Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING :ದೊಣ್ಣೆ ಮೆಣಸಿನಕಾಯಿಯಲ್ಲಿ `ಜೀವಂತೆ ಚೇಳು’ ಪತ್ತೆ : ವಿಡಿಯೋ ವೈರಲ್ | WATCH VIDEO

02/06/2025 12:05 PM

BREAKING: ಏಕದಿನ ಕ್ರಿಕೆಟ್ ಗೆ ಆಸ್ಟ್ರೇಲಿಯಾದ `ಗ್ಲೆನ್ ಮ್ಯಾಕ್ಸ್ವೆಲ್’ ನಿವೃತ್ತಿ ಘೋಷಣೆ | Glenn Maxwell Retirement

02/06/2025 11:58 AM

BREAKING: ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ ಗ್ಲೆನ್ ಮ್ಯಾಕ್ಸ್ವೆಲ್ | Glenn Maxwell

02/06/2025 11:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಕ್ತಿ ಯೋಜನೆ ನಿಲ್ಲಿಸಲು ಸರಕಾರದ ಹುನ್ನಾರ: H.D ಕುಮಾರಸ್ವಾಮಿ ಆಕ್ರೋಶ
KARNATAKA

ಶಕ್ತಿ ಯೋಜನೆ ನಿಲ್ಲಿಸಲು ಸರಕಾರದ ಹುನ್ನಾರ: H.D ಕುಮಾರಸ್ವಾಮಿ ಆಕ್ರೋಶ

By kannadanewsnow0931/10/2024 5:21 PM

ಚನ್ನಪಟ್ಟಣ / ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಗುರುವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ? ಅಥವಾ ದೇವರು ಬಂದು ಹೇಳಿದ್ದಾರೆಯೇ? ಒಂದೊಂದಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಒಂದೂವರೆ ವರ್ಷದಲ್ಲಿ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ?

ಟ್ವೀಟ್ ಮೂಲಕ ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಯಾರು ಟ್ವೀಟ್ ಮಾಡಿದ್ದಾರೆ? ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು ಕೇಂದ್ರ ಸಚಿವರು.

ಗ್ಯಾರಂಟೀಗಳ ಹೆಸರಿನಲ್ಲಿ ಜನರ ಬ್ರೈನ್ ವಾಷ್

ಶಕ್ತಿ ಯೋಜನೆಯ ಮರು ಪರಿಶೀಲನೆಯ ನಾಟಕ ಗ್ಯಾರಂಟಿಗಳನ್ನು ಒಂದೊಂದಾಗಿಯೇ ತೆಗೆಯಲು ಮೊದಲ ಹಂತಂದ ಪ್ರಕ್ರಿಯೆ ಎಂದೇ ಭಾವಿಸಬೇಕಾಗುತ್ತದೆ. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಮಾತ್ರ. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳನ್ನೇ ಪ್ರಮುಖವಾಗಿ ಇವರು ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದರು. ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ ₹10,000 ಕೋಟಿ ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ, ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಹೆಸರು ಹೇಳಿ ಜನರಿಗೆ ಹೊರೆ ಹೊರೆಸಿ, ಅವರ ಹಣವನ್ನೇ ಕಿತ್ತು ಅವರಿಗೆ ಚೂರುಪಾರು ಹಂಚುವ ಗ್ಯಾರಂಟಿಗಳಿಗೆ ಅರ್ಥ ಇದೆಯಾ? ಚುನಾವಣೆ ಗೆಲ್ಲುವ ದುರಾಸೆಯಿಂದ ಇಂಥ ಅವಾಸ್ತವಿಕ ಭರವಸೆಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಿದ್ದಾರೆ. ಜರನ್ನು ರಣಹದ್ದುಗಳ ರೀತಿಯಲ್ಲಿ ಸರಕಾರ ಕಿತ್ತು ತಿನ್ನುತ್ತಿದೆ ಎಂದು ಅವರು ದೂರಿದರು.

ಗ್ಯಾರಂಟಿಗಳಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಬರೀ ಖರ್ಚಾಗುತ್ತಿದೆ. ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆಯ ಭವಿಷ್ಯ ಹಾಳು ಮಾಡಬೇಡಿ. ಅನ್ನಭಾಗ್ಯಕ್ಕೂ ಷರತ್ತುಗಳನ್ನು ವಿಧಿಸಿದ್ದಾರೆ. ಗೃಹಲಕ್ಷ್ಮಿಗೂ ಷರತ್ತುಗಳನ್ನು ಹಾಕಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಈಜುವುದನ್ನು ಕಾದು ನೋಡಬೇಕು ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

ಗ್ಯಾರಂಟಿ ಬಗ್ಗೆ ನಮಗೆ ಹೊಟ್ಟೆ ಉರಿ ಇಲ್ಲ

ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ. ಆದರೆ ರಾಜ್ಯವನ್ನು ದೀವಾಳಿ ಮಾಡಬೇಡಿ. ಸರ್ಕಾರದ ಅಭಿವೃದ್ಧಿ ಶೂನ್ಯ ಆಗಿದೆ. ಬೇರೆ ದೇಶಗಳಲ್ಲಿ ಉಂಟಾಗಿರುವ ಆರ್ಥಿಕ ಅರಾಜಕತೆ ನಮ್ಮ ರಾಜ್ಯಕ್ಕೆ ಬರಬಾರದು ನನ್ನ ನಮ್ಮ ಕಳಕಳಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಜೆಡಿಎಸ್ ಬಿಜೆಪಿ ಪಕ್ಷಗಳ ಹಲವಾರು ನಾಯಕರು ಕೇಂದ್ರ ಸಚಿವರ ಜತೆಯಲ್ಲಿ ಇದ್ದರು.

Share. Facebook Twitter LinkedIn WhatsApp Email

Related Posts

ನೀವು ಶ್ರೀಮಂತರಾಗಬೇಕೆ.? ಈ ಮಂತ್ರ 21 ಬಾರಿ ಪಠಿಸಿ ಸಾಕು

02/06/2025 11:53 AM3 Mins Read

BIG NEWS : ಇಂದ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘EV ಹಬ್’ ಲೋಕಾರ್ಪಣೆ : ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮೈಲಿಗಲ್ಲು

02/06/2025 11:48 AM1 Min Read

BIG NEWS : `ಪಡಿತರ ಚೀಟಿ’ದಾರರೇ ಗಮನಿಸಿ : `ಆಧಾರ್-ರೇಷನ್ ಕಾರ್ಡ್’ ಲಿಂಕ್ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು.!

02/06/2025 11:43 AM2 Mins Read
Recent News

SHOCKING :ದೊಣ್ಣೆ ಮೆಣಸಿನಕಾಯಿಯಲ್ಲಿ `ಜೀವಂತೆ ಚೇಳು’ ಪತ್ತೆ : ವಿಡಿಯೋ ವೈರಲ್ | WATCH VIDEO

02/06/2025 12:05 PM

BREAKING: ಏಕದಿನ ಕ್ರಿಕೆಟ್ ಗೆ ಆಸ್ಟ್ರೇಲಿಯಾದ `ಗ್ಲೆನ್ ಮ್ಯಾಕ್ಸ್ವೆಲ್’ ನಿವೃತ್ತಿ ಘೋಷಣೆ | Glenn Maxwell Retirement

02/06/2025 11:58 AM

BREAKING: ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ ಗ್ಲೆನ್ ಮ್ಯಾಕ್ಸ್ವೆಲ್ | Glenn Maxwell

02/06/2025 11:54 AM

ನೀವು ಶ್ರೀಮಂತರಾಗಬೇಕೆ.? ಈ ಮಂತ್ರ 21 ಬಾರಿ ಪಠಿಸಿ ಸಾಕು

02/06/2025 11:53 AM
State News
KARNATAKA

ನೀವು ಶ್ರೀಮಂತರಾಗಬೇಕೆ.? ಈ ಮಂತ್ರ 21 ಬಾರಿ ಪಠಿಸಿ ಸಾಕು

By kannadanewsnow0902/06/2025 11:53 AM KARNATAKA 3 Mins Read

ಯಾರು ಸಂಪತ್ತಿನಿಂದ ವಂಚಿತರಾಗುತ್ತಾರೆ? ನಮ್ಮಲ್ಲಿ ಎಷ್ಟೇ ಹಣವಿದ್ದರೂ, ನಮಗೆ ಇನ್ನೂ ಹೆಚ್ಚಿನ ಹಣ ಬೇಕು ಎಂದು ಯಾವಾಗಲೂ ಅನಿಸುತ್ತದೆ. ಸಂಪತ್ತು,…

BIG NEWS : ಇಂದ ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘EV ಹಬ್’ ಲೋಕಾರ್ಪಣೆ : ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮೈಲಿಗಲ್ಲು

02/06/2025 11:48 AM

BIG NEWS : `ಪಡಿತರ ಚೀಟಿ’ದಾರರೇ ಗಮನಿಸಿ : `ಆಧಾರ್-ರೇಷನ್ ಕಾರ್ಡ್’ ಲಿಂಕ್ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು.!

02/06/2025 11:43 AM

BIG NEWS : ರಾಜ್ಯದ ಎಲ್ಲಾ `ಶಾಲಾ ಶಿಕ್ಷಕರೇ’ ಗಮನಿಸಿ : ಇಲ್ಲಿದೆ 2025-26 ನೇ ಶೈಕ್ಷಣಿಕ ಸಾಲಿನ `ಶಾಲಾ ಕರ್ತವ್ಯ ಹಾಗೂ ರಜಾ ದಿನಗಳ’ ಮಾಹಿತಿ

02/06/2025 11:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.