯಂತ ಪ್ರಮುಖವಾದ ನೀರಿನ ಭದ್ರತೆಗೆ ಸರಕಾರದ ಕಡೆಯಿಂದ ತಕ್ಷಣದ ಕ್ರಮಗಳು ಆಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

ಸೊರಬ ತಾಲೂಕಿನಲ್ಲಿ ‘ನೀರಾವರಿ ಬ್ಯಾರೇಜ್‌’ಗಳ ನಿರ್ಮಾಣಕ್ಕೆ ‘ಸಚಿವ ಮಧು ಬಂಗಾರಪ್ಪ’ ಚಾಲನೆ

BREAKING: ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ | New Income Tax Bill

Share. Facebook Twitter LinkedIn WhatsApp Email

Related Posts

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

19/10/2025 5:28 PM1 Min Read

BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!

19/10/2025 5:22 PM2 Mins Read

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

19/10/2025 4:44 PM1 Min Read
Recent News

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

19/10/2025 5:28 PM

BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!

19/10/2025 5:22 PM

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

19/10/2025 4:44 PM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 3 ‘KSRTC’ ಬಸ್ ನಡುವೆ ಡಿಕ್ಕಿಯಾಗಿ, 30ಕ್ಕೂ ಹೆಚ್ಚು ಜನರಿಗೆ ಗಾಯ!

19/10/2025 4:42 PM
State News
KARNATAKA

BREAKING: ಅಕ್ಟೋಬರ್.23ರವರೆಗೆ ಬೆಂಗಳೂರಲ್ಲಿ ‘ಜಾತಿಗಣತಿ ಸಮೀಕ್ಷೆ’ಗೆ ತಾತ್ಕಾಲಿಕವಾಗಿ ಬ್ರೇಕ್

By kannadanewsnow0919/10/2025 5:28 PM KARNATAKA 1 Min Read

ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಕ್ಟೋಬರ್.23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಈ ಕುರಿತಂತೆ ಸಿಎಂ…

BIG Alert: ‘ಪಟಾಕಿ’ ಸಿಡಿಸುವಾಗ ತಪ್ಪದೇ ಈ ಸಲಹೆ, ಎಚ್ಚರಿಕೆ ಪಾಲಿಸಿ!

19/10/2025 5:22 PM

ಮಂಗಳೂರಲ್ಲಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿ ಸಸ್ಪೆಂಡ್

19/10/2025 4:44 PM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : 3 ‘KSRTC’ ಬಸ್ ನಡುವೆ ಡಿಕ್ಕಿಯಾಗಿ, 30ಕ್ಕೂ ಹೆಚ್ಚು ಜನರಿಗೆ ಗಾಯ!

19/10/2025 4:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.